AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಶ್ ರಾಜ್ ಫಿಲ್ಮ್ಸ್​ಗೆ ಸಾಲು ಸಾಲು ಸೋಲು; ವರ್ಷಗಳ ಹಿಂದಿನ ಪರಿಸ್ಥಿತಿ ಬಗ್ಗೆ ರಾಣಿ ಮುಖರ್ಜಿ ಮಾತು

‘ಬಂಟಿ ಔರ್ ಬಬ್ಲಿ 2’, ‘ಜಯೇಶ್​ಭಾಯ್ ಜೋರ್ದಾರ್’, ‘ಪೃಥ್ವಿರಾಜ್’, ‘ಶಂಶೇರಾ’ ಸಿನಿಮಾಗಳು 2021-2022ರ ಅವಧಿಯಲ್ಲಿ ರಿಲೀಸ್ ಆಗಿ ಸೋಲು ಕಂಡವು. ‘ಪಠಾಣ್’ ಸಿನಿಮಾದಿಂದ ನಿರ್ಮಾಣ ಸಂಸ್ಥೆಗೆ ದೊಡ್ಡ ಗೆಲುವು ಸಿಕ್ಕಿತು. ಈ ಬಗ್ಗೆ ರಾಣಿ ಮುಖರ್ಜಿ ಮಾತನಾಡಿದ್ದಾರೆ.

ಯಶ್ ರಾಜ್ ಫಿಲ್ಮ್ಸ್​ಗೆ ಸಾಲು ಸಾಲು ಸೋಲು; ವರ್ಷಗಳ ಹಿಂದಿನ ಪರಿಸ್ಥಿತಿ ಬಗ್ಗೆ ರಾಣಿ ಮುಖರ್ಜಿ ಮಾತು
ರಾಣಿ ಮುಖರ್ಜಿ
ರಾಜೇಶ್ ದುಗ್ಗುಮನೆ
|

Updated on: Mar 06, 2024 | 9:00 AM

Share

ಯಶ್ ರಾಜ್ ಫಿಲ್ಮ್ಸ್ (Yash Raj Films) ದೊಡ್ಡ ಮಟ್ಟದಲ್ಲಿ ಹೆಸರು ಮಾಡಿದೆ. ಕೊವಿಡ್ ಬಳಿಕ ಈ ನಿರ್ಮಾಣ ಸಂಸ್ಥೆಯಿಂದ ಹಲವು ಸಿನಿಮಾಗಳು ರಿಲೀಸ್ ಆದವು. ಆದರೆ, ಅಂದುಕೊಂಡ ರೀತಿಯಲ್ಲಿ ಸಿನಿಮಾಗಳು ಮೂಡಿ ಬಂದಿರಲಿಲ್ಲ. ಹೀಗಾಗಿ ಸಿನಿಮಾಗಳು ಸೋಲು ಕಂಡವು. ಈ ಬಗ್ಗೆ ನಿರ್ಮಾಣ ಸಂಸ್ಥೆಯಲ್ಲಿ ಕೆಲಸ ಮಾಡುವ ಎಲ್ಲರಿಗೂ ಬೇಸರ ಇತ್ತಂತೆ. ‘ಪಠಾಣ್’ ಸಿನಿಮಾ ಸಾವಿರ ಕೋಟಿ ಕ್ಲಬ್ ಸೇರಿ ತಂಡದ ಖುಷಿ ಹೆಚ್ಚಿಸಿತ್ತು. ಈ ಬಗ್ಗೆ ಯಶ್ ರಾಜ್ ಫಿಲ್ಮ್ಸ್​ನ ಮುಖ್ಯಸ್ಥ ಆದಿತ್ಯ ಚೋಪ್ರಾ ಅವರ ಪತ್ನಿ ಹಾಗೂ ನಟಿ ರಾಣಿ ಮುಖರ್ಜಿ ಮಾತನಾಡಿದ್ದಾರೆ.

‘ಬಂಟಿ ಔರ್ ಬಬ್ಲಿ 2’, ‘ಜಯೇಶ್​ಭಾಯ್ ಜೋರ್ದಾರ್’, ‘ಪೃಥ್ವಿರಾಜ್’, ‘ಶಂಶೇರಾ’ ಸಿನಿಮಾಗಳು 2021-2022ರ ಅವಧಿಯಲ್ಲಿ ರಿಲೀಸ್ ಆಗಿ ಸೋಲು ಕಂಡವು. ‘ಪಠಾಣ್’ ಸಿನಿಮಾದಿಂದ ನಿರ್ಮಾಣ ಸಂಸ್ಥೆಗೆ ದೊಡ್ಡ ಗೆಲುವು ಸಿಕ್ಕಿತು. ಈ ಬಗ್ಗೆ ರಾಣಿ ಮುಖರ್ಜಿ ಮಾತನಾಡಿದ್ದಾರೆ.

‘ಖಿನ್ನತೆಗೆ ಒಳಗಾದ ರೀತಿಯ ಪರಿಸ್ಥಿತಿ ಇತ್ತು. ನಮ್ಮ ಸಂಸ್ಥೆಯ ಎಲ್ಲರೂ ಬೇಸರಗೊಂಡಿದ್ದರು. ಆದರೆ, ಪಠಾಣ್ ಸಿನಿಮಾ ಎಲ್ಲವನ್ನೂ ಬದಲಾಯಿಸಿತು. ಇದು ಅತ್ಯಧಿಕ ಗಳಿಕೆ ಮಾಡಿತು. ಮಾಡಿದ ಸಿನಿಮಾಗಳ ಬಗ್ಗೆ ನಿರ್ಮಾಪಕರಿಗೆ ನಿರ್ದೇಶಕರಿಗೆ ನಂಬಿಕೆ ಬೇಕು. ಏನು ಮಾಡುತ್ತಾರೋ ಅದರ ಮೇಲೆ ನಂಬಿಕೆ ಇಡಬೇಕು. ಪಠಾಣ್ ಚಿತ್ರದಿಂದ ಜನರು ಥಿಯೇಟರ್​ಗೆ ದೊಡ್ಡ ಸಂಖ್ಯೆಯಲ್ಲಿ ಆಗಮಿಸಿದರು’ ಎಂದಿದ್ದಾರೆ ರಾಣಿ ಮುಖರ್ಜಿ.

‘ಕೊವಿಡ್ ಬಳಿಕ ಹಲವು ಸಿನಿಮಾಗಳಿಗೆ ಒಟಿಟಿ ಆಫರ್ ಬಂದಿತ್ತು. ಆದರೆ, ಪತಿ ಆದಿತ್ಯ ಅವರನ್ನು ಇದನ್ನು ತಿರಸ್ಕರಿಸಿದರು. ಯಾವುದೇ ಚಿತ್ರವನ್ನು ನೇರವಾಗಿ ಒಟಿಟಿಯಲ್ಲಿ ರಿಲೀಸ್ ಮಾಡಲ್ಲ ಎಂದು ಪಣ ತೊಟ್ಟಿದ್ದರು. ಅವರಿಗೆ ಭಾರತೀಯ ಚಿತ್ರರಂಗದ ಮೇಲೆ ನಂಬಿಕೆ ಇದೆ’ ಎಂದಿದ್ದಾರೆ ಅವರು.

ಇದನ್ನೂ ಓದಿ: ‘ಸಿನಿಮಾ ಸಕ್ಸಸ್ ಅಳೆಯಲು ಕಲೆಕ್ಷನ್ ಮಾತ್ರವಲ್ಲ ಬಜೆಟ್ ಕೂಡ ನೋಡಬೇಕು’; ಇದು ರಾಣಿ ಮುಖರ್ಜಿ ಲೆಕ್ಕಾಚಾರ

ರಾಣಿ ಮುಖರ್ಜಿ ಅವರು ಇತ್ತೀಚಿಗೆ ಸಿನಿಮಾ ಆಯ್ಕೆಯಲ್ಲಿ ಸಖತ್ ಚ್ಯೂಸಿ ಆಗಿದ್ದಾರೆ. ಅಲ್ಲೊಂದು ಇಲ್ಲೊಂದು ಸಿನಿಮಾ ಒಪ್ಪಿಕೊಂಡು ನಟಿಸುತ್ತಿದ್ದಾರೆ. ಆದಿತ್ಯ ಅವರನ್ನು ಮದುವೆ ಆದ ಬಳಿಕ ಕುಟುಂಬದ ಕಡೆ ಹೆಚ್ಚು ಗಮನ ಹರಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
ಜೋರ್ಡಾನ್​​​ನಲ್ಲಿ ಮೋದಿಯನ್ನು ನೋಡಿ ಸಂಭ್ರಮಿಸಿದ ಭಾರತೀಯ ವಲಸಿಗರು
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಪ್ರಧಾನಿ ಮೋದಿಗೆ ಜೋರ್ಡಾನ್‌ನಲ್ಲಿ ಸಾಂಪ್ರದಾಯಿಕ ಸ್ವಾಗತ
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ