AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ರಾಮಾಯಣ’ ವೇದಿಕೆಯಲ್ಲಿ ಯಶ್ ಹವಾ ಕಂಡು ದಂಗಾದ ಬಾಲಿವುಡ್ ಮಂದಿ

ರಾಕಿಂಗ್ ಸ್ಟಾರ್ ಯಶ್ ಜನಪ್ರಿಯತೆ 'ರಾಮಾಯಣ' ಕಾರ್ಯಕ್ರಮದಲ್ಲಿ ಮತ್ತೊಮ್ಮೆ ಸಾಬೀತಾಗಿದೆ. ದೆಹಲಿ ಈವೆಂಟ್‌ನಲ್ಲಿ ರಣಬೀರ್ ಕಪೂರ್‌ಗಿಂತಲೂ ಯಶ್ ವೇದಿಕೆ ಏರಿದಾಗ ಭಾರಿ ಚಪ್ಪಾಳೆ, ಸಿಳ್ಳೆಗಳು ಬಿದ್ದಿವೆ. 'ಕೆಜಿಎಫ್ 2' ಬಳಿಕ ಅವರ ಗ್ಲೋಬಲ್ ಕ್ರೇಜ್ ಎಷ್ಟಿದೆ ಎಂಬುದಕ್ಕೆ ಈ ವೈರಲ್ ವಿಡಿಯೋ ಸಾಕ್ಷಿಯಾಗಿದೆ. ಸದ್ಯ ಅಭಿಮಾನಿಗಳು 'ಟಾಕ್ಸಿಕ್' ಸಿನಿಮಾ ಹಾಗೂ ರಾಮಾಯಣದ 'ರಾವಣ' ಪಾತ್ರಕ್ಕಾಗಿ ಕಾತರದಿಂದ ಕಾಯುತ್ತಿದ್ದಾರೆ.

‘ರಾಮಾಯಣ’ ವೇದಿಕೆಯಲ್ಲಿ ಯಶ್ ಹವಾ ಕಂಡು ದಂಗಾದ ಬಾಲಿವುಡ್ ಮಂದಿ
ಯಶ್-ರಣಬೀರ್
ರಾಜೇಶ್ ದುಗ್ಗುಮನೆ
|

Updated on:Jul 20, 2026 | 7:04 AM

Share

ಮುಖ್ಯಾಂಶಗಳು

  • ರಾಮಾಯಣ ವೇದಿಕೆಯಲ್ಲಿ ಯಶ್ ಅಬ್ಬರ
  • ರಣಬೀರ್ ಕಪೂರ್ ಕ್ರೇಜ್ ಮೀರಿಸಿದ ರಾಕಿ ಭಾಯ್
  • ವಿಶ್ವ ಮಟ್ಟದಲ್ಲಿ ಸದ್ದು ಮಾಡುತ್ತಿರುವ 'ಟಾಕ್ಸಿಕ್'

ರಾಕಿಂಗ್ ಸ್ಟಾರ್ ಯಶ್ (Yash) ಕ್ರೇಜ್ ಯಾವ ರೀತಿ ಇದೆ ಎಂಬುದನ್ನು ಮತ್ತೊಮ್ಮೆ ಹೇಳುವ ಅಗತ್ಯವಿಲ್ಲ. ಅವರ ನಟನೆಯ ‘ಟಾಕ್ಸಿಕ್’ ಚಿತ್ರದ ಬಗ್ಗೆ ಅಪಾರ ನಿರೀಕ್ಷೆ ಇದೆ. ಇನ್ನು, ‘ರಾಮಾಯಣ’ ಸಿನಿಮಾದಲ್ಲಿ ಅವರನ್ನು ರಾವಣನಾಗಿ ನೋಡಲು ಫ್ಯಾನ್ಸ್ ಕಾದಿದ್ದಾರೆ. ಈಗ ಯಶ್ ಜನಪ್ರಿಯತೆ ಎಷ್ಟಿದೆ ಎಂಬುದಕ್ಕೆ ಮತ್ತೊಂದು ಸಾಕ್ಷಿ ಸಿಕ್ಕಿದೆ. ಅವರು ‘ರಾಮಾಯಣ’ ಸಿನಿಮಾದ ವೇದಿಕೆ ಏರುತ್ತಿದ್ದಂತೆ ಅವರಿಗೆ ದೊಡ್ಡ ಮಟ್ಟದಲ್ಲಿ ಚಪ್ಪಾಳೆ ಹಾಗೂ ಸಿಳ್ಳೆ ಬಿದ್ದಿವೆ. ಈ ವಿಡಿಯೋ ವೈರಲ್ ಆಗಿ ಗಮನ ಸೆಳೆಯುತ್ತಿದೆ.

ಯಶ್ ಅವರು ‘ಕೆಜಿಎಫ್ 2’ ಬಳಿಕ ವಿಶ್ವ ಮಟ್ಟದಲ್ಲಿ ಗುರುತಿಸಿಕೊಂಡಿದ್ದಾರೆ. ಈಗ ‘ಟಾಕ್ಸಿಕ್’ ಚಿತ್ರವನ್ನು ವಿಶ್ವ ಮಟ್ಟದಲ್ಲಿ ರಿಲೀಸ್ ಮಾಡಲು ಪ್ಲ್ಯಾನ್ ಮಾಡಿದ್ದಾರೆ. ಅವರ ‘ಟಾಕ್ಸಿಕ್’ ಚಿತ್ರದ ಬಗ್ಗೆ ನಿರೀಕ್ಷೆ ಇಲ್ಲ ಎಂದೆಲ್ಲ ಬಾಲಿವುಡ್​ನ ಕೆಲವರು ಕೊಂಕು ತೆಗೆದಿದ್ದರು. ಆದರೆ, ಯಶ್ ಜನಪ್ರಿಯತೆ ರಣಬೀರ್ ಕಪೂರ್ ಅವರ ಕ್ರೇಜ್ ಅನ್ನು ಮೀರಿಸಿದೆ ಎಂಬುದು ಮತ್ತೊಮ್ಮೆ ಸಾಬೀತಾಗಿದೆ.

‘ರಾಮಾಯಣ’ ಈವೆಂಟ್ ದೆಹಲಿಯಲ್ಲಿ ನಡೆಯಿತು. ಇದಕ್ಕೆ ಚಿತ್ರರಂಗದ ವಿವಿಧ ಸೆಲೆಬ್ರಿಟಿಗಳು ಆಗಮಿಸಿದ್ದರು. ಅದೇ ರೀತಿ, ‘ರಾಮಾಯಣ’ ಟೀಂ ಕೂಡ ಭಾಗವಹಿಸಿತ್ತು. ರಾಮನ ಪಾತ್ರಧಾರಿ ರಣಬೀರ್ ಕಪೂರ್, ಸೀತಾ ಪಾತ್ರಧಾರಿ ಸಾಯಿ ಪಲ್ಲವಿ ಸೇರಿದಂತೆ ತಂಡದ ಅನೇಕರು ವೇದಿಕೆ ಏರಿದರು. ಆಗ ಯಾರೊಬ್ಬರೂ ಸಿಳ್ಳೆ ಹಾಕಲಿಲ್ಲ, ದೊಡ್ಡದಾಗಿ ಕಿರುಚಾಡಲಿಲ್ಲ. ನೆರೆದಿದ್ದ ಜನಸಮೂಹ ಸೈಲೆಂಟ್ ಆಗಿತ್ತು. ಯಾವಾಗ ಯಶ್ ಅವರು ವೇದಿಕೆ ಏರಿದರೋ ಆಗ ಜೋರಾದ ಚಪ್ಪಾಳೆ ಕೇಳಿಸಿತು. ನೆರೆದಿದ್ದವರು ಜೋರಾಗಿ ಕೂಗಿದರು. ಅವರು ಮಾತನಾಡುವಾಗಲೂ ಇದೇ ಪರಿಸ್ಥಿತಿ ಮರುಕಳಿಸಿತು. ಇದು ಯಶ್ ಅವರ ಜನಪ್ರಿಯತೆಯನ್ನು ತೋರಿಸಿದೆ. ಸದ್ಯ ಈ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ.

ಇದನ್ನೂ ಓದಿ: ಭಾರತದ ಕನಸು; ದೆಹಲಿ ‘ರಾಮಾಯಣ’ ಈವೆಂಟ್​​ನಲ್ಲಿ ಕನ್ನಡದಲ್ಲಿ ಮಾತು ಆರಂಭಿಸಿದ ಯಶ್

‘ರಾಮಾಯಣ’ ಸಿನಿಮಾ ಈ ವರ್ಷ ದೀಪಾವಳಿಗೆ ರಿಲೀಸ್ ಆಗುತ್ತಿದೆ. ಈ ಚಿತ್ರದಲ್ಲಿ ರಾವಣನಾಗಿ ಅಬ್ಬರಿಸಲು ಯಶ್ ರೆಡಿ ಆಗಿದ್ದಾರೆ. ಅದೇ ರೀತಿ ಅವರ ನಟನೆಯ ‘ಟಾಕ್ಸಿಕ್’ ಸಿನಿಮಾ ಆಗಸ್ಟ್ 26ರಂದು ತೆರೆಗೆ ಬರುತ್ತಿದೆ. ಈ ಚಿತ್ರದ ಬಗ್ಗೆ ಅಭಿಮಾನಿಗಳು ನಿರೀಕ್ಷೆ ಇಟ್ಟುಕೊಂಡಿದ್ದಾರೆ.

ಪ್ರಶ್ನೆ: ರಾಮಾಯಣ ರಿಲೀಸ್ ಯಾವಾಗ? ಉತ್ತರ: ದೀಪಾವಳಿ ಹಬ್ಬಕ್ಕೆ

ಪ್ರಶ್ನೆ: ಯಶ್ ಪಾತ್ರವೇನು? ಉತ್ತರ: ರಾವಣನ ಪಾತ್ರ

ಪ್ರಶ್ನೆ: ಎಷ್ಟು ಭಾಗದಲ್ಲಿ ರಾಮಾಯಣ ಸಿನಿಮಾ ರಿಲೀಸ್ ಆಗಲಿದೆ? ಉತ್ತರ: ಎರಡು ಭಾಗದಲ್ಲಿ

Published On - 6:56 am, Mon, 20 July 26

Follow Us
ಕಾಕ್ರೋಚ್ ಜನತಾ ಪಕ್ಷದ 'ಚಲೋ ಸಂಸತ್' ಮೆರವಣಿಗೆಗೆ ದೆಹಲಿ ಪೊಲೀಸರ ನಿರ್ಬಂಧ!
ಕಾಕ್ರೋಚ್ ಜನತಾ ಪಕ್ಷದ 'ಚಲೋ ಸಂಸತ್' ಮೆರವಣಿಗೆಗೆ ದೆಹಲಿ ಪೊಲೀಸರ ನಿರ್ಬಂಧ!
ಬೆಟ್ಟದ ರಂಗನಾಥನ ತಪ್ಪಲಿನಲ್ಲೇ ಚೆನ್ನಮ್ಮನ ಅಂತ್ಯಕ್ರಿಯೆ ಏಕೆ?
ಬೆಟ್ಟದ ರಂಗನಾಥನ ತಪ್ಪಲಿನಲ್ಲೇ ಚೆನ್ನಮ್ಮನ ಅಂತ್ಯಕ್ರಿಯೆ ಏಕೆ?
ಅಮ್ಮ-ತಂದೆಯ ಬಾಂಧ್ಯವ್ಯವನ್ನ ಬಿಚ್ಚಿಟ್ಟ ಪುತ್ರಿ ಅನುಸೂಯ
ಅಮ್ಮ-ತಂದೆಯ ಬಾಂಧ್ಯವ್ಯವನ್ನ ಬಿಚ್ಚಿಟ್ಟ ಪುತ್ರಿ ಅನುಸೂಯ
ನಾಗಾಲ್ಯಾಂಡ್‌ನಲ್ಲಿ ಭೀಕರ ಭೂಕುಸಿತ; 4 ಜನ ಸಾವು
ನಾಗಾಲ್ಯಾಂಡ್‌ನಲ್ಲಿ ಭೀಕರ ಭೂಕುಸಿತ; 4 ಜನ ಸಾವು
ವಾಸ್ತು ಪ್ರಕಾರವೇ ಚೆನ್ನಮ್ಮ ಅಂತ್ಯಕ್ರಿಯೆ: ವಾಸ್ತು ತಜ್ಞರು ಹೇಳಿದ್ದಿಷ್ಟು
ವಾಸ್ತು ಪ್ರಕಾರವೇ ಚೆನ್ನಮ್ಮ ಅಂತ್ಯಕ್ರಿಯೆ: ವಾಸ್ತು ತಜ್ಞರು ಹೇಳಿದ್ದಿಷ್ಟು
ದೇವೇಗೌಡ ಪತ್ನಿ ಚೆನ್ನಮ್ಮ ನಿಧನ: ಎರಡು ದಿನ ಮದ್ಯ ಮಾರಾಟ ನಿಷೇಧ
ದೇವೇಗೌಡ ಪತ್ನಿ ಚೆನ್ನಮ್ಮ ನಿಧನ: ಎರಡು ದಿನ ಮದ್ಯ ಮಾರಾಟ ನಿಷೇಧ
ಪತ್ನಿಯ ಪಾರ್ಥಿವ ಶರೀರವನ್ನ ಕೊಂಡೊಯ್ಯುವಾಗ ಬಿಕ್ಕಿ ಬಿಕ್ಕಿ ಅತ್ತ ದೇವೇಗೌಡರು
ಪತ್ನಿಯ ಪಾರ್ಥಿವ ಶರೀರವನ್ನ ಕೊಂಡೊಯ್ಯುವಾಗ ಬಿಕ್ಕಿ ಬಿಕ್ಕಿ ಅತ್ತ ದೇವೇಗೌಡರು
ಸಾವಿಗೂ ಮುನ್ನ ಚೆನ್ನಮ್ಮರ ಕೊನೆ ಕ್ಷಣಗಳ ವೀಡಿಯೋ ನೋಡಿ!
ಸಾವಿಗೂ ಮುನ್ನ ಚೆನ್ನಮ್ಮರ ಕೊನೆ ಕ್ಷಣಗಳ ವೀಡಿಯೋ ನೋಡಿ!
ICUನಲ್ಲಿ ಚೆನ್ನಮ್ಮರ ಕೊನೆಕ್ಷಣ ಹೇಗಿತ್ತು? ಪುತ್ರಿ ಅನುಸೂಯ ಹೇಳಿದ್ದಿಷ್ಟು
ICUನಲ್ಲಿ ಚೆನ್ನಮ್ಮರ ಕೊನೆಕ್ಷಣ ಹೇಗಿತ್ತು? ಪುತ್ರಿ ಅನುಸೂಯ ಹೇಳಿದ್ದಿಷ್ಟು
ಚೆನ್ನಮ್ಮ ದೇವೇಗೌಡರ ಮನೆಯ ಮಹಾಲಕ್ಷ್ಮೀ: ಬ್ರಹ್ಮಾಂಡ ಗುರೂಜಿ
ಚೆನ್ನಮ್ಮ ದೇವೇಗೌಡರ ಮನೆಯ ಮಹಾಲಕ್ಷ್ಮೀ: ಬ್ರಹ್ಮಾಂಡ ಗುರೂಜಿ