AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Article 370 Movie: ಗಲ್ಫ್​ ರಾಷ್ಟ್ರಗಳಲ್ಲಿ ಭಾರತದ ‘ಆರ್ಟಿಕಲ್​ 370’ ಸಿನಿಮಾ ಬ್ಯಾನ್​

ಭಾರತದಲ್ಲಿ ‘ಆರ್ಟಿಕಲ್​ 370’ ಸಿನಿಮಾ ಚೆನ್ನಾಗಿ ಪ್ರದರ್ಶನ ಕಾಣುತ್ತಿದೆ. ಆದರೆ ಗಲ್ಫ್​ ರಾಷ್ಟ್ರಗಳಲ್ಲಿ ಈ ಸಿನಿಮಾವನ್ನು ಬ್ಯಾನ್​ ಮಾಡಲಾಗಿದೆ. ಇದರಿಂದಾಗಿ ಜಾಗತಿಕ ಬಾಕ್ಸ್​ ಆಫೀಸ್​ನಲ್ಲಿ ಚಿತ್ರದ ಕಲೆಕ್ಷನ್​ ಕುಗ್ಗಲಿದೆ.​ ಈ ಸಿನಿಮಾವನ್ನು ಬ್ಯಾನ್​ ಮಾಡಿದ್ದಕ್ಕೆ ಸೂಕ್ತ ಕಾರಣ ಏನು ಎಂಬುದನ್ನು ತಿಳಿಸಿಲ್ಲ. ಯಾಮಿ ಗೌತಮ್​ ಅವರು ಈ ಚಿತ್ರದಲ್ಲಿ ನಟಿಸಿದ್ದಾರೆ.

Article 370 Movie: ಗಲ್ಫ್​ ರಾಷ್ಟ್ರಗಳಲ್ಲಿ ಭಾರತದ ‘ಆರ್ಟಿಕಲ್​ 370’ ಸಿನಿಮಾ ಬ್ಯಾನ್​
ಪ್ರಿಯಾಮಣಿ, ಯಾಮಿ ಗೌತಮ್​
ಮದನ್​ ಕುಮಾರ್​
|

Updated on: Feb 26, 2024 | 10:59 PM

Share

ಕಾಶ್ಮೀರದಲ್ಲಿ ಆರ್ಟಿಕಲ್​ 370 (Article 370) ರದ್ದು ಮಾಡಿದ ಘಟನೆಯನ್ನು ಆಧರಿಸಿ ಸಿನಿಮಾ ಮೂಡಿಬಂದಿದೆ. ‘ಆರ್ಟಿಕಲ್​ 370’ ಚಿತ್ರಕ್ಕೆ ಆದಿತ್ಯ ಸುಹಾಸ್​ ನಿರ್ದೇಶನ ಮಾಡಿದ್ದಾರೆ. ಭಾರತದ ಬಾಕ್ಸ್​ ಆಫೀಸ್​ನಲ್ಲಿ ಈ ಸಿನಿಮಾಗೆ ಉತ್ತಮ ಕಲೆಕ್ಷನ್​ ಆಗುತ್ತಿದೆ. ವಿದೇಶದಲ್ಲೂ ಒಳ್ಳೆಯ ಕಮಾಯಿ ಆಗುತ್ತಿದೆ. ಆದರೆ ಗಲ್ಫ್​ ರಾಷ್ಟ್ರಗಳಲ್ಲಿ (Gulf Countries) ಈ ಸಿನಿಮಾವನ್ನು ನಿಷೇಧಿಸಲಾಗಿದೆ. ಇದರಿಂದ ಚಿತ್ರದ ಗಳಿಕೆಯ ಮೇಲೆ ಪರಿಣಾಮ ಬೀರಲಿದೆ. ‘ಆರ್ಟಿಕಲ್​ 370’ ಸಿನಿಮಾದಲ್ಲಿ ಯಾಮಿ ಗೌತಮ್​ (Yami Gautam) ಅವರು ಪ್ರಮುಖ ಪಾತ್ರ ಮಾಡಿದ್ದಾರೆ. ಪ್ರಿಯಾಮಣಿ ಕೂಡ ಗಮನಾರ್ಹ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

ಪಾಕ್​ ವಿರೋಧಿ ಅಂಶಗಳು ‘ಆರ್ಟಿಕಲ್​ 370’ ಸಿನಿಮಾದಲ್ಲಿ ಇದೆ. ಅದೇ ಕಾರಣಕ್ಕಾಗಿ ಗಲ್ಫ್​ ರಾಷ್ಟ್ರಗಳಲ್ಲಿ ಈ ಚಿತ್ರವನ್ನು ಬ್ಯಾನ್​ ಮಾಡಿರಬಹುದು. ಆದರೆ ಅಲ್ಲಿನ ಸೆನ್ಸಾರ್​ ಮಂಡಳಿಯವರು ಈ ಚಿತ್ರವನ್ನು ನಿಷೇಧಿಸಿದ್ದಕ್ಕೆ ಸೂಕ್ತ ಕಾರಣ ನೀಡಿಲ್ಲ. ಇತ್ತೀಚೆಗೆ ಹೃತಿಕ್​ ರೋಷನ್​, ದೀಪಿಕಾ ಪಡುಕೋಣೆ ನಟನೆಯ ‘ಫೈಟರ್​’ ಸಿನಿಮಾವನ್ನು ಕೂಡ ಅಲ್ಲಿ ಬ್ಯಾನ್​ ಮಾಡಲಾಗಿತ್ತು.

ಸಾಮಾನ್ಯವಾಗಿ ಗಲ್ಫ್​ ರಾಷ್ಟ್ರಗಳಲ್ಲಿ ಭಾರತದ ಸಿನಿಮಾಗಳಿಗೆ ಬೇಡಿಕೆ ಇರುತ್ತದೆ. ಹಿಂದಿ ಸಿನಿಮಾಗಳನ್ನು ಅಲ್ಲಿನ ಜನರು ನೋಡಿ ಎಂಜಾಯ್​ ಮಾಡುತ್ತಾರೆ. ಅದರಿಂದ ಬಾಲಿವುಡ್​ ಬಾಕ್ಸ್​ ಆಫೀಸ್​ಗೆ ಉತ್ತಮ ಕಮಾಯಿ ಆಗುತ್ತದೆ. ಈ ರೀತಿ ಬ್ಯಾನ್​ ಮಾಡಿದರೆ ಸಿನಿಮಾದ ಗಳಿಕೆಗೆ ಹೊಡೆತ ಬೀಳುತ್ತದೆ. ಸದ್ಯ ‘ಆರ್ಟಿಕಲ್​ 370’ ಸಿನಿಮಾಗೆ ಹಾಗೆಯೇ ಆಗಿದೆ. ಭಾರತದಲ್ಲಿ ಈ ಸಿನಿಮಾ ಮೂರು ದಿನಕ್ಕೆ 25 ಕೋಟಿ ರೂಪಾಯಿಗೂ ಹೆಚ್ಚು ಕಲೆಕ್ಷನ್​ ಮಾಡಿದೆ.

ಇದನ್ನೂ ಓದಿ: ‘ಆರ್ಟಿಕಲ್ 370’ ಸಿನಿಮಾದಲ್ಲಿ ಮಿಂಚಿದ ನಟಿ ಯಾಮಿ ಗೌತಮ್

‘ಆರ್ಟಿಕಲ್​ 370’ ಸಿನಿಮಾದ ಬಿಡುಗಡೆಗೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು ಈ ಚಿತ್ರದ ಬಗ್ಗೆ ಮಾತನಾಡಿದ್ದರು. ‘ಈ ವಾರ ಆರ್ಟಿಕಲ್​ 370 ರದ್ದು ಕುರಿತು ಸಿನಿಮಾ ಬರುತ್ತಿದೆ ಎಂದು ಕೇಳಿದ್ದೇನೆ. ಇಡೀ ದೇಶದಲ್ಲಿ ನಿಮ್ಮ ಜೈಕಾರ ಆಗಲಿದೆ ಅಂತ ನನಗೆ ಅನಿಸುತ್ತದೆ. ಸಿನಿಮಾ ಹೇಗಿದೆ ಎಂಬುದು ನನಗೆ ತಿಳಿದಿಲ್ಲ. ಜನರಿಗೆ ಸೂಕ್ತ ಮಾಹಿತಿ ನೀಡಲು ಉಪಯೋಗ ಆಗುತ್ತದೆ’ ಎಂದು ನರೇಂದ್ರ ಮೋದಿ ಹೇಳಿದ್ದರು. ಈ ಚಿತ್ರವನ್ನೇ ಗಲ್ಫ್​ ರಾಷ್ಟ್ರಗಳಲ್ಲಿ ಬ್ಯಾನ್​ ಮಾಡಿರುವುದು ಅಚ್ಚರಿ ಮೂಡಿಸಿದೆ.

‘ಆರ್ಟಿಕಲ್​ 370’ ಸಿನಿಮಾ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಮಾತು:

ಬಾಕ್ಸ್​ ಆಫೀಸ್​ ಬಗ್ಗೆ ಮಾಹಿತಿ:

ಫೆ.23ರಂದು ‘ಆರ್ಟಿಕಲ್​ 370’ ಚಿತ್ರ ಬಿಡುಗಡೆ ಆಯಿತು. ಮೊದಲ ದಿನ ಈ ಸಿನಿಮಾಗೆ 6.12 ಕೋಟಿ ರೂಪಾಯಿ ಕಮಾಯಿ ಆಯಿತು. 2ನೇ ದಿನವಾದ ಫೆಬ್ರವರಿ 24ರಂದು 9.08 ಕೋಟಿ ರೂಪಾಯಿ ಕಲೆಕ್ಷನ್​ ಆಯ್ತು. 3ನೇ ದಿನ (ಫೆ.25) ಈ ಚಿತ್ರವು 10.25 ಕೋಟಿ ರೂಪಾಯಿ ಗಳಿಕೆ ಮಾಡಿದೆ. ಸೋಮವಾರ (ಫೆ.26) ಸಹ ಅನೇಕ ಚಿತ್ರಮಂದಿರಗಳಲ್ಲಿ ಉತ್ತಮ ಪ್ರದರ್ಶನ ಕಂಡಿದೆ. ವಿದೇಶದ ಗಳಿಕೆಯೂ ಸೇರಿದರೆ ಮೂರು ದಿನಕ್ಕೆ 34.71 ಕೋಟಿ ರೂಪಾಯಿ ಕಲೆಕ್ಷನ್​ ಆಗಿದೆ ಎಂದು ಚಿತ್ರತಂಡದವರು ಮಾಹಿತಿ ಹಂಚಿಕೊಂಡಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು