AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yogi Adityanath: ಕಂಗನಾ ನಟನೆಯ ‘ತೇಜಸ್​’ ಸಿನಿಮಾ ನೋಡಿ ಕಣ್ಣೀರು ಸುರಿಸಿದ ಯೋಗಿ ಆದಿತ್ಯನಾಥ್​

Kangana Ranaut: ಇತ್ತೀಚೆಗೆ ಬಿಡುಗಡೆ ಆದ ಕಂಗನಾ ರಣಾವತ್​ ನಟನೆಯ ‘ತೇಜಸ್​’ ಸಿನಿಮಾ ಒಳ್ಳೆಯ ಓಪನಿಂಗ್​ ಪಡೆದುಕೊಂಡಿಲ್ಲ. ಈಗ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರಿಗೆ ಈ ಸಿನಿಮಾ ತೋರಿಸಲಾಗಿದೆ. ಸಿನಿಮಾ ಮುಗಿದ ಬಳಿಕ ಕಂಗನಾಗೆ ಯೋಗಿ ಅವರು ಉಡುಗೊರೆ ನೀಡಿದ್ದಾರೆ. ಆ ಫೋಟೋಗಳು ವೈರಲ್ ಆಗಿವೆ.

Yogi Adityanath: ಕಂಗನಾ ನಟನೆಯ ‘ತೇಜಸ್​’ ಸಿನಿಮಾ ನೋಡಿ ಕಣ್ಣೀರು ಸುರಿಸಿದ ಯೋಗಿ ಆದಿತ್ಯನಾಥ್​
ತೇಜಸ್​ ಸಿನಿಮಾ ನೋಡಿದ ಯೋಗಿ ಆದಿತ್ಯನಾಥ್​
ಮದನ್​ ಕುಮಾರ್​
|

Updated on: Oct 31, 2023 | 6:37 PM

Share

ಬಾಲಿವುಡ್​ ನಟಿ ಕಂಗನಾ ರಣಾವತ್​ (Kangana Ranaut) ಅವರು ತಮ್ಮ ಹೊಸ ಸಿನಿಮಾ ‘ತೇಜಸ್​’ (Tejas Movie) ಪ್ರಚಾರಕ್ಕಾಗಿ ಹಲವು ರೀತಿಯಲ್ಲಿ ಸರ್ಕಸ್​ ಮಾಡುತ್ತಿದ್ದಾರೆ. ನಿರೀಕ್ಷಿತ ಪ್ರಮಾಣದಲ್ಲಿ ಈ ಸಿನಿಮಾ ಕಲೆಕ್ಷನ್​ ಮಾಡಿಲ್ಲ. ಈಗ ಅವರು ರಾಜಕಾರಣಿಗಳಿಗೆ ಸಿನಿಮಾ ತೋರಿಸುತ್ತಿದ್ದಾರೆ. ಮಂಗಳವಾರ (ಅ.31) ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath)​ ಅವರಿಗೆ ‘ತೇಜಸ್​’ ಸಿನಿಮಾ ತೋರಿಸಲಾಗಿದೆ. ಈ ಸಂದರ್ಭದ ಫೋಟೋಗಳನ್ನು ಕಂಗನಾ ರಣಾವತ್​ ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ತಮ್ಮ ಸಿನಿಮಾಗೆ ಬೆಂಬಲ ಸೂಚಿಸಿದ ಯೋಗಿಗೆ ಕಂಗನಾ ಧನ್ಯವಾದ ತಿಳಿಸಿದ್ದಾರೆ. ಈ ಸಿನಿಮಾ ನೋಡುವಾಗ ಯೋಗಿ ಭಾವುಕರಾಗಿ ಕಣ್ಣೀರು ಹಾಕಿದರು ಎಂದು ಕೂಡ ಕಂಗನಾ ಬರೆದುಕೊಂಡಿದ್ದಾರೆ.

‘ಇಂದು ಯೋಗಿ ಆದಿತ್ಯನಾಥ್​ ಅವರಿಗೆ ಸೈನಿಕರ ಜೀವನಾಧಾರಿತ ‘ತೇಜಸ್​’ ಸಿನಿಮಾ ತೋರಿಸಲಾಯಿತು. ತೇಜಸ್​ ಸಿನಿಮಾದ ಕೊನೇ ಸಂಭಾಷಣೆಗಳನ್ನು ಕೇಳಿಸಿಕೊಂಡು ಯೋಗಿ ಅವರಿಗೆ ಕಣ್ಣೀರು ತಡೆಯಲು ಸಾಧ್ಯವಾಗಲಿಲ್ಲ’ ಎಂದು ಕಂಗನಾ ಅವರು ಪೋಸ್ಟ್ ಮಾಡಿದ್ದಾರೆ. ಅವರು ಹಂಚಿಕೊಂಡಿರುವ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿವೆ. ಈ ಮೊದಲು ಕೂಡ ಕಂಗನಾ ರಣಾವತ್ ಅವರು ಯೋಗಿ ಆದಿತ್ಯನಾಥ್​ ಅವರನ್ನು ಭೇಟಿ ಆಗಿದ್ದರು. ಆದರೆ ಈ ಬಾರಿಯ ಭೇಟಿ ಅವರಿಗೆ ತುಂಬಾ ಸ್ಪೆಷಲ್​ ಎನಿಸಿದೆ.

‘ಒಬ್ಬ ಸೈನಿಕನಿಗೆ ಏನು ಬೇಕು? ಸೈನಿಕರ ಧೈರ್ಯ, ತ್ಯಾಗ, ಬಲಿದಾನದ ಕಥೆ ಇರುವ ಸಿನಿಮಾ ನೋಡಿ ಯೋಗಿ ಅವರು ಎಮೋಷನಲ್​ ಆದರು. ನಿಮ್ಮ ಹೊಗಳಿಕೆ ಮತ್ತು ಆಶೀರ್ವಾದಕ್ಕೆ ಧನ್ಯವಾಗಳು’ ಎಂದು ಕಂಗನಾ ರಣಾವತ್​ ಅವರು ಬರೆದುಕೊಂಡಿದ್ದಾರೆ. ಈ ವೇಳೆ ಉತ್ತರಖಂಡ್​ ಮುಖ್ಯಮಂತ್ರಿ ಪುಷ್ಕರ್​ ಸಿಂಗ್​ ಕೂಡ ಇದ್ದರು. ಸಿನಿಮಾ ಮುಗಿದ ಬಳಿಕ ಕಂಗನಾಗೆ ಯೋಗಿ ಅವರು ಉಡುಗೊರೆ ನೀಡಿದ್ದಾರೆ. ಮುಖ್ಯಮಂತ್ರಿಗಳಿಬ್ಬರು ಸಿನಿಮಾ ನೋಡಿ ಹೊಗಳಿದ್ದಾರೆ ಎಂದು ಕಂಗನಾ ಅವರು ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: ಸತತ ಸೋಲು ಕಂಡರೂ ಕಂಗನಾ ರಣಾವತ್​ಗೆ ಕಡಿಮೆ ಆಗಿಲ್ಲ ಸಿನಿಮಾ ಆಫರ್​​

ಅಕ್ಟೋಬರ್​ 27ರಂದು ‘ತೇಜಸ್​’ ಸಿನಿಮಾ ರಿಲೀಸ್​ ಆಯಿತು. ಈ ಚಿತ್ರದಲ್ಲಿ ಕಂಗನಾ ರಣಾವತ್​ ಅವರು ವಾಯುಸೇನೆಯ ಪೈಲೆಟ್​ ಪಾತ್ರವನ್ನು ಮಾಡಿದ್ದಾರೆ. ಪ್ರೇಕ್ಷಕರು ಈ ಚಿತ್ರದ ಕಡೆಗೆ ಅಷ್ಟೇನೂ ಆಸಕ್ತಿ ತೋರಿಸಿಲ್ಲ. ಬಹಳ ಕಳಪೆ ಓಪನಿಂಗ್ ಪಡೆದುಕೊಂಡ ಈ ಚಿತ್ರ ಬಾಕ್ಸ್​ ಆಫೀಸ್​ನಲ್ಲಿ 4 ದಿನಕ್ಕೆ 4 ಕೋಟಿ ರೂಪಾಯಿ ದಾಟಲೂ ಸಾಧ್ಯವಾಗದೇ ಕಷ್ಟಪಡುತ್ತಿದೆ. ಈಗ ಕಂಗನಾ ರಣಾವತ್​ಗೆ ಯೋಗಿ ಆದಿತ್ಯನಾಥ್​ ಅವರಿಂದ ಮೆಚ್ಚುಗೆ ಸಿಕ್ಕಿರುವುದರಿಂದ ಮುಂದಿನ ದಿನಗಳಲ್ಲಿ ಕಲೆಕ್ಷನ್​ ಹೆಚ್ಚಾಗುತ್ತಾ ಎಂಬುದನ್ನು ಕಾದುನೋಡಬೇಕು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
ಬ್ಲಿಂಕಿಟ್ ಡೆಲಿವರಿ ಬಾಯ್ ಆದ ಪರಿಣಿತಿ ಚೋಪ್ರಾ ಗಂಡ ರಾಘವ್ ಚಡ್ಡಾ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
5NB,6,4,6,6,4.. ಗ್ರೇಸ್ ಹ್ಯಾರಿಸ್ ಸಿಡಿಲಬ್ಬರದ ಅರ್ಧಶತಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ