AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ನೀವು ನಮ್ಮೆಲ್ಲರಿಗಿಂತ ದೊಡ್ಡವರು’; ಕಮಲ್ ಹಾಸನ್ ಅವರ ನಟನೆ ಹಾಡಿ ಹೊಗಳಿದ ಅಮಿತಾಭ್ ಬಚ್ಚನ್

‘ಅಮಿತಾಭ್ ಬಚ್ಚನ್ ಅವರ ಎನರ್ಜಿ ಜೊತೆ ನಾವು ಬದುಕುತ್ತಿರುವುದಕ್ಕೆ ತುಂಬಾನೇ ಖುಷಿ ಇದೆ’ ಎಂದರು ಕಮಲ್ ಹಾಸನ್. ಇದಕ್ಕೆ ಅಮಿತಾಭ್ ಉತ್ತರಿಸಿದ್ದಾರೆ.

‘ನೀವು ನಮ್ಮೆಲ್ಲರಿಗಿಂತ ದೊಡ್ಡವರು’; ಕಮಲ್ ಹಾಸನ್ ಅವರ ನಟನೆ ಹಾಡಿ ಹೊಗಳಿದ ಅಮಿತಾಭ್ ಬಚ್ಚನ್
ಅಮಿತಾಭ್​-ಕಮಲ್ ಹಾಸನ್
ರಾಜೇಶ್ ದುಗ್ಗುಮನೆ
| Edited By: |

Updated on:Jul 21, 2023 | 5:54 PM

Share

‘ಪ್ರಾಜೆಕ್ಟ್ ಕೆ’ (Project K Movie) ಚಿತ್ರಕ್ಕೆ ಶೀರ್ಷಿಕೆ ಫೈನಲ್ ಆಗಿದೆ. ‘ಕಲ್ಕಿ 2898-ಎಡಿ’ ಎಂಬ ಶೀರ್ಷಿಕೆಯನ್ನು ಪ್ರಭಾಸ್ ಸಿನಿಮಾಗೆ ಇಡಲಾಗಿದೆ. ಅಮೆರಿಕದ ಸ್ಯಾನ್​ ಡಿಯಾಗೋ ನಗರದಲ್ಲಿ ನಡೆದ ‘ಕಾಮಿಕ್​ ಕಾನ್​’ ಉತ್ಸವದಲ್ಲಿ ಈ ಫಸ್ಟ್​ ಗ್ಲಿಂಪ್ಸ್ ಬಿಡುಗಡೆ ಆಗಿದ್ದು ವಿಶೇಷ. ಈ ಕಾರ್ಯಕ್ರಮದಲ್ಲಿ ಪ್ರಭಾಸ್ (Prabhas), ರಾಣಾ ದಗ್ಗುಬಾಟಿ, ಕಮಲ್​ ಹಾಸನ್ ಭಾಗಿ ಆಗಿದ್ದರು. ಈ ಕಾರ್ಯಕ್ರಮಕ್ಕೆ ವಿಡಿಯೋ ಕಾಲ್ ಮೂಲಕ ಬಿಗ್ ಬಿ ಹಾಜರಿ ಹಾಕಿದರು. ಈ ವೇಳೆ ಅವರು ಕಮಲ್ ಹಾಸನ್ ಅವರನ್ನು ಹಾಡಿ ಹೊಗಳಿದ್ದಾರೆ.

‘ಕಲ್ಕಿ 2898-ಎಡಿ’ ಸಿನಿಮಾದಲ್ಲಿ ಪ್ರಭಾಸ್ ಮುಖ್ಯಭೂಮಿಕೆ ನಿರ್ವಹಿಸಿದ್ದಾರೆ. ಪ್ರಭಾಸ್ ಜೊತೆ ಕಮಲ್ ಹಾಸನ್, ಅಮಿತಾಭ್ ಬಚ್ಚನ್ ಮೊದಲಾದವರು ಪ್ರಮುಖ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಪ್ರಭಾಸ್ ಕಲ್ಕಿ ಅವತಾರ ತಾಳಿದ್ದಾರೆ. ಈ ಕಾರ್ಯಕ್ರಮದಲ್ಲಿ ಅಮಿತಾಭ್ ಬಗ್ಗೆ ಕಮಲ್ ಹಾಸನ್ ಮಾತನಾಡಿದರು.

‘ಅಮಿತಾಭ್ ಬಚ್ಚನ್ ಅವರ ಎನರ್ಜಿ ಜೊತೆ ನಾವು ಬದುಕುತ್ತಿರುವುದಕ್ಕೆ ತುಂಬಾನೇ ಖುಷಿ ಇದೆ’ ಎಂದರು ಕಮಲ್ ಹಾಸನ್. ಇದಕ್ಕೆ ಅಮಿತಾಭ್ ಉತ್ತರಿಸಿದ್ದಾರೆ. ‘ನೀವು ನಮ್ಮೆಲ್ಲರಿಂಗತಲೂ ದೊಡ್ಡವರು. ಕಮಲ್​ ಅವರ ಪ್ರತಿಯೊಂದು ಚಿತ್ರದಲ್ಲೂ ವಾಸ್ತವಿಕತೆ ಇರುತ್ತದೆ. ಪ್ರತಿ ಚಿತ್ರಕ್ಕೂ ಅವರು ತುಂಬಾ ಶ್ರಮ ಹಾಕುತ್ತಾರೆ. ಅವರು ನಿರ್ವಹಿಸಿದ ಪಾತ್ರಗಳು ಅದ್ಭುತವಾಗಿವೆ. ನಾವಿಬ್ಬರೂ ಒಟ್ಟಾಗಿ ನಟಿಸಿರುವುದು ಹೆಮ್ಮೆಯ ಸಂಗತಿ’ ಎಂದಿದ್ದಾರೆ ಅಮಿತಾಭ್​.

ಇದನ್ನೂ ಓದಿ: Kalki 2898 8211-AD: ‘ಕಲ್ಕಿ’ ಅವತಾರದಲ್ಲಿ ಪ್ರಭಾಸ್ ಎಂಟ್ರಿ; ಮಿಂಚಿದ ಅಮಿತಾಭ್, ದೀಪಿಕಾ

ಅಮಿತಾಭ್ ಬಚ್ಚನ್ ಅವರು ಇದನ್ನು ವಿವರಿಸುತ್ತಿದ್ದಂತೆ ಕಮಲ್ ಹಾಸನ್ ಹಳೆಯ ಘಟನೆ ನೆನೆದರು. ‘ನಾನು ಶೋಲೆ ಚಿತ್ರದಲ್ಲಿ ಸಹಾಯಕ ನಿರ್ದೇಶಕನಾಗಿದ್ದೆ. ಆ ಸಿನಿಮಾ ನೋಡಿದ ರಾತ್ರಿ ನನಗೆ ನಿದ್ದೆ ಬಂದಿಲ್ಲ. ಆ ಸಿನಿಮಾ ನಾನು ತುಂಬಾ ದ್ವೇಷಿಸುತ್ತಿದ್ದೆ. ಸಿನಿಮಾ ನಿರ್ಮಾತೃರನ್ನು ಮತ್ತಷ್ಟು ದ್ವೇಷಿಸುತ್ತಿದೆ. ಅಮಿತಾಭ್ ಅವರ ಬಳಿಯೂ ಇದನ್ನು ಹೇಳಿಕೊಂಡಿದ್ದೆ. ಅವರು ನನ್ನ ಸಿನಿಮಾಗಳ ಬಗ್ಗೆ ಒಳ್ಳೆಯ ಮಾತುಗಳನ್ನು ಹೇಳಿರುವುದು ಖುಷಿ ನೀಡಿದೆ’ ಎಂದಿದ್ದಾರೆ ಕಮಲ್.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 2:26 pm, Fri, 21 July 23

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?