AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Yogi Adityanath: ಕಂಗನಾ ನಟನೆಯ ‘ತೇಜಸ್​’ ಸಿನಿಮಾ ನೋಡಿ ಕಣ್ಣೀರು ಸುರಿಸಿದ ಯೋಗಿ ಆದಿತ್ಯನಾಥ್​

Kangana Ranaut: ಇತ್ತೀಚೆಗೆ ಬಿಡುಗಡೆ ಆದ ಕಂಗನಾ ರಣಾವತ್​ ನಟನೆಯ ‘ತೇಜಸ್​’ ಸಿನಿಮಾ ಒಳ್ಳೆಯ ಓಪನಿಂಗ್​ ಪಡೆದುಕೊಂಡಿಲ್ಲ. ಈಗ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರಿಗೆ ಈ ಸಿನಿಮಾ ತೋರಿಸಲಾಗಿದೆ. ಸಿನಿಮಾ ಮುಗಿದ ಬಳಿಕ ಕಂಗನಾಗೆ ಯೋಗಿ ಅವರು ಉಡುಗೊರೆ ನೀಡಿದ್ದಾರೆ. ಆ ಫೋಟೋಗಳು ವೈರಲ್ ಆಗಿವೆ.

Yogi Adityanath: ಕಂಗನಾ ನಟನೆಯ ‘ತೇಜಸ್​’ ಸಿನಿಮಾ ನೋಡಿ ಕಣ್ಣೀರು ಸುರಿಸಿದ ಯೋಗಿ ಆದಿತ್ಯನಾಥ್​
ತೇಜಸ್​ ಸಿನಿಮಾ ನೋಡಿದ ಯೋಗಿ ಆದಿತ್ಯನಾಥ್​
ಮದನ್​ ಕುಮಾರ್​
|

Updated on: Oct 31, 2023 | 6:37 PM

Share

ಬಾಲಿವುಡ್​ ನಟಿ ಕಂಗನಾ ರಣಾವತ್​ (Kangana Ranaut) ಅವರು ತಮ್ಮ ಹೊಸ ಸಿನಿಮಾ ‘ತೇಜಸ್​’ (Tejas Movie) ಪ್ರಚಾರಕ್ಕಾಗಿ ಹಲವು ರೀತಿಯಲ್ಲಿ ಸರ್ಕಸ್​ ಮಾಡುತ್ತಿದ್ದಾರೆ. ನಿರೀಕ್ಷಿತ ಪ್ರಮಾಣದಲ್ಲಿ ಈ ಸಿನಿಮಾ ಕಲೆಕ್ಷನ್​ ಮಾಡಿಲ್ಲ. ಈಗ ಅವರು ರಾಜಕಾರಣಿಗಳಿಗೆ ಸಿನಿಮಾ ತೋರಿಸುತ್ತಿದ್ದಾರೆ. ಮಂಗಳವಾರ (ಅ.31) ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ (Yogi Adityanath)​ ಅವರಿಗೆ ‘ತೇಜಸ್​’ ಸಿನಿಮಾ ತೋರಿಸಲಾಗಿದೆ. ಈ ಸಂದರ್ಭದ ಫೋಟೋಗಳನ್ನು ಕಂಗನಾ ರಣಾವತ್​ ಅವರು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ತಮ್ಮ ಸಿನಿಮಾಗೆ ಬೆಂಬಲ ಸೂಚಿಸಿದ ಯೋಗಿಗೆ ಕಂಗನಾ ಧನ್ಯವಾದ ತಿಳಿಸಿದ್ದಾರೆ. ಈ ಸಿನಿಮಾ ನೋಡುವಾಗ ಯೋಗಿ ಭಾವುಕರಾಗಿ ಕಣ್ಣೀರು ಹಾಕಿದರು ಎಂದು ಕೂಡ ಕಂಗನಾ ಬರೆದುಕೊಂಡಿದ್ದಾರೆ.

‘ಇಂದು ಯೋಗಿ ಆದಿತ್ಯನಾಥ್​ ಅವರಿಗೆ ಸೈನಿಕರ ಜೀವನಾಧಾರಿತ ‘ತೇಜಸ್​’ ಸಿನಿಮಾ ತೋರಿಸಲಾಯಿತು. ತೇಜಸ್​ ಸಿನಿಮಾದ ಕೊನೇ ಸಂಭಾಷಣೆಗಳನ್ನು ಕೇಳಿಸಿಕೊಂಡು ಯೋಗಿ ಅವರಿಗೆ ಕಣ್ಣೀರು ತಡೆಯಲು ಸಾಧ್ಯವಾಗಲಿಲ್ಲ’ ಎಂದು ಕಂಗನಾ ಅವರು ಪೋಸ್ಟ್ ಮಾಡಿದ್ದಾರೆ. ಅವರು ಹಂಚಿಕೊಂಡಿರುವ ಫೋಟೋಗಳು ಸೋಶಿಯಲ್​ ಮೀಡಿಯಾದಲ್ಲಿ ವೈರಲ್​ ಆಗಿವೆ. ಈ ಮೊದಲು ಕೂಡ ಕಂಗನಾ ರಣಾವತ್ ಅವರು ಯೋಗಿ ಆದಿತ್ಯನಾಥ್​ ಅವರನ್ನು ಭೇಟಿ ಆಗಿದ್ದರು. ಆದರೆ ಈ ಬಾರಿಯ ಭೇಟಿ ಅವರಿಗೆ ತುಂಬಾ ಸ್ಪೆಷಲ್​ ಎನಿಸಿದೆ.

‘ಒಬ್ಬ ಸೈನಿಕನಿಗೆ ಏನು ಬೇಕು? ಸೈನಿಕರ ಧೈರ್ಯ, ತ್ಯಾಗ, ಬಲಿದಾನದ ಕಥೆ ಇರುವ ಸಿನಿಮಾ ನೋಡಿ ಯೋಗಿ ಅವರು ಎಮೋಷನಲ್​ ಆದರು. ನಿಮ್ಮ ಹೊಗಳಿಕೆ ಮತ್ತು ಆಶೀರ್ವಾದಕ್ಕೆ ಧನ್ಯವಾಗಳು’ ಎಂದು ಕಂಗನಾ ರಣಾವತ್​ ಅವರು ಬರೆದುಕೊಂಡಿದ್ದಾರೆ. ಈ ವೇಳೆ ಉತ್ತರಖಂಡ್​ ಮುಖ್ಯಮಂತ್ರಿ ಪುಷ್ಕರ್​ ಸಿಂಗ್​ ಕೂಡ ಇದ್ದರು. ಸಿನಿಮಾ ಮುಗಿದ ಬಳಿಕ ಕಂಗನಾಗೆ ಯೋಗಿ ಅವರು ಉಡುಗೊರೆ ನೀಡಿದ್ದಾರೆ. ಮುಖ್ಯಮಂತ್ರಿಗಳಿಬ್ಬರು ಸಿನಿಮಾ ನೋಡಿ ಹೊಗಳಿದ್ದಾರೆ ಎಂದು ಕಂಗನಾ ಅವರು ಹೇಳಿಕೊಂಡಿದ್ದಾರೆ.

ಇದನ್ನೂ ಓದಿ: ಸತತ ಸೋಲು ಕಂಡರೂ ಕಂಗನಾ ರಣಾವತ್​ಗೆ ಕಡಿಮೆ ಆಗಿಲ್ಲ ಸಿನಿಮಾ ಆಫರ್​​

ಅಕ್ಟೋಬರ್​ 27ರಂದು ‘ತೇಜಸ್​’ ಸಿನಿಮಾ ರಿಲೀಸ್​ ಆಯಿತು. ಈ ಚಿತ್ರದಲ್ಲಿ ಕಂಗನಾ ರಣಾವತ್​ ಅವರು ವಾಯುಸೇನೆಯ ಪೈಲೆಟ್​ ಪಾತ್ರವನ್ನು ಮಾಡಿದ್ದಾರೆ. ಪ್ರೇಕ್ಷಕರು ಈ ಚಿತ್ರದ ಕಡೆಗೆ ಅಷ್ಟೇನೂ ಆಸಕ್ತಿ ತೋರಿಸಿಲ್ಲ. ಬಹಳ ಕಳಪೆ ಓಪನಿಂಗ್ ಪಡೆದುಕೊಂಡ ಈ ಚಿತ್ರ ಬಾಕ್ಸ್​ ಆಫೀಸ್​ನಲ್ಲಿ 4 ದಿನಕ್ಕೆ 4 ಕೋಟಿ ರೂಪಾಯಿ ದಾಟಲೂ ಸಾಧ್ಯವಾಗದೇ ಕಷ್ಟಪಡುತ್ತಿದೆ. ಈಗ ಕಂಗನಾ ರಣಾವತ್​ಗೆ ಯೋಗಿ ಆದಿತ್ಯನಾಥ್​ ಅವರಿಂದ ಮೆಚ್ಚುಗೆ ಸಿಕ್ಕಿರುವುದರಿಂದ ಮುಂದಿನ ದಿನಗಳಲ್ಲಿ ಕಲೆಕ್ಷನ್​ ಹೆಚ್ಚಾಗುತ್ತಾ ಎಂಬುದನ್ನು ಕಾದುನೋಡಬೇಕು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ