AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಲಿಯಾ ಭಟ್ ಮೇಲೆ ನಂಬಿಕೆ 215 ಕೋಟಿ ಆಫರ್ ತಿರಸ್ಕರಿಸಿದ ವೈಆರ್​ಎಫ್

Yash Raj Films: ಭಾರಿ ಬಜೆಟ್​ನ ಆಕ್ಷನ್ ಸಿನಿಮಾಗಳು, ಸ್ಪೈ ಸಿನಿಮಾಗಳ ಮೇಲೆ ಬಂಡವಾಳ ಹೂಡುತ್ತಾ ಬಂದಿರುವ ಯಶ್ ರಾಜ್ ಫಿಲಮ್ಸ್, ಇದೀಗ ಮಹಿಳಾ ಪ್ರಧಾನ ಸ್ಪೈ ಥ್ರಿಲ್ಲರ್ ಸಿನಿಮಾಗಳನ್ನು ನಿರ್ಮಾಣ ಮಾಡುತ್ತಿದ್ದು, ಸಿನಿಮಾಕ್ಕೆ ಆಲಿಯಾ ಭಟ್ ನಾಯಕಿ. ಸಿನಿಮಾಕ್ಕೆ ‘ಆಲ್ಫಾ’ ಎಂದು ಹೆಸರಿಡಲಾಗಿದೆ. ಈ ಸಿನಿಮಾಕ್ಕೆ ಬರೋಬ್ಬರಿ 215 ಕೋಟಿ ಆಫರ್ ಬಂದಿದ್ದರೂ ಸಹ ಅದನ್ನು ತಿರಸ್ಕಾರ ಮಾಡಿದೆ ಯಶ್ ರಾಜ್ ಫಿಲಮ್ಸ್.

ಆಲಿಯಾ ಭಟ್ ಮೇಲೆ ನಂಬಿಕೆ 215 ಕೋಟಿ ಆಫರ್ ತಿರಸ್ಕರಿಸಿದ ವೈಆರ್​ಎಫ್
Alpha Movie
ಮಂಜುನಾಥ ಸಿ.
|

Updated on: Feb 24, 2026 | 11:19 AM

Share

ಬಾಲಿವುಡ್‌ನ (Bollywood) ಪ್ರತಿಷ್ಠಿತ ನಿರ್ಮಾಣ ಸಂಸ್ಥೆ ಯಶ್ ರಾಜ್ ಫಿಲ್ಮ್ಸ್, ಒಂದರ ಹಿಂದೊಂದು ಭಾರಿ ಬಜೆಟ್ ಸಿನಿಮಾಗಳನ್ನು ಮಾಡುತ್ತಿದೆ. ಸಲ್ಮಾನ್ ಖಾನ್, ಶಾರುಖ್ ಖಾನ್, ರಣ್​​ಬೀರ್ ಕಪೂರ್, ಹೃತಿಕ್ ರೋಷನ್, ಜೂ ಎನ್​​ಟಿಆರ್ ಹೀಗೆ ಒಬ್ಬರಾದ ಮೇಲೆ ಒಬ್ಬ ಸೂಪರ್ ಸ್ಟಾರ್ ನಟರ ಭಾರಿ ಬಜೆಟ್ ಸಿನಿಮಾಗಳ ಮೇಲೆ ಸಾವಿರಾರು ಕೋಟಿ ಹಣ ಸುರಿಯುತ್ತಿದೆ. ಭಾರಿ ಬಜೆಟ್​ನ ಆಕ್ಷನ್ ಸಿನಿಮಾಗಳು, ಸ್ಪೈ ಸಿನಿಮಾಗಳ ಮೇಲೆ ಬಂಡವಾಳ ಹೂಡುತ್ತಾ ಬಂದಿರುವ ಯಶ್ ರಾಜ್ ಫಿಲಮ್ಸ್, ಇದೀಗ ಮಹಿಳಾ ಪ್ರಧಾನ ಸ್ಪೈ ಥ್ರಿಲ್ಲರ್ ಸಿನಿಮಾಗಳನ್ನು ನಿರ್ಮಾಣ ಮಾಡುತ್ತಿದ್ದು, ಸಿನಿಮಾಕ್ಕೆ ಆಲಿಯಾ ಭಟ್ ನಾಯಕಿ. ಸಿನಿಮಾಕ್ಕೆ ‘ಆಲ್ಫಾ’ ಎಂದು ಹೆಸರಿಡಲಾಗಿದೆ. ಈ ಸಿನಿಮಾಕ್ಕೆ ಬರೋಬ್ಬರಿ 215 ಕೋಟಿ ಆಫರ್ ಬಂದಿದ್ದರೂ ಸಹ ಅದನ್ನು ತಿರಸ್ಕಾರ ಮಾಡಿದೆ ಯಶ್ ರಾಜ್ ಫಿಲಮ್ಸ್.

ಆಲಿಯಾ ಭಟ್ ಮತ್ತು ಶಾರ್ವರಿ ವಾಗ್ ಪ್ರಮುಖ ಪಾತ್ರದಲ್ಲಿ ನಟಿಸುತ್ತಿರುವ ‘ಆಲ್ಫಾ’ ಚಿತ್ರದ ಡಿಜಿಟಲ್ ಹಕ್ಕುಗಳನ್ನು ಖರೀದಿಸಲು ನೆಟ್‌ಫ್ಲಿಕ್ಸ್ ಮುಂದಾಗಿತ್ತು. ಇದಕ್ಕಾಗಿ ಭಾರಿ ಮೊತ್ತದ ಪ್ರಸ್ತಾಪವನ್ನು ಮುಂದಿಟ್ಟಿತ್ತು. ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡದೆ ನೇರವಾಗಿ ಒಟಿಟಿಯಲ್ಲಿ ಸ್ಟ್ರೀಮ್ ಮಾಡಲು ಈ ಆಫರ್ ನೀಡಲಾಗಿತ್ತು ಎನ್ನಲಾಗಿತ್ತು. ಇದಕ್ಕಾಗಿ 215 ಕೋಟಿ ರೂಪಾಯಿ ಹಣ ಆಫರ್ ನೀಡಲಾಗಿತ್ತು. ವೈಆರ್‌ಎಫ್ ಮುಖ್ಯಸ್ಥ ಆದಿತ್ಯ ಚೋಪ್ರಾ ಈ ಆಫರ್ ಅನ್ನು ತಿರಸ್ಕರಿಸಿದ್ದಲ್ಲದೆ, ಸಿನಿಮಾ ಮೊದಲು ಥಿಯೇಟರ್‌ಗಳಲ್ಲೇ ಬರಬೇಕು ಎಂಬ ನಿರ್ಧಾರಕ್ಕೆ ಅಂಟಿಕೊಂಡಿದ್ದಾರೆ.

ಆಲಿಯಾ ಭಟ್​​ ಮೇಲಿರುವ ನಂಬಿಕೆಯಿಂದಲೇ ಆದಿತ್ಯ ಚೋಪ್ರಾ ಈ ನಿರ್ಧಾರ ಮಾಡಿದ್ದಾರೆ ಎನ್ನಲಾಗುತ್ತಿದೆ. ಆದರೆ ಈ ಬಗ್ಗೆ ಬಾಲಿವುಡ್ ಬಾಕ್ಸ್ ಆಫೀಸ್ ಪಂಡಿತರು ತುಸು ಭಿನ್ನ ಅಭಿಪ್ರಾಯ ಮುಂದಿಟ್ಟಿದ್ದಾರೆ. ಆಲಿಯಾ ಭಟ್ ನಟನೆಯ ಈ ಹಿಂದಿನ ಆಕ್ಷನ್ ಸಿನಿಮಾ ‘ಜಿಗ್ರ’ ಬಾಕ್ಸ್ ಆಫೀಸ್​​ನಲ್ಲಿ ಇನ್ನಿಲ್ಲದಂತೆ ನೆಲಕಚ್ಚಿತ್ತು, ಒಳ್ಳೆಯ ಪ್ರೊಡಕ್ಷನ್ ವ್ಯಾಲ್ಯೂ, ಕತೆ, ಪಾತ್ರಧಾರಿಗಳು ಇದ್ದ ಹೊರತಾಗಿಯೂ ಆ ಸಿನಿಮಾ ಓಡಿರಲಿಲ್ಲ, ಮಾತ್ರವಲ್ಲ ಒಟಿಟಿಯಲ್ಲೂ ಸಹ ಜನ ಆ ಸಿನಿಮಾವನ್ನು ವೀಕ್ಷಿಸರಿಲ್ಲ. ಹೀಗಿದ್ದಾಗ ‘ಆಲ್ಫಾ’ ಸಿನಿಮಾಕ್ಕೆ ಬಂದಿರುವ ಈ ದೊಡ್ಡ ಆಫರ್ ಅನ್ನು ಒಪ್ಪಿಕೊಂಡಿದ್ದಿದ್ದರೆ ಯಶ್​ ರಾಜ್ ಫಿಲಮ್ಸ್​​ಗೆ ಲಾಭ ಆಗುತ್ತಿತ್ತು ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಅಲ್ಲದೆ ಕಳೆದ ಕೆಲವು ಸಮಯದಿಂದ ಯಶ್ ರಾಜ್ ಫಿಲ್ಮ್ಸ್‌ನ ‘ಟೈಗರ್ 3’ ಮತ್ತು ‘ವಾರ್ 2’ ಅಂದುಕೊಂಡ ಮಟ್ಟಕ್ಕೆ ಯಶಸ್ಸು ಕಂಡಿಲ್ಲ ಎಂಬ ಮಾತುಗಳಿವೆ. ಇಂತಹ ಸಂದರ್ಭದಲ್ಲಿ 215 ಕೋಟಿಯಂತಹ ದೊಡ್ಡ ಮೊತ್ತವನ್ನು ಕೈಬಿಟ್ಟಿರುವುದು ಅತಿಯಾದ ಆತ್ಮವಿಶ್ವಾಸ ಎನ್ನಲಾಗುತ್ತಿದೆ.

ಇದನ್ನೂ ಓದಿ:ಬಾಲಿವುಡ್​​ನಲ್ಲಿ ಪಿಆರ್​ ತಂತ್ರ ಹೇಗೆ ನಡೆಯುತ್ತೆ ನೋಡಿ; ಎಕ್ಸ್​​ಪೋಸ್ ಮಾಡಿದ ಫ್ಯಾನ್ಸ್

‘ಆಲ್ಫಾ’ ಸಿನಿಮಾದ ಚಿತ್ರೀಕರಣ ಈಗಾಗಲೇ ಪೂರ್ಣಗೊಂಡಿದೆ. ಅತ್ಯಾಧುನಿಕ ವಿಎಫ್‌ಎಕ್ಸ್ ಮತ್ತು ಪೋಸ್ಟ್ ಪ್ರೊಡಕ್ಷನ್ ಕೆಲಸಗಳ ಕಾರಣದಿಂದಾಗಿ ‘ಆಲ್ಫಾ’ ಬಿಡುಗಡೆ ಮುಂದೂಡಲ್ಪಟ್ಟಿದೆ. ಈ ಮೊದಲು ಡಿಸೆಂಬರ್ 2025ಕ್ಕೆ ನಿಗದಿಯಾಗಿದ್ದ ಈ ಚಿತ್ರ, ಈಗ ಏಪ್ರಿಲ್ 17, 2026 ರಂದು ಬಿಡುಗಡೆ ಆಗಲು ಸಿದ್ಧವಾಗಿದ್ದು, ಆಲಿಯಾ ಭಟ್ ಮತ್ತು ಶಾರ್ವರಿ ವಾಗ್ ಅವರು ಸಿನಿಮಾದ ಪ್ರಚಾರಕ್ಕೆ ಶೀಘ್ರವೇ ಧುಮುಕಲಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಇಂದು ಮಾಸ ಶಿವರಾತ್ರಿ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಮಾಸ ಶಿವರಾತ್ರಿ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಭಾರತ-ಚೀನಾ ಗಡಿ ಬಳಿ ಪ್ರವಾಹ; ಉತ್ತರಾಖಂಡದಲ್ಲಿ ಕೊಚ್ಚಿಹೋದ ಬಿಆರ್‌ಒ ಸೇತುವೆ
ಭಾರತ-ಚೀನಾ ಗಡಿ ಬಳಿ ಪ್ರವಾಹ; ಉತ್ತರಾಖಂಡದಲ್ಲಿ ಕೊಚ್ಚಿಹೋದ ಬಿಆರ್‌ಒ ಸೇತುವೆ
ಬಾಂಗ್ಲಾ ವಲಸಿಗರೆಂಬ ಶಂಕೆ; ಬಸ್ ಅಡ್ಡಗಟ್ಟಿದ ಹಿಂದೂ ಕಾರ್ಯಕರ್ತರು
ಬಾಂಗ್ಲಾ ವಲಸಿಗರೆಂಬ ಶಂಕೆ; ಬಸ್ ಅಡ್ಡಗಟ್ಟಿದ ಹಿಂದೂ ಕಾರ್ಯಕರ್ತರು
‘ಟಾಕ್ಸಿಕ್’ ನಿರ್ದೇಶಕಿ ಗೀತು ಮೋಹನ್​ದಾಸ್ ಹಿನ್ನೆಲೆ ಏನು? ಇಲ್ಲಿದೆ ವಿವರ
‘ಟಾಕ್ಸಿಕ್’ ನಿರ್ದೇಶಕಿ ಗೀತು ಮೋಹನ್​ದಾಸ್ ಹಿನ್ನೆಲೆ ಏನು? ಇಲ್ಲಿದೆ ವಿವರ
ಜಾರ್ಖಂಡ್​​ನಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಸರಿಯಲ್ಲ;ರಾಹುಲ್ ಗಾಂಧಿ
ಜಾರ್ಖಂಡ್​​ನಲ್ಲಿ ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಸರಿಯಲ್ಲ;ರಾಹುಲ್ ಗಾಂಧಿ
ಆಸ್ಪತ್ರೆಯಲ್ಲಿ ಚೆನ್ನಮ್ಮರ ಕೊನೆ ಕ್ಷಣಗಳನ್ನ ಹೇಳಿ ಗದ್ಗದಿತರಾದ ದೇವೇಗೌಡ್ರು
ಆಸ್ಪತ್ರೆಯಲ್ಲಿ ಚೆನ್ನಮ್ಮರ ಕೊನೆ ಕ್ಷಣಗಳನ್ನ ಹೇಳಿ ಗದ್ಗದಿತರಾದ ದೇವೇಗೌಡ್ರು
‘ಯಶ್ ಈಗ ರಾಜ್ಯ, ದೇಶ ಗೆದ್ದಾಗಿದೆ, ವಿಶ್ವವನ್ನೂ ಗೆಲ್ತಾರೆ’; ಅಜಯ್ ರಾವ್
‘ಯಶ್ ಈಗ ರಾಜ್ಯ, ದೇಶ ಗೆದ್ದಾಗಿದೆ, ವಿಶ್ವವನ್ನೂ ಗೆಲ್ತಾರೆ’; ಅಜಯ್ ರಾವ್
ರಾಸಾಯನಿಕ ತ್ಯಾಜ್ಯ: 3 ಕೈಗಾರಿಕೆ ಮುಚ್ಚಲು ಈಶ್ವರ ಖಂಡ್ರೆ ಸೂಚನೆ
ರಾಸಾಯನಿಕ ತ್ಯಾಜ್ಯ: 3 ಕೈಗಾರಿಕೆ ಮುಚ್ಚಲು ಈಶ್ವರ ಖಂಡ್ರೆ ಸೂಚನೆ
ಮಕ್ಕಳ ಪಿಕ್ಕಿ ಈಟಿಂಗ್ ಕಡಿಮೆ ಮಾಡೋದು ಹೇಗೆ?
ಮಕ್ಕಳ ಪಿಕ್ಕಿ ಈಟಿಂಗ್ ಕಡಿಮೆ ಮಾಡೋದು ಹೇಗೆ?
ಜೆಡಿಎಸ್ ಪಾದಯಾತ್ರೆ ಬಗ್ಗೆ ಪಿಸು ಮಾತು ವೈರಲ್: ಸ್ಪಷ್ಟನೆ ನೀಡಿದ ವಿಜಯೇಂದ್ರ
ಜೆಡಿಎಸ್ ಪಾದಯಾತ್ರೆ ಬಗ್ಗೆ ಪಿಸು ಮಾತು ವೈರಲ್: ಸ್ಪಷ್ಟನೆ ನೀಡಿದ ವಿಜಯೇಂದ್ರ