AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಲೈಕಾನಾ ಸರಿಯಾಗಿ ನೋಡಿಕೊಳ್ಳುತ್ತಿಲ್ಲ ಅರ್ಜುನ್ ಕಪೂರ್? ಗೂಢಾರ್ಥದ ಪೋಸ್ಟ್ ಹಾಕಿದ ನಟಿ

ಮಲೈಕಾ ಅರೋರಾ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಆಗಾಗ ಅವರು ಫೋಟೋ ಹಾಗೂ ಸ್ಟೇಟಸ್ ಹಂಚಿಕೊಳ್ಳುತ್ತಾ ಇರುತ್ತಾರೆ. ಈಗ ಮಲೈಕಾ ಅವರ ಹೊಸ ಸ್ಟೇಟಸ್ ಗಮನ ಸೆಳೆಯುತ್ತಿದೆ. ಅವರು ತುಂಬಾನೇ ನಿಗೂಢಾರ್ಥ ಇರುವ ರೀತಿಯಲ್ಲಿ ಸಾಲುಗಳನ್ನು ಪೋಸ್ಟ್ ಮಾಡಿದ್ದಾರೆ.

ಮಲೈಕಾನಾ ಸರಿಯಾಗಿ ನೋಡಿಕೊಳ್ಳುತ್ತಿಲ್ಲ ಅರ್ಜುನ್ ಕಪೂರ್? ಗೂಢಾರ್ಥದ ಪೋಸ್ಟ್ ಹಾಕಿದ ನಟಿ
ಮಲೈಕಾ
ರಾಜೇಶ್ ದುಗ್ಗುಮನೆ
|

Updated on:Sep 05, 2023 | 10:43 AM

Share

ಮಲೈಕಾ ಅರೋರಾ ಹಾಗೂ ಅರ್ಜುನ್ ಕಪೂರ್ (Arjun Kapoor) ಬೇರೆ ಆಗುತ್ತಾರೆ ಎನ್ನುವ ಸುದ್ದಿ ಇತ್ತೀಚೆಗೆ ಹರಿದಾಡಿತ್ತು. ಇಬ್ಬರ ಪ್ರೀತಿ ಮುರಿದು ಬಿತ್ತು ಎಂದು ಎಲ್ಲರೂ ಮಾತನಾಡಿಕೊಂಡರು. ಹೀಗಿರುವಾಗಲೇ ಮುಂಬೈ ಬೀದಿಗಳಲ್ಲಿ ಇಬ್ಬರೂ ಒಟ್ಟಾಗಿ ಕಾಣಿಸಿಕೊಳ್ಳುವ ಮೂಲಕ ವದಂತಿಗಳಿಗೆ ತೆರೆ ಎಳೆದಿದ್ದರು. ಆದರೆ, ಈ ವಿಚಾರ ಈಗ ಬೂದಿ ಮುಚ್ಚಿದ ಕೆಂಡದಂತಿದೆ. ಮಲೈಕಾ ಮಾಡಿರುವ ಹೊಸ ಪೋಸ್ಟ್ ಒಂದು ಎಲ್ಲರ ಗಮನ ಸೆಳೆಯುತ್ತಿದೆ. ಈ ಮೂಲಕ ಮತ್ತೆ ಬ್ರೇಕಪ್ ವಿಚಾರ ಮುನ್ನೆಲೆಗೆ ಬಂದಿದೆ.

ಮಲೈಕಾ ಅರೋರಾ ಅವರು ಸೋಶಿಯಲ್ ಮೀಡಿಯಾದಲ್ಲಿ ಆ್ಯಕ್ಟೀವ್ ಆಗಿದ್ದಾರೆ. ಆಗಾಗ ಅವರು ಫೋಟೋ ಹಾಗೂ ಸ್ಟೇಟಸ್ ಹಂಚಿಕೊಳ್ಳುತ್ತಾ ಇರುತ್ತಾರೆ. ಈಗ ಮಲೈಕಾ ಅವರ ಹೊಸ ಸ್ಟೇಟಸ್ ಗಮನ ಸೆಳೆಯುತ್ತಿದೆ. ಅವರು ತುಂಬಾನೇ ನಿಗೂಢಾರ್ಥ ಇರುವ ರೀತಿಯಲ್ಲಿ ಸಾಲುಗಳನ್ನು ಪೋಸ್ಟ್ ಮಾಡಿದ್ದಾರೆ.

‘ಮಹಿಳೆ ನೀವು ಅವಳನ್ನು ಹೇಗೆ ನಡೆಸಿಕೊಳ್ಳುತ್ತೀರಿ ಎಂಬುದರ ಪ್ರತಿಬಿಂಬ ಆಗುತ್ತಾಳೆ. ಅವಳು ವರ್ತಿಸುತ್ತಿರುವುದು ನಿಮಗೆ ಇಷ್ಟವಾಗದಿದ್ದರೆ, ನೀವು ಅವಳನ್ನು ಹೇಗೆ ನಡೆಸಿಕೊಳ್ಳುತ್ತಿದ್ದೀರಿ ಎಂದು ನೋಡಿ’ ಎಂದು ಮಲೈಕಾ ಬರೆದುಕೊಂಡಿದ್ದಾರೆ. ಈ ಮೂಲಕ ಮಲೈಕಾ ಅರೋರಾ ಅವರನ್ನು ಅರ್ಜುನ್ ಕಪೂರ್ ಸರಿಯಾಗಿ ಟ್ರೀಟ್ ಮಾಡುತ್ತಿಲ್ಲವೇ ಎನ್ನುವ ಪ್ರಶ್ನೆ ಮೂಡಿದೆ.

ಮಲೈಕಾ ಹಾಗೂ ಅರ್ಜುನ್ ಕಪೂರ್ ಸುತ್ತಾಟ ಆರಂಭಿಸಿ ಹಲವು ವರ್ಷಗಳೇ ಕಳೆದಿವೆ. ಮಲೈಕಾಗಿಂತ ಅರ್ಜುನ್ 12 ವರ್ಷ ಸಣ್ಣವರು. ಇವರ ಮಧ್ಯೆ ವಯಸ್ಸಿನ ಅಂತರ ಅಡ್ಡಿ ಆಗಿಲ್ಲ. ಆದರೆ, ಈಗ ಇವರ ಮಧ್ಯೆ ಯಾವುದೂ ಸರಿ ಇಲ್ಲ ಎನ್ನುವ ಸುದ್ದಿ ಹರಿದಾಡುತ್ತಿದೆ. ಈ ಬಗ್ಗೆ ತಂಡದಿಂದ ಸ್ಪಷ್ಟನೆ ಸಿಗಬೇಕಿದೆ.

ಇದನ್ನೂ ಓದಿ: ನಿಜವಾಯ್ತು ಬ್ರೇಕಪ್ ವಿಚಾರ? ಕಪೂರ್ ಕುಟುಂಬದವರನ್ನು ಅನ್​ಫಾಲೋ ಮಾಡಿದ ಮಲೈಕಾ ಅರೋರಾ

ಮಲೈಕಾ ಅವರು ಫಿಟ್ನೆಸ್​ಗೆ ಹೆಚ್ಚು ಒತ್ತು ನೀಡುತ್ತಾರೆ. ಈ ಕಾರಣದಿಂದಲೇ ಅವರ ವಯಸ್ಸು 49 ದಾಟಿದರೂ ಯುವತಿಯರನ್ನು ನಾಚಿಸುವಂತಿದ್ದಾರೆ. ಇತ್ತೀಚೆಗೆ ಅರ್ಜುನ್ ಕಪೂರ್ ಸೋಲೋ ಟ್ರಿಪ್ ತೆರಳಿದ್ದರು. ಇದರಿಂದ ಬ್ರೇಕಪ್ ವದಂತಿ ಹುಟ್ಟಿಕೊಂಡಿತ್ತು.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 10:43 am, Tue, 5 September 23

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!