AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಲ್ಮಾನ್​ ಖಾನ್​ ಮನೆಗೆ ಪದೇಪದೇ ಭೇಟಿ ನೀಡುತ್ತಿರುವ ಅಟ್ಲಿ; ಏನು ಸಮಾಚಾರ?

ದಕ್ಷಿಣ ಭಾರತದ ನಿರ್ದೇಶಕರು ಬಾಲಿವುಡ್​ನಲ್ಲಿ ಶೈನ್​ ಆಗುತ್ತಿದ್ದಾರೆ. ‘ಜವಾನ್​’ ಚಿತ್ರಕ್ಕೆ ನಿರ್ದೇಶನ ಮಾಡಿದ ಅಟ್ಲಿ ಅವರು ಹಿಂದಿ ಚಿತ್ರರಂಗದಲ್ಲಿ ತಮ್ಮ ಪ್ರತಿಭೆ ಏನು ಎಂಬುದನ್ನು ಸಾಬೀತು ಮಾಡಿದ್ದಾರೆ. ಹಾಗಾಗಿ ಅವರ ಜೊತೆ ಸಿನಿಮಾ ಮಾಡಲು ಬಿ-ಟೌನ್​ ಸ್ಟಾರ್​ಗಳು ಉತ್ಸುಕರಾಗಿದ್ದಾರೆ. ಸಲ್ಮಾನ್​ ಖಾನ್​ ಮತ್ತು ಅಟ್ಲಿ ಅವರು ಹೊಸ ಚಿತ್ರದ ಸಲುವಾಗಿ ಮಾತುಕಥೆ ಆರಂಭಿಸಿದ್ದಾರೆ ಎನ್ನಲಾಗಿದೆ.

ಸಲ್ಮಾನ್​ ಖಾನ್​ ಮನೆಗೆ ಪದೇಪದೇ ಭೇಟಿ ನೀಡುತ್ತಿರುವ ಅಟ್ಲಿ; ಏನು ಸಮಾಚಾರ?
ಸಲ್ಮಾನ್​ ಖಾನ್​, ಅಟ್ಲಿ
ಮದನ್​ ಕುಮಾರ್​
|

Updated on: Feb 06, 2024 | 6:59 PM

Share

ನಿರ್ದೇಶಕ ಅಟ್ಲಿ (Atlee) ಅವರು ಈಗ ದಕ್ಷಿಣ ಭಾರತಕ್ಕೆ ಮಾತ್ರ ಸೀಮಿತ ಆಗಿಲ್ಲ. ಬಾಲಿವುಡ್​ನಲ್ಲೂ ಅವರು ಬಹುಬೇಡಿಕೆಯ ನಿರ್ದೇಶಕನಾಗಿದ್ದಾರೆ. ಶಾರುಖ್​ ಖಾನ್​ ಜೊತೆ ಸೇರಿ ‘ಜವಾನ್​’ ಸಿನಿಮಾ ಮಾಡಿದ ಅವರಿಗೆ ಬಹುದೊಡ್ಡ ಗೆಲುವು ಸಿಕ್ಕಿತು. ಈಗ ಅಟ್ಲಿ ಜೊತೆ ಸಿನಿಮಾ ಮಾಡಲು ಹಿಂದಿ ಚಿತ್ರರಂಗದ ಅನೇಕ ಸ್ಟಾರ್​ ಹೀರೋಗಳು ಕಾದಿದ್ದಾರೆ. ಅಚ್ಚರಿ ಏನೆಂದರೆ, ನಟ ಸಲ್ಮಾನ್​ ಖಾನ್​ (Salman Khan) ಕೂಡ ಅಟ್ಲಿ ಜೊತೆ ಕೈ ಜೋಡಿಸಲು ಉತ್ಸಾಹ ತೋರಿಸಿದ್ದಾರೆ. ಈ ಬಗ್ಗೆ ‘ಬಾಲಿವುಡ್​ ಹಂಗಾಮಾ’ ವರದಿ ಮಾಡಿದೆ. ಆ ಪ್ರಕಾರ, ‘ದಬಂಗ್​’ (Dabangg) ಕಥೆಯ ಎಳೆಯನ್ನು ಇಟ್ಟುಕೊಂಡು ಬೇರೆ ಸಿನಿಮಾ ಮಾಡಲು ಅಟ್ಲಿ ಮತ್ತು ಸಲ್ಮಾನ್​ ಖಾನ್​ ಪ್ಲ್ಯಾನ್​ ಮಾಡುತ್ತಿದ್ದಾರೆ ಎಂದು ಹೇಳಲಾಗುತ್ತಿದೆ.

ಸಲ್ಮಾನ್​ ಖಾನ್​ ಅವರ ವೃತ್ತಿ ಜೀವನದಲ್ಲಿ ‘ದಬಂಗ್​’ ಸಿನಿಮಾ ವಿಶೇಷ ಎನಿಸಿಕೊಂಡಿದೆ. ಆ ಚಿತ್ರಕ್ಕೆ ಒಂದು ಸ್ಪಿನ್​-ಆಫ್​ ಸಿನಿಮಾ ಮಾಡಬೇಕು ಎಂದು ಆಲೋಚಿಸಲಾಗುತ್ತಿದೆ. ಆ ಕಾರಣದಿಂದ ನಿರ್ದೇಶಕ ಅಟ್ಲಿ ಅವರು ಸಲ್ಮಾನ್​ ಖಾನ್​ ಅವರ ಮನೆಗೆ ಎರಡು-ಮೂರು ಬಾರಿ ಭೇಟಿ ನೀಡಿದ್ದಾರೆ ಎಂಬ ಗಾಸಿಪ್​ ಹಬ್ಬಿದೆ. ಆದಷ್ಟು ಬೇಗ ಈ ಬೆಳವಣಿಗೆ ಬಗ್ಗೆ ಅಧಿಕೃತ ಮಾಹಿತಿ ಹೊರಬೀಳಲಿ ಎಂದು ಫ್ಯಾನ್ಸ್​ ಕಾಯುತ್ತಿದ್ದಾರೆ.

ಇದನ್ನೂ ಓದಿ: ಅಲ್ಲು ಅರ್ಜುನ್​ ಜೊತೆ ಸಿನಿಮಾ ಮಾಡ್ತಾರಾ ಅಟ್ಲಿ? ‘ಜವಾನ್​’ ನಿರ್ದೇಶಕನಿಗೆ ಡಿಮ್ಯಾಂಡ್​

ಇಲ್ಲೊಂದು ಟ್ವಿಸ್ಟ್​ ಕೂಡ ಇದೆ. ‘ದಬಂಗ್​’ ಚಿತ್ರದ ಸ್ಪಿನ್​-ಆಫ್​ ಬಗ್ಗೆ ಚರ್ಚೆ ಮಾಡಲು ಸಲ್ಮಾನ್​ ಖಾನ್​ ಮತ್ತು ಅಟ್ಲಿ ಅವರು ಒಂದೆಡೆ ಸೇರಿದ್ದಾರೆ ಎಂಬ ಸುದ್ದಿ ಇದೆಯಾದರೂ ಅಟ್ಲಿ ಅವರು ಈ ಸಿನಿಮಾವನ್ನು ನಿರ್ದೇಶಿಸುವ ಚಾನ್ಸ್​ ಕಡಿಮೆ ಇದೆ. ಬದಲಿಗೆ ಅವರು ಸ್ಕ್ರಿಪ್ಟ್​ ಬರೆದುಕೊಡಲಿದ್ದಾರೆ. ಅದರ ಜೊತೆಗೆ ಕ್ರಿಯೇಟಿವ್​ ಹೆಡ್​ ಆಗಿ ಕೆಲಸ ಮಾಡಲಿದ್ದಾರೆ ಹಾಗೂ ನಿರ್ಮಾಣದಲ್ಲೂ ಪಾಲುದಾರಿಕೆ ಹೊಂದಲಿದ್ದಾರೆ ಎಂದು ಸುದ್ದಿ ಹರಡಿದೆ.

ಇದನ್ನೂ ಓದಿ: ಅಟ್ಲಿ ಮತ್ತು ಪ್ರಿಯಾ ದಂಪತಿ ಫೋಟೋಗಳು ವೈರಲ್​; ಆದರೆ ಕಮೆಂಟ್​ ಮಾಡುವಂತಿಲ್ಲ

‘ಅರ್ಬಾಜ್​ ಖಾನ್​ ಮತ್ತು ಸಲ್ಮಾನ್​ ಖಾನ್​ ಅವರು ದಬಂಗ್​ ಚಿತ್ರದ ಸ್ಪಿನ್​-ಆಫ್​ಗಾಗಿ ದಕ್ಷಿಣ ಭಾರತದ ನಿರ್ದೇಶಕರನ್ನು ಕರೆತರಬೇಕು ಎಂದುಕೊಂಡಿದ್ದಾರೆ. ಇದನ್ನು ಪ್ಯಾನ್​ ಇಂಡಿಯಾ ಸಿನಿಮಾವನ್ನಾಗಿ ನಿರ್ಮಾಣ ಮಾಡಬೇಕು ಎಂಬುದು ಅವರ ಉದ್ದೇಶ. ಈ ವಿಚಾರದ ಬಗ್ಗೆ ಅಟ್ಲಿ ಅವರು ಇನ್ನೂ ಅಂತಿಮ ನಿರ್ಧಾರ ತೆಗೆದುಕೊಳ್ಳುವುದು ಬಾಕಿ ಇದೆ’ ಎಂದು ಮೂಲಗಳು ಹೇಳಿರುವುದಾಗಿ ‘ಬಾಲಿವುಡ್​ ಹಂಗಾಮಾ’ ವರದಿ ಪ್ರಕಟಿಸಿದೆ. ಸಲ್ಮಾನ್​ ಖಾನ್​ ಅವರು ಒಂದು ದೊಡ್ಡ ಗೆಲುವಿಗಾಗಿ ಕಾದಿದ್ದಾರೆ. ಅಟ್ಲಿ ಜೊತೆ ಕೈ ಜೋಡಿಸಿದ ಬಳಿಕ ಆ ಗೆಲುವು ಸಿಗುತ್ತಾ ಎಂಬುದನ್ನು ಕಾದುನೋಡಬೇಕು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು