AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pooja Hegde: ‘ಬಜರಂಗಿ ಭಾಯಿಜಾನ್​’ ಚಿತ್ರದ ಸೀಕ್ವೆಲ್​ನಲ್ಲಿ ಕರೀನಾ ಕಪೂರ್​ ಖಾನ್​ ಬದಲಿಗೆ ಪೂಜಾ ಹೆಗ್ಡೆ?

Bajrangi Bhaijaan 2 | Kareena Kapoor Khan: ಕರೀನಾ ಕಪೂರ್​ ಬದಲಿಗೆ ಪೂಜಾ ಹೆಗ್ಡೆ ಅವರನ್ನು ಆಯ್ಕೆ ಮಾಡಿಕೊಳ್ಳುವ ಬಗ್ಗೆ ಮಾತುಕತೆ ನಡೆಯುತ್ತಿದೆ ಎಂದು ಗಾಸಿಪ್​ ಹಬ್ಬಿದೆ. ಯಾವ ಕಾರಣಕ್ಕಾಗಿ ಇಂಥ ನಿರ್ಧಾರ ತೆಗೆದುಕೊಳ್ಳಲಾಗುತ್ತಿದೆ ಎಂಬುದು ಸ್ಪಷ್ಟವಾಗಿಲ್ಲ.

Pooja Hegde: ‘ಬಜರಂಗಿ ಭಾಯಿಜಾನ್​’ ಚಿತ್ರದ ಸೀಕ್ವೆಲ್​ನಲ್ಲಿ ಕರೀನಾ ಕಪೂರ್​ ಖಾನ್​ ಬದಲಿಗೆ ಪೂಜಾ ಹೆಗ್ಡೆ?
ಪೂಜಾ ಹೆಗ್ಡೆ, ಕರೀನಾ ಕಪೂರ್
Follow us
ಮದನ್​ ಕುಮಾರ್​
|

Updated on:Mar 26, 2023 | 12:13 PM

ನಟ ಸಲ್ಮಾನ್​ ಖಾನ್​ (Salman Khan) ವೃತ್ತಿಜೀವನದ ಬೆಸ್ಟ್​ ಸಿನಿಮಾಗಳ ಪಟ್ಟಿಯಲ್ಲಿ ‘ಬಜರಂಗಿ ಭಾಯಿಜಾನ್​’ ಚಿತ್ರಕ್ಕೂ ಸ್ಥಾನವಿದೆ. ಕಬೀರ್​ ಖಾನ್​ ನಿರ್ದೇಶನ ಆ ಸಿನಿಮಾ 2015ರಲ್ಲಿ ತೆರೆಕಂಡು ಧೂಳೆಬ್ಬಿಸಿತ್ತು. ಸಲ್ಮಾನ್​ ಖಾನ್​ ನಟನೆಗೆ ಫ್ಯಾನ್ಸ್​ ಫಿದಾ ಆಗಿದ್ದರು. ಈ ಸಿನಿಮಾಗೆ ಸೀಕ್ವೆಲ್​ ಸಿದ್ಧವಾಗುವುದು ಖಚಿತ ಎಂದು ಈ ಮೊದಲೇ ಸುದ್ದಿ ಆಗಿತ್ತು. ಅಲ್ಲದೇ ಸೀಕ್ವೆಲ್​ಗೆ ‘ಪವನ್​ ಪುತ್ರ’ (Pawan Putra) ಎಂದು ಶೀರ್ಷಿಕೆ ಇಡಲಾಗುವುದು ಎಂದು ಸ್ವತಃ ಸಲ್ಮಾನ್​ ಖಾನ್​ ತಿಳಿಸಿದ್ದರು. ಈಗ ಈ ಸಿನಿಮಾ ಬಗ್ಗೆ ಒಂದು ಗಾಸಿಪ್​ ಕೇಳಿಬಂದಿದೆ. ‘ಪವನ್​ ಪುತ್ರ’ ಚಿತ್ರದಲ್ಲಿ ಕರೀನಾ ಕಪೂರ್​ ಖಾನ್​ (Kareena Kapoor Khan) ಬದಲಿಗೆ ಪೂಜಾ ಹೆಗ್ಡೆ ಅವರು ನಾಯಕಿ ಆಗಲಿದ್ದಾರೆ ಎಂದು ಹೇಳಲಾಗುತ್ತಿದೆ. ಆದರೆ ಈ ಬಗ್ಗೆ ಚಿತ್ರತಂಡದಿಂದ ಯಾರೂ ಅಧಿಕೃತ ಹೇಳಿಕೆ ನೀಡಿಲ್ಲ.

‘ಬಜರಂಗಿ ಭಾಯಿಜಾನ್​’ ಸಿನಿಮಾದಲ್ಲಿ ಕರೀನಾ ಕಪೂರ್​ ಖಾನ್​ ಅವರ ಪಾತ್ರಕ್ಕೆ ಮಹತ್ವ ನೀಡಲಾಗಿತ್ತು. ಆ ಪಾತ್ರವನ್ನು ಜನರು ಮೆಚ್ಚಿಕೊಂಡಿದ್ದರು. ಈಗ ಸೀಕ್ವೆಲ್​ನಲ್ಲಿ ಕರೀನಾ ಕಪೂರ್​ ಬದಲಿಗೆ ಪೂಜಾ ಹೆಗ್ಡೆ ಅವರನ್ನು ಆಯ್ಕೆ ಮಾಡಿಕೊಳ್ಳುವ ಬಗ್ಗೆ ಮಾತುಕತೆ ನಡೆಯುತ್ತಿದೆ ಎಂದು ಗಾಸಿಪ್​ ಹಬ್ಬಿದೆ. ಯಾವ ಕಾರಣಕ್ಕಾಗಿ ಇಂಥ ನಿರ್ಧಾರ ತೆಗೆದುಕೊಳ್ಳಲಾಗುತ್ತಿದೆ ಎಂಬುದು ಸ್ಪಷ್ಟವಾಗಿಲ್ಲ.

ಇದನ್ನೂ ಓದಿ: Pooja Hegde: ಒಂದೇ ವರ್ಷ ಪೂಜಾ ಹೆಗ್ಡೆ ನಟನೆಯ ನಾಲ್ಕು ಸಿನಿಮಾಗಳು ಫ್ಲಾಪ್​; ಮುಂದೇನು?

ಇದನ್ನೂ ಓದಿ
Image
Pooja Hegde: ನ್ಯೂಯಾರ್ಕ್​​ನಲ್ಲಿ ಪೂಜಾ ಹೆಗ್ಡೆ ಮಸ್ತಿ; ಇಲ್ಲಿವೆ ಫೋಟೋಗಳು
Image
Pooja Hegde: ಇಂಡಿಗೋ ವಿಮಾನದಲ್ಲಿ ಪೂಜಾ ಹೆಗ್ಡೆಗೆ ಕೆಟ್ಟ ಅನುಭವ; ಕ್ಷಮೆ ಕೇಳಿದ ಸಂಸ್ಥೆ
Image
JGM Movie: ‘ಜೆಜಿಎಮ್​’ ಚಿತ್ರೀಕರಣ ಆರಂಭ; ವಿಜಯ್ ದೇವರಕೊಂಡ ಜತೆ ತೆರೆ ಹಂಚಿಕೊಳ್ಳಲಿರುವ ಪೂಜಾ ಹೆಗ್ಡೆ
Image
ವಿದೇಶಕ್ಕೆ ಹೋಗಿ ಎಲ್ಲ ಬಟ್ಟೆ ಕಳೆದುಕೊಂಡ ಪೂಜಾ ಹೆಗ್ಡೆ; ಕೊನೇ ಕ್ಷಣದಲ್ಲಿ ನಟಿ ಮಾಡಿದ್ದೇನು?

ಈ ಕುರಿತಾಗಿ ಮೂಲಗಳು ಪ್ರತಿಕ್ರಿಯೆ ನೀಡಿರುವುದಾಗಿ ಇಟೈಮ್ಸ್​ ವರದಿ ಮಾಡಿದೆ. ‘ಚಿತ್ರದ ಶೀರ್ಷಿಕೆ ಪವನ್​ ಪುತ್ರ ಎಂಬುದು ಸರಿ. ಆದರೆ ಬಾಕಿ ಎಲ್ಲವೂ ಊಹಾಪೋಹ. ಸ್ಕ್ರಿಪ್ಟ್​ ಇನ್ನೂ ಸಿದ್ಧವಾಗಿಲ್ಲ. ಈ ಹಂತದಲ್ಲಿ ಕಲಾವಿದರನ್ನು ಬದಲಾಯಿಸಲು ಹೇಗೆ ಸಾಧ್ಯ? ಈ ಸಿನಿಮಾದ ಶೂಟಿಂಗ್ ಆರಂಭವಾಗಲು ಇನ್ನೂ ಸಾಕಷ್ಟು ಸಮಯ ಇದೆ. ಹೀಗಿರುವಾಗ ಕರೀನಾ ಬದಲಿಗೆ ಪೂಜಾ ಹೆಗ್ಡೆ ಆಯ್ಕೆ ಆಗುತ್ತಾರೆ ಎಂಬುದು ಅಸಾಧ್ಯ’ ಅಂತ ಮೂಲಗಳು ಹೇಳಿವೆ ಎಂದು ವರದಿ ಆಗಿದೆ.

ಇದನ್ನೂ ಓದಿ: Kareena Kapoor: ‘ಬೇರೆ ಯಾವ ನಟಿಯೂ ಮದುವೆ ಆಗದಿದ್ದಾಗ ಸೈಫ್​ ಜತೆ ನಾನು ವಿವಾಹವಾದೆ’: ಕರೀನಾ ಕಪೂರ್​ ಖಾನ್​

ಇತ್ತೀಚಿನ ವರ್ಷಗಳಲ್ಲಿ ಪೂಜಾ ಹೆಗ್ಡೆ ನಟಿಸಿದ ಯಾವ ಸಿನಿಮಾಗಳೂ ಗೆಲ್ಲುತ್ತಿಲ್ಲ. ಅವರಿಗೆ ಸತತವಾಗಿ ಸೋಲು ಎದುರಾಗಿದೆ. ಹಾಗಿದ್ದರೂ ಕೂಡ ಹೊಸ ಹೊಸ ಅವಕಾಶಗಳನ್ನು ಅವರು ಪಡೆದುಕೊಳ್ಳುತ್ತಿದ್ದಾರೆ. ಸಲ್ಮಾನ್​ ಖಾನ್​ ನಟನೆಯ ‘ಕಿಸಿ ಕ ಭಾಯ್​ ಕಿಸಿ ಕಿ ಜಾನ್​’ ಸಿನಿಮಾಗೆ ಪೂಜಾ ಹೆಗ್ಡೆ ನಾಯಕಿ.

ಇನ್ನು, ಕರೀನಾ ಕಪೂರ್​ ಕೂಡ ಚಿತ್ರರಂಗದಲ್ಲಿ ಬೇಡಿಕೆ ಕಳೆದುಕೊಂಡಿಲ್ಲ. ಸಿನಿಮಾಗಳ ವಿಚಾರದಲ್ಲಿ ಅವರು ಹೆಚ್ಚು ಚ್ಯೂಸಿ ಆಗಿದ್ದಾರೆ. ‘ದಿ ಬಕ್ಕಿಂಗ್​ಹ್ಯಾಮ್​ ಮರ್ಡರ್ಸ್​’ ಮತ್ತು ‘ದಿ ಡಿವೋಷನ್​ ಆಫ್​ ಸಸ್ಪೆಕ್ಟ್​ ಎಕ್ಸ್​’ ಸಿನಿಮಾದಲ್ಲಿ ಕರೀನಾ ಕಪೂರ್​ ಖಾನ್​ ನಟಿಸುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 12:13 pm, Sun, 26 March 23

ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ
ತಮ್ಮ ಪಕ್ಷದ ಅಧ್ಯಕ್ಷರಿಗೆ ಮಾಲೆ ಹಾಕಿ, ಕಪಾಳಕ್ಕೆ ಬಾರಿಸಿದ ನಾಯಕ
ರಾಜಸ್ಥಾನ ತಂಡದಲ್ಲಿ ಸ್ಥಾನ ಕೊಡಿಸುವುದಾಗಿ ಬೆಳಗಾವಿ ಕ್ರಿಕೆಟರ್​​ಗೆ ವಂಚನೆ
ರಾಜಸ್ಥಾನ ತಂಡದಲ್ಲಿ ಸ್ಥಾನ ಕೊಡಿಸುವುದಾಗಿ ಬೆಳಗಾವಿ ಕ್ರಿಕೆಟರ್​​ಗೆ ವಂಚನೆ
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ಫೋಟೋ, ಸೆಲ್ಫೀ ಕ್ಲಿಕ್ಕಿಸಿಕೊಳ್ಳಲು ಜಲಪಾತಗಳ ಬಂಡೆಗಳೇ ಆಗಬೇಕೇ?
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ರಾಜ್ಯ ಸರ್ಕಾರ ತನ್ನ ವೈಫಲ್ಯ ಮುಚ್ಚಿಕೊಳ್ಳುವ ಪ್ರಯತ್ನ ಮಾಡುತ್ತಿದೆ: ಕಾಗೇರಿ
ಅಪಾರ್ಟ್​ಮೆಂಟ್​​ನಲ್ಲಿ ಬೆಂಕಿ ಅವಘಡ; ಮಹಡಿಯಿಂದ ಹಾರಿದ ತಂದೆ, ಮಕ್ಕಳ ಸಾವು
ಅಪಾರ್ಟ್​ಮೆಂಟ್​​ನಲ್ಲಿ ಬೆಂಕಿ ಅವಘಡ; ಮಹಡಿಯಿಂದ ಹಾರಿದ ತಂದೆ, ಮಕ್ಕಳ ಸಾವು
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಅಪ್ಪು ಇದ್ದ ಕಡೆ ನಗುವಿಗೆಲ್ಲಿ ಕೊರತೆ, ಅಪ್ಪು ಹಳೆ ವಿಡಿಯೋ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಜಾತಿಗಣತಿಯ ಮರುಸರ್ವೇ ಮಾಡಿಸಲು ಹೈಕಮಾಂಡ್ ಸೂಚಿಸಿದೆ: ಸಿದ್ದರಾಮಯ್ಯ
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಶಾಂತಿಯುತವಾಗಿ ಹೋರಾಟ ಮಾಡುವ ವಾಟಾಳ್ ಇವತ್ತು ಭಿನ್ನವಾಗಿ ಕಂಡರು
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದ ಸ್ನೇಹಮಯಿ ಕೃಷ್ಣ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ
ಜಾತಿ ಗಣತಿ ವರದಿ, ಕಾಲ್ತುಳಿತದ ಬಗ್ಗೆ CM-DCMಗೆ ಹೈಕಮಾಂಡ್ ಖಡಕ್​ ಸೂಚನೆ