AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

YRF ಸ್ಪೈ ಯೂನಿವರ್ಸ್​ಗೆ ಹೊಸ ಸಿನಿಮಾ ಸೇರ್ಪಡೆ; ಆ್ಯಕ್ಷನ್ ಅವತಾರದಲ್ಲಿ ಮಿಂಚಿದ್ದಾರೆ ಆಲಿಯಾ ಭಟ್

ಇಷ್ಟು ವರ್ಷ ರಿಲೀಸ್ ಆದ ಯಶ್ ರಾಜ್ ಫಿಲ್ಮ್ಸ್​ ಸ್ಪೈ ಯೂನಿವರ್ಸ್​​ನಲ್ಲಿ ಹೀರೋಗಳೇ ಹೆಚ್ಚು ಹೈಲೈಟ್​ ಆಗಿದ್ದರು. ಈ ಕಾರಣಕ್ಕೆ ಆಲಿಯಾ ಅವರೇ ಮುಖ್ಯಭೂಮಿಕೆಯಲ್ಲಿರುವ ಹೊಸ ಸಿನಿಮಾನ ಸಿದ್ಧಪಡಿಸಲು ಯಶ್​ ರಾಜ್ ಫಿಲ್ಮ್ಸ್ ರೆಡಿ ಆಗಿದೆ.

YRF ಸ್ಪೈ ಯೂನಿವರ್ಸ್​ಗೆ ಹೊಸ ಸಿನಿಮಾ ಸೇರ್ಪಡೆ; ಆ್ಯಕ್ಷನ್ ಅವತಾರದಲ್ಲಿ ಮಿಂಚಿದ್ದಾರೆ ಆಲಿಯಾ ಭಟ್
ಆಲಿಯಾ ಭಟ್
ರಾಜೇಶ್ ದುಗ್ಗುಮನೆ
|

Updated on: Jul 14, 2023 | 11:32 AM

Share

ಯಶ್ ರಾಜ್ ಫಿಲ್ಮ್ಸ್ (Yash Raj Films) ಹಲವು ಬಿಗ್ ಬಜೆಟ್ ಚಿತ್ರಗಳನ್ನು ನಿರ್ಮಾಣ ಮಾಡಿದೆ. ಇದರ ಜೊತೆಗೆ ಭಾರತದ ಅತಿ ದೊಡ್ಡ ಸ್ಪೈ ಯೂನಿವರ್ಸ್​ನ ಸೃಷ್ಟಿ ಮಾಡಿದೆ. ಈ ಯೂನಿವರ್ಸ್​ ಅಡಿಯಲ್ಲಿ 2012ರಲ್ಲಿ ಮೊದಲ ಸಿನಿಮಾ ರಿಲೀಸ್ ಆಯಿತು. ಈಗ 11 ವರ್ಷಗಳು ಕಳೆದಿವೆ. ಈ ವೇಳೆ ಒಂದು ಭರ್ಜರಿ ಸುದ್ದಿ ಸಿಕ್ಕಿದೆ. ಯಶ್ ರಾಜ್ ಫಿಲ್ಮ್ಸ್​​ ನಿರ್ಮಾಣದ ಸ್ಪೈ ಯೂನಿವರ್ಸ್​​ನಲ್ಲಿ 8ನೇ ಸಿನಿಮಾ ಘೋಷಣೆಗೆ ರೆಡಿ ಆಗಿದೆ. ಈ ಚಿತ್ರದಲ್ಲಿ ಆಲಿಯಾ ಭಟ್ ಅವರು ಮುಖ್ಯಭೂಮಿಕೆ ನಿರ್ವಹಿಸಲಿದ್ದಾರೆ. ಅವರು ಭರ್ಜರಿ ಆ್ಯಕ್ಷನ್ ಮೆರೆಯಲಿದ್ದಾರೆ ಅನ್ನೋದು ವಿಶೇಷ.

ಯಶ್ ರಾಜ್ ಫಿಲ್ಮ್ಸ್​ನ ಆದಿತ್ಯ ಚೋಪ್ರಾ ಅವರು ಮುನ್ನಡೆಸುತ್ತಿದ್ದಾರೆ. ‘ಏಕ್​ ಥಾ ಟೈಗರ್’, ‘ಟೈಗರ್​ ಜಿಂದಾ ಹೈ’, ‘ವಾರ್’, ‘ಪಠಾಣ್’ ಸಿನಿಮಾಗಳು ಈ ಯೂನಿವರ್ಸ್ ಅಡಿಯಲ್ಲಿ ಸಿದ್ಧವಾಗಿದೆ. ‘ಟೈಗರ್ 3’, ‘ವಾರ್ 2’ ಹಾಗೂ ಟೈಗರ್​ vs ಪಠಾಣ್​ ಸಿನಿಮಾ ಕೂಡ ಇದೇ ಬ್ಯಾನರ್​ನಲ್ಲಿ ಸಿದ್ಧವಾಗುತ್ತಿದ್ದು, ಇದು ಕೂಡ ಸ್ಪೈ ಯೂನಿವರ್ಸ್​​ ಅಡಿಯಲ್ಲೇ ಬರಲಿದೆ. ಈಗ ಆದಿತ್ಯ ಚೋಪ್ರಾ ಅವರು ದೊಡ್ಡ ಪ್ಲ್ಯಾನ್ ರೂಪಿಸಿದ್ದಾರೆ.

ಇಷ್ಟು ವರ್ಷ ರಿಲೀಸ್ ಆದ ಯಶ್ ರಾಜ್ ಫಿಲ್ಮ್ಸ್​ ಸ್ಪೈ ಯೂನಿವರ್ಸ್​​ನಲ್ಲಿ ಹೀರೋಗಳೇ ಹೆಚ್ಚು ಹೈಲೈಟ್​ ಆಗಿದ್ದರು. ‘ಪಠಾಣ್’ ಸಿನಿಮಾದಲ್ಲಿ ದೀಪಿಕಾ ಪಾತ್ರ ಹೈಲೈಟ್ ಆಗಿತ್ತಾದರೂ ಇನ್ನೂ ಹೆಚ್ಚಿನ ಪ್ರಾಮುಖ್ಯತೆ ಅವರ ಪಾತ್ರಕ್ಕೆ ಬೇಕಿತ್ತು ಎನ್ನುವ ಅಭಿಪ್ರಾಯ ವ್ಯಕ್ತವಾದವು. ಈ ಕಾರಣಕ್ಕೆ ಆಲಿಯಾ ಅವರೇ ಮುಖ್ಯಭೂಮಿಕೆಯಲ್ಲಿರುವ ಹೊಸ ಸಿನಿಮಾನ ಸಿದ್ಧಪಡಿಸಲು ಯಶ್​ ರಾಜ್ ಫಿಲ್ಮ್ಸ್ ರೆಡಿ ಆಗಿದೆ.

ಇದನ್ನೂ ಓದಿ: ‘ರಣಬೀರ್​ ಕಪೂರ್​ ಬೇಡ, ನೀವು ಮಾತ್ರ ಪೋಸ್​ ನೀಡಿ’: ಪಾಪರಾಜಿ ಮನವಿಗೆ ಆಲಿಯಾ ಪ್ರತಿಕ್ರಿಯೆ ಏನು?

ಆಲಿಯಾ ಕೇವಲ ಗ್ಲಾಮರ್​ಗೆ ಸೀಮಿತರಾದವರಲ್ಲ. ಅವರು ವಿಭಿನ್ನ ಪಾತ್ರ ಮಾಡಿ ಭೇಷ್ ಎನಿಸಿಕೊಂಡಿದ್ದಾರೆ. ಈ ಕಾರಣಕ್ಕೆ ಅವರು ಈ ಪಾತ್ರಕ್ಕೆ ಸೂಕ್ತ ಎನ್ನುವ ಅಭಿಪ್ರಾಯ ವ್ಯಕ್ತವಾಗಿದೆ. ಅಂದಹಾಗೆ, 2024ರ ಅಂತ್ಯಕ್ಕೆ ಈ ಚಿತ್ರ ಸೆಟ್ಟೇರುವ ಸಾಧ್ಯತೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ