AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

YRF ಸ್ಪೈ ಯೂನಿವರ್ಸ್​ಗೆ ಹೊಸ ಸಿನಿಮಾ ಸೇರ್ಪಡೆ; ಆ್ಯಕ್ಷನ್ ಅವತಾರದಲ್ಲಿ ಮಿಂಚಿದ್ದಾರೆ ಆಲಿಯಾ ಭಟ್

ಇಷ್ಟು ವರ್ಷ ರಿಲೀಸ್ ಆದ ಯಶ್ ರಾಜ್ ಫಿಲ್ಮ್ಸ್​ ಸ್ಪೈ ಯೂನಿವರ್ಸ್​​ನಲ್ಲಿ ಹೀರೋಗಳೇ ಹೆಚ್ಚು ಹೈಲೈಟ್​ ಆಗಿದ್ದರು. ಈ ಕಾರಣಕ್ಕೆ ಆಲಿಯಾ ಅವರೇ ಮುಖ್ಯಭೂಮಿಕೆಯಲ್ಲಿರುವ ಹೊಸ ಸಿನಿಮಾನ ಸಿದ್ಧಪಡಿಸಲು ಯಶ್​ ರಾಜ್ ಫಿಲ್ಮ್ಸ್ ರೆಡಿ ಆಗಿದೆ.

YRF ಸ್ಪೈ ಯೂನಿವರ್ಸ್​ಗೆ ಹೊಸ ಸಿನಿಮಾ ಸೇರ್ಪಡೆ; ಆ್ಯಕ್ಷನ್ ಅವತಾರದಲ್ಲಿ ಮಿಂಚಿದ್ದಾರೆ ಆಲಿಯಾ ಭಟ್
ಆಲಿಯಾ ಭಟ್
ರಾಜೇಶ್ ದುಗ್ಗುಮನೆ
|

Updated on: Jul 14, 2023 | 11:32 AM

Share

ಯಶ್ ರಾಜ್ ಫಿಲ್ಮ್ಸ್ (Yash Raj Films) ಹಲವು ಬಿಗ್ ಬಜೆಟ್ ಚಿತ್ರಗಳನ್ನು ನಿರ್ಮಾಣ ಮಾಡಿದೆ. ಇದರ ಜೊತೆಗೆ ಭಾರತದ ಅತಿ ದೊಡ್ಡ ಸ್ಪೈ ಯೂನಿವರ್ಸ್​ನ ಸೃಷ್ಟಿ ಮಾಡಿದೆ. ಈ ಯೂನಿವರ್ಸ್​ ಅಡಿಯಲ್ಲಿ 2012ರಲ್ಲಿ ಮೊದಲ ಸಿನಿಮಾ ರಿಲೀಸ್ ಆಯಿತು. ಈಗ 11 ವರ್ಷಗಳು ಕಳೆದಿವೆ. ಈ ವೇಳೆ ಒಂದು ಭರ್ಜರಿ ಸುದ್ದಿ ಸಿಕ್ಕಿದೆ. ಯಶ್ ರಾಜ್ ಫಿಲ್ಮ್ಸ್​​ ನಿರ್ಮಾಣದ ಸ್ಪೈ ಯೂನಿವರ್ಸ್​​ನಲ್ಲಿ 8ನೇ ಸಿನಿಮಾ ಘೋಷಣೆಗೆ ರೆಡಿ ಆಗಿದೆ. ಈ ಚಿತ್ರದಲ್ಲಿ ಆಲಿಯಾ ಭಟ್ ಅವರು ಮುಖ್ಯಭೂಮಿಕೆ ನಿರ್ವಹಿಸಲಿದ್ದಾರೆ. ಅವರು ಭರ್ಜರಿ ಆ್ಯಕ್ಷನ್ ಮೆರೆಯಲಿದ್ದಾರೆ ಅನ್ನೋದು ವಿಶೇಷ.

ಯಶ್ ರಾಜ್ ಫಿಲ್ಮ್ಸ್​ನ ಆದಿತ್ಯ ಚೋಪ್ರಾ ಅವರು ಮುನ್ನಡೆಸುತ್ತಿದ್ದಾರೆ. ‘ಏಕ್​ ಥಾ ಟೈಗರ್’, ‘ಟೈಗರ್​ ಜಿಂದಾ ಹೈ’, ‘ವಾರ್’, ‘ಪಠಾಣ್’ ಸಿನಿಮಾಗಳು ಈ ಯೂನಿವರ್ಸ್ ಅಡಿಯಲ್ಲಿ ಸಿದ್ಧವಾಗಿದೆ. ‘ಟೈಗರ್ 3’, ‘ವಾರ್ 2’ ಹಾಗೂ ಟೈಗರ್​ vs ಪಠಾಣ್​ ಸಿನಿಮಾ ಕೂಡ ಇದೇ ಬ್ಯಾನರ್​ನಲ್ಲಿ ಸಿದ್ಧವಾಗುತ್ತಿದ್ದು, ಇದು ಕೂಡ ಸ್ಪೈ ಯೂನಿವರ್ಸ್​​ ಅಡಿಯಲ್ಲೇ ಬರಲಿದೆ. ಈಗ ಆದಿತ್ಯ ಚೋಪ್ರಾ ಅವರು ದೊಡ್ಡ ಪ್ಲ್ಯಾನ್ ರೂಪಿಸಿದ್ದಾರೆ.

ಇಷ್ಟು ವರ್ಷ ರಿಲೀಸ್ ಆದ ಯಶ್ ರಾಜ್ ಫಿಲ್ಮ್ಸ್​ ಸ್ಪೈ ಯೂನಿವರ್ಸ್​​ನಲ್ಲಿ ಹೀರೋಗಳೇ ಹೆಚ್ಚು ಹೈಲೈಟ್​ ಆಗಿದ್ದರು. ‘ಪಠಾಣ್’ ಸಿನಿಮಾದಲ್ಲಿ ದೀಪಿಕಾ ಪಾತ್ರ ಹೈಲೈಟ್ ಆಗಿತ್ತಾದರೂ ಇನ್ನೂ ಹೆಚ್ಚಿನ ಪ್ರಾಮುಖ್ಯತೆ ಅವರ ಪಾತ್ರಕ್ಕೆ ಬೇಕಿತ್ತು ಎನ್ನುವ ಅಭಿಪ್ರಾಯ ವ್ಯಕ್ತವಾದವು. ಈ ಕಾರಣಕ್ಕೆ ಆಲಿಯಾ ಅವರೇ ಮುಖ್ಯಭೂಮಿಕೆಯಲ್ಲಿರುವ ಹೊಸ ಸಿನಿಮಾನ ಸಿದ್ಧಪಡಿಸಲು ಯಶ್​ ರಾಜ್ ಫಿಲ್ಮ್ಸ್ ರೆಡಿ ಆಗಿದೆ.

ಇದನ್ನೂ ಓದಿ: ‘ರಣಬೀರ್​ ಕಪೂರ್​ ಬೇಡ, ನೀವು ಮಾತ್ರ ಪೋಸ್​ ನೀಡಿ’: ಪಾಪರಾಜಿ ಮನವಿಗೆ ಆಲಿಯಾ ಪ್ರತಿಕ್ರಿಯೆ ಏನು?

ಆಲಿಯಾ ಕೇವಲ ಗ್ಲಾಮರ್​ಗೆ ಸೀಮಿತರಾದವರಲ್ಲ. ಅವರು ವಿಭಿನ್ನ ಪಾತ್ರ ಮಾಡಿ ಭೇಷ್ ಎನಿಸಿಕೊಂಡಿದ್ದಾರೆ. ಈ ಕಾರಣಕ್ಕೆ ಅವರು ಈ ಪಾತ್ರಕ್ಕೆ ಸೂಕ್ತ ಎನ್ನುವ ಅಭಿಪ್ರಾಯ ವ್ಯಕ್ತವಾಗಿದೆ. ಅಂದಹಾಗೆ, 2024ರ ಅಂತ್ಯಕ್ಕೆ ಈ ಚಿತ್ರ ಸೆಟ್ಟೇರುವ ಸಾಧ್ಯತೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಹಿಮಾಚಲದ ಕಟ್ಟಡದಲ್ಲಿ ಬೆಂಕಿ ಅವಘಡ; 8 ವರ್ಷದ ಮಗು ಸಾವು, ಹಲವರಿಗೆ ಗಾಯ
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?