AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಯಶ್ ರಾಜ್ ಫಿಲ್ಮ್ಸ್​ಗೆ ಸಾಲು ಸಾಲು ಸೋಲು; ವರ್ಷಗಳ ಹಿಂದಿನ ಪರಿಸ್ಥಿತಿ ಬಗ್ಗೆ ರಾಣಿ ಮುಖರ್ಜಿ ಮಾತು

‘ಬಂಟಿ ಔರ್ ಬಬ್ಲಿ 2’, ‘ಜಯೇಶ್​ಭಾಯ್ ಜೋರ್ದಾರ್’, ‘ಪೃಥ್ವಿರಾಜ್’, ‘ಶಂಶೇರಾ’ ಸಿನಿಮಾಗಳು 2021-2022ರ ಅವಧಿಯಲ್ಲಿ ರಿಲೀಸ್ ಆಗಿ ಸೋಲು ಕಂಡವು. ‘ಪಠಾಣ್’ ಸಿನಿಮಾದಿಂದ ನಿರ್ಮಾಣ ಸಂಸ್ಥೆಗೆ ದೊಡ್ಡ ಗೆಲುವು ಸಿಕ್ಕಿತು. ಈ ಬಗ್ಗೆ ರಾಣಿ ಮುಖರ್ಜಿ ಮಾತನಾಡಿದ್ದಾರೆ.

ಯಶ್ ರಾಜ್ ಫಿಲ್ಮ್ಸ್​ಗೆ ಸಾಲು ಸಾಲು ಸೋಲು; ವರ್ಷಗಳ ಹಿಂದಿನ ಪರಿಸ್ಥಿತಿ ಬಗ್ಗೆ ರಾಣಿ ಮುಖರ್ಜಿ ಮಾತು
ರಾಣಿ ಮುಖರ್ಜಿ
ರಾಜೇಶ್ ದುಗ್ಗುಮನೆ
|

Updated on: Mar 06, 2024 | 9:00 AM

Share

ಯಶ್ ರಾಜ್ ಫಿಲ್ಮ್ಸ್ (Yash Raj Films) ದೊಡ್ಡ ಮಟ್ಟದಲ್ಲಿ ಹೆಸರು ಮಾಡಿದೆ. ಕೊವಿಡ್ ಬಳಿಕ ಈ ನಿರ್ಮಾಣ ಸಂಸ್ಥೆಯಿಂದ ಹಲವು ಸಿನಿಮಾಗಳು ರಿಲೀಸ್ ಆದವು. ಆದರೆ, ಅಂದುಕೊಂಡ ರೀತಿಯಲ್ಲಿ ಸಿನಿಮಾಗಳು ಮೂಡಿ ಬಂದಿರಲಿಲ್ಲ. ಹೀಗಾಗಿ ಸಿನಿಮಾಗಳು ಸೋಲು ಕಂಡವು. ಈ ಬಗ್ಗೆ ನಿರ್ಮಾಣ ಸಂಸ್ಥೆಯಲ್ಲಿ ಕೆಲಸ ಮಾಡುವ ಎಲ್ಲರಿಗೂ ಬೇಸರ ಇತ್ತಂತೆ. ‘ಪಠಾಣ್’ ಸಿನಿಮಾ ಸಾವಿರ ಕೋಟಿ ಕ್ಲಬ್ ಸೇರಿ ತಂಡದ ಖುಷಿ ಹೆಚ್ಚಿಸಿತ್ತು. ಈ ಬಗ್ಗೆ ಯಶ್ ರಾಜ್ ಫಿಲ್ಮ್ಸ್​ನ ಮುಖ್ಯಸ್ಥ ಆದಿತ್ಯ ಚೋಪ್ರಾ ಅವರ ಪತ್ನಿ ಹಾಗೂ ನಟಿ ರಾಣಿ ಮುಖರ್ಜಿ ಮಾತನಾಡಿದ್ದಾರೆ.

‘ಬಂಟಿ ಔರ್ ಬಬ್ಲಿ 2’, ‘ಜಯೇಶ್​ಭಾಯ್ ಜೋರ್ದಾರ್’, ‘ಪೃಥ್ವಿರಾಜ್’, ‘ಶಂಶೇರಾ’ ಸಿನಿಮಾಗಳು 2021-2022ರ ಅವಧಿಯಲ್ಲಿ ರಿಲೀಸ್ ಆಗಿ ಸೋಲು ಕಂಡವು. ‘ಪಠಾಣ್’ ಸಿನಿಮಾದಿಂದ ನಿರ್ಮಾಣ ಸಂಸ್ಥೆಗೆ ದೊಡ್ಡ ಗೆಲುವು ಸಿಕ್ಕಿತು. ಈ ಬಗ್ಗೆ ರಾಣಿ ಮುಖರ್ಜಿ ಮಾತನಾಡಿದ್ದಾರೆ.

‘ಖಿನ್ನತೆಗೆ ಒಳಗಾದ ರೀತಿಯ ಪರಿಸ್ಥಿತಿ ಇತ್ತು. ನಮ್ಮ ಸಂಸ್ಥೆಯ ಎಲ್ಲರೂ ಬೇಸರಗೊಂಡಿದ್ದರು. ಆದರೆ, ಪಠಾಣ್ ಸಿನಿಮಾ ಎಲ್ಲವನ್ನೂ ಬದಲಾಯಿಸಿತು. ಇದು ಅತ್ಯಧಿಕ ಗಳಿಕೆ ಮಾಡಿತು. ಮಾಡಿದ ಸಿನಿಮಾಗಳ ಬಗ್ಗೆ ನಿರ್ಮಾಪಕರಿಗೆ ನಿರ್ದೇಶಕರಿಗೆ ನಂಬಿಕೆ ಬೇಕು. ಏನು ಮಾಡುತ್ತಾರೋ ಅದರ ಮೇಲೆ ನಂಬಿಕೆ ಇಡಬೇಕು. ಪಠಾಣ್ ಚಿತ್ರದಿಂದ ಜನರು ಥಿಯೇಟರ್​ಗೆ ದೊಡ್ಡ ಸಂಖ್ಯೆಯಲ್ಲಿ ಆಗಮಿಸಿದರು’ ಎಂದಿದ್ದಾರೆ ರಾಣಿ ಮುಖರ್ಜಿ.

‘ಕೊವಿಡ್ ಬಳಿಕ ಹಲವು ಸಿನಿಮಾಗಳಿಗೆ ಒಟಿಟಿ ಆಫರ್ ಬಂದಿತ್ತು. ಆದರೆ, ಪತಿ ಆದಿತ್ಯ ಅವರನ್ನು ಇದನ್ನು ತಿರಸ್ಕರಿಸಿದರು. ಯಾವುದೇ ಚಿತ್ರವನ್ನು ನೇರವಾಗಿ ಒಟಿಟಿಯಲ್ಲಿ ರಿಲೀಸ್ ಮಾಡಲ್ಲ ಎಂದು ಪಣ ತೊಟ್ಟಿದ್ದರು. ಅವರಿಗೆ ಭಾರತೀಯ ಚಿತ್ರರಂಗದ ಮೇಲೆ ನಂಬಿಕೆ ಇದೆ’ ಎಂದಿದ್ದಾರೆ ಅವರು.

ಇದನ್ನೂ ಓದಿ: ‘ಸಿನಿಮಾ ಸಕ್ಸಸ್ ಅಳೆಯಲು ಕಲೆಕ್ಷನ್ ಮಾತ್ರವಲ್ಲ ಬಜೆಟ್ ಕೂಡ ನೋಡಬೇಕು’; ಇದು ರಾಣಿ ಮುಖರ್ಜಿ ಲೆಕ್ಕಾಚಾರ

ರಾಣಿ ಮುಖರ್ಜಿ ಅವರು ಇತ್ತೀಚಿಗೆ ಸಿನಿಮಾ ಆಯ್ಕೆಯಲ್ಲಿ ಸಖತ್ ಚ್ಯೂಸಿ ಆಗಿದ್ದಾರೆ. ಅಲ್ಲೊಂದು ಇಲ್ಲೊಂದು ಸಿನಿಮಾ ಒಪ್ಪಿಕೊಂಡು ನಟಿಸುತ್ತಿದ್ದಾರೆ. ಆದಿತ್ಯ ಅವರನ್ನು ಮದುವೆ ಆದ ಬಳಿಕ ಕುಟುಂಬದ ಕಡೆ ಹೆಚ್ಚು ಗಮನ ಹರಿಸುತ್ತಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ