AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಾಲಿವುಡ್ ಚಿತ್ರವನ್ನು ತಿರಸ್ಕರಿಸಿದ್ದ ದಕ್ಷಿಣದ ಹೀರೋಗಳು; ಬಹುತೇಕ ಚಿತ್ರಗಳು ಹಿಟ್

2019ರಲ್ಲಿ ರಿಲೀಸ್ ಆದ ಸೈಫ್ ಅಲಿ ಖಾನ್ ನಟನೆಯ ‘ಲಾಲ್ ಕಪ್ತಾನ್’ ಸಿನಿಮಾ ಮೆಚ್ಚುಗೆ ಪಡೆದಿತ್ತು. ಈ ಸಿನಿಮಾದ ಆಫರ್ ಮೊದಲು ಯಶ್​ಗೆ ಹೋಗಿತ್ತು. ಆಗಿನ್ನೂ ಅವರು ಬಾಲಿವುಡ್ ಸಿನಿಮಾ ಮಾಡುವ ಉದ್ದೇಶ ಹೊಂದಿರಲಿಲ್ಲ. ಹೀಗಾಗಿ, ಅವರು ಇದನ್ನು ರಿಜೆಕ್ಟ್ ಮಾಡಿದ್ದರು.

ಬಾಲಿವುಡ್ ಚಿತ್ರವನ್ನು ತಿರಸ್ಕರಿಸಿದ್ದ ದಕ್ಷಿಣದ ಹೀರೋಗಳು; ಬಹುತೇಕ ಚಿತ್ರಗಳು ಹಿಟ್
ಬಾಲಿವುಡ್ ಚಿತ್ರವನ್ನು ತಿರಸ್ಕರಿಸಿದ್ದ ದಕ್ಷಿಣದ ಹೀರೋಗಳು; ಬಹುತೇಕ ಚಿತ್ರಗಳು ಹಿಟ್
 ಶ್ರೀಲಕ್ಷ್ಮೀ ಎಚ್
| Edited By: |

Updated on: Oct 14, 2024 | 7:37 AM

Share

ದಕ್ಷಿಣ ಭಾರತದ ಹಲವು ನಟರು​ಗಳು ಬಾಲಿವುಡ್​ನಲ್ಲಿ ಈಗ ಹೆಸರು ಮಾಡಿದ್ದಾರೆ. ಅವರಿಗೆ ಪರಭಾಷೆಯಿಂದ, ಬಾಲಿವುಡ್​ನಿಂದ ಆಫರ್​ಗಳು ಬಂದರೆ ಅದನ್ನು ರಿಜೆಕ್ಟ್ ಮಾಡಿದ ಉದಾಹರಣೆ ಸಾಕಷ್ಟಿದೆ. ದಕ್ಷಿಣ ಭಾರತದ ಹೀರೋಗಳಾದ ಅಲ್ಲು ಅರ್ಜುನ್, ಯಶ್ ಸೇರಿದಂತೆ ಅನೇಕರು ಹಿಂದಿ ಆಫರ್​ಗಳನ್ನು ತಿರಸ್ಕರಿಸಿದ್ದರು. ಆ ಚಿತ್ರಗಳು ಯಶಸ್ಸು ಕಂಡವು ಮತ್ತು ರಿಜೆಕ್ಟ್ ಮಾಡಿದ ಹೀರೋಗಳಿಗೆ ಬೇಸರವನ್ನು ಉಂಟು ಮಾಡಿದವು. ಆ ಬಗ್ಗೆ ಇಲ್ಲಿದೆ ವಿವರ.

‘ಬಜರಂಗಿ ಭಾಯಿಜಾನ್’

‘ಬಜರಂಗಿ ಭಾಯಿಜಾನ್’ ಸಿನಿಮಾ 2015ರಲ್ಲಿ ರಿಲೀಸ್ ಆಯಿತು. ಈ ಚಿತ್ರದಲ್ಲಿ ಸಲ್ಮಾನ್ ಖಾನ್ ಅವರು ಹೀರೋ ಆಗಿ ನಟಿಸಿ ಗಮನ ಸೆಳೆದರು. ಮೂಲತಹವಾಗಿ ಈ ಚಿತ್ರದಲ್ಲಿ ನಟಿಸಬೇಕಾಗಿದ್ದು ಸಲ್ಮಾನ್ ಖಾನ್ ಅಲ್ಲ. ಅಲ್ಲು ಅರ್ಜುನ್ ಅವರು ಎನ್ನಲಾಗಿದೆ. ಅಲ್ಲು ಅರ್ಜುನ್ ಅವರಿಗೆ ಮೊದಲು ಈ ಆಫರ್ ಹೋಗಿತ್ತಂತೆ. ಚಿತ್ರದ ನಿರ್ದೇಶಕ ಕಬೀರ್ ಖಾನ್ ಅವರು ಈ ಆಫರ್​ನ ಅವರಿಗೆ ನೀಡಿದರು. ನಂತರ ಈ ಆಫರ್​ನ ಅವರು ರಿಜೆಕ್ಟ್ ಮಾಡಿದ್ದರು. ನಂತರ ಸಲ್ಮಾನ್ ಖಾನ್ ಅವರು ಮಾಡಿ ಗೆದ್ದರು.

‘ಅನಿಮಲ್’

‘ಅನಿಮಲ್’ ಚಿತ್ರವು ಕಳೆದ ವರ್ಷ ರಿಲೀಸ್ ಆದ ಯಶಸ್ವಿ ಸಿನಿಮಾಗಳಲ್ಲಿ ಒಂದು. ಬಾಕ್ಸ್ ಆಫೀಸ್​ನಲ್ಲಿ ಸಿನಿಮಾ ಮೆಚ್ಚುಗೆ ಪಡೆಯಿತು. ಈ ಚಿತ್ರವನ್ನು ಜನರು ಹೆಚ್ಚು ಇಷ್ಟಪಟ್ಟರು. ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ 900 ಕೋಟಿ ರೂಪಾಯಿ ಬಿಸ್ನೆಸ್ ಮಾಡಿತ್ತು. ಈ ಚಿತ್ರದ ಆಫರ್ ಮೊದಲು ಹೋಗಿದ್ದು ಮಹೇಶ್ ಬಾಬು ಅವರಿಗೆ ಎನ್ನಲಾಗಿದೆ.

‘ಲಾಲ್ ಕಪ್ತಾನ್’

2019ರಲ್ಲಿ ರಿಲೀಸ್ ಆದ ಸೈಫ್ ಅಲಿ ಖಾನ್ ನಟನೆಯ ‘ಲಾಲ್ ಕಪ್ತಾನ್’ ಸಿನಿಮಾ ಮೆಚ್ಚುಗೆ ಪಡೆದಿತ್ತು. ಈ ಸಿನಿಮಾದ ಆಫರ್ ಮೊದಲು ಯಶ್​ಗೆ ಹೋಗಿತ್ತು. ಆಗಿನ್ನೂ ಅವರು ಬಾಲಿವುಡ್ ಸಿನಿಮಾ ಮಾಡುವ ಉದ್ದೇಶ ಹೊಂದಿರಲಿಲ್ಲ. ಹೀಗಾಗಿ, ಅವರು ಇದನ್ನು ರಿಜೆಕ್ಟ್ ಮಾಡಿದ್ದರು. ಈಗ ‘ರಾಮಾಯಣ’ ಚಿತ್ರವನ್ನು ಹಿಂದಿಯಲ್ಲಿ ಅವರು ಮಾಡುತ್ತಿದ್ದಾರೆ. ಈ ಚಿತ್ರಕ್ಕೆ ಅವರು ನಿರ್ಮಾಪಕ ಕೂಡ ಹೌದು.

‘ಲಾಲ್ ಸಿಂಗ್ ಚಡ್ಡಾ’

ಆಮಿರ್ ಖಾನ್ ನಟನೆಯ ‘ಲಾಲ್ ಸಿಂಗ್ ಚಡ್ಡಾ’ ಸಿನಿಮಾದಲ್ಲಿ ನಾಗ ಚೈತನ್ಯ ನಟಿಸಿದ್ದರು. ಈ ಸಿನಿಮಾದ ಪಾತ್ರಕ್ಕಾಗಿ ವಿಜಯ್ ಸೇತುಪತಿಗೆ ಆಫರ್ ನೀಡಲಾಗಿತ್ತು. ಆದರೆ, ಅವರು ಇದನ್ನು ರಿಜೆಕ್ಟ್ ಮಾಡಿದ್ದರು ನಂತರ ಈ ಆಫರ್ ನಾಗ ಚೈತನ್ಯ ಕೈ ಸೇರಿತ್ತು.

ಇದನ್ನೂ ಓದಿ: ಮುಂಬೈನಲ್ಲಿ ಯಶ್​, ರಾಧಿಕಾ ಪಂಡಿತ್ ಡಿನ್ನರ್: ಫೋಟೋ, ವಿಡಿಯೋಗೆ ಮುಗಿಬಿದ್ದ ಪಾಪರಾಜಿಗಳು

ಚಿಚೋರೆ

ನವೀನ್ ಪೊಲಿಶೆಟ್ಟಿ ಅವರು ‘ಚಿಚೋರೆ’ ಸಿನಿಮಾ ಮಾಡಬೇಕಿತ್ತು. ಆದದರೆ, ಸಿನಿಮಾದ ಆಫರ್ ಅವರ ಕೈಸೇರಿಲ್ಲ. ಅವರು ರಿಜೆಕ್ಟ್ ಮಾಡಿದ್ದರಿಂದ ಸುಶಾಂತ್ ಸಿಂಗ್ ಅವರು ನಟಿಸಿದ ಕೊನೆಯ ಸಿನಿಮಾ ಇದಾಯಿತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಕಲಬುರಗಿ: 1.44 ಕೋಟಿ ರೂ ಮೌಲ್ಯದ ಫೋನ್‌ ಪತ್ತೆ ಮಾಡಿದ್ಹೇಗೆ ಗೊತ್ತಾ?
ಕಲಬುರಗಿ: 1.44 ಕೋಟಿ ರೂ ಮೌಲ್ಯದ ಫೋನ್‌ ಪತ್ತೆ ಮಾಡಿದ್ಹೇಗೆ ಗೊತ್ತಾ?
ಫೋನ್‌ ಕಳೆದುಕೊಂಡು ವ್ಯಕ್ತಿ ಮಾಡಿದ್ದೇನು? ಅನುಭವದ ಮಾತು ಕೇಳಿ
ಫೋನ್‌ ಕಳೆದುಕೊಂಡು ವ್ಯಕ್ತಿ ಮಾಡಿದ್ದೇನು? ಅನುಭವದ ಮಾತು ಕೇಳಿ
ಮೇ 10ರವರೆಗೆ ಚೆನ್ನೈನಲ್ಲೇ ಇರಿ; ಡಿಎಂಕೆ ಶಾಸಕರಿಗೆ ಸ್ಟಾಲಿನ್ ಆದೇಶ
ಮೇ 10ರವರೆಗೆ ಚೆನ್ನೈನಲ್ಲೇ ಇರಿ; ಡಿಎಂಕೆ ಶಾಸಕರಿಗೆ ಸ್ಟಾಲಿನ್ ಆದೇಶ
ಕೈಗಾ ಅಣುಸ್ಥಾವರದ ರಕ್ಷಾ ಕವಚ‌ ಹೊತ್ತು ತರುತ್ತಿದ್ದ ವಾಹನ ಪಲ್ಟಿ
ಕೈಗಾ ಅಣುಸ್ಥಾವರದ ರಕ್ಷಾ ಕವಚ‌ ಹೊತ್ತು ತರುತ್ತಿದ್ದ ವಾಹನ ಪಲ್ಟಿ
ಮೆಟ್ಟಿಲುಗಳಿಗೆ ಕೈ ಮುಗಿದು ವಿಧಾನಸೌಧಕ್ಕೆ ಸಮರ್ಥ್​ ಎಂಟ್ರಿ
ಮೆಟ್ಟಿಲುಗಳಿಗೆ ಕೈ ಮುಗಿದು ವಿಧಾನಸೌಧಕ್ಕೆ ಸಮರ್ಥ್​ ಎಂಟ್ರಿ
ಉಡುಪಿಯಲ್ಲಿ ಅಬ್ಬರಿಸಿದ ವರುಣ: ರಸ್ತೆಯಲ್ಲೇ ನೀರು ನಿಂತು ಸವಾರರ ಪರದಾಟ
ಉಡುಪಿಯಲ್ಲಿ ಅಬ್ಬರಿಸಿದ ವರುಣ: ರಸ್ತೆಯಲ್ಲೇ ನೀರು ನಿಂತು ಸವಾರರ ಪರದಾಟ
ಸ್ಟ್ರಾಂಗ್‌ ರೂಮ್‌ವೊಂದರ ಬೀಗ ಕಳೆದಿರೋದನ್ನು ನಾವು ಎಂದೂ ಕೇಳಿರಲಿಲ್ಲ
ಸ್ಟ್ರಾಂಗ್‌ ರೂಮ್‌ವೊಂದರ ಬೀಗ ಕಳೆದಿರೋದನ್ನು ನಾವು ಎಂದೂ ಕೇಳಿರಲಿಲ್ಲ
IPL ಫೈನಲ್ ಬೆಂಗಳೂರಿನಿಂದ ಸ್ಥಳಾಂತರಗೊಂಡಿದ್ದೇಕೆ? ಅಸಲಿ ಕಾರಣ ಇಲ್ಲಿದೆ
IPL ಫೈನಲ್ ಬೆಂಗಳೂರಿನಿಂದ ಸ್ಥಳಾಂತರಗೊಂಡಿದ್ದೇಕೆ? ಅಸಲಿ ಕಾರಣ ಇಲ್ಲಿದೆ
ಚುನಾವಣಾ ರಾಜಕೀಯಕ್ಕೆ ವಿಶ್ವನಾಥ್ ಕುಟುಂಬ ವಿದಾಯ
ಚುನಾವಣಾ ರಾಜಕೀಯಕ್ಕೆ ವಿಶ್ವನಾಥ್ ಕುಟುಂಬ ವಿದಾಯ
ಪೋಕ್ಸೋ ಪ್ರಕರಣವಿದೆ: ಯಡಿಯೂರಪ್ಪ ಅಭಿಮಾನೋತ್ಸವ ಸರಿಯಲ್ಲ ಎಂದ ಬಿಜೆಪಿ ನಾಯಕ
ಪೋಕ್ಸೋ ಪ್ರಕರಣವಿದೆ: ಯಡಿಯೂರಪ್ಪ ಅಭಿಮಾನೋತ್ಸವ ಸರಿಯಲ್ಲ ಎಂದ ಬಿಜೆಪಿ ನಾಯಕ