AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದಾರ್ಥ್​ ಶುಕ್ಲಾ ಸಾವಿಗೆ ಶ್ರದ್ಧಾಂಜಲಿ ಅರ್ಪಿಸಿದ WWE ಸೂಪರ್​ ಸ್ಟಾರ್​​ ಜಾನ್​ ಸೀನಾ

WWE ಸೂಪರ್​ ಸ್ಟಾರ್​​ ಜಾನ್​ ಸೀನಾ ತುಂಬಾನೇ ಫೇಮಸ್​. ವಿಶ್ವಾದ್ಯಂತ ಅವರಿಗೆ ಫ್ಯಾನ್ಸ್​ ಇದ್ದಾರೆ. ದಶಕಗಳ ಕಾಲ WWE​ನಲ್ಲಿರುವ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಕೋಟ್ಯಾಂತರ ಜನ ಹಿಂಬಾಲಕರಿದ್ದಾರೆ.

ಸಿದ್ದಾರ್ಥ್​ ಶುಕ್ಲಾ ಸಾವಿಗೆ ಶ್ರದ್ಧಾಂಜಲಿ ಅರ್ಪಿಸಿದ WWE ಸೂಪರ್​ ಸ್ಟಾರ್​​ ಜಾನ್​ ಸೀನಾ
ಸಿದ್ದಾರ್ಥ್​ ಶುಕ್ಲಾ ಸಾವಿಗೆ ಶ್ರದ್ಧಾಂಜಲಿ ಅರ್ಪಿಸಿದ WWE ಸೂಪರ್​ ಸ್ಟಾರ್​​ ಜಾನ್​ ಸೀನಾ
TV9 Web
| Edited By: |

Updated on: Sep 04, 2021 | 2:56 PM

Share

ಸಿದ್ದಾರ್ಥ್​ ಶುಕ್ಲಾ ಮೃತಪಟ್ಟು ಮೂರು ದಿನ ಕಳೆದಿದೆ. ಅವರ ಸಾವಿಗೆ ಸಾಕಷ್ಟು ಸೆಲೆಬ್ರಿಟಿಗಳು ಶ್ರದ್ಧಾಂಜಲಿ ಅರ್ಪಿಸುತ್ತಿದ್ದಾರೆ. ಅವರ ಅಂತ್ಯಕ್ರಿಯೆ ಶುಕ್ರವಾರ (ಸೆಪ್ಟೆಂಬರ್​ 4) ನೆರವೇರಿದ್ದು, ಅಭಿಮಾನಿಗಳ ಆಕ್ರಂದನ ಮುಗಿಲುಮುಟ್ಟಿದೆ. ಹೀಗಿರುವಾಗಲೇ ಸಿದ್ದಾರ್ಥ್​ ಶುಕ್ಲಾಗೆ WWE ಸೂಪರ್​ ಸ್ಟಾರ್​​ ಜಾನ್​ ಸೀನಾ ಶ್ರದ್ಧಾಂಜಲಿ ಅರ್ಪಿಸಿದ್ದಾರೆ. ಇದು ಅನೇಕರಲ್ಲಿ ಅಚ್ಚರಿ ಮೂಡಿಸಿದೆ.

WWE ಸೂಪರ್​ ಸ್ಟಾರ್​​ ಜಾನ್​ ಸೀನಾ ತುಂಬಾನೇ ಫೇಮಸ್​. ವಿಶ್ವಾದ್ಯಂತ ಅವರಿಗೆ ಫ್ಯಾನ್ಸ್​ ಇದ್ದಾರೆ. ದಶಕಗಳ ಕಾಲ WWE​ನಲ್ಲಿರುವ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಕೋಟ್ಯಾಂತರ ಜನ ಹಿಂಬಾಲಕರಿದ್ದಾರೆ. ಭಾರತದಲ್ಲೂ WWE ನೋಡುವವರ ಸಂಖ್ಯೆ ಕಡಿಮೆ ಏನಿಲ್ಲ. ಈ ಎಲ್ಲ ಕಾರಣಕ್ಕೆ ಜಾನ್​ ಸೀನಾ ಅವರು ಭಾರತೀಯರಿಗೂ ಇಷ್ಟವಾಗುತ್ತಾರೆ. ಅಚ್ಚರಿ ಎಂದರೆ, ಭಾರತದ ಮೇಲೂ ಅವರಿಗೆ ಪ್ರೀತಿ ಇದೆ. ಇದು ಸಾಕಷ್ಟು ಬಾರಿ ಸಾಬೀತಾಗಿದೆ. ಈಗ, ಸಿದ್ದಾರ್ಥ್​ ಫೋಟೋ ಹಾಕುವ ಮೂಲಕ ಅವರು ಶ್ರದ್ಧಾಂಜಲಿ ಅರ್ಪಿಸಿದ್ದು ಸಾಕಷ್ಟು ಅಚ್ಚರಿಗೆ ಕಾರಣವಾಗಿದೆ.

ಹೌದು, ಜಾನ್​ ಸೀನಾ ಇನ್​ಸ್ಟಾಗ್ರಾಮ್​ ಖಾತೆಯಲ್ಲಿ ಸಿದ್ದಾರ್ಥ್​ ಫೋಟೋ ಪೋಸ್ಟ್​ ಮಾಡಲಾಗಿದೆ. ಜಾನ್​ ಸೀನಾ ಯಾವುದೇ ಫೋಟೋ ಹಾಕಿದರೂ ಅದಕ್ಕೆ ಕ್ಯಾಪ್ಶನ್​ ನೀಡುವುದಿಲ್ಲ. ಇದನ್ನು ಅವರು ಮೊದಲಿನಿಂದಲೂ ರೂಢಿಸಿಕೊಂಡು ಬಂದಿದ್ದಾರೆ. ತಮ್ಮ ಬಯೋದಲ್ಲಿ ಆ ಬಗ್ಗೆ ಬರೆದುಕೊಂಡಿದ್ದಾರೆ ಕೂಡ. ಅದೇ ರೀತಿ ಸಿದ್ದಾರ್ಥ್​ ಫೋಟೋಗೂ ಅವರು ಯಾವುದೇ ಕ್ಯಾಪ್ಶನ್​ ನೀಡಿಲ್ಲ. ಇದು ಶ್ರದ್ಧಾಂಜಲಿ ಅರ್ಪಿಸೋಕೆ ಮಾಡಿದ ಪೋಸ್ಟ್​ ಎಂದು ಅಭಿಮಾನಿಗಳು ಹೇಳುತ್ತಿದ್ದಾರೆ. ಈ ಮಧ್ಯೆ, ಅವರಿಗೆ ಸಿದ್ದಾರ್ಥ್​ ಗೊತ್ತಿತ್ತಾ? ಅವರು ಕೂಡ ಬಿಗ್​ ಬಾಸ್​ ನೋಡುತ್ತಿದ್ದರಾ ಎಂಬಿತ್ಯಾದಿ ಕೌತುಕ ಅಭಿಮಾನಿಗಳಲ್ಲಿ ಮೂಡಿದೆ.

ಅಂದಹಾಗೆ, ಜಾನ್​ ಸೀನಾ ಈ ರೀತಿ ಭಾರತೀಯರ ಫೋಟೋ ಹಾಕಿದ್ದು ಇದೇ ಮೊದಲಲ್ಲ. ಸುಶಾಂತ್​ ಸಿಂಗ್​ ರಜಪೂತ್​ ಮೃತಪಟ್ಟಾಗ, ಅವರು ಶ್ರದ್ಧಾಂಜಲಿ ಅರ್ಪಿಸಿದ್ದರು. ನಟಿ ಐಶ್ವರ್ಯಾ ರೈ, ಟೀಮ್​ ಇಂಡಿಯಾ ನಾಯಕ ವಿರಾಟ್​ ಕೊಹ್ಲಿ ಫೋಟೋ ಕೂಡ ಪೋಸ್ಟ್​ ಮಾಡಿದ್ದರು ಜಾನ್​ ಸೀನಾ. ಇದಕ್ಕೂ ಅವರು ಯಾವುದೇ ವಿವರಣೆ ಬರೆದಿಲ್ಲ.

ಇದನ್ನೂ ಓದಿ: ಸಿದ್ದಾರ್ಥ್​ ಶುಕ್ಲಾ ಸಾವಿನ ಬಗ್ಗೆ ನಗುತ್ತಾ ಮಾತನಾಡಿದ್ದ ಸಲ್ಮಾನ್​ ಖಾನ್​: ಶಾಕಿಂಗ್​ ವಿಡಿಯೋ ವೈರಲ್

‘ಆ ಸಿದ್ದಾರ್ಥ್​ ಬದಲು ಈ ಸಿದ್ದಾರ್ಥ್​ ಸಾಯಬೇಕಿತ್ತು’ ಎಂದು ದ್ವೇಷಕಾರಿದ ನೆಟ್ಟಿಗರು; ನಟನ ಪ್ರತಿಕ್ರಿಯೆ ಏನು?

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ