ಹೊಸ ಸಿನಿಮಾದಲ್ಲಿ ಯಶ್​ಗೆ ಜೋಡಿ ಆಗ್ತಾರಾ 52 ವರ್ಷದ ನಟಿ ಸಾಕ್ಷಿ ತನ್ವರ್​?

|

Updated on: Mar 27, 2024 | 10:11 PM

ನಟಿ ಸಾಕ್ಷಿ ತನ್ವರ್​ ಅವರು ಹಲವು ವರ್ಷಗಳಿಂದ ಬಣ್ಣದ ಲೋಕದಲ್ಲಿ ಸಕ್ರಿಯರಾಗಿದ್ದಾರೆ. ಕಿರುತೆರೆಯ ಅನೇಕ ಧಾರಾವಾಹಿಗಳಲ್ಲಿ ನಟಿಸಿ ಅವರು ಮನೆಮಾತಾಗಿದ್ದಾರೆ. ಈಗ ಅವರಿಗೆ 52 ವರ್ಷ ವಯಸ್ಸು. ಹೊಸ ಸಿನಿಮಾದಲ್ಲಿ ‘ರಾಕಿಂಗ್​ ಸ್ಟಾರ್​’ ಯಶ್​ ಜೊತೆ ತೆರೆ ಹಂಚಿಕೊಳ್ಳುತ್ತಾರೆ ಎಂದು ಹೇಳಲಾಗುತ್ತಿದೆ. ಆದರೆ ಚಿತ್ರತಂಡದಿಂದ ಇನ್ನೂ ಅಧಿಕೃತ ಘೋಷಣೆ ಆಗುವುದು ಬಾಕಿ ಇದೆ.

ಹೊಸ ಸಿನಿಮಾದಲ್ಲಿ ಯಶ್​ಗೆ ಜೋಡಿ ಆಗ್ತಾರಾ 52 ವರ್ಷದ ನಟಿ ಸಾಕ್ಷಿ ತನ್ವರ್​?
ಯಶ್​, ಸಾಕ್ಷಿ ತನ್ವರ್​
Follow us on

ಬಿಗ್​ ಬಜೆಟ್​ ಸಿನಿಮಾಗಳ ಬಗ್ಗೆ ಗಾಸಿಪ್​ ಹುಟ್ಟಿಕೊಳ್ಳುವುದುದು ಸಹಜ. ಇತ್ತೀಚಿನ ದಿನಗಳಲ್ಲಿ, ಸೆಟ್ಟೇರುವುದಕ್ಕೂ ಮುನ್ನವೇ ಅತಿ ಹೆಚ್ಚು ಸುದ್ದಿಯಾದ ಸಿನಿಮಾ ಎಂದರೆ ಅದು ‘ರಾಮಾಯಾಣ’ (Ramayana Movie) ಚಿತ್ರ. ಹೌದು, ಬಾಲಿವುಡ್​ನಲ್ಲಿ ರಾಮಾಯಣ ಕಥೆಯನ್ನು ಆಧರಿಸಿ ಸಿನಿಮಾ ಸಿದ್ಧವಾಗುತ್ತಿದ್ದು ಅದರ ಪಾತ್ರವರ್ಗದ ಬಗ್ಗೆ ಹಲವಾರು ಗಾಸಿಪ್​ಗಳು ಕೇಳಿಬರುತ್ತಿವೆ. ರಾಮಾಯಣದಲ್ಲಿ ಹಲವಾರು ಪ್ರಮುಖ ಪಾತ್ರಗಳು ಬರುತ್ತವೆ. ಅವುಗಳಲ್ಲಿ ಯಾರಿಗೆ ಯಾವ ಪಾತ್ರ ಸಿಗಲಿದೆ ಎಂಬ ಬಗ್ಗೆ ಅಧಿಕೃತ ಘೋಷಣೆ ಆಗುವುದು ಬಾಕಿ ಇದೆ. ಅಷ್ಟರಲ್ಲಾಗಲೇ ಹತ್ತಾರು ಗಾಸಿಪ್​ಗಳು ಹರಿದಾಡುತ್ತಿವೆ. ಈ ಸಿನಿಮಾದಲ್ಲಿ ಯಶ್​ (Yash) ಜೊತೆ ಕಿರುತೆರೆ ನಟಿ ಸಾಕ್ಷಿ ತನ್ವರ್​ (Sakshi Tanwar) ಅಭಿನಯಿಸುತ್ತಾರೆ ಎಂದು ಹೇಳಲಾಗುತ್ತಿದೆ.

‘ರಾಮಾಯಣ’ ಸಿನಿಮಾಗೆ ನಿತೀಶ್​ ತಿವಾರಿ ನಿರ್ದೇಶನ ಮಾಡಲಿದ್ದಾರೆ. ರಾಮನಾಗಿ ರಣಬೀರ್​ ಕಪೂರ್​ ನಟಿಸಲಿದ್ದಾರೆ. ಸೀತೆಯಾಗಿ ಸಾಯಿ ಪಲ್ಲವಿ ಅಭಿನಯಿಸಲಿದ್ದಾರೆ. ರಾವಣನ ಪಾತ್ರವನ್ನು ಯಶ್​ ಮಾಡುತ್ತಾರೆ ಎಂದು ಹೇಳಲಾಗುತ್ತಿದೆ. ರಾವಣನ ಪತ್ನಿ ಮಂಡೋದರಿಯ ಪಾತ್ರದಲ್ಲಿ ಖ್ಯಾತ ಕಿರುತೆರೆ ಕಲಾವಿದೆ ಸಾಕ್ಷಿ ತನ್ವರ್​ ಕಾಣಿಸಿಕೊಳ್ಳಲಿದ್ದಾರೆ ಎಂದು ವರದಿ ಆಗಿದೆ. ಅಂದರೆ, ರಾವಣ ಪಾತ್ರಧಾರಿ ಯಶ್​ಗೆ ಸಾಕ್ಷಿ ತನ್ವರ್​ ಅವರು ಜೋಡಿ ಆಗಲಿದ್ದಾರೆ ಎಂಬುದು ಸದ್ಯದ ಗಾಸಿಪ್​.

ಇದನ್ನೂ ಓದಿ: ಪದೇ ಪದೇ ಪ್ರಶ್ನೆ ಕೇಳಿದವರಿಗೆ ಯಶ್​ ಉತ್ತರ; ಝಲಕ್ ತೋರಿಸಿದ ರಾಕಿ ಭಾಯ್​

ನಟಿ ಸಾಕ್ಷಿ ತನ್ವರ್​ ಅವರಿಗೆ ಈಗ 52 ವರ್ಷ ವಯಸ್ಸು. ಹಲವು ವರ್ಷಗಳಿಂದ ಅವರು ಬಣ್ಣದ ಲೋಕದಲ್ಲಿ ಆ್ಯಕ್ಟೀವ್​ ಆಗಿದ್ದಾರೆ. ಹಿಂದಿ ಕಿರುತೆರೆಯ ಅನೇಕ ಸೀರಿಯಲ್​ಗಳಲ್ಲಿ ನಟಿಸಿ ಫೇಮಸ್​ ಆಗಿದ್ದಾರೆ. ನಿತೀಶ್​ ತಿವಾರಿ ನಿರ್ದೇಶನ ಮಾಡಿದ್ದ ‘ದಂಗಲ್​’ ಸಿನಿಮಾದಲ್ಲಿ ಆಮಿರ್​ ಖಾನ್​ ಪತ್ನಿಯ ಪಾತ್ರದಲ್ಲಿ ಸಾಕ್ಷಿ ತನ್ವರ್​ ನಟಿಸಿದ್ದರು. ಈಗ ಯಶ್​ಗೆ ಜೋಡಿಯಾಗಿ ‘ರಾಮಾಯಣ’ ಸಿನಿಮಾದಲ್ಲಿ ಬಣ್ಣ ಹಚ್ಚುತ್ತಾರೆ ಎಂಬ ಗಾಸಿಪ್​ ಹಬ್ಬಿದೆ.

ಇದನ್ನೂ ಓದಿ: ಯಶ್​ ಸಹೋದರಿ ಪಾತ್ರದಲ್ಲಿ ಕರೀನಾ ಕಪೂರ್​? ‘ಟಾಕ್ಸಿಕ್​’ ಚಿತ್ರದ ಬಗ್ಗೆ ಬಿಗ್ ನ್ಯೂಸ್​

ಶೀಘ್ರದಲ್ಲೇ ‘ರಾಮಾಯಣ’ ಸಿನಿಮಾ ಸೆಟ್ಟೇರಲಿದೆ. ಅದಕ್ಕಾಗಿ ರಣಬೀರ್​ ಕಪೂರ್​ ಅವರು ಈಗಾಗಲೇ ತಯಾರಿ ಶುರು ಮಾಡಿಕೊಂಡಿದ್ದಾರೆ. ರವಿ ದುಬೆ ಅವರು ಲಕ್ಷ್ಮಣನ ಪಾತ್ರ ಮಾಡುತ್ತಾರೆ. ದಶರತನಾಗಿ ಅರುಣ್​ ಗೋವಿಲ್​, ಕೈಕೇಯಿಯಾಗಿ ಲಾರಾ ದತ್ತ, ಹನುಮಂತನಾಗಿ ಸನ್ನಿ ಡಿಯೋಲ್​ ನಟಿಸುತ್ತಾರೆ ಎಂದು ಹೇಳಲಾಗುತ್ತಿದೆ. ಇನ್ನೂ ಹಲವಾರು ಕಲಾವಿದರ ಜೊತೆ ಮಾತುಕಥೆ ನಡೆಯುತ್ತಿದೆ. ಆದಷ್ಟು ಬೇಗ ಪಾತ್ರವರ್ಗದ ಬಗ್ಗೆ ಅಧಿಕೃತ ಘೋಷಣೆ ಆಗಲಿ ಎಂದು ಫ್ಯಾನ್ಸ್​ ಕಾಯುತ್ತಿದ್ದಾರೆ. ಮೂರು ಪಾರ್ಟ್​ಗಳಲ್ಲಿ ಈ ಸಿನಿಮಾ ಮೂಡಿಬರಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.