AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ವಾರ್ 2’ ಬಳಿಕ ಯಶ್ ರಾಜ್ ಸ್ಪೈ ಯೂನಿವರ್ಸ್ ಚಿತ್ರಗಳಿಗೆ ಬ್ರೇಕ್?

War 2: ಹೃತಿಕ್ ರೋಷನ್, ಜೂ ಎನ್​ಟಿಆರ್ ನಟನೆಯ ‘ವಾರ್ 2’ ಸಿನಿಮಾ ಕೆಲವೇ ತಿಂಗಳಲ್ಲಿ ಬಿಡುಗಡೆ ಆಗಲಿದೆ. ಸಿನಿಮಾವನ್ನು ಬಾಲಿವುಡ್​ನ ಯಶ್ ರಾಜ್ ಫಿಲಮ್ಸ್ ನಿರ್ಮಾಣ ಮಾಡುತ್ತಿದೆ. ಆದರೆ ಈ ಸಿನಿಮಾದ ಬಿಡುಗಡೆ ಬಳಿಕ ಯಶ್ ರಾಜ್ ಫಿಲಮ್ಸ್ ಇನ್ಯಾವುದೇ ಸ್ಪೈ ಆಕ್ಷನ್ ಸಿನಿಮಾಗಳನ್ನು ನಿರ್ಮಾಣ ಮಾಡುವುದಿಲ್ಲ ಎಂಬ ಮಾತುಗಳು ಕೇಳಿ ಬರುತ್ತಿದೆ. ಇದು ನಿಜವೇ? ಮಾಹಿತಿ ಇಲ್ಲಿದೆ...

‘ವಾರ್ 2’ ಬಳಿಕ ಯಶ್ ರಾಜ್ ಸ್ಪೈ ಯೂನಿವರ್ಸ್ ಚಿತ್ರಗಳಿಗೆ ಬ್ರೇಕ್?
Spy Universe
 ಶ್ರೀಲಕ್ಷ್ಮೀ ಎಚ್
| Edited By: |

Updated on: Jun 12, 2025 | 6:21 PM

Share

‘ವಾರ್ 2’ (War 2) ಚಿತ್ರದ ಬಗ್ಗೆ ಅಭಿಮಾನಿಗಳು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಯಶ್ ರಾಜ್ ಫಿಲ್ಮ್ಸ್ ನಿರ್ಮಾಣದ ಈ ಚಿತ್ರದಲ್ಲಿ ಜೂನಿಯರ್ ಎನ್​ಟಿಆರ್ ಹಾಗೂ ಹೃತಿಕ್ ರೋಷನ್ ನಟಿಸಿದ್ದಾರೆ. ಈ ಸಿನಿಮಾದಲ್ಲಿ ಜೂ.ಎನ್​ಟಿಆರ್ ವಿಲನ್ ಎನ್ನುವ ಮಾತುಗಳು ಇವೆ. ಈ ಸಿನಿಮಾ ರಿಲೀಸ್ ಆದ ಬಳಿಕ ಸ್ಪೈ ಯೂನಿವರ್ಸ್​ ಸರಣಿಗೆ ಬ್ರೇಕ್ ಬೀಳಲಿದೆ ಎನ್ನುವ ಮಾತು ಕೇಳಿ ಬಂದಿದೆ. ಆ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಚರ್ಚೆ ಜೋರಾಗಿದೆ.

ಬಾಲಿವುಡ್​ನಲ್ಲಿ ಸ್ಪೈ ಯೂನಿವರ್ಸ್ ಕ್ರೇಜ್ ಬಗ್ಗೆ ಮತ್ತೆ ಹೇಳಬೇಕಾಗಿಲ್ಲ. ಇದು 13 ವರ್ಷಗಳ ಹಿಂದೆ ಸಲ್ಮಾನ್ ಖಾನ್ ಅವರ ‘ಏಕ್ ಥಾ ಟೈಗರ್’ ಮೂಲಕ ಪ್ರಾರಂಭವಾಯಿತು. ನಂತರ ಅದೇ ಸರಣಿಯಲ್ಲಿ ಬಂದ ‘ಟೈಗರ್ ಜಿಂದಾ ಹೈ’ ಬ್ಲಾಕ್​ಬಸ್ಟರ್ ಆಯಿತು. ಶಾರುಖ್ ಖಾನ್ ಅಭಿನಯದ ‘ಪಠಾಣ್’ ಚಿತ್ರ 1000 ಕೋಟಿಗೂ ಹೆಚ್ಚು ಗಳಿಸಿದೆ.

‘ವಾರ್’ ಚಿತ್ರವೂ ಸ್ಪೈ ಯೂನಿವರ್ಸ್​ನ ಭಾಗವಾಗಿದೆ. ಹೃತಿಕ್ ರೋಷನ್ ಮತ್ತು ಟೈಗರ್ ಶ್ರಾಫ್ ಅಭಿನಯದ ಈ ಚಿತ್ರ 2019 ರಲ್ಲಿ ಬಿಡುಗಡೆಯಾಯಿತು. ಈ ಸಿನಿಮಾ ಸೂಪರ್ ಹಿಟ್ ಆಯಿತು. ‘ಪಠಾಣ್’ ಬರುವವರೆಗೂ ಈ ಸರಣಿ ಸೋಲನ್ನು ಕಂಡಿರಲಿಲ್ಲ. ಆದರೆ ಸಲ್ಮಾನ್ ಖಾನ್ ಅವರ ‘ಟೈಗರ್ 3’ ಚಿತ್ರದಿಂದ ಎಚ್ಚರಿಕೆಯ ಗಂಟೆಗಳು ಮೊಳಗಿದವು. ‘ಫೈಟರ್’ ಕೂಡ ನಿರೀಕ್ಷೆಗಳನ್ನು ಪೂರೈಸಲಿಲ್ಲ. ಎಲ್ಲಾ ಸಿನಿಮಾಗಳು ಒಂದೇ ರೀತಿಯ ಕಥೆಯನ್ನು ಹೊಂದಿರುವುದರಿಂದ ಪ್ರೇಕ್ಷಕರು ಕೂಡ ಬೇಸರಗೊಂಡಿದ್ದಾರೆ.

ಇದನ್ನೂ ಓದಿ:ಬಾಲಿವುಡ್​ನಲ್ಲಿ ಅವಕಾಶ ಕಡಿಮೆ ಆಯ್ತೆ ಸಾರಾ ಅಲಿ ಖಾನ್​ಗೆ

‘ವಾರ್ 2’ನಲ್ಲಿಯೂ ಹೊಸ ಕಥೆ ಇರುವುದಿಲ್ಲ ಎಂದು ಪ್ರೇಕ್ಷಕರಿಗೆ ಮನವರಿಕೆಯಾಗುತ್ತಿದೆ. ಅದಕ್ಕಾಗಿಯೇ ಯಶ್ ರಾಜ್ ಫಿಲ್ಮ್ಸ್ ಸ್ಪೈ ಯೂನಿವರ್ಸ್​ಗೆ ವಿರಾಮ ನೀಡಲು ನೋಡುತ್ತಿದೆ ಎನ್ನಲಾಗಿದೆ. ಈ ಸಂದರ್ಭದಲ್ಲಿ, ಶಾರುಖ್ ಮತ್ತು ಸಲ್ಮಾನ್ ಒಟ್ಟಿಗೆ ನಟಿಸಬೇಕಿದ್ದ ‘ಟೈಗರ್ ವರ್ಸಸ್ ಪಠಾಣ್’ ಕಲ್ಪನೆಯನ್ನು ಕೈಬಿಡಲಾಗಿದೆ.

ಈ ಸುದ್ದಿ ನಿಜವೇ ಆದಲ್ಲಿ ‘ವಾರ್ 2’ ಮೂಲಕ ಸ್ಪೈ ಯೂನಿವರ್ಸ್ ಕೊನೆಯದಾಗಲಿದೆ. YRF ಆಲಿಯಾ ಭಟ್ ಅವರೊಂದಿಗೆ ‘ಆಲ್ಫಾ’ ಎಂಬ ಮಹಿಳಾ ಪ್ರಧಾನ ಪತ್ತೇದಾರಿ ಚಿತ್ರವನ್ನು ನಿರ್ಮಿಸಲಿದೆ. ಆದರೆ, ಈ ಬಗ್ಗೆ ಇಲ್ಲಿವರೆಗೆ ಯಾವುದೇ ಅಪ್​ಡೇಟ್ ಬಂದಿಲ್ಲ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ಬದರಿನಾಥದ ಮಹಿಳೆಯರ ಜೊತೆ ಜಾನಪದ ನೃತ್ಯ ಮಾಡಿದ ಸಿಎಂ ಪುಷ್ಕರ್ ಸಿಂಗ್ ಧಾಮಿ!
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ವೇದಿಕೆ ಮೇಲೆಯೇ ಶಿಡ್ಲಘಟ್ಟ ತಹಶೀಲ್ದಾರ್​​ಗೆ ಡಿಸಿ ಕ್ಲಾಸ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಹೆಚ್.ಸಿ. ಮಹದೇವಪ್ಪ ಟಾಂಗ್
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಜಪಾನ್ ವಾಯುಪಡೆ ಮುಖ್ಯಸ್ಥರಿಂದ ಭಾರತದ ತೇಜಸ್ ಯುದ್ಧವಿಮಾನ ಹಾರಾಟ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
ಎಲಿಮಿನೇಷನ್​​​ಗೆ ಮುನ್ನ ಬಿಗ್​​ಬಾಸ್ ಮನೆಯಲ್ಲಿ ನಗುವೋ ನಗು: ವಿಡಿಯೋ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
‘ನೂರೇ ದಿನದಲ್ಲಿ ಭರವಸೆ ಮೂಡಿಸಿದ ನಾಯಕ ಡಿಕೆ ಶಿವಕುಮಾರ್‘​​: ಬಿಜೆಪಿ ನಾಯಕ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ಕರ್ನಾಟಕದಲ್ಲಿ ಫೈಜರ್ ಕಂಪನಿ ಔಷಧ ಮಾರಾಟಕ್ಕೆ ತಾತ್ಕಾಲಿಕ ತಡೆ
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ರಮಾನಾಥ ರೈ ಕಾರು ಅಪಘಾತ: ಕೂದಲೆಳೆ ಅಂತರದಲ್ಲಿ ಮಾಜಿ ಸಚಿವರು ಪಾರು
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ಬೀದರ್‌ನ ದಟ್ಟ ಅರಣ್ಯದಲ್ಲಿ ಪತ್ತೆಯಾಯ್ತು ಪುರಾತನ ವಿಷ್ಣು ದೇವಸ್ಥಾನ!
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ
ರಾತ್ರಿ ಸುರಿದ ಭಾರಿ ಮಳೆಗೆ ಆನೇಕಲ್ ತತ್ತರ: ಅಂಡರ್‌ಪಾಸ್​​ ಜಲಾವೃತ