AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Raashii Khanna: ‘ಯೋಧ’ ಸಿನಿಮಾ ಸೋಲಿಗೆ ಒಟಿಟಿ ಕಾರಣ ಎಂದ ರಾಶಿ ಖನ್ನಾ

ಒಬ್ಬರಿಗೆ ಸಿನಿಮಾ ಇಷ್ಟ ಆದರೆ, ಇನ್ನೂ ಕೆಲವರಿಗೆ ಸಿನಿಮಾ ಇಷ್ಟ ಆಗುವುದಿಲ್ಲ. ಇದು ಅವರವರಿಗೆ ಬಿಟ್ಟ ಆಯ್ಕೆ. ಅದೇ ರೀತಿ ‘ಯೋಧ’ ಚಿತ್ರವನ್ನು ಒಂದಷ್ಟು ಮಂದಿ ಇಷ್ಟಪಟ್ಟರೆ, ಇನ್ನೂ ಕೆಲವರು ಇಷ್ಟಪಟ್ಟಿಲ್ಲ. ಸಿನಿಮಾ ಮೊದಲ ದಿನ ಗಳಿಕೆ ಮಾಡಿದ್ದು ಕೇವಲ 4 ಕೋಟಿ ರೂಪಾಯಿ.

Raashii Khanna: ‘ಯೋಧ’ ಸಿನಿಮಾ ಸೋಲಿಗೆ ಒಟಿಟಿ ಕಾರಣ ಎಂದ ರಾಶಿ ಖನ್ನಾ
ಸಿದ್ದಾರ್ಥ್-ರಾಶಿ
 ಶ್ರೀಲಕ್ಷ್ಮೀ ಎಚ್
| Edited By: |

Updated on: Apr 03, 2024 | 9:26 AM

Share

ಇತ್ತೀಚೆಗೆ ರಿಲೀಸ್ ಆದ ಸಿದ್ದಾರ್ಥ್ ಮಲ್ಹೋತ್ರ (Sidharth Malhotra) ಹಾಗೂ ರಾಶಿ ಖನ್ನಾ ನಟನೆಯ ‘ಯೋಧ’ ಸಿನಿಮಾ ಸಾಧಾರಣ ಹಿಟ್ ಎನಿಸಿಕೊಂಡಿದೆ. ಈ ಚಿತ್ರ ಅಂದುಕೊಂಡ ರೀತಿಯಲ್ಲಿ ಕಮಾಯಿ ಮಾಡಿಲ್ಲ. ಭರ್ಜರಿ ಆ್ಯಕ್ಷನ್, ದೊಡ್ಡ ಬಜೆಟ್ ಇದ್ದ ಹೊರತಾಗಿಯೂ ಸಿನಿಮಾ ಗಳಿಕೆ ಮಾಡಿದ್ದು ಕೇವಲ 30 ಕೋಟಿ ರೂಪಾಯಿ. ಇದು ಚಿತ್ರತಂಡದ ಬೇಸರಕ್ಕೆ ಕಾಣ ಆಗಿದೆ. ಈ ಸಿನಿಮಾದ ಗಳಿಕೆ ಕಡಿಮೆ ಆಗಿರುವ ಬಗ್ಗೆ ರಾಶಿ ಖನ್ನಾ ಮಾತನಾಡಿದ್ದಾರೆ. ಥಿಯೇಟರ್​ಗೆ ಜನರನ್ನು ಕರೆತರೋದು ಎಷ್ಟು ಚಾಲೆಂಜಿಂಗ್ ಎಂಬುದನ್ನು ಅವರು ಮಾತನಾಡಿದ್ದಾರೆ.

ಒಬ್ಬರಿಗೆ ಸಿನಿಮಾ ಇಷ್ಟ ಆದರೆ, ಇನ್ನೂ ಕೆಲವರಿಗೆ ಸಿನಿಮಾ ಇಷ್ಟ ಆಗುವುದಿಲ್ಲ. ಇದು ಅವರವರಿಗೆ ಬಿಟ್ಟ ಆಯ್ಕೆ. ಅದೇ ರೀತಿ ‘ಯೋಧ’ ಚಿತ್ರವನ್ನು ಒಂದಷ್ಟು ಮಂದಿ ಇಷ್ಟಪಟ್ಟರೆ, ಇನ್ನೂ ಕೆಲವರು ಇಷ್ಟಪಟ್ಟಿಲ್ಲ. ಸಿನಿಮಾ ಮೊದಲ ದಿನ ಗಳಿಕೆ ಮಾಡಿದ್ದು ಕೇವಲ 4 ಕೋಟಿ ರೂಪಾಯಿ. ಸಿನಿಮಾದ ಒಟ್ಟಾರೆ ಗಳಿಕೆಯೂ ಸಾಕಷ್ಟು ಕಡಿಮೆ ಆಗಿದೆ. ಒಟಿಟಿ ವ್ಯಾಪ್ತಿ ಹೆಚ್ಚಿರುವುದೂ ಸಿನಿಮಾ ಸೋಲಿಗೆ ಕಾರಣ ಎಂಬುದು ರಾಶಿ ಅಭಿಪ್ರಾಯ.

‘ಕೆಲವರಿಗೆ ಸಿನಿಮಾ ಇಷ್ಟ ಆಗಬಹುದು, ಇನ್ನೂ ಕೆಲವರಿಗೆ ಸಿನಿಮಾ ಇಷ್ಟ ಆಗದೇ ಇರಬಹುದು. ಎಲ್ಲಾ ರೀತಿಯ ಜನರೂ ಇರುತ್ತಾರೆ. ಸಿನಿಮಾ ರಿಲೀಸ್ ಆದಾಗ ಅದನ್ನು ಜನರು ಇಷ್ಟಪಡಬೇಕು ಎಂದು ನಾವು ಬಯಸುತ್ತೇವೆ. ಅವರನ್ನು ಥಿಯೇಟರ್​ಗೆ ಕರೆದುಕೊಂಡು ಬರೋದು ದೊಡ್ಡ ಚಾಲೆಂಜ್. ಎಲ್ಲಾ ಸಿನಿಮಾಗಳು ಈಗ ಒಟಿಟಿಯಲ್ಲಿ ರಿಲೀಸ್ ಆಗುತ್ತವೆ. ಇದನ್ನು ಸಿನಿಮಾ ನಿರ್ಮಾತೃರರು ಎದುರಿಸುತ್ತಿದ್ದಾರೆ’ ಎಂದಿದ್ದಾರೆ ರಾಶಿ ಖನ್ನಾ,

‘ನಾನು ಕೆಲವೊಮ್ಮೆ ಸಿನಿಮಾ ಒಟಿಟಿಯಲ್ಲಿ ಬರುತ್ತದೆ ಎಂದು ಥಿಯೇಟರ್​ಗೆ ಹೋಗದೇ ಇದ್ದಿದ್ದೂ ಇದೆ. ನಾನು ಬೇರೆ ಬೇರೆ ಕೆಲಸದಲ್ಲಿ ಬ್ಯುಸಿ ಇರುತ್ತೇನೆ. ಇದು ಕೂಡ ಒಂದು ಕಾರಣ. ಜನರು ಕೂಡ ಇತ್ತೀಚೆಗೆ ಹೆಚ್ಚು ಬ್ಯುಸಿ ಆಗಿದ್ದಾರೆ. ಅವರನ್ನು ಥಿಯೇಟರ್​ಗೆ ಕರೆತರುವುದೇ ಚಾಲೆಂಜ್. ಯೋಧ ಕೆಟ್ಟ ಸಿನಿಮಾ ಅಲ್ಲ. ಎಲ್ಲಾ ಸಿನಿಮಾಗಳಿಗೂ ಅದರದ್ದೇ ಆದ ನಿರ್ದಿಷ್ಟ ಸ್ಥಾನ ಇರುತ್ತದೆ. ಇದನ್ನು ಅರಿತು ಮುಂದಿನ ಸಿನಿಮಾ ಮಾಡಬೇಕು’ ಎಂದಿದ್ದಾರೆ ಅವರು.

ಸಿದ್ದಾರ್ಥ್ ಮಲ್ಹೋತ್ರಾಗೆ ದೊಡ್ಡ ಮಾರುಕಟ್ಟೆ ಇದೆ. ಆದಾಗ್ಯೂ ಈ ಚಿತ್ರ ಬಾಕ್ಸ್ ಆಫೀಸ್​ನಲ್ಲಿ ಗಳಿಕೆ ಮಾಡಿದ್ದು ಕೇವಲ 30 ಕೋಟಿ ರೂಪಾಯಿ. ಬಿಗ್ ಬಜೆಟ್​ನಲ್ಲಿ ಈ ಸಿನಿಮಾ ಸಿದ್ಧಗೊಂಡಿತ್ತು. ಈ ಚಿತ್ರದಿಂದ ಕರಣ್ ಜೋಹರ್ ಒಡೆತನದ ಧರ್ಮ ಪ್ರೊಡಕ್ಷನ್ಸ್ ನಷ್ಟ ಅನುಭವಿಸಿದೆ ಎನ್ನಲಾಗುತ್ತಿದೆ.

ಇದನ್ನೂ ಓದಿ: ‘ಒಂದೊಳ್ಳೆಯ ಹೈಜಾಕ್ ಸಿನಿಮಾ’; ‘ಯೋಧ’ ಸಿನಿಮಾ ನೋಡಿ ವಿಮರ್ಶೆ ತಿಳಿಸಿದ ನೆಟ್ಟಿಗರು

ರಾಶಿ ಖನ್ನಾ ಅವರು ದಕ್ಷಿಣ ಹಾಗೂ ಬಾಲಿವುಡ್ ಎರಡರಲ್ಲೂ ಬ್ಯುಸಿ ಇದ್ದಾರೆ. ಅವರು ಸಿನಿಮಾ ಜೊತೆ ವೆಬ್ ಸೀರಿಸ್​ಗಳಲ್ಲೂ ನಟಿಸಿದ್ದಾರೆ. ಈ ಮೊದಲು ಹಿಂದಿಯ ‘ರುದ್ರ’ ಹಾಗೂ ‘ಫರ್ಜಿ’ ಸೀರಿಸ್​ನಲ್ಲಿ ನಟಿಸಿದ್ದರು. ಅವರು ಚಿತ್ರರಂಗಕ್ಕೆ ಬಂದು 10 ವರ್ಷಗಳ ಮೇಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ಡಿಕೆಶಿ ಕರೆದೊಯ್ಯಲು ಬಂದ ಹೊಸ ಬೆಂಜ್ ಕಾರು ಹೇಗಿದೆ ನೋಡಿ
ಡಿಕೆಶಿ ಕರೆದೊಯ್ಯಲು ಬಂದ ಹೊಸ ಬೆಂಜ್ ಕಾರು ಹೇಗಿದೆ ನೋಡಿ
ವೈಭವ್ ಸಿಕ್ಸರ್​ಗಳ ಸುನಾಮಿಗೆ ಗೇಲ್ ದಾಖಲೆ ಧ್ವಂಸ
ವೈಭವ್ ಸಿಕ್ಸರ್​ಗಳ ಸುನಾಮಿಗೆ ಗೇಲ್ ದಾಖಲೆ ಧ್ವಂಸ
ಸಿದ್ದರಾಮಯ್ಯ ಮನೆ ಮುಂದೆ ಭುಗಿಲೆದ್ದ ಆಕ್ರೋಶ: ಅಭಿಮಾನಿಗಳು ಪೊಲಿಸ್ ವಶಕ್ಕೆ
ಸಿದ್ದರಾಮಯ್ಯ ಮನೆ ಮುಂದೆ ಭುಗಿಲೆದ್ದ ಆಕ್ರೋಶ: ಅಭಿಮಾನಿಗಳು ಪೊಲಿಸ್ ವಶಕ್ಕೆ
ಹಂಪಿಯಿಂದ ಕೋಲಾರಕ್ಕೆ ಶಿಫ್ಟ್: ಸ್ಥಳ ಬದಲಾಗಿದ್ದಕ್ಕೆ ವಿಚಲಿತಗೊಂಡ ಆನೆ
ಹಂಪಿಯಿಂದ ಕೋಲಾರಕ್ಕೆ ಶಿಫ್ಟ್: ಸ್ಥಳ ಬದಲಾಗಿದ್ದಕ್ಕೆ ವಿಚಲಿತಗೊಂಡ ಆನೆ
ಬಂಗಾಳದಲ್ಲಿ ಟಿಎಂಸಿ ಕಾರ್ಯಕರ್ತರ ತಲೆ ಬೋಳಿಸಿ, ಅರೆಬೆತ್ತಲೆ ಮೆರವಣಿಗೆ!
ಬಂಗಾಳದಲ್ಲಿ ಟಿಎಂಸಿ ಕಾರ್ಯಕರ್ತರ ತಲೆ ಬೋಳಿಸಿ, ಅರೆಬೆತ್ತಲೆ ಮೆರವಣಿಗೆ!
ಸಿಎಂ ರಾಜೀನಾಮೆ ಸುದ್ದಿ ನಡುವೆ ಕುತೂಹಲ ಮೂಡಿಸಿದ ಮುಸ್ಲಿಂ ನಾಯಕರ ಸಭೆ
ಸಿಎಂ ರಾಜೀನಾಮೆ ಸುದ್ದಿ ನಡುವೆ ಕುತೂಹಲ ಮೂಡಿಸಿದ ಮುಸ್ಲಿಂ ನಾಯಕರ ಸಭೆ
ನಾಳೆ CM ರಾಜೀನಾಮೆ ಕೊಡ್ತೀನಿ ಎಂದಿದ್ದಾರೆ : ಬಹಿರಂಗ ಪಡಿಸಿದ ಕೈ ಶಾಸಕ
ನಾಳೆ CM ರಾಜೀನಾಮೆ ಕೊಡ್ತೀನಿ ಎಂದಿದ್ದಾರೆ : ಬಹಿರಂಗ ಪಡಿಸಿದ ಕೈ ಶಾಸಕ
ಕೇರಳದಲ್ಲಿ ಪಿಣರಾಯಿ ವಿಜಯನ್ ಬೆಂಬಲಿಗರಿಂದ ಇಡಿ ತಂಡದ ಮೇಲೆ ದಾಳಿ
ಕೇರಳದಲ್ಲಿ ಪಿಣರಾಯಿ ವಿಜಯನ್ ಬೆಂಬಲಿಗರಿಂದ ಇಡಿ ತಂಡದ ಮೇಲೆ ದಾಳಿ
ನಿಯಂತ್ರಣ ತಪ್ಪಿ ಚರಂಡಿಗೆ ಡಿಕ್ಕಿ ಹೊಡೆದ ಕಾರು
ನಿಯಂತ್ರಣ ತಪ್ಪಿ ಚರಂಡಿಗೆ ಡಿಕ್ಕಿ ಹೊಡೆದ ಕಾರು
ಪದತ್ಯಾಗಕ್ಕೂ ಮುನ್ನವೇ ತಮ್ಮ ಕನಸು ನನಸು ಮಾಡಲು ಮುಂದಾದ ಸಿದ್ದರಾಮಯ್ಯ
ಪದತ್ಯಾಗಕ್ಕೂ ಮುನ್ನವೇ ತಮ್ಮ ಕನಸು ನನಸು ಮಾಡಲು ಮುಂದಾದ ಸಿದ್ದರಾಮಯ್ಯ