AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕನ್ನಡಿಗರು ‘ರೇಸಿಸ್ಟ್’ ಎಂದ ಯೂಟ್ಯೂಬರ್, ಹಾಕಿದ್ದಾನೆ ಸವಾಲು

Shrinkhal: ಹಿಂದಿ ಯೂಟ್ಯೂಬರ್ ಶ್ರೀಂಕಾಲ್​ ಎಂಬಾತ ಕನ್ನಡಿಗರನ್ನು ಜನಾಂಗೀಯ ನಿಂದಕರೆಂದು ಕರೆದಿರುವ ವಿಡಿಯೋ ವೈರಲ್ ಆದ ಬೆನ್ನಲ್ಲೆ ಯೂಟ್ಯೂಬರ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಇದೆಲ್ಲದರ ನಡುವೆ ಆ ಯೂಟ್ಯೂಬರ್ ಕನ್ನಡಿಗರಿಗೆ ಸವಾಲು ಸಹ ಹಾಕಿದ್ದಾನೆ.

ಕನ್ನಡಿಗರು ‘ರೇಸಿಸ್ಟ್’ ಎಂದ ಯೂಟ್ಯೂಬರ್, ಹಾಕಿದ್ದಾನೆ ಸವಾಲು
ಮಂಜುನಾಥ ಸಿ.
|

Updated on: Mar 14, 2024 | 12:56 PM

Share

ಕನ್ನಡಿಗರು (Kannadiga) ಸಹಿಷ್ಣುಗಳು, ಗೌರವ ಕೊಟ್ಟು ಪಡೆಯುವರು, ಅತಿಥಿಗಳ ಸತ್ಕರಿಸುವವರು, ಬೆಂಗಳೂರಿನಲ್ಲಿ ಬದುಕುತ್ತಿರುವ ವಿವಿಧ ರಾಜ್ಯದ, ದೇಶಗಳ ಲಕ್ಷಾಂತರ ಜನರೇ ಇದಕ್ಕೆ ಸಾಕ್ಷಿ. ಆದರೆ ಇಲ್ಲೊಬ್ಬ ಯೂಟ್ಯೂಬರ್ ಕನ್ನಡಿಗರನ್ನು ಜನಾಂಗೀಯ ನಿಂದಕರು (ರೇಸಿಸ್ಟ್​) ಎಂದು ನಾಲಗೆ ಹರಿಬಿಟ್ಟಿದ್ದಾರೆ. ಹಿಂದಿ ಯೂಟ್ಯೂಬರ್​ನ ಈ ಮಾತಿಗೆ ತೀವ್ರ ವಿರೋಧ ವ್ಯಕ್ತವಾಗಿದೆ. ಈಗಾಗಲೇ ಕನ್ನಡದ ಕೆಲವು ಯೂಟ್ಯೂಬರ್​ಗಳು, ಹಿಂದಿ ಯೂಟ್ಯೂಬರ್​ ವಿರುದ್ಧ ಮುಗಿಬಿದ್ದಿದ್ದಾರೆ. ಸಿನಿಮಾ ಸೆಲೆಬ್ರಿಟಿಗಳು ಸಹ ಯೂಟ್ಯೂಬರ್ ನ ಹೇಳಿಕೆ ಖಂಡಿಸಿದ್ದಾರೆ. ಇದರ ನಡುವೆ ಹಿಂದಿ ಯೂಟ್ಯೂಬರ್ ಸಹ ಕನ್ನಡಿಗರಿಗೆ ಸವಾಲು ಹಾಕಿದ್ದಾನೆ.

ಎಸ್​ಆರ್​ಪೆ ಹೆಸರಿನ ಚಾನೆಲ್​ ಹೊಂದಿರುವ ಹಿಂದಿ ಯೂಟ್ಯೂಬರ್ ಶ್ರಿಂಕಾಲ್ ಕೆಲ ತಿಂಗಳ ಹಿಂದೆ ವಿಡಿಯೋ ಒಂದನ್ನು ಅಪ್​ಲೋಡ್ ಮಾಡಿದ್ದರು. ಆ ವಿಡಿಯೋನಲ್ಲಿ ಇತರೆ ಕೆಲವರೊಟ್ಟಿಗೆ ಸೇರಿಕೊಂಡು ವಿಡಿಯೋ ಕಾಲ್ ಮೂಲಕ ತಮಾಷೆಯ ಮಾತುಗಳನ್ನಾಡುತ್ತಿದ್ದರು. ವಿಡಿಯೋನಲ್ಲಿ ಯುವತಿಯೊಬ್ಬರು, ಮುಂಬೈನಲ್ಲಿ ನೆಲೆಸಿರುವವರನ್ನು ‘ಮುಂಬೈಕರ್’ ಎಂದು ಕರೆಯುವುದಾದರೆ ಕರ್ನಾಟಕದಲ್ಲಿ ನೆಲೆಸಿರುವವರನ್ನು ಏನೆಂದು ಕರೆಯುತ್ತಾರೆ? ಎಂದು ಪ್ರಶ್ನಿಸಿದ್ದರು, ಅದಕ್ಕೆ ಉತ್ತರಿಸಿದ್ದ ಶ್ರೀಂಕಾಲ್ ‘ರೇಸಿಸ್ಟ್’ ಎಂದಿದ್ದರು. ಶ್ರೀಂಕಾಲ್​ನ ಈ ಮಾತಿಗೆ ವಿಡಿಯೋ ಕಾಲ್​ನಲ್ಲಿರುವ ಅವನ ಗೆಳೆಯರು ಜೋರಾಗಿ ನಕ್ಕಿದ್ದರು.

ಇದನ್ನೂ ಓದಿ:ಮುಗಿಯುತ್ತಿಲ್ಲ ಬಿಗ್ ಬಾಸ್ ವಿನ್ನರ್ ರಂಪಾಟ; ಯೂಟ್ಯೂಬರ್​ ಮೇಲೆ ಹಲ್ಲೆ, ವಿಡಿಯೋ ವೈರಲ್

ಆ ವಿಡಿಯೋ ಇದೀಗ ಕೆಲ ದಿನಗಳ ಹಿಂದೆ ವೈರಲ್ ಆಗಿತ್ತು, ಕನ್ನಡಿಗರ ಬಗ್ಗೆ ನಾಲಗೆ ಹರಿಬಿಟ್ಟ ಯೂಟ್ಯೂಬರ್​ನ ವಿರುದ್ಧ ಕನ್ನಡಿಗರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. ಅದಾದ ಬೆನ್ನಲ್ಲೆ ‘ಅಪಾಲಜೀಸ್ ಟು ಕನ್ನಡಿಗಾಸ್’ ಹೆಸರಿನ ಥಂಬ್​ನೈಲ್​ ನಲ್ಲಿ ವಿಡಿಯೋ ಒಂದನ್ನು ಯೂಟ್ಯೂಬರ್ ಶ್ರೀಂಕಾಲ್ ಅಪ್​ಲೋಡ್ ಮಾಡಿದ್ದರು. ಆದರೆ ಆ ವಿಡಿಯೋನಲ್ಲಿಯೂ ಸಹ ಅಹಂಕಾರದಿಂದ ಮಾತನಾಡಿದ್ದ, ಅಲ್ಲದೆ ಮಾರ್ಚ್ 15ರಂದು ಬೆಂಗಳೂರಿನ ಒರಾಯಿನ್ ಮಾಲ್​ಗೆ ಬರುತ್ತೀನೆಂದು ಸವಾಲು ಸಹ ಹಾಕಿದ್ದಾನೆ.

ಯೂಟ್ಯೂಬರ್ ಶ್ರೀಂಕಾಲ್​ನ ದುರಹಂಕಾರದ ವರ್ತನೆ ಹಾಗೂ ಕನ್ನಡಿಗರ ಬಗ್ಗೆ ಆತನಿಗಿರುವ ನಂಜನ್ನು ಕನ್ನಡಿಗರು ತೀವ್ರವಾಗಿ ಖಂಡಿಸಿದ್ದಾರೆ. ಸಿನಿಮಾ ನಿರ್ದೇಶಕ ಸಂತೋಷ್ ಆನಂದ್​ರಾಮ್ ಈ ಬಗ್ಗೆ ಟ್ವೀಟ್ ಮಾಡಿದ್ದು, ‘ಕನ್ನಡಿಗರು ಎಲ್ಲರನ್ನು ಸ್ವಾಗತಿಸೊ ಸಹೃದಯಿಗಳು racist ಗಳಲ್ಲ…!ಕನ್ನಡಿಗರ ಹೊರತುಪಡಿಸು ಪರಭಾಷಿಕರನ್ನು ಸ್ನೇಹಿತರಂತೆ ನೋಡುವ ಮತ್ತೊಬ್ಬ ಭಾಷಿಕ ಭಾರತದಲ್ಲಿಲ್ಲ. ನೀನು ಬದುಕುತ್ತಿರುವ ನಗರ ಹಾಗೂ ಜನಗಳ ಬಗ್ಗೆ ಗೌರವ ಇರಲಿ’ ಎಂದಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?