‘ನೀವು ನಮ್ಮೆಲ್ಲರಿಗಿಂತ ದೊಡ್ಡವರು’; ಕಮಲ್ ಹಾಸನ್ ಅವರ ನಟನೆ ಹಾಡಿ ಹೊಗಳಿದ ಅಮಿತಾಭ್ ಬಚ್ಚನ್

‘ಅಮಿತಾಭ್ ಬಚ್ಚನ್ ಅವರ ಎನರ್ಜಿ ಜೊತೆ ನಾವು ಬದುಕುತ್ತಿರುವುದಕ್ಕೆ ತುಂಬಾನೇ ಖುಷಿ ಇದೆ’ ಎಂದರು ಕಮಲ್ ಹಾಸನ್. ಇದಕ್ಕೆ ಅಮಿತಾಭ್ ಉತ್ತರಿಸಿದ್ದಾರೆ.

‘ನೀವು ನಮ್ಮೆಲ್ಲರಿಗಿಂತ ದೊಡ್ಡವರು’; ಕಮಲ್ ಹಾಸನ್ ಅವರ ನಟನೆ ಹಾಡಿ ಹೊಗಳಿದ ಅಮಿತಾಭ್ ಬಚ್ಚನ್
ಅಮಿತಾಭ್​-ಕಮಲ್ ಹಾಸನ್
Follow us
| Updated By: ಮದನ್​ ಕುಮಾರ್​

Updated on:Jul 21, 2023 | 5:54 PM

‘ಪ್ರಾಜೆಕ್ಟ್ ಕೆ’ (Project K Movie) ಚಿತ್ರಕ್ಕೆ ಶೀರ್ಷಿಕೆ ಫೈನಲ್ ಆಗಿದೆ. ‘ಕಲ್ಕಿ 2898-ಎಡಿ’ ಎಂಬ ಶೀರ್ಷಿಕೆಯನ್ನು ಪ್ರಭಾಸ್ ಸಿನಿಮಾಗೆ ಇಡಲಾಗಿದೆ. ಅಮೆರಿಕದ ಸ್ಯಾನ್​ ಡಿಯಾಗೋ ನಗರದಲ್ಲಿ ನಡೆದ ‘ಕಾಮಿಕ್​ ಕಾನ್​’ ಉತ್ಸವದಲ್ಲಿ ಈ ಫಸ್ಟ್​ ಗ್ಲಿಂಪ್ಸ್ ಬಿಡುಗಡೆ ಆಗಿದ್ದು ವಿಶೇಷ. ಈ ಕಾರ್ಯಕ್ರಮದಲ್ಲಿ ಪ್ರಭಾಸ್ (Prabhas), ರಾಣಾ ದಗ್ಗುಬಾಟಿ, ಕಮಲ್​ ಹಾಸನ್ ಭಾಗಿ ಆಗಿದ್ದರು. ಈ ಕಾರ್ಯಕ್ರಮಕ್ಕೆ ವಿಡಿಯೋ ಕಾಲ್ ಮೂಲಕ ಬಿಗ್ ಬಿ ಹಾಜರಿ ಹಾಕಿದರು. ಈ ವೇಳೆ ಅವರು ಕಮಲ್ ಹಾಸನ್ ಅವರನ್ನು ಹಾಡಿ ಹೊಗಳಿದ್ದಾರೆ.

‘ಕಲ್ಕಿ 2898-ಎಡಿ’ ಸಿನಿಮಾದಲ್ಲಿ ಪ್ರಭಾಸ್ ಮುಖ್ಯಭೂಮಿಕೆ ನಿರ್ವಹಿಸಿದ್ದಾರೆ. ಪ್ರಭಾಸ್ ಜೊತೆ ಕಮಲ್ ಹಾಸನ್, ಅಮಿತಾಭ್ ಬಚ್ಚನ್ ಮೊದಲಾದವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಪ್ರಭಾಸ್ ಕಲ್ಕಿ ಅವತಾರ ತಾಳಿದ್ದಾರೆ. ಈ ಕಾರ್ಯಕ್ರಮದಲ್ಲಿ ಅಮಿತಾಭ್ ಬಗ್ಗೆ ಕಮಲ್ ಹಾಸನ್ ಮಾತನಾಡಿದರು.

‘ಅಮಿತಾಭ್ ಬಚ್ಚನ್ ಅವರ ಎನರ್ಜಿ ಜೊತೆ ನಾವು ಬದುಕುತ್ತಿರುವುದಕ್ಕೆ ತುಂಬಾನೇ ಖುಷಿ ಇದೆ’ ಎಂದರು ಕಮಲ್ ಹಾಸನ್. ಇದಕ್ಕೆ ಅಮಿತಾಭ್ ಉತ್ತರಿಸಿದ್ದಾರೆ. ‘ನೀವು ನಮ್ಮೆಲ್ಲರಿಂಗತಲೂ ದೊಡ್ಡವರು. ಕಮಲ್​ ಅವರ ಪ್ರತಿಯೊಂದು ಚಿತ್ರದಲ್ಲೂ ವಾಸ್ತವಿಕತೆ ಇರುತ್ತದೆ. ಪ್ರತಿ ಚಿತ್ರಕ್ಕೂ ಅವರು ತುಂಬಾ ಶ್ರಮ ಹಾಕುತ್ತಾರೆ. ಅವರು ನಿರ್ವಹಿಸಿದ ಪಾತ್ರಗಳು ಅದ್ಭುತವಾಗಿವೆ. ನಾವಿಬ್ಬರೂ ಒಟ್ಟಾಗಿ ನಟಿಸಿರುವುದು ಹೆಮ್ಮೆಯ ಸಂಗತಿ’ ಎಂದಿದ್ದಾರೆ ಅಮಿತಾಭ್​.

ಇದನ್ನೂ ಓದಿ: Kalki 2898 8211-AD: ‘ಕಲ್ಕಿ’ ಅವತಾರದಲ್ಲಿ ಪ್ರಭಾಸ್ ಎಂಟ್ರಿ; ಮಿಂಚಿದ ಅಮಿತಾಭ್, ದೀಪಿಕಾ

ಅಮಿತಾಭ್ ಬಚ್ಚನ್ ಅವರು ಇದನ್ನು ವಿವರಿಸುತ್ತಿದ್ದಂತೆ ಕಮಲ್ ಹಾಸನ್ ಹಳೆಯ ಘಟನೆ ನೆನೆದರು. ‘ನಾನು ಶೋಲೆ ಚಿತ್ರದಲ್ಲಿ ಸಹಾಯಕ ನಿರ್ದೇಶಕನಾಗಿದ್ದೆ. ಆ ಸಿನಿಮಾ ನೋಡಿದ ರಾತ್ರಿ ನನಗೆ ನಿದ್ದೆ ಬಂದಿಲ್ಲ. ಆ ಸಿನಿಮಾ ನಾನು ತುಂಬಾ ದ್ವೇಷಿಸುತ್ತಿದ್ದೆ. ಸಿನಿಮಾ ನಿರ್ಮಾತೃರನ್ನು ಮತ್ತಷ್ಟು ದ್ವೇಷಿಸುತ್ತಿದೆ. ಅಮಿತಾಭ್ ಅವರ ಬಳಿಯೂ ಇದನ್ನು ಹೇಳಿಕೊಂಡಿದ್ದೆ. ಅವರು ನನ್ನ ಸಿನಿಮಾಗಳ ಬಗ್ಗೆ ಒಳ್ಳೆಯ ಮಾತುಗಳನ್ನು ಹೇಳಿರುವುದು ಖುಷಿ ನೀಡಿದೆ’ ಎಂದಿದ್ದಾರೆ ಕಮಲ್.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 2:26 pm, Fri, 21 July 23

ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ದರ್ಬಾರ್ ಗಲ್ಲಿಯಲ್ಲಿ ರಸ್ತೆಯುದ್ದಕ್ಕೂ ಪ್ಯಾಲೆಸ್ತೀನ್ ಧ್ವಜ ಶಾಮಿಯಾನ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಚನ್ನಪಟ್ಟಣ: ಹೈಟೆಕ್ ಕ್ರೀಡಾಂಗಣ ನಿರ್ಮಾಣಕ್ಕೆ ಡಿಕೆಶಿ ಶಂಕುಸ್ಥಾಪನೆ
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಬೆಳಗಾವಿ: ರೋಗಿ ಕೈಗೆ ಕೊಳಲು ಕೊಟ್ಟು ಶಸ್ತ್ರ ಚಿಕಿತ್ಸೆ ಮಾಡಿದ ವೈದ್ಯರು
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ಒಂದು ಕಡೆ ಕೋಮು ಗಲಭೆ, ಮತ್ತೊಂದೆಡೆ ಹಿಂದೂ ಮುಸ್ಲಿಂ ಯುವಕರಿಂದ ವಿಸರ್ಜನೆ
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
ವೇದಿಕೆ ಏರುತ್ತಿದ್ದಂತೆ ಹಾಸ್ಯದ ಹೊಳೆ ಹರಿಸಿದಿ ಕಿಚ್ಚ ಸುದೀಪ್
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್