AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದಾರ್ಥ್​ ಶುಕ್ಲಾ ಸಾವಿಗೆ ಶ್ರದ್ಧಾಂಜಲಿ ಅರ್ಪಿಸಿದ WWE ಸೂಪರ್​ ಸ್ಟಾರ್​​ ಜಾನ್​ ಸೀನಾ

WWE ಸೂಪರ್​ ಸ್ಟಾರ್​​ ಜಾನ್​ ಸೀನಾ ತುಂಬಾನೇ ಫೇಮಸ್​. ವಿಶ್ವಾದ್ಯಂತ ಅವರಿಗೆ ಫ್ಯಾನ್ಸ್​ ಇದ್ದಾರೆ. ದಶಕಗಳ ಕಾಲ WWE​ನಲ್ಲಿರುವ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಕೋಟ್ಯಾಂತರ ಜನ ಹಿಂಬಾಲಕರಿದ್ದಾರೆ.

ಸಿದ್ದಾರ್ಥ್​ ಶುಕ್ಲಾ ಸಾವಿಗೆ ಶ್ರದ್ಧಾಂಜಲಿ ಅರ್ಪಿಸಿದ WWE ಸೂಪರ್​ ಸ್ಟಾರ್​​ ಜಾನ್​ ಸೀನಾ
ಸಿದ್ದಾರ್ಥ್​ ಶುಕ್ಲಾ ಸಾವಿಗೆ ಶ್ರದ್ಧಾಂಜಲಿ ಅರ್ಪಿಸಿದ WWE ಸೂಪರ್​ ಸ್ಟಾರ್​​ ಜಾನ್​ ಸೀನಾ
TV9 Web
| Edited By: |

Updated on: Sep 04, 2021 | 2:56 PM

Share

ಸಿದ್ದಾರ್ಥ್​ ಶುಕ್ಲಾ ಮೃತಪಟ್ಟು ಮೂರು ದಿನ ಕಳೆದಿದೆ. ಅವರ ಸಾವಿಗೆ ಸಾಕಷ್ಟು ಸೆಲೆಬ್ರಿಟಿಗಳು ಶ್ರದ್ಧಾಂಜಲಿ ಅರ್ಪಿಸುತ್ತಿದ್ದಾರೆ. ಅವರ ಅಂತ್ಯಕ್ರಿಯೆ ಶುಕ್ರವಾರ (ಸೆಪ್ಟೆಂಬರ್​ 4) ನೆರವೇರಿದ್ದು, ಅಭಿಮಾನಿಗಳ ಆಕ್ರಂದನ ಮುಗಿಲುಮುಟ್ಟಿದೆ. ಹೀಗಿರುವಾಗಲೇ ಸಿದ್ದಾರ್ಥ್​ ಶುಕ್ಲಾಗೆ WWE ಸೂಪರ್​ ಸ್ಟಾರ್​​ ಜಾನ್​ ಸೀನಾ ಶ್ರದ್ಧಾಂಜಲಿ ಅರ್ಪಿಸಿದ್ದಾರೆ. ಇದು ಅನೇಕರಲ್ಲಿ ಅಚ್ಚರಿ ಮೂಡಿಸಿದೆ.

WWE ಸೂಪರ್​ ಸ್ಟಾರ್​​ ಜಾನ್​ ಸೀನಾ ತುಂಬಾನೇ ಫೇಮಸ್​. ವಿಶ್ವಾದ್ಯಂತ ಅವರಿಗೆ ಫ್ಯಾನ್ಸ್​ ಇದ್ದಾರೆ. ದಶಕಗಳ ಕಾಲ WWE​ನಲ್ಲಿರುವ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಕೋಟ್ಯಾಂತರ ಜನ ಹಿಂಬಾಲಕರಿದ್ದಾರೆ. ಭಾರತದಲ್ಲೂ WWE ನೋಡುವವರ ಸಂಖ್ಯೆ ಕಡಿಮೆ ಏನಿಲ್ಲ. ಈ ಎಲ್ಲ ಕಾರಣಕ್ಕೆ ಜಾನ್​ ಸೀನಾ ಅವರು ಭಾರತೀಯರಿಗೂ ಇಷ್ಟವಾಗುತ್ತಾರೆ. ಅಚ್ಚರಿ ಎಂದರೆ, ಭಾರತದ ಮೇಲೂ ಅವರಿಗೆ ಪ್ರೀತಿ ಇದೆ. ಇದು ಸಾಕಷ್ಟು ಬಾರಿ ಸಾಬೀತಾಗಿದೆ. ಈಗ, ಸಿದ್ದಾರ್ಥ್​ ಫೋಟೋ ಹಾಕುವ ಮೂಲಕ ಅವರು ಶ್ರದ್ಧಾಂಜಲಿ ಅರ್ಪಿಸಿದ್ದು ಸಾಕಷ್ಟು ಅಚ್ಚರಿಗೆ ಕಾರಣವಾಗಿದೆ.

ಹೌದು, ಜಾನ್​ ಸೀನಾ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಸಿದ್ದಾರ್ಥ್​ ಫೋಟೋ ಪೋಸ್ಟ್​ ಮಾಡಲಾಗಿದೆ. ಜಾನ್​ ಸೀನಾ ಯಾವುದೇ ಫೋಟೋ ಹಾಕಿದರೂ ಅದಕ್ಕೆ ಕ್ಯಾಪ್ಶನ್​ ನೀಡುವುದಿಲ್ಲ. ಇದನ್ನು ಅವರು ಮೊದಲಿನಿಂದಲೂ ರೂಢಿಸಿಕೊಂಡು ಬಂದಿದ್ದಾರೆ. ತಮ್ಮ ಬಯೋದಲ್ಲಿ ಆ ಬಗ್ಗೆ ಬರೆದುಕೊಂಡಿದ್ದಾರೆ ಕೂಡ. ಅದೇ ರೀತಿ ಸಿದ್ದಾರ್ಥ್​ ಫೋಟೋಗೂ ಅವರು ಯಾವುದೇ ಕ್ಯಾಪ್ಶನ್​ ನೀಡಿಲ್ಲ. ಇದು ಶ್ರದ್ಧಾಂಜಲಿ ಅರ್ಪಿಸೋಕೆ ಮಾಡಿದ ಪೋಸ್ಟ್​ ಎಂದು ಅಭಿಮಾನಿಗಳು ಹೇಳುತ್ತಿದ್ದಾರೆ. ಈ ಮಧ್ಯೆ, ಅವರಿಗೆ ಸಿದ್ದಾರ್ಥ್​ ಗೊತ್ತಿತ್ತಾ? ಅವರು ಕೂಡ ಬಿಗ್​ ಬಾಸ್​ ನೋಡುತ್ತಿದ್ದರಾ ಎಂಬಿತ್ಯಾದಿ ಕೌತುಕ ಅಭಿಮಾನಿಗಳಲ್ಲಿ ಮೂಡಿದೆ.

ಅಂದಹಾಗೆ, ಜಾನ್​ ಸೀನಾ ಈ ರೀತಿ ಭಾರತೀಯರ ಫೋಟೋ ಹಾಕಿದ್ದು ಇದೇ ಮೊದಲಲ್ಲ. ಸುಶಾಂತ್​ ಸಿಂಗ್​ ರಜಪೂತ್​ ಮೃತಪಟ್ಟಾಗ, ಅವರು ಶ್ರದ್ಧಾಂಜಲಿ ಅರ್ಪಿಸಿದ್ದರು. ನಟಿ ಐಶ್ವರ್ಯಾ ರೈ, ಟೀಮ್​ ಇಂಡಿಯಾ ನಾಯಕ ವಿರಾಟ್​ ಕೊಹ್ಲಿ ಫೋಟೋ ಕೂಡ ಪೋಸ್ಟ್​ ಮಾಡಿದ್ದರು ಜಾನ್​ ಸೀನಾ. ಇದಕ್ಕೂ ಅವರು ಯಾವುದೇ ವಿವರಣೆ ಬರೆದಿಲ್ಲ.

ಇದನ್ನೂ ಓದಿ: ಸಿದ್ದಾರ್ಥ್​ ಶುಕ್ಲಾ ಸಾವಿನ ಬಗ್ಗೆ ನಗುತ್ತಾ ಮಾತನಾಡಿದ್ದ ಸಲ್ಮಾನ್​ ಖಾನ್​: ಶಾಕಿಂಗ್​ ವಿಡಿಯೋ ವೈರಲ್

‘ಆ ಸಿದ್ದಾರ್ಥ್​ ಬದಲು ಈ ಸಿದ್ದಾರ್ಥ್​ ಸಾಯಬೇಕಿತ್ತು’ ಎಂದು ದ್ವೇಷಕಾರಿದ ನೆಟ್ಟಿಗರು; ನಟನ ಪ್ರತಿಕ್ರಿಯೆ ಏನು?

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ