ಸಿದ್ದಾರ್ಥ್​ ಶುಕ್ಲಾ ಸಾವಿಗೆ ಶ್ರದ್ಧಾಂಜಲಿ ಅರ್ಪಿಸಿದ WWE ಸೂಪರ್​ ಸ್ಟಾರ್​​ ಜಾನ್​ ಸೀನಾ

WWE ಸೂಪರ್​ ಸ್ಟಾರ್​​ ಜಾನ್​ ಸೀನಾ ತುಂಬಾನೇ ಫೇಮಸ್​. ವಿಶ್ವಾದ್ಯಂತ ಅವರಿಗೆ ಫ್ಯಾನ್ಸ್​ ಇದ್ದಾರೆ. ದಶಕಗಳ ಕಾಲ WWE​ನಲ್ಲಿರುವ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಕೋಟ್ಯಾಂತರ ಜನ ಹಿಂಬಾಲಕರಿದ್ದಾರೆ.

ಸಿದ್ದಾರ್ಥ್​ ಶುಕ್ಲಾ ಸಾವಿಗೆ ಶ್ರದ್ಧಾಂಜಲಿ ಅರ್ಪಿಸಿದ WWE ಸೂಪರ್​ ಸ್ಟಾರ್​​ ಜಾನ್​ ಸೀನಾ
ಸಿದ್ದಾರ್ಥ್​ ಶುಕ್ಲಾ ಸಾವಿಗೆ ಶ್ರದ್ಧಾಂಜಲಿ ಅರ್ಪಿಸಿದ WWE ಸೂಪರ್​ ಸ್ಟಾರ್​​ ಜಾನ್​ ಸೀನಾ
Follow us
| Updated By: ರಾಜೇಶ್ ದುಗ್ಗುಮನೆ

Updated on: Sep 04, 2021 | 2:56 PM

ಸಿದ್ದಾರ್ಥ್​ ಶುಕ್ಲಾ ಮೃತಪಟ್ಟು ಮೂರು ದಿನ ಕಳೆದಿದೆ. ಅವರ ಸಾವಿಗೆ ಸಾಕಷ್ಟು ಸೆಲೆಬ್ರಿಟಿಗಳು ಶ್ರದ್ಧಾಂಜಲಿ ಅರ್ಪಿಸುತ್ತಿದ್ದಾರೆ. ಅವರ ಅಂತ್ಯಕ್ರಿಯೆ ಶುಕ್ರವಾರ (ಸೆಪ್ಟೆಂಬರ್​ 4) ನೆರವೇರಿದ್ದು, ಅಭಿಮಾನಿಗಳ ಆಕ್ರಂದನ ಮುಗಿಲುಮುಟ್ಟಿದೆ. ಹೀಗಿರುವಾಗಲೇ ಸಿದ್ದಾರ್ಥ್​ ಶುಕ್ಲಾಗೆ WWE ಸೂಪರ್​ ಸ್ಟಾರ್​​ ಜಾನ್​ ಸೀನಾ ಶ್ರದ್ಧಾಂಜಲಿ ಅರ್ಪಿಸಿದ್ದಾರೆ. ಇದು ಅನೇಕರಲ್ಲಿ ಅಚ್ಚರಿ ಮೂಡಿಸಿದೆ.

WWE ಸೂಪರ್​ ಸ್ಟಾರ್​​ ಜಾನ್​ ಸೀನಾ ತುಂಬಾನೇ ಫೇಮಸ್​. ವಿಶ್ವಾದ್ಯಂತ ಅವರಿಗೆ ಫ್ಯಾನ್ಸ್​ ಇದ್ದಾರೆ. ದಶಕಗಳ ಕಾಲ WWE​ನಲ್ಲಿರುವ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಕೋಟ್ಯಾಂತರ ಜನ ಹಿಂಬಾಲಕರಿದ್ದಾರೆ. ಭಾರತದಲ್ಲೂ WWE ನೋಡುವವರ ಸಂಖ್ಯೆ ಕಡಿಮೆ ಏನಿಲ್ಲ. ಈ ಎಲ್ಲ ಕಾರಣಕ್ಕೆ ಜಾನ್​ ಸೀನಾ ಅವರು ಭಾರತೀಯರಿಗೂ ಇಷ್ಟವಾಗುತ್ತಾರೆ. ಅಚ್ಚರಿ ಎಂದರೆ, ಭಾರತದ ಮೇಲೂ ಅವರಿಗೆ ಪ್ರೀತಿ ಇದೆ. ಇದು ಸಾಕಷ್ಟು ಬಾರಿ ಸಾಬೀತಾಗಿದೆ. ಈಗ, ಸಿದ್ದಾರ್ಥ್​ ಫೋಟೋ ಹಾಕುವ ಮೂಲಕ ಅವರು ಶ್ರದ್ಧಾಂಜಲಿ ಅರ್ಪಿಸಿದ್ದು ಸಾಕಷ್ಟು ಅಚ್ಚರಿಗೆ ಕಾರಣವಾಗಿದೆ.

ಹೌದು, ಜಾನ್​ ಸೀನಾ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಸಿದ್ದಾರ್ಥ್​ ಫೋಟೋ ಪೋಸ್ಟ್​ ಮಾಡಲಾಗಿದೆ. ಜಾನ್​ ಸೀನಾ ಯಾವುದೇ ಫೋಟೋ ಹಾಕಿದರೂ ಅದಕ್ಕೆ ಕ್ಯಾಪ್ಶನ್​ ನೀಡುವುದಿಲ್ಲ. ಇದನ್ನು ಅವರು ಮೊದಲಿನಿಂದಲೂ ರೂಢಿಸಿಕೊಂಡು ಬಂದಿದ್ದಾರೆ. ತಮ್ಮ ಬಯೋದಲ್ಲಿ ಆ ಬಗ್ಗೆ ಬರೆದುಕೊಂಡಿದ್ದಾರೆ ಕೂಡ. ಅದೇ ರೀತಿ ಸಿದ್ದಾರ್ಥ್​ ಫೋಟೋಗೂ ಅವರು ಯಾವುದೇ ಕ್ಯಾಪ್ಶನ್​ ನೀಡಿಲ್ಲ. ಇದು ಶ್ರದ್ಧಾಂಜಲಿ ಅರ್ಪಿಸೋಕೆ ಮಾಡಿದ ಪೋಸ್ಟ್​ ಎಂದು ಅಭಿಮಾನಿಗಳು ಹೇಳುತ್ತಿದ್ದಾರೆ. ಈ ಮಧ್ಯೆ, ಅವರಿಗೆ ಸಿದ್ದಾರ್ಥ್​ ಗೊತ್ತಿತ್ತಾ? ಅವರು ಕೂಡ ಬಿಗ್​ ಬಾಸ್​ ನೋಡುತ್ತಿದ್ದರಾ ಎಂಬಿತ್ಯಾದಿ ಕೌತುಕ ಅಭಿಮಾನಿಗಳಲ್ಲಿ ಮೂಡಿದೆ.

ಅಂದಹಾಗೆ, ಜಾನ್​ ಸೀನಾ ಈ ರೀತಿ ಭಾರತೀಯರ ಫೋಟೋ ಹಾಕಿದ್ದು ಇದೇ ಮೊದಲಲ್ಲ. ಸುಶಾಂತ್​ ಸಿಂಗ್​ ರಜಪೂತ್​ ಮೃತಪಟ್ಟಾಗ, ಅವರು ಶ್ರದ್ಧಾಂಜಲಿ ಅರ್ಪಿಸಿದ್ದರು. ನಟಿ ಐಶ್ವರ್ಯಾ ರೈ, ಟೀಮ್​ ಇಂಡಿಯಾ ನಾಯಕ ವಿರಾಟ್​ ಕೊಹ್ಲಿ ಫೋಟೋ ಕೂಡ ಪೋಸ್ಟ್​ ಮಾಡಿದ್ದರು ಜಾನ್​ ಸೀನಾ. ಇದಕ್ಕೂ ಅವರು ಯಾವುದೇ ವಿವರಣೆ ಬರೆದಿಲ್ಲ.

ಇದನ್ನೂ ಓದಿ: ಸಿದ್ದಾರ್ಥ್​ ಶುಕ್ಲಾ ಸಾವಿನ ಬಗ್ಗೆ ನಗುತ್ತಾ ಮಾತನಾಡಿದ್ದ ಸಲ್ಮಾನ್​ ಖಾನ್​: ಶಾಕಿಂಗ್​ ವಿಡಿಯೋ ವೈರಲ್

‘ಆ ಸಿದ್ದಾರ್ಥ್​ ಬದಲು ಈ ಸಿದ್ದಾರ್ಥ್​ ಸಾಯಬೇಕಿತ್ತು’ ಎಂದು ದ್ವೇಷಕಾರಿದ ನೆಟ್ಟಿಗರು; ನಟನ ಪ್ರತಿಕ್ರಿಯೆ ಏನು?

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ