AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದಾರ್ಥ್​ ಶುಕ್ಲಾ ಸಾವಿಗೆ ಶ್ರದ್ಧಾಂಜಲಿ ಅರ್ಪಿಸಿದ WWE ಸೂಪರ್​ ಸ್ಟಾರ್​​ ಜಾನ್​ ಸೀನಾ

WWE ಸೂಪರ್​ ಸ್ಟಾರ್​​ ಜಾನ್​ ಸೀನಾ ತುಂಬಾನೇ ಫೇಮಸ್​. ವಿಶ್ವಾದ್ಯಂತ ಅವರಿಗೆ ಫ್ಯಾನ್ಸ್​ ಇದ್ದಾರೆ. ದಶಕಗಳ ಕಾಲ WWE​ನಲ್ಲಿರುವ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಕೋಟ್ಯಾಂತರ ಜನ ಹಿಂಬಾಲಕರಿದ್ದಾರೆ.

ಸಿದ್ದಾರ್ಥ್​ ಶುಕ್ಲಾ ಸಾವಿಗೆ ಶ್ರದ್ಧಾಂಜಲಿ ಅರ್ಪಿಸಿದ WWE ಸೂಪರ್​ ಸ್ಟಾರ್​​ ಜಾನ್​ ಸೀನಾ
ಸಿದ್ದಾರ್ಥ್​ ಶುಕ್ಲಾ ಸಾವಿಗೆ ಶ್ರದ್ಧಾಂಜಲಿ ಅರ್ಪಿಸಿದ WWE ಸೂಪರ್​ ಸ್ಟಾರ್​​ ಜಾನ್​ ಸೀನಾ
TV9 Web
| Edited By: |

Updated on: Sep 04, 2021 | 2:56 PM

Share

ಸಿದ್ದಾರ್ಥ್​ ಶುಕ್ಲಾ ಮೃತಪಟ್ಟು ಮೂರು ದಿನ ಕಳೆದಿದೆ. ಅವರ ಸಾವಿಗೆ ಸಾಕಷ್ಟು ಸೆಲೆಬ್ರಿಟಿಗಳು ಶ್ರದ್ಧಾಂಜಲಿ ಅರ್ಪಿಸುತ್ತಿದ್ದಾರೆ. ಅವರ ಅಂತ್ಯಕ್ರಿಯೆ ಶುಕ್ರವಾರ (ಸೆಪ್ಟೆಂಬರ್​ 4) ನೆರವೇರಿದ್ದು, ಅಭಿಮಾನಿಗಳ ಆಕ್ರಂದನ ಮುಗಿಲುಮುಟ್ಟಿದೆ. ಹೀಗಿರುವಾಗಲೇ ಸಿದ್ದಾರ್ಥ್​ ಶುಕ್ಲಾಗೆ WWE ಸೂಪರ್​ ಸ್ಟಾರ್​​ ಜಾನ್​ ಸೀನಾ ಶ್ರದ್ಧಾಂಜಲಿ ಅರ್ಪಿಸಿದ್ದಾರೆ. ಇದು ಅನೇಕರಲ್ಲಿ ಅಚ್ಚರಿ ಮೂಡಿಸಿದೆ.

WWE ಸೂಪರ್​ ಸ್ಟಾರ್​​ ಜಾನ್​ ಸೀನಾ ತುಂಬಾನೇ ಫೇಮಸ್​. ವಿಶ್ವಾದ್ಯಂತ ಅವರಿಗೆ ಫ್ಯಾನ್ಸ್​ ಇದ್ದಾರೆ. ದಶಕಗಳ ಕಾಲ WWE​ನಲ್ಲಿರುವ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಕೋಟ್ಯಾಂತರ ಜನ ಹಿಂಬಾಲಕರಿದ್ದಾರೆ. ಭಾರತದಲ್ಲೂ WWE ನೋಡುವವರ ಸಂಖ್ಯೆ ಕಡಿಮೆ ಏನಿಲ್ಲ. ಈ ಎಲ್ಲ ಕಾರಣಕ್ಕೆ ಜಾನ್​ ಸೀನಾ ಅವರು ಭಾರತೀಯರಿಗೂ ಇಷ್ಟವಾಗುತ್ತಾರೆ. ಅಚ್ಚರಿ ಎಂದರೆ, ಭಾರತದ ಮೇಲೂ ಅವರಿಗೆ ಪ್ರೀತಿ ಇದೆ. ಇದು ಸಾಕಷ್ಟು ಬಾರಿ ಸಾಬೀತಾಗಿದೆ. ಈಗ, ಸಿದ್ದಾರ್ಥ್​ ಫೋಟೋ ಹಾಕುವ ಮೂಲಕ ಅವರು ಶ್ರದ್ಧಾಂಜಲಿ ಅರ್ಪಿಸಿದ್ದು ಸಾಕಷ್ಟು ಅಚ್ಚರಿಗೆ ಕಾರಣವಾಗಿದೆ.

ಹೌದು, ಜಾನ್​ ಸೀನಾ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಸಿದ್ದಾರ್ಥ್​ ಫೋಟೋ ಪೋಸ್ಟ್​ ಮಾಡಲಾಗಿದೆ. ಜಾನ್​ ಸೀನಾ ಯಾವುದೇ ಫೋಟೋ ಹಾಕಿದರೂ ಅದಕ್ಕೆ ಕ್ಯಾಪ್ಶನ್​ ನೀಡುವುದಿಲ್ಲ. ಇದನ್ನು ಅವರು ಮೊದಲಿನಿಂದಲೂ ರೂಢಿಸಿಕೊಂಡು ಬಂದಿದ್ದಾರೆ. ತಮ್ಮ ಬಯೋದಲ್ಲಿ ಆ ಬಗ್ಗೆ ಬರೆದುಕೊಂಡಿದ್ದಾರೆ ಕೂಡ. ಅದೇ ರೀತಿ ಸಿದ್ದಾರ್ಥ್​ ಫೋಟೋಗೂ ಅವರು ಯಾವುದೇ ಕ್ಯಾಪ್ಶನ್​ ನೀಡಿಲ್ಲ. ಇದು ಶ್ರದ್ಧಾಂಜಲಿ ಅರ್ಪಿಸೋಕೆ ಮಾಡಿದ ಪೋಸ್ಟ್​ ಎಂದು ಅಭಿಮಾನಿಗಳು ಹೇಳುತ್ತಿದ್ದಾರೆ. ಈ ಮಧ್ಯೆ, ಅವರಿಗೆ ಸಿದ್ದಾರ್ಥ್​ ಗೊತ್ತಿತ್ತಾ? ಅವರು ಕೂಡ ಬಿಗ್​ ಬಾಸ್​ ನೋಡುತ್ತಿದ್ದರಾ ಎಂಬಿತ್ಯಾದಿ ಕೌತುಕ ಅಭಿಮಾನಿಗಳಲ್ಲಿ ಮೂಡಿದೆ.

ಅಂದಹಾಗೆ, ಜಾನ್​ ಸೀನಾ ಈ ರೀತಿ ಭಾರತೀಯರ ಫೋಟೋ ಹಾಕಿದ್ದು ಇದೇ ಮೊದಲಲ್ಲ. ಸುಶಾಂತ್​ ಸಿಂಗ್​ ರಜಪೂತ್​ ಮೃತಪಟ್ಟಾಗ, ಅವರು ಶ್ರದ್ಧಾಂಜಲಿ ಅರ್ಪಿಸಿದ್ದರು. ನಟಿ ಐಶ್ವರ್ಯಾ ರೈ, ಟೀಮ್​ ಇಂಡಿಯಾ ನಾಯಕ ವಿರಾಟ್​ ಕೊಹ್ಲಿ ಫೋಟೋ ಕೂಡ ಪೋಸ್ಟ್​ ಮಾಡಿದ್ದರು ಜಾನ್​ ಸೀನಾ. ಇದಕ್ಕೂ ಅವರು ಯಾವುದೇ ವಿವರಣೆ ಬರೆದಿಲ್ಲ.

ಇದನ್ನೂ ಓದಿ: ಸಿದ್ದಾರ್ಥ್​ ಶುಕ್ಲಾ ಸಾವಿನ ಬಗ್ಗೆ ನಗುತ್ತಾ ಮಾತನಾಡಿದ್ದ ಸಲ್ಮಾನ್​ ಖಾನ್​: ಶಾಕಿಂಗ್​ ವಿಡಿಯೋ ವೈರಲ್

‘ಆ ಸಿದ್ದಾರ್ಥ್​ ಬದಲು ಈ ಸಿದ್ದಾರ್ಥ್​ ಸಾಯಬೇಕಿತ್ತು’ ಎಂದು ದ್ವೇಷಕಾರಿದ ನೆಟ್ಟಿಗರು; ನಟನ ಪ್ರತಿಕ್ರಿಯೆ ಏನು?

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್