AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yentamma Song: ಪಂಚೆ ಎತ್ತಿಕಟ್ಟಿ ಕುಣಿದ ಸಲ್ಮಾನ್​ ಖಾನ್​, ರಾಮ್​ ಚರಣ್​, ವೆಂಕಟೇಶ್​; ಧೂಳೆಬ್ಬಿಸಿದ ‘ಯೆಂಟಮ್ಮಾ’ ಹಾಡು

Kisi Ka Bhai Kisi Ki Jaan: ‘ಯೆಂಟಮ್ಮಾ..’ ಹಾಡಿಗೆ ಪಾಯಲ್​ ದೇವ್​ ಸಂಗೀತ ನಿರ್ದೇಶನ ಮಾಡಿದ್ದಾರೆ. ಈ ಗೀತೆಯಲ್ಲಿ ಹಿಂದಿ ಮತ್ತು ತೆಲುಗು ಮಿಶ್ರಿತ ಸಾಹಿತ್ಯ ಇದೆ.

Yentamma Song: ಪಂಚೆ ಎತ್ತಿಕಟ್ಟಿ ಕುಣಿದ ಸಲ್ಮಾನ್​ ಖಾನ್​, ರಾಮ್​ ಚರಣ್​, ವೆಂಕಟೇಶ್​; ಧೂಳೆಬ್ಬಿಸಿದ ‘ಯೆಂಟಮ್ಮಾ’ ಹಾಡು
ರಾಮ್ ಚರಣ್, ಸಲ್ಮಾನ್ ಖಾನ್, ದಗ್ಗುಬಾಟಿ ವೆಂಕಟೇಶ್
ಮದನ್​ ಕುಮಾರ್​
|

Updated on:Apr 04, 2023 | 1:53 PM

Share

ಮುಖ್ಯಾಂಶಗಳು

  • ‘ಕಿಸಿ ಕಾ ಭಾಯ್​ ಕಿಸಿ ಕಿ ಜಾನ್​’ ಚಿತ್ರದ ‘ಯೆಂಟಮ್ಮಾ..’ ಹಾಡು ರಿಲೀಸ್​
  • ಟಾಲಿವುಡ್​ ಹೀರೋಗಳ ಜೊತೆ ಕುಣಿದ ಬಾಲಿವುಡ್​ ನಟ ಸಲ್ಮಾನ್​ ಖಾನ್​
  • ‘ಯೆಂಟಮ್ಮಾ..’ ಹಾಡಿನಲ್ಲಿದೆ ಹಿಂದಿ ಮತ್ತು ತೆಲುಗು ಮಿಶ್ರಿತವಾದ ಸಾಹಿತ್ಯ

ಹಿಂದಿ ಚಿತ್ರರಂಗ ಮತ್ತು ದಕ್ಷಿಣ ಭಾರತದ ಸಿನಿಮಾರಂಗದ ನಡುವೆ ದೊಡ್ಡ ಪೈಪೋಟಿ ನಡೆಯುತ್ತಿರುವುದು ಗೊತ್ತೇ ಇದೆ. ಆದರೆ ಚಿತ್ರರಂಗದಲ್ಲಿ ಭಾಷೆಗಳ ಗಡಿ ಅಳಿಸಲು ಕೆಲವು ಸ್ಟಾರ್​ ನಟರು ಪ್ರಯತ್ನ ಮಾಡುತ್ತಿದ್ದಾರೆ. ಅದಕ್ಕೆ ಸಾಕ್ಷಿ ಎಂಬಂತೆ ‘ಕಿಸಿ ಕಾ ಭಾಯ್​ ಕಿಸಿ ಕಿ ಜಾನ್​’ (Kisi Ka Bhai Kisi Ki Jaan) ಸಿನಿಮಾದ ಹೊಸ ಹಾಡು ಮೂಡಿಬಂದಿದೆ. ‘ಯೆಂಟಮ್ಮಾ..’ ಎಂಬ ಈ ಸಾಂಗ್​ನಲ್ಲಿ ಸಲ್ಮಾನ್​ ಖಾನ್​ (Salman Khan) ಅವರು ಪಕ್ಕಾ ಸೌತ್​ ಇಂಡಿಯನ್​ ಶೈಲಿಯ ಕಾಸ್ಟ್ಯೂಮ್​ ಧರಿಸಿ ಮಿಂಚಿದ್ದಾರೆ. ಪಂಚೆಯಲ್ಲಿ ಅವರು ಭರ್ಜರಿ ಡ್ಯಾನ್ಸ್​ ಮಾಡಿದ್ದಾರೆ. ಅವರಿಗೆ ಸಾಥ್​ ನೀಡಿರುವುದು ರಾಮ್​ ಚರಣ್​ (Ram Charan) ಹಾಗೂ ದಗ್ಗುಬಾಟಿ ವೆಂಕಟೇಶ್​. ಸದ್ಯ ಸಿನಿಪ್ರಿಯರ ವಲಯದಲ್ಲಿ ಈ ಹಾಡು ಸಿಕ್ಕಾಪಟ್ಟೆ ವೈರಲ್​ ಆಗಿದೆ. ಈ ಸ್ಟಾರ್​ ನಟರ ಜೊತೆ ನಟಿ ಪೂಜಾ ಹೆಗ್ಡೆ ಕೂಡ ಸಖತ್​ ಆಗಿ ಹೆಜ್ಜೆ ಹಾಕಿದ್ದಾರೆ.

ಸಲ್ಮಾನ್​ ಖಾನ್​ ಮತ್ತು ಪೂಜಾ ಹೆಗ್ಡೆ ನಟಿಸಿರುವ ‘ಕಿಸಿ ಕಾ ಭಾಯ್​ ಕಿಸಿ ಕಿ ಜಾನ್​’ ಸಿನಿಮಾದ ಮೊದಲ ಹಾಡು ಕೆಲವು ಕಾರಣದಿಂದ ಟ್ರೋಲ್​ ಆಗಿತ್ತು. ಆದರೆ ಈಗ ‘ಯೆಂಟಮ್ಮಾ..’ ಸಾಂಗ್​ ಧೂಳೆಬ್ಬಿಸುತ್ತಿದೆ. ಈ ಹಾಡಿನಲ್ಲಿ ಸಲ್ಮಾನ್​ ಖಾನ್​, ರಾಮ್​ ಚರಣ್​, ದಗ್ಗುಬಾಟಿ ವೆಂಕಟೇಶ್​ ಅವರು ಪಂಚೆ ಎತ್ತಿಕಟ್ಟಿ ಕುಣಿದಿದ್ದಾರೆ. ಪಾಯಲ್​ ದೇವ್​ ಸಂಗೀತ ನಿರ್ದೇಶನ ಮಾಡಿರುವ ಈ ಹಾಡಿನಲ್ಲಿ ಹಿಂದಿ ಮತ್ತು ತೆಲುಗು ಮಿಶ್ರಿತ ಸಾಹಿತ್ಯ ಇದೆ. ಇದು ಅಭಿಮಾನಿಗಳಿಗೆ ಹೊಸ ಕಿಕ್​ ನೀಡುತ್ತಿದೆ. ಅಂದಹಾಗೆ, ರಾಮ್​ ಚರಣ್​ ಅವರು ಈ ಚಿತ್ರದಲ್ಲಿ ನಟಿಸಿಲ್ಲ. ಅವರು ಈ ಹಾಡಿನಲ್ಲಿ ಗೆಸ್ಟ್​ ಅಪಿಯರೆನ್ಸ್​ ನೀಡಿದ್ದಾರೆ ಅಷ್ಟೇ.

ಇದನ್ನೂ ಓದಿ
Image
ಸೆಟ್​​ನಲ್ಲಿ ಸಲ್ಲುನ ಭೇಟಿ ಮಾಡೋಕೆ ಬಂದ ರಾಮ್​ ಚರಣ್​ಗೆ ಸಿಕ್ತು ಹಿಂದಿ ಸಿನಿಮಾ ಆಫರ್
Image
ತಂಗಿ ಗಂಡನ ಜೊತೆಗೆ ಸಲ್ಮಾನ್​ ಖಾನ್​ ಕಿರಿಕ್​; ಭಾವನ ಸಿನಿಮಾದಿಂದಲೇ ಹೊರನಡೆದ ಆಯುಷ್​ ಶರ್ಮಾ?
Image
ಬಹಿರಂಗ ವೇದಿಕೆಯಲ್ಲಿ ಸಲ್ಲು ಇದೆಂಥಾ ಕೆಲಸ; ಪೂಜಾ ಹೆಗ್ಡೆ ವಿಚಾರದಲ್ಲಿ ಸಿಕ್ಕಾಪಟ್ಟೆ ಮುಜುಗರ
Image
ಸಲ್ಮಾನ್​ ಖಾನ್ ಫಾರ್ಮ್​ಹೌಸ್​ ಬೆಲೆ 80 ಕೋಟಿ ರೂ.! ಸಲ್ಲು ಮೆಚ್ಚಿನ ಈ ಸ್ಥಳದಲ್ಲಿ ಏನೆಲ್ಲ ಇದೆ?

ಇದನ್ನೂ ಓದಿ: ಸಲ್ಮಾನ್​ ಖಾನ್​ಗೆ ಈಗ 57 ವರ್ಷ ವಯಸ್ಸು; ಡೇಟಿಂಗ್​ ಇತಿಹಾಸ ದೊಡ್ಡದಿದೆ; ಶಾದಿ ಬಗ್ಗೆ ಮಾತೇ ಇಲ್ಲ

ಏಪ್ರಿಲ್​ 21ರಂದು ಈದ್​ ಹಬ್ಬದ ಪ್ರಯುಕ್ತ ‘ಕಿಸಿ ಕಿ ಭಾಯ್​ ಕಿಸಿ ಕಿ ಜಾನ್​’ ಸಿನಿಮಾ ಬಿಡುಗಡೆ ಆಗಲಿದೆ. ಈ ಚಿತ್ರದಲ್ಲಿ ಹೀರೋ ಆಗಿ ನಟಿಸುವುದರ ಜೊತೆಗೆ ನಿರ್ಮಾಣವನ್ನೂ ಸಲ್ಮಾನ್​ ಖಾನ್​ ಅವರೇ ಮಾಡಿದ್ದಾರೆ. ಅವರ ಬ್ಯಾನರ್​ನಲ್ಲಿ ಸಖತ್​ ಅದ್ದೂರಿಯಾಗಿ ಈ ಚಿತ್ರ ಮೂಡಿಬಂದಿದೆ. ಫರ್ಹಾದ್​ ಸಮ್ಜಿ ನಿರ್ದೇಶನ ಮಾಡಿದ್ದಾರೆ.

ಬೇರೆ ನಟರ ಚಿತ್ರಗಳಲ್ಲಿ ಅತಿಥಿ ಪಾತ್ರ ಮಾಡುವ ಮೂಲಕ ಅಭಿಮಾನಿಗಳಿಗೆ ದೊಡ್ಡ ಪರದೆಯಲ್ಲಿ ದರ್ಶನ ನೀಡಿದ್ದು ಬಿಟ್ಟರೆ 2022ರಲ್ಲಿ ಸಲ್ಮಾನ್​ ಖಾನ್​ ಅವರು ಯಾವುದೇ ಸಿನಿಮಾ ರಿಲೀಸ್​ ಆಗಲಿಲ್ಲ. ಹಾಗಾಗಿ ಬಹುದಿನಗಳ ಬಳಿಕ ಅವರ ಸಿನಿಮಾ ತೆರೆ ಕಾಣುತ್ತಿರುವುದರಿಂದ ಅಭಿಮಾನಿಗಳ ಮನದಲ್ಲಿ ನಿರೀಕ್ಷೆಯ ಮಟ್ಟ ಹೆಚ್ಚಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 1:53 pm, Tue, 4 April 23

Follow Us
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ