AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಶ್ ರಾಜ್ ಫಿಲ್ಮ್ಸ್​ಗೆ ಸಾಲು ಸಾಲು ಸೋಲು; ವರ್ಷಗಳ ಹಿಂದಿನ ಪರಿಸ್ಥಿತಿ ಬಗ್ಗೆ ರಾಣಿ ಮುಖರ್ಜಿ ಮಾತು

‘ಬಂಟಿ ಔರ್ ಬಬ್ಲಿ 2’, ‘ಜಯೇಶ್​ಭಾಯ್ ಜೋರ್ದಾರ್’, ‘ಪೃಥ್ವಿರಾಜ್’, ‘ಶಂಶೇರಾ’ ಸಿನಿಮಾಗಳು 2021-2022ರ ಅವಧಿಯಲ್ಲಿ ರಿಲೀಸ್ ಆಗಿ ಸೋಲು ಕಂಡವು. ‘ಪಠಾಣ್’ ಸಿನಿಮಾದಿಂದ ನಿರ್ಮಾಣ ಸಂಸ್ಥೆಗೆ ದೊಡ್ಡ ಗೆಲುವು ಸಿಕ್ಕಿತು. ಈ ಬಗ್ಗೆ ರಾಣಿ ಮುಖರ್ಜಿ ಮಾತನಾಡಿದ್ದಾರೆ.

ಯಶ್ ರಾಜ್ ಫಿಲ್ಮ್ಸ್​ಗೆ ಸಾಲು ಸಾಲು ಸೋಲು; ವರ್ಷಗಳ ಹಿಂದಿನ ಪರಿಸ್ಥಿತಿ ಬಗ್ಗೆ ರಾಣಿ ಮುಖರ್ಜಿ ಮಾತು
ರಾಣಿ ಮುಖರ್ಜಿ
ರಾಜೇಶ್ ದುಗ್ಗುಮನೆ
|

Updated on: Mar 06, 2024 | 9:00 AM

Share

ಯಶ್ ರಾಜ್ ಫಿಲ್ಮ್ಸ್ (Yash Raj Films) ದೊಡ್ಡ ಮಟ್ಟದಲ್ಲಿ ಹೆಸರು ಮಾಡಿದೆ. ಕೊವಿಡ್ ಬಳಿಕ ಈ ನಿರ್ಮಾಣ ಸಂಸ್ಥೆಯಿಂದ ಹಲವು ಸಿನಿಮಾಗಳು ರಿಲೀಸ್ ಆದವು. ಆದರೆ, ಅಂದುಕೊಂಡ ರೀತಿಯಲ್ಲಿ ಸಿನಿಮಾಗಳು ಮೂಡಿ ಬಂದಿರಲಿಲ್ಲ. ಹೀಗಾಗಿ ಸಿನಿಮಾಗಳು ಸೋಲು ಕಂಡವು. ಈ ಬಗ್ಗೆ ನಿರ್ಮಾಣ ಸಂಸ್ಥೆಯಲ್ಲಿ ಕೆಲಸ ಮಾಡುವ ಎಲ್ಲರಿಗೂ ಬೇಸರ ಇತ್ತಂತೆ. ‘ಪಠಾಣ್’ ಸಿನಿಮಾ ಸಾವಿರ ಕೋಟಿ ಕ್ಲಬ್ ಸೇರಿ ತಂಡದ ಖುಷಿ ಹೆಚ್ಚಿಸಿತ್ತು. ಈ ಬಗ್ಗೆ ಯಶ್ ರಾಜ್ ಫಿಲ್ಮ್ಸ್​ನ ಮುಖ್ಯಸ್ಥ ಆದಿತ್ಯ ಚೋಪ್ರಾ ಅವರ ಪತ್ನಿ ಹಾಗೂ ನಟಿ ರಾಣಿ ಮುಖರ್ಜಿ ಮಾತನಾಡಿದ್ದಾರೆ.

‘ಬಂಟಿ ಔರ್ ಬಬ್ಲಿ 2’, ‘ಜಯೇಶ್​ಭಾಯ್ ಜೋರ್ದಾರ್’, ‘ಪೃಥ್ವಿರಾಜ್’, ‘ಶಂಶೇರಾ’ ಸಿನಿಮಾಗಳು 2021-2022ರ ಅವಧಿಯಲ್ಲಿ ರಿಲೀಸ್ ಆಗಿ ಸೋಲು ಕಂಡವು. ‘ಪಠಾಣ್’ ಸಿನಿಮಾದಿಂದ ನಿರ್ಮಾಣ ಸಂಸ್ಥೆಗೆ ದೊಡ್ಡ ಗೆಲುವು ಸಿಕ್ಕಿತು. ಈ ಬಗ್ಗೆ ರಾಣಿ ಮುಖರ್ಜಿ ಮಾತನಾಡಿದ್ದಾರೆ.

‘ಖಿನ್ನತೆಗೆ ಒಳಗಾದ ರೀತಿಯ ಪರಿಸ್ಥಿತಿ ಇತ್ತು. ನಮ್ಮ ಸಂಸ್ಥೆಯ ಎಲ್ಲರೂ ಬೇಸರಗೊಂಡಿದ್ದರು. ಆದರೆ, ಪಠಾಣ್ ಸಿನಿಮಾ ಎಲ್ಲವನ್ನೂ ಬದಲಾಯಿಸಿತು. ಇದು ಅತ್ಯಧಿಕ ಗಳಿಕೆ ಮಾಡಿತು. ಮಾಡಿದ ಸಿನಿಮಾಗಳ ಬಗ್ಗೆ ನಿರ್ಮಾಪಕರಿಗೆ ನಿರ್ದೇಶಕರಿಗೆ ನಂಬಿಕೆ ಬೇಕು. ಏನು ಮಾಡುತ್ತಾರೋ ಅದರ ಮೇಲೆ ನಂಬಿಕೆ ಇಡಬೇಕು. ಪಠಾಣ್ ಚಿತ್ರದಿಂದ ಜನರು ಥಿಯೇಟರ್​ಗೆ ದೊಡ್ಡ ಸಂಖ್ಯೆಯಲ್ಲಿ ಆಗಮಿಸಿದರು’ ಎಂದಿದ್ದಾರೆ ರಾಣಿ ಮುಖರ್ಜಿ.

‘ಕೊವಿಡ್ ಬಳಿಕ ಹಲವು ಸಿನಿಮಾಗಳಿಗೆ ಒಟಿಟಿ ಆಫರ್ ಬಂದಿತ್ತು. ಆದರೆ, ಪತಿ ಆದಿತ್ಯ ಅವರನ್ನು ಇದನ್ನು ತಿರಸ್ಕರಿಸಿದರು. ಯಾವುದೇ ಚಿತ್ರವನ್ನು ನೇರವಾಗಿ ಒಟಿಟಿಯಲ್ಲಿ ರಿಲೀಸ್ ಮಾಡಲ್ಲ ಎಂದು ಪಣ ತೊಟ್ಟಿದ್ದರು. ಅವರಿಗೆ ಭಾರತೀಯ ಚಿತ್ರರಂಗದ ಮೇಲೆ ನಂಬಿಕೆ ಇದೆ’ ಎಂದಿದ್ದಾರೆ ಅವರು.

ಇದನ್ನೂ ಓದಿ: ‘ಸಿನಿಮಾ ಸಕ್ಸಸ್ ಅಳೆಯಲು ಕಲೆಕ್ಷನ್ ಮಾತ್ರವಲ್ಲ ಬಜೆಟ್ ಕೂಡ ನೋಡಬೇಕು’; ಇದು ರಾಣಿ ಮುಖರ್ಜಿ ಲೆಕ್ಕಾಚಾರ

ರಾಣಿ ಮುಖರ್ಜಿ ಅವರು ಇತ್ತೀಚಿಗೆ ಸಿನಿಮಾ ಆಯ್ಕೆಯಲ್ಲಿ ಸಖತ್ ಚ್ಯೂಸಿ ಆಗಿದ್ದಾರೆ. ಅಲ್ಲೊಂದು ಇಲ್ಲೊಂದು ಸಿನಿಮಾ ಒಪ್ಪಿಕೊಂಡು ನಟಿಸುತ್ತಿದ್ದಾರೆ. ಆದಿತ್ಯ ಅವರನ್ನು ಮದುವೆ ಆದ ಬಳಿಕ ಕುಟುಂಬದ ಕಡೆ ಹೆಚ್ಚು ಗಮನ ಹರಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ