AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಯಶ್ ಬೇಗ ಬೇಗ ಸಿನಿಮಾ ಮಾಡಿ, ನಾವು ಕಾಯ್ತಾ ಇದೀವಿ’; ಶಾರುಖ್ ಖಾನ್

‘ಕೆಜಿಎಫ್ 2’ ಚಿತ್ರದಲ್ಲಿ ಯಶ್ ಅವರು ಹೀರೋ ಆಗಿ ನಟಿಸಿದ್ದರು. ಈ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರ ಬಾಲಿವುಡ್​ನಲ್ಲೇ 500+ ಕೋಟಿ ರೂಪಾಯಿ ಗಳಿಕೆ ಮಾಡಿದೆ. ಈ ಮೂಲಕ ಬಾಲಿವುಡ್​ನಲ್ಲೂ ಯಶ್​ ಹವಾ ಸೃಷ್ಟಿ ಮಾಡಿದ್ದಾರೆ. ಈಗ ಶಾರುಖ್ ಖಾನ್ ಅವರ ‘ಟಾಕ್ಸಿಕ್’ ಬಗ್ಗೆ ಯಶ್ ಹೇಳಿದ್ದಾರೆ ಎನ್ನಲಾದ ವಿಡಿಯೋ ವೈರಲ್ ಆಗಿದೆ.

‘ಯಶ್ ಬೇಗ ಬೇಗ ಸಿನಿಮಾ ಮಾಡಿ, ನಾವು ಕಾಯ್ತಾ ಇದೀವಿ’; ಶಾರುಖ್ ಖಾನ್
ಯಶ್-ಶಾರುಖ್
ರಾಜೇಶ್ ದುಗ್ಗುಮನೆ
|

Updated on:Nov 05, 2024 | 11:01 AM

Share

ಕನ್ನಡದ ನಟ ಯಶ್ ಅವರ ಹವಾ ಕೇವಲ ಕರ್ನಾಟಕಕ್ಕೆ ಮಾತ್ರ ಸೀಮಿತವಾಗಿಲ್ಲ. ಬಾಲಿವುಡ್​ನಲ್ಲೂ ಅವರಿಗೆ ದೊಡ್ಡ ಮಟ್ಟದ ಜನಪ್ರಿಯತೆ ಸಿಕ್ಕಿದೆ. ಈಗ ಅವರು ‘ಟಾಕ್ಸಿಕ್’ ಸಿನಿಮಾ ಶೂಟಿಂಗ್ ಮಾಡುತ್ತಿದ್ದಾರೆ. ಅವರು ಬೇಗ ಬೇಗ ಸಿನಿಮಾ ಮಾಡಲಿ ಎಂಬುದು ಫ್ಯಾನ್ಸ್ ಕೋರಿಕೆ. ಈಗ ಶಾರುಖ್ ಖಾನ್ ಕೂಡ ಇದೇ ರೀತಿಯ ಬೇಡಿಕೆ ಇಟ್ಟಿದ್ದಾರೆ. ಇದು ಇತ್ತೀಚಿನ ವಿಡಿಯೋ ಎಂದು ಹೇಳಲಾಗುತ್ತಿದೆ.

‘ಕೆಜಿಎಫ್ 2’ ಚಿತ್ರದಲ್ಲಿ ಯಶ್ ಅವರು ಹೀರೋ ಆಗಿ ನಟಿಸಿದ್ದರು. ಈ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರ ಬಾಲಿವುಡ್​ನಲ್ಲೇ 500+ ಕೋಟಿ ರೂಪಾಯಿ ಗಳಿಕೆ ಮಾಡಿದೆ. ಈ ಮೂಲಕ ಬಾಲಿವುಡ್​ನಲ್ಲೂ ಯಶ್​ ಹವಾ ಸೃಷ್ಟಿ ಮಾಡಿದ್ದಾರೆ. ಈಗ ಶಾರುಖ್ ಖಾನ್ ಅವರು ‘ಟಾಕ್ಸಿಕ್’ ಬಗ್ಗೆ ಹೇಳಿದ್ದಾರೆ ಎನ್ನಲಾದ ವಿಡಿಯೋ ವೈರಲ್ ಆಗಿದೆ.

ಶಾರುಖ್ ಖಾನ್ ಇತ್ತೀಚೆಗೆ ಬರ್ತ್​ಡೇ ಆಚರಿಸಿಕೊಂಡಿದ್ದಾರೆ. ಇದನ್ನು ‘ಎಸ್​​ಆರ್​ಕೆ ಡೇ’ ಎಂದು ಆಚರಿಸಲಾಗಿದೆ. ಈ ವೇಳೆ ಯಶ್ ಅವರಿಗೆ ಶಾರುಖ್ ಖಾನ್ ಒಂದು ಕಿವಿ ಮಾತು ಹೇಳಿದ್ದಾರೆ. ಇದಕ್ಕೆ ಯಶ್ ಅವರು ಯಾವ ರೀತಿಯಲ್ಲಿ ಪ್ರತಿಕ್ರಿಯೆ ನೀಡುತ್ತಾರೆ ಎನ್ನುವ ಕುತೂಹಲ ಮೂಡಿದೆ.

ಶಾರುಖ್ ಖಾನ್ ಅವರಿಗೆ ಫ್ಯಾನ್ಸ್ ಕಡೆಯಿಂದ ಪ್ರಶ್ನೆ ಮಾಡಲಾಗಿದೆ. ಇದಕ್ಕೆ ಉತ್ತರ ನೀಡಿದ್ದಾರೆ ಅವರು. ‘ಯಶ್ ಬೇಗ ಬೇಗ ಸಿನಿಮಾ ಮಾಡಿ. ನಾವು ಕಾಯುತ್ತಿದ್ದೇವೆ’ ಎಂದು ಶಾರುಖ್ ಖಾನ್ ಹೇಳಿದ್ದಾರೆ. ಈ ಮೂಲಕ ಯಶ್​ ಸಿನಿಮಾಗಳ ಮೇಲೆ ಶಾರುಖ್ ಖಾನ್​ಗೂ ನಿರೀಕ್ಷೆ ಇದೆ ಅನ್ನೋದು ಸ್ಪಷ್ಟವಾಗಿದೆ.

ಇದನ್ನೂ ಓದಿ: ಯಶ್-ರಾಧಿಕಾ ದಂಪತಿಯ ಪುತ್ರ ಯಥರ್ವ್​ಗೆ 5ನೇ ವರ್ಷದ ಹುಟ್ಟುಹಬ್ಬ; ಇಲ್ಲಿದೆ ವಿಶೇಷ ವಿಡಿಯೋ

ಯಶ್ ಮಾರುಕಟ್ಟೆ ವಿಸ್ತರಣೆ ಆಗಿದೆ. ಕೇವಲ ಕನ್ನಡ ಮಾತ್ರವಲ್ಲದೆ ಹಿಂದಿ ಚಿತ್ರರಂಗದಲ್ಲೂ ಅವರಿಗೆ ಬೇಡಿಕೆ ಸೃಷ್ಟಿ ಆಗಿದೆ. ಹಿಂದಿಯಲ್ಲೂ ಅವರು ಸಿನಿಮಾ ಮಾಡುತ್ತಿದ್ದಾರೆ. ಹಿಂದಿಯಲ್ಲಿ ‘ರಾಮಾಯಣ’ ಚಿತ್ರವನ್ನು ಯಶ್ ಮಾಡುತ್ತಿದ್ದಾರೆ. ಇದರಲ್ಲಿ ರಾವಣನ ಪಾತ್ರವನ್ನು ಯಶ್ ಮಾಡುತ್ತಿದ್ದಾರೆ. ಈ ಪಾತ್ರ ಮಾಡಲು ನಿಜಕ್ಕೂ ಅವರು ಎಗ್ಸೈಟ್ ಆಗಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 10:59 am, Tue, 5 November 24

Follow Us
ಸಂಡೂರಿನ ಅಂತಾಪುರದಲ್ಲಿ ವಿಜಯನಗರ ಕಾಲದ ಅಪರೂಪದ ಜೈನ ದಾನಶಾಸನ ಪತ್ತೆ!
ಸಂಡೂರಿನ ಅಂತಾಪುರದಲ್ಲಿ ವಿಜಯನಗರ ಕಾಲದ ಅಪರೂಪದ ಜೈನ ದಾನಶಾಸನ ಪತ್ತೆ!
ಟೋಯಿಂಗ್ ಬಳಿಕವೂ ಮಾಲೀಕರು ಬರದಿದ್ರೆ ಹರಾಜು ಹಾಕ್ತೇವೆ: ಸಚಿವ ಕೃಷ್ಣಭೈರೇಗೌಡ
ಟೋಯಿಂಗ್ ಬಳಿಕವೂ ಮಾಲೀಕರು ಬರದಿದ್ರೆ ಹರಾಜು ಹಾಕ್ತೇವೆ: ಸಚಿವ ಕೃಷ್ಣಭೈರೇಗೌಡ
ರಾಯಚೂರಿನಲ್ಲಿ 760 ಕೆಜಿಗೂ ಅಧಿಕ ನಂದಿನಿ ಕೆನೆಭರಿತ ಹಾಲಿನ ಪುಡಿ ಪತ್ತೆ
ರಾಯಚೂರಿನಲ್ಲಿ 760 ಕೆಜಿಗೂ ಅಧಿಕ ನಂದಿನಿ ಕೆನೆಭರಿತ ಹಾಲಿನ ಪುಡಿ ಪತ್ತೆ
ಚೆನ್ನಮ್ಮ ಆರೋಗ್ಯ ಈಗ ಹೇಗಿದೆ? ವೈದ್ಯರು ಕೊಟ್ಟ ಮಾಹಿತಿ ಇಲ್ಲಿದೆ
ಚೆನ್ನಮ್ಮ ಆರೋಗ್ಯ ಈಗ ಹೇಗಿದೆ? ವೈದ್ಯರು ಕೊಟ್ಟ ಮಾಹಿತಿ ಇಲ್ಲಿದೆ
ಹಾರ್ಮೋಜ್ಗನ್ ಪ್ರಾಂತ್ಯದಲ್ಲಿ ಒಟ್ಟು 5-6 ಸೇತುವೆಗಳು ಧ್ವಂಸ
ಹಾರ್ಮೋಜ್ಗನ್ ಪ್ರಾಂತ್ಯದಲ್ಲಿ ಒಟ್ಟು 5-6 ಸೇತುವೆಗಳು ಧ್ವಂಸ
ಸೌದಿ ಅರೇಬಿಯಾದಲ್ಲಿ ಮಂಗಳೂರಿನ ವಿಟ್ಲದ ಯುವಕನ ಸಾಧನೆ!
ಸೌದಿ ಅರೇಬಿಯಾದಲ್ಲಿ ಮಂಗಳೂರಿನ ವಿಟ್ಲದ ಯುವಕನ ಸಾಧನೆ!
ಚೆನ್ನಮ್ಮ ಆರೋಗ್ಯ ಸ್ಥಿತಿ ಗಂಭೀರ: ಐಸಿಯುನಲ್ಲಿ ಚಿಕಿತ್ಸೆ ಮುಂದುವರಿಕೆ
ಚೆನ್ನಮ್ಮ ಆರೋಗ್ಯ ಸ್ಥಿತಿ ಗಂಭೀರ: ಐಸಿಯುನಲ್ಲಿ ಚಿಕಿತ್ಸೆ ಮುಂದುವರಿಕೆ
ಬಂಟ್ವಾಳ ಕೊಲೆ ಆರೋಪಿ ಬಗ್ಗೆ ತಪ್ಪು ಮಾಹಿತಿ ಹರಡಿದವರ ವಿರುದ್ಧ ಕೇಸ್
ಬಂಟ್ವಾಳ ಕೊಲೆ ಆರೋಪಿ ಬಗ್ಗೆ ತಪ್ಪು ಮಾಹಿತಿ ಹರಡಿದವರ ವಿರುದ್ಧ ಕೇಸ್
ಮೆಕ್ಸಿಕೋದಲ್ಲಿ 7.4 ತೀವ್ರತೆಯ ಭೂಕಂಪ; ಸುನಾಮಿಯ ಮುನ್ನೆಚ್ಚರಿಕೆ
ಮೆಕ್ಸಿಕೋದಲ್ಲಿ 7.4 ತೀವ್ರತೆಯ ಭೂಕಂಪ; ಸುನಾಮಿಯ ಮುನ್ನೆಚ್ಚರಿಕೆ
ದೇವೇಗೌಡರ ಪತ್ನಿ ಚೆನ್ನಮ್ಮ ಅವರ ಆರೋಗ್ಯ ವಿಚಾರಿಸಿದ ಆರ್. ಅಶೋಕ್
ದೇವೇಗೌಡರ ಪತ್ನಿ ಚೆನ್ನಮ್ಮ ಅವರ ಆರೋಗ್ಯ ವಿಚಾರಿಸಿದ ಆರ್. ಅಶೋಕ್