AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದಾರ್ಥ್​ ಶುಕ್ಲಾ ಸಾವಿಗೆ ಶ್ರದ್ಧಾಂಜಲಿ ಅರ್ಪಿಸಿದ WWE ಸೂಪರ್​ ಸ್ಟಾರ್​​ ಜಾನ್​ ಸೀನಾ

WWE ಸೂಪರ್​ ಸ್ಟಾರ್​​ ಜಾನ್​ ಸೀನಾ ತುಂಬಾನೇ ಫೇಮಸ್​. ವಿಶ್ವಾದ್ಯಂತ ಅವರಿಗೆ ಫ್ಯಾನ್ಸ್​ ಇದ್ದಾರೆ. ದಶಕಗಳ ಕಾಲ WWE​ನಲ್ಲಿರುವ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಕೋಟ್ಯಾಂತರ ಜನ ಹಿಂಬಾಲಕರಿದ್ದಾರೆ.

ಸಿದ್ದಾರ್ಥ್​ ಶುಕ್ಲಾ ಸಾವಿಗೆ ಶ್ರದ್ಧಾಂಜಲಿ ಅರ್ಪಿಸಿದ WWE ಸೂಪರ್​ ಸ್ಟಾರ್​​ ಜಾನ್​ ಸೀನಾ
ಸಿದ್ದಾರ್ಥ್​ ಶುಕ್ಲಾ ಸಾವಿಗೆ ಶ್ರದ್ಧಾಂಜಲಿ ಅರ್ಪಿಸಿದ WWE ಸೂಪರ್​ ಸ್ಟಾರ್​​ ಜಾನ್​ ಸೀನಾ
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Sep 04, 2021 | 2:56 PM

ಸಿದ್ದಾರ್ಥ್​ ಶುಕ್ಲಾ ಮೃತಪಟ್ಟು ಮೂರು ದಿನ ಕಳೆದಿದೆ. ಅವರ ಸಾವಿಗೆ ಸಾಕಷ್ಟು ಸೆಲೆಬ್ರಿಟಿಗಳು ಶ್ರದ್ಧಾಂಜಲಿ ಅರ್ಪಿಸುತ್ತಿದ್ದಾರೆ. ಅವರ ಅಂತ್ಯಕ್ರಿಯೆ ಶುಕ್ರವಾರ (ಸೆಪ್ಟೆಂಬರ್​ 4) ನೆರವೇರಿದ್ದು, ಅಭಿಮಾನಿಗಳ ಆಕ್ರಂದನ ಮುಗಿಲುಮುಟ್ಟಿದೆ. ಹೀಗಿರುವಾಗಲೇ ಸಿದ್ದಾರ್ಥ್​ ಶುಕ್ಲಾಗೆ WWE ಸೂಪರ್​ ಸ್ಟಾರ್​​ ಜಾನ್​ ಸೀನಾ ಶ್ರದ್ಧಾಂಜಲಿ ಅರ್ಪಿಸಿದ್ದಾರೆ. ಇದು ಅನೇಕರಲ್ಲಿ ಅಚ್ಚರಿ ಮೂಡಿಸಿದೆ.

WWE ಸೂಪರ್​ ಸ್ಟಾರ್​​ ಜಾನ್​ ಸೀನಾ ತುಂಬಾನೇ ಫೇಮಸ್​. ವಿಶ್ವಾದ್ಯಂತ ಅವರಿಗೆ ಫ್ಯಾನ್ಸ್​ ಇದ್ದಾರೆ. ದಶಕಗಳ ಕಾಲ WWE​ನಲ್ಲಿರುವ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಕೋಟ್ಯಾಂತರ ಜನ ಹಿಂಬಾಲಕರಿದ್ದಾರೆ. ಭಾರತದಲ್ಲೂ WWE ನೋಡುವವರ ಸಂಖ್ಯೆ ಕಡಿಮೆ ಏನಿಲ್ಲ. ಈ ಎಲ್ಲ ಕಾರಣಕ್ಕೆ ಜಾನ್​ ಸೀನಾ ಅವರು ಭಾರತೀಯರಿಗೂ ಇಷ್ಟವಾಗುತ್ತಾರೆ. ಅಚ್ಚರಿ ಎಂದರೆ, ಭಾರತದ ಮೇಲೂ ಅವರಿಗೆ ಪ್ರೀತಿ ಇದೆ. ಇದು ಸಾಕಷ್ಟು ಬಾರಿ ಸಾಬೀತಾಗಿದೆ. ಈಗ, ಸಿದ್ದಾರ್ಥ್​ ಫೋಟೋ ಹಾಕುವ ಮೂಲಕ ಅವರು ಶ್ರದ್ಧಾಂಜಲಿ ಅರ್ಪಿಸಿದ್ದು ಸಾಕಷ್ಟು ಅಚ್ಚರಿಗೆ ಕಾರಣವಾಗಿದೆ.

ಹೌದು, ಜಾನ್​ ಸೀನಾ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಸಿದ್ದಾರ್ಥ್​ ಫೋಟೋ ಪೋಸ್ಟ್​ ಮಾಡಲಾಗಿದೆ. ಜಾನ್​ ಸೀನಾ ಯಾವುದೇ ಫೋಟೋ ಹಾಕಿದರೂ ಅದಕ್ಕೆ ಕ್ಯಾಪ್ಶನ್​ ನೀಡುವುದಿಲ್ಲ. ಇದನ್ನು ಅವರು ಮೊದಲಿನಿಂದಲೂ ರೂಢಿಸಿಕೊಂಡು ಬಂದಿದ್ದಾರೆ. ತಮ್ಮ ಬಯೋದಲ್ಲಿ ಆ ಬಗ್ಗೆ ಬರೆದುಕೊಂಡಿದ್ದಾರೆ ಕೂಡ. ಅದೇ ರೀತಿ ಸಿದ್ದಾರ್ಥ್​ ಫೋಟೋಗೂ ಅವರು ಯಾವುದೇ ಕ್ಯಾಪ್ಶನ್​ ನೀಡಿಲ್ಲ. ಇದು ಶ್ರದ್ಧಾಂಜಲಿ ಅರ್ಪಿಸೋಕೆ ಮಾಡಿದ ಪೋಸ್ಟ್​ ಎಂದು ಅಭಿಮಾನಿಗಳು ಹೇಳುತ್ತಿದ್ದಾರೆ. ಈ ಮಧ್ಯೆ, ಅವರಿಗೆ ಸಿದ್ದಾರ್ಥ್​ ಗೊತ್ತಿತ್ತಾ? ಅವರು ಕೂಡ ಬಿಗ್​ ಬಾಸ್​ ನೋಡುತ್ತಿದ್ದರಾ ಎಂಬಿತ್ಯಾದಿ ಕೌತುಕ ಅಭಿಮಾನಿಗಳಲ್ಲಿ ಮೂಡಿದೆ.

ಅಂದಹಾಗೆ, ಜಾನ್​ ಸೀನಾ ಈ ರೀತಿ ಭಾರತೀಯರ ಫೋಟೋ ಹಾಕಿದ್ದು ಇದೇ ಮೊದಲಲ್ಲ. ಸುಶಾಂತ್​ ಸಿಂಗ್​ ರಜಪೂತ್​ ಮೃತಪಟ್ಟಾಗ, ಅವರು ಶ್ರದ್ಧಾಂಜಲಿ ಅರ್ಪಿಸಿದ್ದರು. ನಟಿ ಐಶ್ವರ್ಯಾ ರೈ, ಟೀಮ್​ ಇಂಡಿಯಾ ನಾಯಕ ವಿರಾಟ್​ ಕೊಹ್ಲಿ ಫೋಟೋ ಕೂಡ ಪೋಸ್ಟ್​ ಮಾಡಿದ್ದರು ಜಾನ್​ ಸೀನಾ. ಇದಕ್ಕೂ ಅವರು ಯಾವುದೇ ವಿವರಣೆ ಬರೆದಿಲ್ಲ.

ಇದನ್ನೂ ಓದಿ: ಸಿದ್ದಾರ್ಥ್​ ಶುಕ್ಲಾ ಸಾವಿನ ಬಗ್ಗೆ ನಗುತ್ತಾ ಮಾತನಾಡಿದ್ದ ಸಲ್ಮಾನ್​ ಖಾನ್​: ಶಾಕಿಂಗ್​ ವಿಡಿಯೋ ವೈರಲ್

‘ಆ ಸಿದ್ದಾರ್ಥ್​ ಬದಲು ಈ ಸಿದ್ದಾರ್ಥ್​ ಸಾಯಬೇಕಿತ್ತು’ ಎಂದು ದ್ವೇಷಕಾರಿದ ನೆಟ್ಟಿಗರು; ನಟನ ಪ್ರತಿಕ್ರಿಯೆ ಏನು?

ಗಂಗಾವತಿಯಲ್ಲಿ ಬೆಂಬಲಿಗರ ಸಭೆ ನಡೆಸಿದ ಜನಾರ್ಧನ ರೆಡ್ಡಿ ಪತ್ನಿ ಅರುಣಾ
ಗಂಗಾವತಿಯಲ್ಲಿ ಬೆಂಬಲಿಗರ ಸಭೆ ನಡೆಸಿದ ಜನಾರ್ಧನ ರೆಡ್ಡಿ ಪತ್ನಿ ಅರುಣಾ
ಲಿಫ್ಟ್​ನಲ್ಲಿದ್ದ9 ಜನರನ್ನ ಗೋಡೆ ಕೊರೆದು ರಕ್ಷಿಸಿದ ರೋಚಕ ವಿಡಿಯೋ!
ಲಿಫ್ಟ್​ನಲ್ಲಿದ್ದ9 ಜನರನ್ನ ಗೋಡೆ ಕೊರೆದು ರಕ್ಷಿಸಿದ ರೋಚಕ ವಿಡಿಯೋ!
ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ಪುರುಷರು ವಾಹನ ಓಡಿಸಲು ಪರದಾಡಿದ ರಸ್ತೇಲಿ ಸಲೀಸಾಗಿ ಸ್ಕೂಟರ್ ಓಡಿಸಿದ ಯುವತಿ
ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ
ರಾಕೇಶ್ ಪೂಜಾರಿಗೆ ಆರೋಗ್ಯ ಸಮಸ್ಯೆ ಇತ್ತ: ಗೆಳೆಯ ಕೊಟ್ಟ ಉತ್ತರ
ಪಾಕಿಸ್ತಾನ ಎಸೆದ ಜೀವಂತ ಶೆಲ್​ಗಳನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಸೇನೆ
ಪಾಕಿಸ್ತಾನ ಎಸೆದ ಜೀವಂತ ಶೆಲ್​ಗಳನ್ನು ನಿಷ್ಕ್ರಿಯಗೊಳಿಸಿದ ಭಾರತೀಯ ಸೇನೆ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ
ಮಳೆಗಾಲ ಸಮೀಪದಲ್ಲಿದೆ, ನಗರದಲ್ಲಿ ಮರ ಗಣತಿ ಶುರುಮಾಡಲು ಇದು ಸಕಾಲ
ಮನೆಯೊಳಗೆ ನುಗ್ಗಿ ಕೊಲ್ಲುತ್ತೇವೆ; ಪಾಕಿಸ್ತಾನಕ್ಕೆ ಮೋದಿ ಖಡಕ್ ಎಚ್ಚರಿಕೆ
ಮನೆಯೊಳಗೆ ನುಗ್ಗಿ ಕೊಲ್ಲುತ್ತೇವೆ; ಪಾಕಿಸ್ತಾನಕ್ಕೆ ಮೋದಿ ಖಡಕ್ ಎಚ್ಚರಿಕೆ
ಹೊತ್ತಿ ಉರಿದ ಗೋದಾಮು, 60ಕ್ಕೂ ಹೆಚ್ಚು ಗಾಡಿ ನೀರು ಹಾಕಿದ್ರೂ ಆರದ ಬೆಂಕಿ
ಹೊತ್ತಿ ಉರಿದ ಗೋದಾಮು, 60ಕ್ಕೂ ಹೆಚ್ಚು ಗಾಡಿ ನೀರು ಹಾಕಿದ್ರೂ ಆರದ ಬೆಂಕಿ
ಸಾಮಾನ್ಯ ಸಂಗತಿಯೆಂಬಂತೆ ಘಟನೆ ವಿವರಿಸಿದ ಮೃತ ಬಾಲಕನ ತಂದೆ
ಸಾಮಾನ್ಯ ಸಂಗತಿಯೆಂಬಂತೆ ಘಟನೆ ವಿವರಿಸಿದ ಮೃತ ಬಾಲಕನ ತಂದೆ
ಮದುವೆಗೆಂದು ಮಂಗಳೂರಿಗೆ ಹೊರಟ್ಟಿದ್ದ ಬಸ್ ಶಿರಾಡಿ ಘಾಟಿನಲ್ಲಿ ಪಲ್ಟಿ
ಮದುವೆಗೆಂದು ಮಂಗಳೂರಿಗೆ ಹೊರಟ್ಟಿದ್ದ ಬಸ್ ಶಿರಾಡಿ ಘಾಟಿನಲ್ಲಿ ಪಲ್ಟಿ