AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

500 ಕೋಟಿ ಕ್ಲಬ್ ಸೇರಿದ ‘ಸೈಯಾರ’ ಮೇಲೆ ಕೃತಿಚೌರ್ಯದ ಆರೋಪ; ಬರಹಗಾರ ಏನಂದ್ರು?

ಬಾಲಿವುಡ್ ಚಿತ್ರ ‘ಸೈಯಾರ’ 500 ಕೋಟಿ ರೂಪಾಯಿ ಗಳಿಕೆ ಮಾಡುವ ಮೂಲಕ ದೊಡ್ಡ ಯಶಸ್ಸು ಕಂಡಿದೆ. ಚಿತ್ರದ ನಟ-ನಟಿಯರು ರಾತ್ರೋರಾತ್ರಿ ಸ್ಟಾರ್ ಆಗಿದ್ದಾರೆ. ಆದರೆ, ಈ ಚಿತ್ರ ಕೊರಿಯನ್ ಚಿತ್ರದ ರಿಮೇಕ್ ಎಂಬ ಆರೋಪ ಎದುರಿಸುತ್ತಿದೆ. ಬರಹಗಾರರು ಈ ಆರೋಪವನ್ನು ನಿರಾಕರಿಸಿದ್ದಾರೆ.

500 ಕೋಟಿ ಕ್ಲಬ್ ಸೇರಿದ ‘ಸೈಯಾರ’ ಮೇಲೆ ಕೃತಿಚೌರ್ಯದ ಆರೋಪ; ಬರಹಗಾರ ಏನಂದ್ರು?
ಸೈಯಾರಾ
 ಶ್ರೀಲಕ್ಷ್ಮೀ ಎಚ್
| Edited By: |

Updated on:Aug 19, 2025 | 7:48 AM

Share

ಬಾಲಿವುಡ್​ನ ಸೆನ್ಸೇಶನಲ್ ಡ್ರಾಮಾ ‘ಸೈಯಾರ’ ಸಿನಿಮಾ (Saiyaara) ಸೂಪರ್ ಹಿಟ್ ಆಗಿದೆ. ಈ ಚಿತ್ರ ವಿಶ್ವ ಬಾಕ್ಸ್ ಆಫೀಸ್​ನಲ್ಲಿ 500 ಕೋಟಿ ರೂಪಾಯಿ ಕ್ಲಬ್ ಸೇರಿದೆ. ರೊಮ್ಯಾಂಟಿಕ್ ಡ್ರಾಮಾ ಚಿತ್ರವೊಂದು ಇಷ್ಟು ದೊಡ್ಡ ಮಟ್ಟದಲ್ಲಿ ಗಳಿಕೆ ಮಾಡಿದ್ದು ಇದೇ ಮೊದಲು. ಈ ಚಿತ್ರದ ಮೂಲಕ ನಟ ಅಹಾನ್ ಪಾಂಡೆ ಹಾಗೂ ನಟಿ ಅನೀತ್ ಪಡ್ಡ ದೊಡ್ಡ ಗೆಲುವು ಕಂಡಿದ್ದಾರೆ. ರಾತ್ರೋ ರಾತ್ರಿ ಸ್ಟಾರ್ ಆಗಿದ್ದಾರೆ. ಈ ಸಿನಿಮಾ ಮೇಲೆ ಕೃತಿ ಚೌರ್ಯದ ಆರೋಪ ಎದುರಾಗಿದೆ. ಇದಕ್ಕೆ ಬರಹಗಾರ ಸಂಕಲ್ಪ್ ಪ್ರತಿಕ್ರಿಯೆ ನೀಡಿದ್ದಾರೆ.

‘ಸೈಯಾರ’ ಸಿನಿಮಾ ರಿಲೀಸ್ ಆದ ಬಳಿಕ ದೊಡ್ಡ ಮಟ್ಟದಲ್ಲಿ ಕಲೆಕ್ಷನ್ ಮಾಡುತ್ತಾ ಬಂತು. ಈ ಸಿನಿಮಾ ರಿಲೀಸ್ ಆದ ಕೆಲವೇ ದಿನಗಳಲ್ಲಿ ಇದು ಕೊರಿಯಾ ಸಿನಿಮಾ ‘ಎ ಮೂಮೆಂಟ್ ಟು ರಿಮೆಂಬರ್’ ಚಿತ್ರದ ರಿಮೇಕ್ ಎಂದು ಹೇಳಲಾಯಿತು. ಎರಡೂ ಸಿನಿಮಾಗಳ ಕೆಲ ದೃಶ್ಯಗಳು ಹೋಲಿಕೆ ಇದ್ದವು. ಇದರಿಂದ ಕೃತಿ ಚೌರ್ಯದ ಆರೋಪ ಎದುರಾಗಿತ್ತು. ಆದರೆ, ಬಹರಗಾರರು ಈ ಬಗ್ಗೆ ಮನವಿ ಒಂದನ್ನು ಮಾಡಿಕೊಂಡಿದ್ದಾರೆ. ಇದನ್ನು ನಂಬ ಬೇಡಿ ಎಂದು ಕೋರಿದ್ದಾರೆ.

‘ಸೈಯಾರ ಹಾಗೂ ಎ ಮೂಮೆಂಟ್​ ಟು ರಿಮೆಂಬರ್ ಎರಡೂ ಸಿನಿಮಾ ವೀಕ್ಷಣೆಗೆ ಲಭ್ಯವಿದೆ. ಎರಡೂ ಚಿತ್ರವನ್ನು ವೀಕ್ಷಿಸಿ. ಆ ಬಳಿಕ ಇದು ಸ್ಫೂರ್ತಿ ಪಡೆದಿದ್ದೋ, ಕೃತಿ ಚೌರ್ಯವೋ ಅಥವಾ ಮೂಲ ಕಥೆಯೋ ಎಂಬುದನ್ನು ಹೇಳಿ. ನಿರ್ದೇಶಕ ಮೋಹಿತ್ ಸೂರಿ ಅವರನ್ನು ಹೀಗೆ ಒಮ್ಮೆ ಭೇಟಿ ಮಾಡಿದಾಗ ಹುಟ್ಟಿದ ಕಥೆ ಇದು’ ಎನ್ನುತ್ತಾರೆ ಸಂಕಲ್ಪ್.

ಇದನ್ನೂ ಓದಿ
Image
ಮಹೇಶ್ ಬಾಬು ಇಷ್ಟೊಂದು ಶ್ರೀಮಂತರೇ? ನಟನ ಆಸ್ತಿ ಬಗ್ಗೆ ಇಲ್ಲಿದೆ ವಿವರ
Image
‘ಬ್ಲಾಕ್​ಬಸ್ಟರ್’; ಒಂದು ವಾರ ಮೊದಲೇ ಹೊರಬಿತ್ತು ಕೂಲಿ ಸಿನಿಮಾ ವಿಮರ್ಶೆ
Image
ತೆಲುಗು ರಿಲೀಸ್ ಬೆನ್ನಲ್ಲೇ ಮತ್ತೆ ಹೆಚ್ಚಿತು ‘ಸು ಫ್ರಮ್ ಸೋ’ ಕಲೆಕ್ಷನ್
Image
‘ನೀವು ಗ್ಯಾಂಗ್ ಮಾಡಿ ಬ್ರದರ್’; ‘ಶೆಟ್ಟಿ ಮಾಫಿಯಾ’ ಎಂದವರಿಗೆ ರಾಜ್ ಉತ್ತರ

‘ಸೈಯಾರ’ ಸಿನಿಮಾ ‘ಆಶಿಕಿ 2’ ಚಿತ್ರದ ಸೀಕ್ವೆಲ್ ರೀತಿ ಇದೆ ಎಂಬ ಅಭಿಪ್ರಾಯವನ್ನು ಅನೇಕರು ಹೊರಹಾಕಿದ್ದರು. ಆದರೆ, ಇದನ್ನು ಸಂಕಲ್ಪ್ ಒಪ್ಪಲು ರೆಡಿ ಇಲ್ಲ. ಈ ವಿಚಾರವನ್ನು ನೇರವಾಗಿ ಅಲ್ಲಗಳೆದಿದ್ದಾರೆ.

ಇದನ್ನೂ ಓದಿ: ‘ಸೈಯಾರ’ ನೋಡಿದ ಬಳಿಕ ಗೆಳತಿಯರಿಗಾಗಿ ಥಿಯೇಟರ್​ನಲ್ಲೇ ಹೊಡೆದಾಡಿಕೊಂಡ ಯುವಕರು

‘ಸೈಯಾರ’ ಸಿನಿಮಾ ಭಾರತದ ಬಾಕ್ಸ್ ಆಫೀಸ್​ನಲ್ಲಿ 310 ಕೋಟಿ ರೂಪಾಯಿ ಗಳಿಕೆ ಮಾಡಿದೆ. 22ನೇ ದಿನ ಈ ಚಿತ್ರ 1.65 ಕೋಟಿ ರೂಪಾಯಿ ಗಳಿಕೆ ಮಾಡಿದೆ ಎಂಬುದು ಚಿತ್ರದ ಹೆಚ್ಚುಗಾರಿಕೆ. ಸಿನಿಮಾ ವಿಶ್ವ ಬಾಕ್ಸ್ ಆಫೀಸ್​ನಲ್ಲಿ 500 ಕೋಟಿ ರೂಪಾಯಿ ಸಂಗ್ರಹಿಸಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:38 am, Sat, 9 August 25

Follow Us
Shreelaxmi H
Shreelaxmi H

ಪತ್ರಕರ್ತೆ ಆಗಬೇಕು ಅಂದುಕೊಂಡವಳು. ಮನೆಯವರ ಒತ್ತಾಯಕ್ಕೆ ಅಕೌಂಟ್ ತೆಗೆದುಕೊಂಡೆ. ಈಗ ಬ್ಯಾಂಕ್ ಎಕ್ಸಾಂಗಳನ್ನು ಬರೆಯುತ್ತಿದ್ದೇನೆ. ಸಮಯ ಸಿಕ್ಕಾಗ ಸುತ್ತಾಡುತ್ತೇನೆ. ಓದಿನ ಬಗ್ಗೆ ಅತೀವ ಆಸಕ್ತಿ. ರವಿ ಬೆಳಗೆರೆ, ತೇಜಸ್ವಿ ನೆಚ್ಚಿನವರು. ಅವರ ಪುಸ್ತಕಗಳನ್ನು ಮತ್ತೆ ಮತ್ತೆ ಓದುತ್ತೇನೆ. ಸಮಯ ಸಿಕ್ಕಾಗ ಪತ್ರಿಕೆಗಳಿಗೆ ಕಥೆಗಳನ್ನು ಬರೆಯುತ್ತೇನೆ. ಸಿನಿಮಾ ಬಗ್ಗೆ ಅತೀವ ಆಸಕ್ತಿ. ಈಗ ಟಿವಿ9 ಕನ್ನಡಕ್ಕೆ ಸಿನಿಮಾ ಸುದ್ದಿಗಳನ್ನು ಬರೆಯುತ್ತಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು