AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆ ಮನೆ ಖರೀದಿಸುತ್ತೇನೆ: ಮನ್ನತ್ ಬಂಗಲೆ ನೋಡಿ ಪತ್ನಿಗೆ ಮೊದಲೇ ಮಾತು ಕೊಟ್ಟಿದ್ದ ಶಾರುಖ್

ಆರಂಭದಲ್ಲಿ ಆ ಮನೆಗೆ ಶಾರುಖ್ ಖಾನ್ ಮತ್ತು ಗೌರಿ ಖಾನ್ ‘ಜನ್ನತ್’ ಎಂದು ಹೆಸರು ಇಟ್ಟಿದ್ದರು. ಆದರೆ ನಂತರದಲ್ಲಿ ‘ಮನ್ನತ್’ ಎಂದು ಬದಲಾಯಿಸಿದರು. ಆ ಮನೆ ಕೊಂಡುಕೊಳ್ಳಬೇಕು ಎಂದು ಶಾರುಖ್ ಖಾನ್ ಅವರು 1997ರಲ್ಲೇ ಕನಸು ಕಂಡಿದ್ದರು. ಈಗ ಆ ಮನೆಯ ಬೆಲೆ ಅಂದಾಜು 200 ಕೋಟಿ ರೂಪಾಯಿ.

ಆ ಮನೆ ಖರೀದಿಸುತ್ತೇನೆ: ಮನ್ನತ್ ಬಂಗಲೆ ನೋಡಿ ಪತ್ನಿಗೆ ಮೊದಲೇ ಮಾತು ಕೊಟ್ಟಿದ್ದ ಶಾರುಖ್
Mannat, Gauri Khan, Shah Rukh Khan
ಮದನ್​ ಕುಮಾರ್​
|

Updated on: Apr 27, 2025 | 11:16 AM

Share

ನಟ ಶಾರುಖ್ ಖಾನ್ (Shah Rukh Khan) ಅವರು ಭಾರತೀಯ ಚಿತ್ರರಂಗದ ಸಕ್ಸಸ್​ಫುಲ್ ನಟ. ಆದರೆ ಆ ಯಶಸ್ಸು ರಾತ್ರೋ ರಾತ್ರಿ ಸಿಕ್ಕಿದ್ದಲ್ಲ. ಮಧ್ಯಮವರ್ಗದ ಕುಟುಂಬದಿಂದ ಬಂದ ಅವರು ಚಿತ್ರರಂಗದಲ್ಲಿ ಸಾಕಷ್ಟು ಕಷ್ಟಪಟ್ಟರು. ಯಶಸ್ಸಿನ ಒಂದೊಂದೇ ಮೆಟ್ಟಿಲುಗಳನ್ನು ಏರುತ್ತ, ನಂತರ ಅತಿ ಶ್ರೀಮಂತ ನಟರಲ್ಲಿ ಒಬ್ಬರಾಗಿ ಬೆಳೆದರು. ಮುಂಬೈನಲ್ಲಿ ಇರುವ ಅವರ ‘ಮನ್ನತ್’ (Mannat) ಬಂಗಲೆ ಬೆಲೆ ಬರೋಬ್ಬರಿ 200 ಕೋಟಿ ರೂಪಾಯಿ! ಆ ಬಂಗಲೆಯನ್ನು ಖರೀದಿಸುವುದಾಗಿ 1997ರಲ್ಲಿ ಪತ್ನಿ ಗೌರಿ ಖಾನ್​ (Gauri Khan) ಅವರಿಗೆ ಶಾರುಖ್ ಮಾತು ಕೊಟ್ಟಿದ್ದರು. ಆ ಮಾತನ್ನು ಅವರು ಉಳಿಸಿಕೊಂಡರು. ಆ ಬಗ್ಗೆ ನಿರ್ದೇಶಕ ಅಜೀಜ್ ಮಿಶ್ರಾ ಮಾತನಾಡಿದ್ದಾರೆ.

ಇತ್ತೀಚೆಗೆ ಮಾಧ್ಯಮವೊಂದಕ್ಕೆ ನೀಡಿದ ಸಂದರ್ಶನದಲ್ಲಿ ನಿರ್ದೇಶಕ ಅಜೀಜ್ ಮಿಶ್ರಾ ಅವರು ಶಾರುಖ್ ಖಾನ್ ಅವರ ‘ಮನ್ನತ್’ ಬಂಗಲೆ ಹಿಂದಿರುವ ನೆನಪುಗಳನ್ನು ಹಂಚಿಕೊಂಡಿದ್ದಾರೆ. ಶಾರುಖ್ ಖಾನ್ ನಟನೆಯ ‘ಯೆಸ್ ಬಾಸ್’ ಸಿನಿಮಾಗೆ ಅಜೀಜ್ ಮಿಶ್ರಾ ಅವರು ನಿರ್ದೇಶನ ಮಾಡಿದ್ದರು. ಆಗ ನಡೆದ ಘಟನೆಯನ್ನು ಅವರು ಈಗ ಮೆಲುಕು ಹಾಕಿದ್ದಾರೆ.

1997ರಲ್ಲಿ ಮನ್ನತ್ ಬಂಗಲೆ ಎದುರಿನಲ್ಲೇ ‘ಯೆಸ್ ಬಾಸ್’ ಸಿನಿಮಾದ ಶೂಟಿಂಗ್ ನಡೆಯುತ್ತಿತ್ತು. ಆ ಮನೆಯನ್ನು ನೋಡಿ ಶಾರುಖ್ ಖಾನ್ ಅವರಿಗೆ ಆಸೆ ಆಯಿತು. ಮುಂದೊಂದು ದಿನ ಆ ಬಂಗಲೆಯನ್ನು ಕೊಂಡುಕೊಳ್ಳಬೇಕು ಎಂದು ಶಾರುಖ್ ಖಾನ್ ಕನಸು ಕಂಡರು. ಆ ಬಗ್ಗೆ ಪತ್ನಿ ಗೌರಿ ಖಾನ್​ಗೆ ಅವರು ಪ್ರಾಮಿಸ್ ಮಾಡಿದ್ದರು. ಆ ಕುರಿತು ಅಜೀಜ್ ಮಿಶ್ರಾ ಮಾತನಾಡಿದ್ದಾರೆ.

ಇದನ್ನೂ ಓದಿ
Image
ಹೊಸ ಮನೆಗೆ ವಾಸ್ತವ್ಯ ಬದಲಿಸಿದ ಶಾರುಖ್ ಖಾನ್, ಕೊಡುತ್ತಿರುವ ಬಾಡಿಗೆ ಎಷ್ಟು?
Image
‘ಕಾಶ್ಮೀರಕ್ಕೆ ಯಾವಾಗಲೂ ಹೋಗೋಲ್ಲ’; ಗಟ್ಟಿ ನಿರ್ಧಾರ ಮಾಡಿದ್ದ ಶಾರುಖ್
Image
ಐಶಾರಾಮಿ ಮನೆ ‘ಮನ್ನತ್’ ಬಿಟ್ಟು ಬಾಡಿಗೆ ಮನೆಗೆ ಹೋಗುತ್ತಿರುವುದೇಕೆ ಶಾರುಖ್
Image
ಸಾಫ್ಟ್ ಡ್ರಿಂಕ್ಸ್ ಜಾಹೀರಾತು ಮಾಡಬೇಡಿ ಎಂದವರಿಗೆ ಶಾರುಖ್ ಉತ್ತರ ಏನು?

‘ಮನ್ನತ್​ಗೆ ಹತ್ತಿರದಲ್ಲಿ ಇದ್ದ ನನ್ನ ಮನೆಯಲ್ಲಿ ಶಾರುಖ್ ಖಾನ್ ಉಳಿದುಕೊಂಡಿದ್ದರು. ಆಗ ಶಾರುಖ್ ಮತ್ತು ಗೌರಿಗೆ ಇನ್ನೂ ಚಿಕ್ಕ ವಯಸ್ಸು. ಅವರಿಗೆ ಸಾಕಷ್ಟು ಕನಸುಗಳು ಇದ್ದವು. ಆಗ ಅವರು ಅಲ್ಲಿ ವಾಕಿಂಗ್ ಹೋಗುತ್ತಿದ್ದರು. ಮುಂದೊಂದು ದಿನ ಆ ಮನೆ ಕೊಂಡುಕೊಳ್ಳುತ್ತೇನೆ ಎಂದು ಗೌರಿಗೆ ಶಾರುಖ್ ಖಾನ್ ಮಾತು ಕೊಟ್ಟರು. ಬದುಕು ಅವರ ಪರವಾಗಿತ್ತು. ಆ ಕನಸನ್ನು ಅವರು ನನಸು ಮಾಡಿಕೊಂಡರು’ ಎಂದು ಅಜೀಜ್ ಮಿಶ್ರಾ ಹೇಳಿದ್ದಾರೆ.

ಇದನ್ನೂ ಓದಿ: ಪಹಲ್ಗಾಮ್‌ ಹತ್ಯಾಕಾಂಡ ಖಂಡಿಸಿದ ಶಾರುಖ್ ಖಾನ್; ಉಗ್ರರ ದಾಳಿಗೆ ಬಾಲಿವುಡ್ ಪ್ರತಿಕ್ರಿಯೆ

ಹಾಗಂತ ಮನ್ನತ್ ಬಂಗಲೆಯನ್ನು ಕೊಂಡುಕೊಳ್ಳುವುದು ಅಷ್ಟು ಸುಲಭ ಆಗಿರಲಿಲ್ಲ. ಆಗ ಸಾಕಷ್ಟು ಅಡೆತಡೆಗಳು ಉಂಟಾಗಿದ್ದವು. ಕಾನೂನಿನ ತೊಡಕುಗಳು ಕೂಡ ಇದ್ದವು. ಅಕ್ಕ-ಪಕ್ಕದ ಜಾಗದವರ ಸಮಸ್ಯೆಗಳ ಸಹ ಎದುರಾಗಿದ್ದವು. ಅವುಗಳೆಲ್ಲವನ್ನೂ ಎದುರಿಸಿ ಶಾರುಖ್ ಖಾನ್ ಅವರು ಮನ್ನತ್ ಬಂಗಲೆ ಕೊಂಡುಕೊಂಡರು. ಮೊದಲಿಗೆ ಆ ಮನೆಯ ಹೆಸರು ‘ಜನ್ನತ್’ ಎಂದು ಹೆಸರು ಇಡಲಾಗಿತ್ತು. ಬಳಿಕ 2005ರಲ್ಲಿ ‘ಮನ್ನತ್’ ಎಂದು ಹೆಸರು ಬದಲಾಯಿಸಿತು.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ರಜನಿ-ಕಮಲ್ ಸಿನಿಮಾದಲ್ಲಿ ನಟಿಸಲು ತ್ರಿಶಾಗೆ 12 ಕೋಟಿ ರೂಪಾಯಿ ಆಫರ್?
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ