AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಹಮಾರೆ ಬಾರಾ’ ವಿವಾದ; ಸೆನ್ಸಾರ್ ಮಂಡಳಿ ಓಕೆ ಹೇಳಿದ ಡೈಲಾಗ್​ಗೆ ಹೈಕೋರ್ಟ್ ತಕರಾರು

ಡೈಲಾಗ್ ವಿವಾದಿತ ಎನಿಸಿದರೆ ಸೆನ್ಸಾರ್ ಮಂಡಳಿಯವರೇ ಅದಕ್ಕೆ ಕತ್ತರಿ ಹಾಕುವಂತೆ ಸೂಚಿಸುತ್ತಾರೆ. ‘ಹಮಾರೆ ಬಾರಾ’ ಚಿತ್ರಕ್ಕೆ ಸೆನ್ಸಾರ್ ಮಂಡಳಿ ಮೂರು ಕಡೆ ಕತ್ತೆ ಹಾಕಿ ‘UA’ ಪ್ರಮಾಣ ಪತ್ರ ನೀಡಿದೆ. ಆದರೆ, ಚಿತ್ರದ ಡೈಲಾಗ್​ ಬಗ್ಗೆ ಕೆಲವರು ತಕರಾರು ತೆಗೆದು ಕೋರ್ಟ್ ಮೆಟ್ಟಿಲೇರಿದ್ದಾರೆ.

‘ಹಮಾರೆ ಬಾರಾ’ ವಿವಾದ; ಸೆನ್ಸಾರ್ ಮಂಡಳಿ ಓಕೆ ಹೇಳಿದ ಡೈಲಾಗ್​ಗೆ ಹೈಕೋರ್ಟ್ ತಕರಾರು
ಹಮಾರಾ ಬಾರಾ
 ಶ್ರೀಲಕ್ಷ್ಮೀ ಎಚ್
| Edited By: |

Updated on:Jun 10, 2024 | 8:08 AM

Share

ಅನ್ನು ಕಪೂರ್ (Annu Kapoor) ನಟನೆಯ ‘ಹಾಮಾರೆ ಬಾರಾ’ ಸಿನಿಮಾ ಸದ್ಯ ವಿವಾದದ ಕೇಂದ್ರ ಬಿಂದು ಆಗಿದೆ. ಈ ಸಿನಿಮಾದ ಟ್ರೇಲರ್ ರಿಲೀಸ್ ಆದಾಗಿನಿಂದಲೂ ಸಾಕಷ್ಟು ಚರ್ಚೆಗಳು ನಡೆಯುತ್ತಲೇ ಇದ್ದವು. ಈ ಚಿತ್ರಕ್ಕೆ ಅನೇಕರು ತಕಾರರು ತೆಗೆದಿದ್ದಾರೆ. ಕರ್ನಾಟಕದಲ್ಲಿ ಈ ಸಿನಿಮಾ ರಿಲೀಸ್​ಗೆ ಸರ್ಕಾರ ನಿಷೇಧ ಹೇರಿದೆ. ಇನ್ನು, ಬಾಂಬೇ ಹೈಕೋರ್ಟ್​ ಕೂಡ ಜೂನ್ 14ರವರೆಗೆ ಸಿನಿಮಾ ರಿಲೀಸ್​ಗೆ ನಿಷೇಧ ಹೇರಿತ್ತು. ಈ ಮಧ್ಯೆ ಬಾಂಬೆ ಹೈಕೋರ್ಟ್ ಸಿನಿಮಾ ರಿಲೀಸ್​ಗೆ ಅನುಮತಿ ಕೊಟ್ಟಿದೆ. ಅರ್ಜಿದಾರರು ಸಿನಿಮಾದ ಕೆಲವು ಡೈಲಾಗ್​ಗೆ ತಕರಾರು ತೆಗೆದಿದ್ದರು. ಇದನ್ನು ಡಿಲೀಟ್ ಮಾಡಲು ಸಿನಿಮಾ ತಂಡ ಒಪ್ಪಿದ ಬಳಿಕ ರಿಲೀಸ್​ಗೆ ಕೋರ್ಟ್ ಒಪ್ಪಿಗೆ ನೀಡಿದೆ. ಸದ್ಯ ಇದು ಸಾಕಷ್ಟು ಚರ್ಚೆ ಆಗುತ್ತಿದೆ.

ಸೆನ್ಸಾರ್ ಮಂಡಳಿ ರಿಲೀಸ್​ಗೂ ಮೊದಲು ಸಿನಿಮಾ ವೀಕ್ಷಿಸಿ ಪ್ರಮಾಣ ಪತ್ರ ನೀಡುತ್ತದೆ. ಅವರು ನೀಡುವ ಪ್ರಮಾಣ ಪತ್ರದಲ್ಲಿ ಯಾರು ಸಿನಿಮಾ ವೀಕ್ಷಿಸಬಹುದು, ಯಾರು ಸಿನಿಮಾ ವೀಕ್ಷಿಸಬಾರದು ಎಂಬುದು ಉಲ್ಲೇಖ ಆಗಿರುತ್ತದೆ. ಎಲ್ಲಕ್ಕಿಂತ ಮುಖ್ಯವಾಗಿ ಡೈಲಾಗ್ ವಿವಾದಿತ ಎನಿಸಿದರೆ ಸೆನ್ಸಾರ್ ಮಂಡಳಿಯವರೇ ಅದಕ್ಕೆ ಕತ್ತರಿ ಹಾಕುವಂತೆ ಸೂಚಿಸುತ್ತಾರೆ. ‘ಹಮಾರೆ ಬಾರಾ’ ಚಿತ್ರಕ್ಕೆ ಸೆನ್ಸಾರ್ ಮಂಡಳಿ ಮೂರು ಕಡೆ ಕತ್ತೆ ಹಾಕಿ ‘UA’ ಪ್ರಮಾಣ ಪತ್ರ ನೀಡಿದೆ. ಆದರೆ, ಚಿತ್ರದ ಡೈಲಾಗ್​ ಬಗ್ಗೆ ಕೆಲವರು ತಕರಾರು ತೆಗೆದು ಕೋರ್ಟ್ ಮೆಟ್ಟಿಲೇರಿದ್ದಾರೆ.

ಸಿಬಿಎಫ್​ಸಿಯಲ್ಲಿ (ಸೆನ್ಸಾರ್ ಮಂಡಳಿ) ಚಿತ್ರ ಪಾಸ್ ಆಗಿದೆ. ಆದರೆ, ಕೋರ್ಟ್​ ಸಿನಿಮಾ ಡೈಲಾಗ್​ಗೆ ಕತ್ತರಿ ಹಾಕುವಂತೆ ಹೇಳಿದೆ. ಇದೊಂದು ಅಪರೂಪದ ಪ್ರಕರಣ ಎಂಬುದು ಕೆಲವರ ಅಭಿಪ್ರಾಯ. ಸಾಮಾನ್ಯವಾಗಿ, ಸಿನಿಮಾ ಬಿಡುಗಡೆಯನ್ನು ತಡೆಯಲು ಯಾರಾದರೂ ನ್ಯಾಯಾಲಯಕ್ಕೆ ಹೋದಾಗ, ಸೆನ್ಸಾರ್ ಮಂಡಳಿಯಿಂದ ಚಿತ್ರಕ್ಕೆ ಅನುಮತಿ ನೀಡಲಾಗಿದೆ ಎಂದು ಉಲ್ಲೇಖಿಸಿ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ. ಆದರೆ, ಇಲ್ಲಿ ಸೆನ್ಸಾರ್ ಮಂಡಳಿಯ ಕೆಲಸವನ್ನು ಕೋರ್ಟ್ ಮಾಡಿದೆ ಎಂದು ಕೆಲವರು ಅಭಿಪ್ರಾಯಪಟ್ಟಿದ್ದಾರೆ.

‘ಸಿಬಿಎಫ್‌ಸಿಯಿಂದ ಸರಿಯಾಗಿ ಪ್ರಮಾಣೀಕರಿಸಲ್ಪಟ್ಟ ಸಿನಿಮಾಗಳನ್ನು ಬಿಡುಗಡೆಯನ್ನು ನಿಲ್ಲಿಸಲು ಈ ಅರ್ಜಿಯಲ್ಲಿರುವಂತಹ ವ್ಯಕ್ತಿಗೆ ಅನುಮತಿ ನೀಡಿದರೆ ಅದು ನಿರ್ಮಾಪಕರನ್ನು ಸುಲಿಗೆ ಮಾಡಲು ಪ್ರೋತ್ಸಾಹಿಸುತ್ತದೆ’ ಎಂದು ಕೆಲವರು ಅಭಿಪ್ರಾಯಪಟ್ಟಿದ್ದಾರೆ.

ಸಿಬಿಎಸ್​ಇ ಮಂಡಳಿಯವರು ಈಗಾಗಲೇ ಸಿನಿಮಾ ವೀಕ್ಷಿಸಿ ಮೂರು ಕಡೆಗಳಲ್ಲಿ ಕತ್ತರಿ ಹಾಕುವಂತೆ ಸೂಚಿಸಿದೆ. ಇದಕ್ಕೆ ಸಿನಿಮಾ ತಂಡದವರು ಕೂಡ ಒಪ್ಪಿದ್ದರು. ಆದಾಗ್ಯೂ ಚಿತ್ರಕ್ಕೆ ಹಿನ್ನಡೆ ಆಗಿದೆ.

ಇದನ್ನೂ ಓದಿ: ಮುಸ್ಲಿಂ ಮಹಿಳೆಯರ ಕುರಿತ ‘ಹಮಾರೆ ಬಾರಾ’ ಸಿನಿಮಾ ಕರ್ನಾಟಕದಲ್ಲಿ ನಿಷೇಧ 

ಕರ್ನಾಟಕದಲ್ಲೂ ಸಿನಿಮಾಗೆ ನಿಷೇಧ ಹೇರಲಾಗಿದೆ. ರಾಜ್ಯ ಸರ್ಕಾರಗಳು ಇತ್ತೀಚೆಗಿನ ಕೆಲವು ವರ್ಷಗಳಲ್ಲಿ ಕೆಲವು ಸಿನಿಮಾಗಳನ್ನು ಬ್ಯಾನ್ ಮಾಡಿವೆ. ನಿಷೇಧವನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಿದ ಸಿನಿಮಾ ತಂಡಗಳಿಗೆ ಜಯ ದೊರೆತಿದೆ. ಒಂದೊಮ್ಮೆ ಕರ್ನಾಟಕ ರಾಜ್ಯ ಸರ್ಕಾರದ ನಿಷೇಧದ ವಿರುದ್ಧ ಚಿತ್ರತಂಡ ನ್ಯಾಯಾಲಯಕ್ಕೆ ಹೋದರೆ ಗೆಲುವು ಸಿಗುವ ಸಾಧ್ಯತೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:07 am, Mon, 10 June 24

ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
ಬಿಜೆಪಿ ಕಾರ್ಯಕರ್ತೆಯ ಬಟ್ಟೆಬಿಚ್ಚಿ ಹಲ್ಲೆ: ಗೃಹ ಸಚಿವರು ಹೇಳಿದ್ದೇನು?
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
30 ಕಾಂಗ್ರೆಸ್​​​ ಕಾರ್ಯಕರ್ತರಿಗೆ ಶಾಕ್​​ ಕೊಟ್ಟ ಪೊಲೀಸರು
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಥ್ರಿಲ್ಲರ್ ಸೂಪರ್ ಥ್ರಿಲ್ಲರ್... ಕೊನೆಯ ಎಸೆತದಲ್ಲಿ ಸಿಕ್ಸ್, ಮ್ಯಾಚ್ ವಿನ್
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಗವಿಸಿದ್ದೇಶ್ವರ ಜಾತ್ರೆ: ದಾಸೋಹದಲ್ಲಿ ಹೊಸ ದಾಖಲೆ, ಲಕ್ಷ ರೊಟ್ಟಿ ಸಂಗ್ರಹ!
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಬಾಲ್ಕನಿಯಲ್ಲಿ ಸಿಲುಕಿದ್ದವರನ್ನು ರಕ್ಷಿಸಿದ ಬ್ಲಿಂಕಿಟ್ ಡೆಲಿವರಿ ಏಜೆಂಟ್
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಧ್ರುವಂತ್-ಅಶ್ವಿನಿ ಮಧ್ಯೆ ಕಿತ್ತಾಟ; ಉರಿಯೋ ಬೆಂಕಿಗೆ ತುಪ್ಪ ಸುರಿದ ಗಿಲ್ಲಿ
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಮರಣಿಸಿದವರ ಬಗ್ಗೆ ಕೆಟ್ಟದಾಗಿ ಮಾತನಾಡಬಾರದು ಯಾಕೆ?
ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಬಗ್ಗೆ ಸರ್ಕಾರ ಬಿಗ್ ಅಪ್​ಡೇಟ್!
ಓಲಾ, ಊಬರ್, ರ್ಯಾಪಿಡೋ, ನಮ್ಮ ಯಾತ್ರಿ ಬಗ್ಗೆ ಸರ್ಕಾರ ಬಿಗ್ ಅಪ್​ಡೇಟ್!
ಈ ರಾಶಿಯವರಿಗೆ ಇಂದು ವೃತ್ತಿಯಲ್ಲಿ ಪ್ರಗತಿ, ವ್ಯವಹಾರದಲ್ಲಿ ಲಾಭ
ಈ ರಾಶಿಯವರಿಗೆ ಇಂದು ವೃತ್ತಿಯಲ್ಲಿ ಪ್ರಗತಿ, ವ್ಯವಹಾರದಲ್ಲಿ ಲಾಭ
ಕಿಕ್ಕಿರಿದ ರೈಲಿನೊಳಗೆ ಹತ್ತಲು ಬಡ ಯುವಕನ ಪರದಾಟ; ಇಲ್ಲಿದೆ ವಿಡಿಯೋ
ಕಿಕ್ಕಿರಿದ ರೈಲಿನೊಳಗೆ ಹತ್ತಲು ಬಡ ಯುವಕನ ಪರದಾಟ; ಇಲ್ಲಿದೆ ವಿಡಿಯೋ