AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಿಢೀರ್​ ಕುಸಿಯಿತು ‘ಆರ್ಟಿಕಲ್​ 370’ ಸಿನಿಮಾ ಕಲೆಕ್ಷನ್​; 4 ದಿನಕ್ಕೆ ಗಳಿಸಿದ್ದೆಷ್ಟು?

ಮೂರನೇ ದಿನ ‘ಆರ್ಟಿಕಲ್​ 370’ ಸಿನಿಮಾ 10 ಕೋಟಿ ರೂಪಾಯಿ ಗಳಿಸಿತ್ತು. ಆದರೆ ನಾಲ್ಕನೇ ದಿನ ಕೇವಲ 3.25 ಕೋಟಿ ರೂಪಾಯಿಗೆ ಕಲೆಕ್ಷನ್​ ಕುಸಿದಿದೆ. ಯಾಮಿ ಗೌತಮ್​ ಅವರು ಈ ಸಿನಿಮಾದಲ್ಲಿ ಮುಖ್ಯಭೂಮಿಕೆ ನಿಭಾಯಿಸಿದ್ದಾರೆ. ರಾಜಕೀಯದ ನೈಜ ಘಟನೆಗಳನ್ನು ಆಧರಿಸಿ ಈ ಚಿತ್ರ ಮೂಡಿಬಂದಿದೆ. ‘ಆರ್ಟಿಕಲ್​ 370’ ಸಿನಿಮಾದ ಬಾಕ್ಸ್​ ಆಫೀಸ್​ ವಿವರ ಇಲ್ಲಿದೆ..

ದಿಢೀರ್​ ಕುಸಿಯಿತು ‘ಆರ್ಟಿಕಲ್​ 370’ ಸಿನಿಮಾ ಕಲೆಕ್ಷನ್​; 4 ದಿನಕ್ಕೆ ಗಳಿಸಿದ್ದೆಷ್ಟು?
ಯಾಮಿ ಗೌತಮ್​
ಮದನ್​ ಕುಮಾರ್​
|

Updated on: Feb 27, 2024 | 12:05 PM

Share

ಪ್ರಿಯಾಮಣಿ, ಯಾಮಿ ಗೌತಮ್​ (Yami Gautam), ಅರುಣ್​ ಗೋವಿಲ್​ ಮೊದಲಾದವರು ನಟಿಸಿದ ‘ಆರ್ಟಿಕಲ್​ 370’ ಸಿನಿಮಾದ ಕಲೆಕ್ಷನ್ (Article 370 Movie Collection) ನಾಲ್ಕನೇ ದಿನಕ್ಕೆ ಕುಸಿದಿದೆ. ಮೊದಲ ಮೂರು ದಿನ ಉತ್ತಮವಾಗಿ ಪ್ರದರ್ಶನ ಕಂಡ ಈ ಸಿನಿಮಾ ಸೋಮವಾರದ ಪರೀಕ್ಷೆಯಲ್ಲಿ ಪಾಸ್​ ಆಗಲು ಹೆಣಗಾಡಿದೆ. ಇದರಿಂದ ಮುಂದಿನ ದಿನಗಳಲ್ಲಿ ‘ಆರ್ಟಿಕಲ್​ 370’  (Article 370 Movie) ಕಲೆಕ್ಷನ್​ ಇನ್ನೂ ಕಡಿಮೆ ಆಗುವ ಸಾಧ್ಯತೆ ಕಾಣಿಸಿದೆ. ಈ ಸಿನಿಮಾಗೆ ಆದಿತ್ಯ ಸುಹಾನ್​ ಅವರು ಆ್ಯಕ್ಷನ್​-ಕಟ್​ ಹೇಳಿದ್ದಾರೆ. ಈವರೆಗೆ ಬಾಕ್ಸ್​ ಆಫೀಸ್​ನಲ್ಲಿ ಈ ಸಿನಿಮಾ ಮಾಡಿದ ಕಲೆಕ್ಷನ್​ ಬಗ್ಗೆ ಇಲ್ಲಿದೆ ಮಾಹಿತಿ…

‘ಆರ್ಟಿಕಲ್​ 370’ ಸಿನಿಮಾದಲ್ಲಿ ದೇಶಭಕ್ತಿ ಕಥಾಹಂದರ ಇದೆ. ಕಾಶ್ಮೀರದಲ್ಲಿ ಆರ್ಟಿಕಲ್​ 370 ರದ್ದು ಮಾಡಿದ್ದನ್ನು ಆಧರಿಸಿ ಈ ಸಿನಿಮಾ ಮೂಡಿಬಂದಿದೆ. ನೈಜ ಘಟನೆಗಳ ಆಧರಿತ ಸಿನಿಮಾ ಆದ್ದರಿಂದ ಪ್ರೇಕ್ಷಕರು ಆಸಕ್ತಿ ತೋರಿಸುತ್ತಾರೆ ಎಂಬುದು ಚಿತ್ರತಂಡದ ಭರವಸೆ ಆಗಿತ್ತು. ಅದಕ್ಕೆ ತಕ್ಕಂತೆಯೇ ಮೊದಲ ಮೂರು ದಿನ ಚೆನ್ನಾಗಿ ಕಲೆಕ್ಷನ್​ ಆಯಿತು. ಆದರೆ ನಾಲ್ಕನೇ ದಿನದಿಂದ ಕುಸಿತ ಕಾಣಿಸಿದೆ.

ಇದನ್ನೂ ಓದಿ: ‘ಆರ್ಟಿಕಲ್ 370’ ಸಿನಿಮಾದಲ್ಲಿ ಮಿಂಚಿದ ನಟಿ ಯಾಮಿ ಗೌತಮ್

ಸಿನಿಮಾ ನೋಡಿದ ಒಂದು ವರ್ಗದ ಪ್ರೇಕ್ಷಕರು ಹಾಗೂ ವಿಮರ್ಶಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಫೆಬ್ರವರಿ 23ರಂದು ಈ ಸಿನಿಮಾ ಬಿಡುಗಡೆ ಆಯಿತು. ಅಂದು ಬಾಕ್ಸ್​ ಆಫೀಸ್​ನಲ್ಲಿ ಈ ಸಿನಿಮಾಗೆ 6.12 ಕೋಟಿ ರೂಪಾಯಿ ಗಳಿಕೆ ಆಯಿತು. ಫೆ.24ರಂದು 9.08 ಕೋಟಿ ರೂಪಾಯಿ ಕಲೆಕ್ಷನ್​ ಮಾಡಿತು. 3ನೇ ದಿನವಾದ ಫೆ.25ರಂದು ಭರ್ಜರಿ ಏರಿಕೆ ಆಯಿತು. ಅಂದು 10.25 ಕೋಟಿ ರೂಪಾಯಿ ಹರಿದು ಬಂತು. ಆದರೆ ಮರುದಿನ (ಫೆ.26) ಕೇವಲ 3.25 ಕೋಟಿ ರೂಪಾಯಿ ಕಲೆಕ್ಷನ್​ ಆಗಿದೆ. ಆ ಮೂಲಕ ಗಣನೀಯವಾಗಿ ಕಲೆಕ್ಷನ್​ ಕುಸಿದಿದೆ. 4 ದಿನಕ್ಕೆ ಒಟ್ಟು 28 ಕೋಟಿ ರೂಪಾಯಿ ಆಗಿದೆ.

‘ರಾಮಾಯಣ’ ಸೀರಿಯಲ್​ ಖ್ಯಾತಿಯ ನಟ ಅರುಣ್​ ಗೋವಿಲ್​ ಅವರು ಈ ಸಿನಿಮಾದಲ್ಲಿ ನರೇಂದ್ರ ಮೋದಿಯ ಪಾತ್ರಕ್ಕೆ ಬಣ್ಣ ಹಚ್ಚಿದ್ದಾರೆ. ಅವರ ಲುಕ್​ ನೋಡಿದ ಪ್ರೇಕ್ಷಕರಿಗೆ ಅಚ್ಚರಿ ಆಗಿದೆ. ಈ ಸಿನಿಮಾದ ಶೂಟಿಂಗ್​ ಸಂದರ್ಭದಲ್ಲಿ ಕೆಲವರು ಅಪಸ್ವರ ತೆಗೆದಿದ್ದರು. ಆದರೆ ಅಂಥವರ ಮಾತಿಗೆ ಕಿವಿಗೊಡದೇ ಸಿನಿಮಾ ಮುಗಿಸಿದ್ದಾಗಿ ಯಾಮಿ ಗೌತಮ್​ ಅವರು ಹೇಳಿಕೊಂಡಿದ್ದರು. ಭಾನುವಾರದ ಕಲೆಕ್ಷನ್​ ನೋಡಿ ಅವರು ಖುಷಿಪಟ್ಟಿದ್ದರು. ಆದರೆ ನಾಲ್ಕನೇ ದಿನಕ್ಕೆ ಕಲೆಕ್ಷನ್​ ಕುಸಿದಿದ್ದು ಮುಂದೇನಾಗುತ್ತದೆ ಎಂಬ ಚಿಂತೆ ಚಿತ್ರತಂಡದವರಿಗೆ ಶುರುವಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು