AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sara Ali Khan: ‘ಜರಾ ಹಟ್ಕೆ ಜರಾ ಬಚ್ಕೆ’ ಚಿತ್ರಕ್ಕೆ 30 ಕೋಟಿ ರೂಪಾಯಿ ಕಮಾಯಿ; ಸಿದ್ಧಿವಿನಾಯಕ ದೇವಸ್ಥಾನಕ್ಕೆ ಸಾರಾ ಅಲಿ ಖಾನ್​ ಭೇಟಿ

Zara Hatke Zara Bachke: ‘ಜರಾ ಹಟ್ಕೆ ಜರಾ ಬಚ್ಕೆ’ ಚಿತ್ರಕ್ಕೆ ಐದನೇ ದಿನವಾದ ಜೂನ್​ 6ರಂದು 3.87 ಕೋಟಿ ರೂಪಾಗಿ ಕಲೆಕ್ಷನ್​ ಆಗಿದೆ. ಈ ಖುಷಿಗೆ ಸಾರಾ ಅಲಿ ಖಾನ್​ ಮತ್ತು ವಿಕ್ಕಿ ಕೌಶಲ್​ ಅವರು ಮುಂಬೈನ ಸಿದ್ಧಿವಿನಾಯಕ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.

Sara Ali Khan: ‘ಜರಾ ಹಟ್ಕೆ ಜರಾ ಬಚ್ಕೆ’ ಚಿತ್ರಕ್ಕೆ 30 ಕೋಟಿ ರೂಪಾಯಿ ಕಮಾಯಿ; ಸಿದ್ಧಿವಿನಾಯಕ ದೇವಸ್ಥಾನಕ್ಕೆ ಸಾರಾ ಅಲಿ ಖಾನ್​ ಭೇಟಿ
ವಿಕ್ಕಿ ಕೌಶಲ್, ಸಾರಾ ಅಲಿ ಖಾನ್​
Follow us
ಮದನ್​ ಕುಮಾರ್​
|

Updated on: Jun 07, 2023 | 12:57 PM

ಸಾರಾ ಅಲಿ ಖಾನ್​ (Sara Ali Khan) ಮತ್ತು ವಿಕ್ಕಿ ಕೌಶಲ್​ ಅವರು ‘ಜರಾ ಹಟ್ಕೆ ಜರಾ ಬಚ್ಕೆ’ ಸಿನಿಮಾದಲ್ಲಿ ಜೋಡಿಯಾಗಿ ನಟಿಸಿದ್ದಾರೆ. ದಿನೇಶ್​ ವಿಜನ್​ ಅವರು ಈ ಚಿತ್ರಕ್ಕೆ ಬಂಡವಾಳ ಹೂಡಿದ್ದಾರೆ. ಗಲ್ಲಾಪೆಟ್ಟಿಗೆಯಲ್ಲಿ ಈ ಸಿನಿಮಾ ಮೊದಲ ದಿನ ಸಾಧಾರಣ ಓಪನಿಂಗ್​ ಪಡೆದುಕೊಂಡಿತು. ಜೂನ್​ 2ರಂದು ತೆರೆಕಂಡ ಜರಾ ಹಟ್ಕೆ ಜರಾ ಬಚ್ಕೆ’ (Zara Hatke Zara Bachke) ಚಿತ್ರಕ್ಕೆ ಮೊದಲ ದಿನ ಸಂಗ್ರಹ ಆಗಿದ್ದು 5.49 ಕೋಟಿ ರೂಪಾಯಿ. ಆದರೆ ಎರಡನೇ ದಿನವಾದ ಶನಿವಾರ (ಜೂನ್​ 3) ಕೊಂಚ ಚೇತರಿಕೆ ಕಂಡು, 7.20 ಕೋಟಿ ರೂಪಾಯಿ ಕಲೆಕ್ಷನ್ ಆಯಿತು. ಮೂರನೇ ದಿನ 9.90 ಕೋಟಿ ರೂಪಾಯಿ ಸಂಗ್ರಹವಾಯಿತು. ನಾಲ್ಕನೇ ದಿನದ ಕಲೆಕ್ಷನ್ 4.14 ಕೋಟಿ ರೂಪಾಯಿ. ಐದನೇ ದಿನವಾದ ಜೂನ್​ 6ರಂದು 3.87 ಕೋಟಿ ರೂಪಾಗಿ ಕಲೆಕ್ಷನ್​ ಆಗಿದೆ. ಒಟ್ಟು ಕಲೆಕ್ಷನ್​ 30.60 ಕೋಟಿ ರೂಪಾಯಿ ತಲುಪಿದೆ. ಈ ಖುಷಿಗೆ ಸಾರಾ ಅಲಿ ಖಾನ್​ ಮತ್ತು ವಿಕ್ಕಿ ಕೌಶಲ್​ ಅವರು ಮುಂಬೈನ ಸಿದ್ಧಿವಿನಾಯಕ ದೇವಸ್ಥಾನಕ್ಕೆ (Siddhivinayak temple) ಭೇಟಿ ನೀಡಿದ್ದಾರೆ.

ಹಿಂದಿ ಸಿನಿಮಾಗಳು ಇತ್ತೀಚಿನ ದಿನಗಳಲ್ಲಿ ಉತ್ತಮ ಪ್ರದರ್ಶನ ಕಾಣುತ್ತಿಲ್ಲ. ಹಾಗಾಗಿ ಸಾಧಾರಣೆ ಗಳಿಕೆ ಆದರೂ ಕೂಡ ಸಮಾಧಾನಪಟ್ಟುಕೊಳ್ಳಬೇಕಾದ ಪರಿಸ್ಥಿತಿ ಇದೆ. ಸಾರಾ ಅಲಿ ಖಾನ್​ ಅವರು ಬಾಲಿವುಡ್​ನಲ್ಲಿ ನೆಲೆ ಕಂಡುಕೊಳ್ಳಲು ಪ್ರಯತ್ನಿಸುತ್ತಿದ್ದಾರೆ. ಸೈಫ್​ ಅಲಿ ಖಾನ್​ರ ಮಗಳು ಎಂಬ ಕಾರಣಕ್ಕೆ ಅವರಿಗೆ ಅವಕಾಶಗಳು ಸುಲಭವಾಗಿ ಸಿಗುತ್ತಿವೆ. ಆದರೆ ಅಷ್ಟು ಸುಲಭಕ್ಕೆ ಗೆಲುವು ದಕ್ಕುತ್ತಿಲ್ಲ. ಇನ್ನು, ವಿಕ್ಕಿ ಕೌಶಲ್​ ಹಲವು ರೀತಿಯ ಪಾತ್ರಗಳನ್ನು ಪ್ರಯತ್ನಿಸುತ್ತಿದ್ದಾರೆ.

ಸಾರಾ ಅಲಿ ಖಾನ್​ ಅವರು ಇತ್ತೀಚೆಗೆ ಉಜ್ಜಯಿನಿಯ ಮಹಾಕಾಳೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿದ್ದರು. ಮುಸ್ಲಿಂ ಎಂಬ ಕಾರಣಕ್ಕೆ ಅವರನ್ನು ಸೋಶಿಯಲ್​ ಮೀಡಿಯಾದಲ್ಲಿ ಟ್ರೋಲ್​ ಮಾಡಲಾಗಿತ್ತು. ತಮ್ಮನ್ನು ಟ್ರೋಲ್ ಮಾಡಿದವರಿಗೆ ಸಾರಾ ಅಲಿ ಖಾನ್​ ಅವರು ತಿರುಗೇಟು ನೀಡಿದ್ದರು. ಎಲ್ಲ ಧರ್ಮದ ಪೂಜಾ ಸ್ಥಳಗಳಿಗೆ ತಾವು ಇಷ್ಟೇ ಶ್ರದ್ಧೆ ಮತ್ತು ಭಕ್ತಿಯಿಂದ ಹೋಗುವುದಾಗಿ ಅವರು ಹೇಳಿದ್ದರು.

ಇದನ್ನೂ ಓದಿ: ​Sara Ali Khan: ಮಹಾಕಾಳೇಶ್ವರ ದೇವಸ್ಥಾನಕ್ಕೆ ಸಾರಾ ಅಲಿ ಖಾನ್​ ಭೇಟಿ; ಸೈಫ್​ ಪುತ್ರಿಯ ಟೆಂಪಲ್​ ರನ್​ ಬಗ್ಗೆ ಕೆಲವರ ತಕರಾರು

‘ನಾನು ನನ್ನ ಕೆಲಸವನ್ನು ತುಂಬಾ ಗಂಭೀರವಾಗಿ ತೆಗೆದುಕೊಳ್ಳುತ್ತೇನೆ. ನಾನು ಜನರಿಗಾಗಿ ಮತ್ತು ನಿಮಗಾಗಿ ಕೆಲಸ ಮಾಡುತ್ತೇನೆ. ನನ್ನ ಕೆಲಸ ನಿಮಗೆ ಇಷ್ಟವಾಗದಿದ್ದರೆ ನನಗೆ ಬೇಸರ ಆಗುತ್ತದೆ. ಆದರೆ ನನ್ನ ವೈಯಕ್ತಿಕ ನಂಬಿಕೆಗಳು ನನಗೆ ಸಂಬಂಧಿಸಿದ್ದು. ನಾನು ಅಜ್ಮೇರ್​ ಶರೀಫ್​ ದರ್ಗಾಗೆ ಹೋಗುವಷ್ಟೇ ಶ್ರದ್ಧೆಯಿಂದ ಬಂಗ್ಲಾ ಸಾಹಿಬ್​ ಗುರುದ್ವಾರಕ್ಕೆ ಹೋಗುತ್ತೇನೆ. ಅಷ್ಟೇ ಶ್ರದ್ಧೆಯಿಂದ ಮಹಾಕಾಳೇಶ್ವರ ದೇವಸ್ಥಾನಕ್ಕೆ ಭೇಟಿ ನೀಡುತ್ತೇನೆ. ಇದನ್ನು ನಾನು ಮುಂದುವರಿಸುತ್ತೇನೆ. ಜನರು ಏನು ಬೇಕಾದರೂ ಹೇಳಲಿ. ನನಗೆ ತೊಂದರೆ ಇಲ್ಲ. ನಿಮಗೆ ಆ ಕ್ಷೇತ್ರದ ಶಕ್ತಿ ಇಷ್ಟವಾಗಬೇಕು. ನಾನು ಆ ಶಕ್ತಿಯನ್ನು ನಂಬುತ್ತೇನೆ’ ಎಂದು ಸಾರಾ ಅಲಿ ಖಾನ್​ ಹೇಳಿದ್ದರು.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಕಾಮಗಾರಿಯನ್ನು ಸ್ಥಗಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ: ಸೋಮಣ್ಣ
ಕಾಮಗಾರಿಯನ್ನು ಸ್ಥಗಿತಗೊಳಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ: ಸೋಮಣ್ಣ
ಬೆಂಗಳೂರು ನಗರದಲ್ಲೂ ನಿನ್ನೆ ರಾತ್ರಿ ಮತ್ತು ಇವತ್ತು ಭಾರೀ ಮಳೆ
ಬೆಂಗಳೂರು ನಗರದಲ್ಲೂ ನಿನ್ನೆ ರಾತ್ರಿ ಮತ್ತು ಇವತ್ತು ಭಾರೀ ಮಳೆ
ಹಿತಕರವಲ್ಲದ ವಿಷಯಗಳಿಗೆ ಸುದ್ದಿಯಾಗುವ ಪ್ರತಿಭಾವಂತ ಗಾಯಕಿ ಮಂಗ್ಲಿ
ಹಿತಕರವಲ್ಲದ ವಿಷಯಗಳಿಗೆ ಸುದ್ದಿಯಾಗುವ ಪ್ರತಿಭಾವಂತ ಗಾಯಕಿ ಮಂಗ್ಲಿ
ಹೈಕಮಾಂಡ್-ಸರ್ಕಾರ ಮರುಸಮೀಕ್ಷೆಯ ನಾಟಕ ಮಾಡುತ್ತಿವೆ: ಶ್ರೀರಾಮುಲು
ಹೈಕಮಾಂಡ್-ಸರ್ಕಾರ ಮರುಸಮೀಕ್ಷೆಯ ನಾಟಕ ಮಾಡುತ್ತಿವೆ: ಶ್ರೀರಾಮುಲು
RCB ಟೀಮ್ ಖರೀದಿ ಮಾಡ್ತಾರಾ ಡಿಕೆ ಶಿವಕುಮಾರ್? ಡಿಸಿಎಂ ಹೇಳಿದ್ದಿಷ್ಟು..!
RCB ಟೀಮ್ ಖರೀದಿ ಮಾಡ್ತಾರಾ ಡಿಕೆ ಶಿವಕುಮಾರ್? ಡಿಸಿಎಂ ಹೇಳಿದ್ದಿಷ್ಟು..!
ರಾಜಕೀಯ ವೈಷಮ್ಯ ಮರೆತು ಒಂದಾದ ಬಿಎಸ್​ ವೈ-ಈಶ್ವರಪ್ಪ, ವಿಡಿಯೋ ನೋಡಿ
ರಾಜಕೀಯ ವೈಷಮ್ಯ ಮರೆತು ಒಂದಾದ ಬಿಎಸ್​ ವೈ-ಈಶ್ವರಪ್ಪ, ವಿಡಿಯೋ ನೋಡಿ
RCB ವಿಜಯೋತ್ಸವಕ್ಕೆ ರಾಜ್ಯಪಾಲರಿಗೆ ಆಹ್ವಾನ ನೀಡಿದ್ಯಾರು? ಸತ್ಯಾಂಶ ಬಯಲು
RCB ವಿಜಯೋತ್ಸವಕ್ಕೆ ರಾಜ್ಯಪಾಲರಿಗೆ ಆಹ್ವಾನ ನೀಡಿದ್ಯಾರು? ಸತ್ಯಾಂಶ ಬಯಲು
ನಮ್ಮ ಆಚರಣೆ ನಮ್ಮ ಹಕ್ಕು, ಎಲ್ಲಿದ್ದರೂ ಹಿಂದೂಗಳೇ ಎಂದ ಪಾಕ್​ ಹಿಂದೂಗಳು
ನಮ್ಮ ಆಚರಣೆ ನಮ್ಮ ಹಕ್ಕು, ಎಲ್ಲಿದ್ದರೂ ಹಿಂದೂಗಳೇ ಎಂದ ಪಾಕ್​ ಹಿಂದೂಗಳು
ಕಾನೂನು ಪ್ರಕ್ರಿಯೆ ಮೂಲಕ ಜನಾರ್ಧನ ರೆಡ್ಡಿಗೆ ರಿಲೀಫ್: ಶ್ರೀರಾಮುಲು
ಕಾನೂನು ಪ್ರಕ್ರಿಯೆ ಮೂಲಕ ಜನಾರ್ಧನ ರೆಡ್ಡಿಗೆ ರಿಲೀಫ್: ಶ್ರೀರಾಮುಲು
ವಿಡಿಯೋ ಮಾಡೋದು ನಿಲ್ಲಿಸು; ಡ್ರಗ್ ಪಾರ್ಟಿ ವೇಳೆ ಪೊಲೀಸರಿಗೆ ಮಂಗ್ಲಿ ಆವಾಜ್
ವಿಡಿಯೋ ಮಾಡೋದು ನಿಲ್ಲಿಸು; ಡ್ರಗ್ ಪಾರ್ಟಿ ವೇಳೆ ಪೊಲೀಸರಿಗೆ ಮಂಗ್ಲಿ ಆವಾಜ್