AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನೀವು ನಮ್ಮೆಲ್ಲರಿಗಿಂತ ದೊಡ್ಡವರು’; ಕಮಲ್ ಹಾಸನ್ ಅವರ ನಟನೆ ಹಾಡಿ ಹೊಗಳಿದ ಅಮಿತಾಭ್ ಬಚ್ಚನ್

‘ಅಮಿತಾಭ್ ಬಚ್ಚನ್ ಅವರ ಎನರ್ಜಿ ಜೊತೆ ನಾವು ಬದುಕುತ್ತಿರುವುದಕ್ಕೆ ತುಂಬಾನೇ ಖುಷಿ ಇದೆ’ ಎಂದರು ಕಮಲ್ ಹಾಸನ್. ಇದಕ್ಕೆ ಅಮಿತಾಭ್ ಉತ್ತರಿಸಿದ್ದಾರೆ.

‘ನೀವು ನಮ್ಮೆಲ್ಲರಿಗಿಂತ ದೊಡ್ಡವರು’; ಕಮಲ್ ಹಾಸನ್ ಅವರ ನಟನೆ ಹಾಡಿ ಹೊಗಳಿದ ಅಮಿತಾಭ್ ಬಚ್ಚನ್
ಅಮಿತಾಭ್​-ಕಮಲ್ ಹಾಸನ್
ರಾಜೇಶ್ ದುಗ್ಗುಮನೆ
| Updated By: ಮದನ್​ ಕುಮಾರ್​|

Updated on:Jul 21, 2023 | 5:54 PM

Share

‘ಪ್ರಾಜೆಕ್ಟ್ ಕೆ’ (Project K Movie) ಚಿತ್ರಕ್ಕೆ ಶೀರ್ಷಿಕೆ ಫೈನಲ್ ಆಗಿದೆ. ‘ಕಲ್ಕಿ 2898-ಎಡಿ’ ಎಂಬ ಶೀರ್ಷಿಕೆಯನ್ನು ಪ್ರಭಾಸ್ ಸಿನಿಮಾಗೆ ಇಡಲಾಗಿದೆ. ಅಮೆರಿಕದ ಸ್ಯಾನ್​ ಡಿಯಾಗೋ ನಗರದಲ್ಲಿ ನಡೆದ ‘ಕಾಮಿಕ್​ ಕಾನ್​’ ಉತ್ಸವದಲ್ಲಿ ಈ ಫಸ್ಟ್​ ಗ್ಲಿಂಪ್ಸ್ ಬಿಡುಗಡೆ ಆಗಿದ್ದು ವಿಶೇಷ. ಈ ಕಾರ್ಯಕ್ರಮದಲ್ಲಿ ಪ್ರಭಾಸ್ (Prabhas), ರಾಣಾ ದಗ್ಗುಬಾಟಿ, ಕಮಲ್​ ಹಾಸನ್ ಭಾಗಿ ಆಗಿದ್ದರು. ಈ ಕಾರ್ಯಕ್ರಮಕ್ಕೆ ವಿಡಿಯೋ ಕಾಲ್ ಮೂಲಕ ಬಿಗ್ ಬಿ ಹಾಜರಿ ಹಾಕಿದರು. ಈ ವೇಳೆ ಅವರು ಕಮಲ್ ಹಾಸನ್ ಅವರನ್ನು ಹಾಡಿ ಹೊಗಳಿದ್ದಾರೆ.

‘ಕಲ್ಕಿ 2898-ಎಡಿ’ ಸಿನಿಮಾದಲ್ಲಿ ಪ್ರಭಾಸ್ ಮುಖ್ಯಭೂಮಿಕೆ ನಿರ್ವಹಿಸಿದ್ದಾರೆ. ಪ್ರಭಾಸ್ ಜೊತೆ ಕಮಲ್ ಹಾಸನ್, ಅಮಿತಾಭ್ ಬಚ್ಚನ್ ಮೊದಲಾದವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಪ್ರಭಾಸ್ ಕಲ್ಕಿ ಅವತಾರ ತಾಳಿದ್ದಾರೆ. ಈ ಕಾರ್ಯಕ್ರಮದಲ್ಲಿ ಅಮಿತಾಭ್ ಬಗ್ಗೆ ಕಮಲ್ ಹಾಸನ್ ಮಾತನಾಡಿದರು.

‘ಅಮಿತಾಭ್ ಬಚ್ಚನ್ ಅವರ ಎನರ್ಜಿ ಜೊತೆ ನಾವು ಬದುಕುತ್ತಿರುವುದಕ್ಕೆ ತುಂಬಾನೇ ಖುಷಿ ಇದೆ’ ಎಂದರು ಕಮಲ್ ಹಾಸನ್. ಇದಕ್ಕೆ ಅಮಿತಾಭ್ ಉತ್ತರಿಸಿದ್ದಾರೆ. ‘ನೀವು ನಮ್ಮೆಲ್ಲರಿಂಗತಲೂ ದೊಡ್ಡವರು. ಕಮಲ್​ ಅವರ ಪ್ರತಿಯೊಂದು ಚಿತ್ರದಲ್ಲೂ ವಾಸ್ತವಿಕತೆ ಇರುತ್ತದೆ. ಪ್ರತಿ ಚಿತ್ರಕ್ಕೂ ಅವರು ತುಂಬಾ ಶ್ರಮ ಹಾಕುತ್ತಾರೆ. ಅವರು ನಿರ್ವಹಿಸಿದ ಪಾತ್ರಗಳು ಅದ್ಭುತವಾಗಿವೆ. ನಾವಿಬ್ಬರೂ ಒಟ್ಟಾಗಿ ನಟಿಸಿರುವುದು ಹೆಮ್ಮೆಯ ಸಂಗತಿ’ ಎಂದಿದ್ದಾರೆ ಅಮಿತಾಭ್​.

ಇದನ್ನೂ ಓದಿ: Kalki 2898 8211-AD: ‘ಕಲ್ಕಿ’ ಅವತಾರದಲ್ಲಿ ಪ್ರಭಾಸ್ ಎಂಟ್ರಿ; ಮಿಂಚಿದ ಅಮಿತಾಭ್, ದೀಪಿಕಾ

ಅಮಿತಾಭ್ ಬಚ್ಚನ್ ಅವರು ಇದನ್ನು ವಿವರಿಸುತ್ತಿದ್ದಂತೆ ಕಮಲ್ ಹಾಸನ್ ಹಳೆಯ ಘಟನೆ ನೆನೆದರು. ‘ನಾನು ಶೋಲೆ ಚಿತ್ರದಲ್ಲಿ ಸಹಾಯಕ ನಿರ್ದೇಶಕನಾಗಿದ್ದೆ. ಆ ಸಿನಿಮಾ ನೋಡಿದ ರಾತ್ರಿ ನನಗೆ ನಿದ್ದೆ ಬಂದಿಲ್ಲ. ಆ ಸಿನಿಮಾ ನಾನು ತುಂಬಾ ದ್ವೇಷಿಸುತ್ತಿದ್ದೆ. ಸಿನಿಮಾ ನಿರ್ಮಾತೃರನ್ನು ಮತ್ತಷ್ಟು ದ್ವೇಷಿಸುತ್ತಿದೆ. ಅಮಿತಾಭ್ ಅವರ ಬಳಿಯೂ ಇದನ್ನು ಹೇಳಿಕೊಂಡಿದ್ದೆ. ಅವರು ನನ್ನ ಸಿನಿಮಾಗಳ ಬಗ್ಗೆ ಒಳ್ಳೆಯ ಮಾತುಗಳನ್ನು ಹೇಳಿರುವುದು ಖುಷಿ ನೀಡಿದೆ’ ಎಂದಿದ್ದಾರೆ ಕಮಲ್.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 2:26 pm, Fri, 21 July 23

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!