Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಹಮಾರೆ ಬಾರಾ’ ವಿವಾದ; ಸೆನ್ಸಾರ್ ಮಂಡಳಿ ಓಕೆ ಹೇಳಿದ ಡೈಲಾಗ್​ಗೆ ಹೈಕೋರ್ಟ್ ತಕರಾರು

ಡೈಲಾಗ್ ವಿವಾದಿತ ಎನಿಸಿದರೆ ಸೆನ್ಸಾರ್ ಮಂಡಳಿಯವರೇ ಅದಕ್ಕೆ ಕತ್ತರಿ ಹಾಕುವಂತೆ ಸೂಚಿಸುತ್ತಾರೆ. ‘ಹಮಾರೆ ಬಾರಾ’ ಚಿತ್ರಕ್ಕೆ ಸೆನ್ಸಾರ್ ಮಂಡಳಿ ಮೂರು ಕಡೆ ಕತ್ತೆ ಹಾಕಿ ‘UA’ ಪ್ರಮಾಣ ಪತ್ರ ನೀಡಿದೆ. ಆದರೆ, ಚಿತ್ರದ ಡೈಲಾಗ್​ ಬಗ್ಗೆ ಕೆಲವರು ತಕರಾರು ತೆಗೆದು ಕೋರ್ಟ್ ಮೆಟ್ಟಿಲೇರಿದ್ದಾರೆ.

‘ಹಮಾರೆ ಬಾರಾ’ ವಿವಾದ; ಸೆನ್ಸಾರ್ ಮಂಡಳಿ ಓಕೆ ಹೇಳಿದ ಡೈಲಾಗ್​ಗೆ ಹೈಕೋರ್ಟ್ ತಕರಾರು
ಹಮಾರಾ ಬಾರಾ
Follow us
 ಶ್ರೀಲಕ್ಷ್ಮೀ ಎಚ್
| Updated By: ರಾಜೇಶ್ ದುಗ್ಗುಮನೆ

Updated on:Jun 10, 2024 | 8:08 AM

ಅನ್ನು ಕಪೂರ್ (Annu Kapoor) ನಟನೆಯ ‘ಹಾಮಾರೆ ಬಾರಾ’ ಸಿನಿಮಾ ಸದ್ಯ ವಿವಾದದ ಕೇಂದ್ರ ಬಿಂದು ಆಗಿದೆ. ಈ ಸಿನಿಮಾದ ಟ್ರೇಲರ್ ರಿಲೀಸ್ ಆದಾಗಿನಿಂದಲೂ ಸಾಕಷ್ಟು ಚರ್ಚೆಗಳು ನಡೆಯುತ್ತಲೇ ಇದ್ದವು. ಈ ಚಿತ್ರಕ್ಕೆ ಅನೇಕರು ತಕಾರರು ತೆಗೆದಿದ್ದಾರೆ. ಕರ್ನಾಟಕದಲ್ಲಿ ಈ ಸಿನಿಮಾ ರಿಲೀಸ್​ಗೆ ಸರ್ಕಾರ ನಿಷೇಧ ಹೇರಿದೆ. ಇನ್ನು, ಬಾಂಬೇ ಹೈಕೋರ್ಟ್​ ಕೂಡ ಜೂನ್ 14ರವರೆಗೆ ಸಿನಿಮಾ ರಿಲೀಸ್​ಗೆ ನಿಷೇಧ ಹೇರಿತ್ತು. ಈ ಮಧ್ಯೆ ಬಾಂಬೆ ಹೈಕೋರ್ಟ್ ಸಿನಿಮಾ ರಿಲೀಸ್​ಗೆ ಅನುಮತಿ ಕೊಟ್ಟಿದೆ. ಅರ್ಜಿದಾರರು ಸಿನಿಮಾದ ಕೆಲವು ಡೈಲಾಗ್​ಗೆ ತಕರಾರು ತೆಗೆದಿದ್ದರು. ಇದನ್ನು ಡಿಲೀಟ್ ಮಾಡಲು ಸಿನಿಮಾ ತಂಡ ಒಪ್ಪಿದ ಬಳಿಕ ರಿಲೀಸ್​ಗೆ ಕೋರ್ಟ್ ಒಪ್ಪಿಗೆ ನೀಡಿದೆ. ಸದ್ಯ ಇದು ಸಾಕಷ್ಟು ಚರ್ಚೆ ಆಗುತ್ತಿದೆ.

ಸೆನ್ಸಾರ್ ಮಂಡಳಿ ರಿಲೀಸ್​ಗೂ ಮೊದಲು ಸಿನಿಮಾ ವೀಕ್ಷಿಸಿ ಪ್ರಮಾಣ ಪತ್ರ ನೀಡುತ್ತದೆ. ಅವರು ನೀಡುವ ಪ್ರಮಾಣ ಪತ್ರದಲ್ಲಿ ಯಾರು ಸಿನಿಮಾ ವೀಕ್ಷಿಸಬಹುದು, ಯಾರು ಸಿನಿಮಾ ವೀಕ್ಷಿಸಬಾರದು ಎಂಬುದು ಉಲ್ಲೇಖ ಆಗಿರುತ್ತದೆ. ಎಲ್ಲಕ್ಕಿಂತ ಮುಖ್ಯವಾಗಿ ಡೈಲಾಗ್ ವಿವಾದಿತ ಎನಿಸಿದರೆ ಸೆನ್ಸಾರ್ ಮಂಡಳಿಯವರೇ ಅದಕ್ಕೆ ಕತ್ತರಿ ಹಾಕುವಂತೆ ಸೂಚಿಸುತ್ತಾರೆ. ‘ಹಮಾರೆ ಬಾರಾ’ ಚಿತ್ರಕ್ಕೆ ಸೆನ್ಸಾರ್ ಮಂಡಳಿ ಮೂರು ಕಡೆ ಕತ್ತೆ ಹಾಕಿ ‘UA’ ಪ್ರಮಾಣ ಪತ್ರ ನೀಡಿದೆ. ಆದರೆ, ಚಿತ್ರದ ಡೈಲಾಗ್​ ಬಗ್ಗೆ ಕೆಲವರು ತಕರಾರು ತೆಗೆದು ಕೋರ್ಟ್ ಮೆಟ್ಟಿಲೇರಿದ್ದಾರೆ.

ಸಿಬಿಎಫ್​ಸಿಯಲ್ಲಿ (ಸೆನ್ಸಾರ್ ಮಂಡಳಿ) ಚಿತ್ರ ಪಾಸ್ ಆಗಿದೆ. ಆದರೆ, ಕೋರ್ಟ್​ ಸಿನಿಮಾ ಡೈಲಾಗ್​ಗೆ ಕತ್ತರಿ ಹಾಕುವಂತೆ ಹೇಳಿದೆ. ಇದೊಂದು ಅಪರೂಪದ ಪ್ರಕರಣ ಎಂಬುದು ಕೆಲವರ ಅಭಿಪ್ರಾಯ. ಸಾಮಾನ್ಯವಾಗಿ, ಸಿನಿಮಾ ಬಿಡುಗಡೆಯನ್ನು ತಡೆಯಲು ಯಾರಾದರೂ ನ್ಯಾಯಾಲಯಕ್ಕೆ ಹೋದಾಗ, ಸೆನ್ಸಾರ್ ಮಂಡಳಿಯಿಂದ ಚಿತ್ರಕ್ಕೆ ಅನುಮತಿ ನೀಡಲಾಗಿದೆ ಎಂದು ಉಲ್ಲೇಖಿಸಿ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ. ಆದರೆ, ಇಲ್ಲಿ ಸೆನ್ಸಾರ್ ಮಂಡಳಿಯ ಕೆಲಸವನ್ನು ಕೋರ್ಟ್ ಮಾಡಿದೆ ಎಂದು ಕೆಲವರು ಅಭಿಪ್ರಾಯಪಟ್ಟಿದ್ದಾರೆ.

‘ಸಿಬಿಎಫ್‌ಸಿಯಿಂದ ಸರಿಯಾಗಿ ಪ್ರಮಾಣೀಕರಿಸಲ್ಪಟ್ಟ ಸಿನಿಮಾಗಳನ್ನು ಬಿಡುಗಡೆಯನ್ನು ನಿಲ್ಲಿಸಲು ಈ ಅರ್ಜಿಯಲ್ಲಿರುವಂತಹ ವ್ಯಕ್ತಿಗೆ ಅನುಮತಿ ನೀಡಿದರೆ ಅದು ನಿರ್ಮಾಪಕರನ್ನು ಸುಲಿಗೆ ಮಾಡಲು ಪ್ರೋತ್ಸಾಹಿಸುತ್ತದೆ’ ಎಂದು ಕೆಲವರು ಅಭಿಪ್ರಾಯಪಟ್ಟಿದ್ದಾರೆ.

ಸಿಬಿಎಸ್​ಇ ಮಂಡಳಿಯವರು ಈಗಾಗಲೇ ಸಿನಿಮಾ ವೀಕ್ಷಿಸಿ ಮೂರು ಕಡೆಗಳಲ್ಲಿ ಕತ್ತರಿ ಹಾಕುವಂತೆ ಸೂಚಿಸಿದೆ. ಇದಕ್ಕೆ ಸಿನಿಮಾ ತಂಡದವರು ಕೂಡ ಒಪ್ಪಿದ್ದರು. ಆದಾಗ್ಯೂ ಚಿತ್ರಕ್ಕೆ ಹಿನ್ನಡೆ ಆಗಿದೆ.

ಇದನ್ನೂ ಓದಿ: ಮುಸ್ಲಿಂ ಮಹಿಳೆಯರ ಕುರಿತ ‘ಹಮಾರೆ ಬಾರಾ’ ಸಿನಿಮಾ ಕರ್ನಾಟಕದಲ್ಲಿ ನಿಷೇಧ 

ಕರ್ನಾಟಕದಲ್ಲೂ ಸಿನಿಮಾಗೆ ನಿಷೇಧ ಹೇರಲಾಗಿದೆ. ರಾಜ್ಯ ಸರ್ಕಾರಗಳು ಇತ್ತೀಚೆಗಿನ ಕೆಲವು ವರ್ಷಗಳಲ್ಲಿ ಕೆಲವು ಸಿನಿಮಾಗಳನ್ನು ಬ್ಯಾನ್ ಮಾಡಿವೆ. ನಿಷೇಧವನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಿದ ಸಿನಿಮಾ ತಂಡಗಳಿಗೆ ಜಯ ದೊರೆತಿದೆ. ಒಂದೊಮ್ಮೆ ಕರ್ನಾಟಕ ರಾಜ್ಯ ಸರ್ಕಾರದ ನಿಷೇಧದ ವಿರುದ್ಧ ಚಿತ್ರತಂಡ ನ್ಯಾಯಾಲಯಕ್ಕೆ ಹೋದರೆ ಗೆಲುವು ಸಿಗುವ ಸಾಧ್ಯತೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 8:07 am, Mon, 10 June 24

ರಜತ್ ಪಾಟಿದರ್ ಆಟಕ್ಕೆ ಬೆರಗಾದ ಕಿಂಗ್ ಕೊಹ್ಲಿ; ವಿಡಿಯೋ
ರಜತ್ ಪಾಟಿದರ್ ಆಟಕ್ಕೆ ಬೆರಗಾದ ಕಿಂಗ್ ಕೊಹ್ಲಿ; ವಿಡಿಯೋ
ಸಮನ್ವಯ ಸಮಿತಿಯ ಅವಶ್ಯಕತೆ ಮನಗಾಣುತ್ತಿರುವ ಕೆಲ ನಾಯಕರು
ಸಮನ್ವಯ ಸಮಿತಿಯ ಅವಶ್ಯಕತೆ ಮನಗಾಣುತ್ತಿರುವ ಕೆಲ ನಾಯಕರು
ಪಂಬನ್ ಸೇತುವೆ ಮೇಲೆ ಮೊದಲ ರೈಲು ಸಂಚಾರ; ಬಾವುಟ ಬೀಸಿ ಪ್ರಯಾಣಿಕರ ಸಂತಸ
ಪಂಬನ್ ಸೇತುವೆ ಮೇಲೆ ಮೊದಲ ರೈಲು ಸಂಚಾರ; ಬಾವುಟ ಬೀಸಿ ಪ್ರಯಾಣಿಕರ ಸಂತಸ
ಬಿಜೆಪಿ ನಾಯಕರೊಂದಿಗೆ ಯಾತ್ರೆಯಲ್ಲಿ ಕಾಣಿಸಿದ ಪ್ರತಾಪ್ ಸಿಂಹ
ಬಿಜೆಪಿ ನಾಯಕರೊಂದಿಗೆ ಯಾತ್ರೆಯಲ್ಲಿ ಕಾಣಿಸಿದ ಪ್ರತಾಪ್ ಸಿಂಹ
ಮಂತ್ರಿಯೊಬ್ಬರು ಮಾಡಿರುವ ಆರೋಪಗಳ ಬಗ್ಗೆ ಗೃಹ ಸಚಿವ ಮೌನ ಯಾಕೆ? ಹೆಚ್ಡಿಕೆ
ಮಂತ್ರಿಯೊಬ್ಬರು ಮಾಡಿರುವ ಆರೋಪಗಳ ಬಗ್ಗೆ ಗೃಹ ಸಚಿವ ಮೌನ ಯಾಕೆ? ಹೆಚ್ಡಿಕೆ
ಪಿಸಿಸಿಗಳಿಗೆ ನೇಮಕಾತಿ ಪ್ರಕ್ರಿಯೆ ಶೀಘ್ರದಲ್ಲಿ ಆರಂಭಿಸುತ್ತೇವೆ: ಖರ್ಗೆ
ಪಿಸಿಸಿಗಳಿಗೆ ನೇಮಕಾತಿ ಪ್ರಕ್ರಿಯೆ ಶೀಘ್ರದಲ್ಲಿ ಆರಂಭಿಸುತ್ತೇವೆ: ಖರ್ಗೆ
ಯತ್ನಾಳ್​ಗೆ ರೇಣುಕಾ ಯಲ್ಲಮ್ಮನ ದರ್ಶನ ಮಾಡಿಸಿದ ಯಡಿಯೂರಪ್ಪ!
ಯತ್ನಾಳ್​ಗೆ ರೇಣುಕಾ ಯಲ್ಲಮ್ಮನ ದರ್ಶನ ಮಾಡಿಸಿದ ಯಡಿಯೂರಪ್ಪ!
ವಾರಾಹಿ ಪಂಜುರ್ಲಿ ಕ್ಷೇತ್ರಕ್ಕೆ ರಿಷಬ್ ಶೆಟ್ಟಿ ಬಂದಾಗ ಏನೆಲ್ಲ ನಡೆಯಿತು?
ವಾರಾಹಿ ಪಂಜುರ್ಲಿ ಕ್ಷೇತ್ರಕ್ಕೆ ರಿಷಬ್ ಶೆಟ್ಟಿ ಬಂದಾಗ ಏನೆಲ್ಲ ನಡೆಯಿತು?
ಯುವತಿಯ ಖಾಸಗಿ ಅಂಗ ಸ್ಪರ್ಶ ಕೇಸ್: ಉಡಾಫೆ ಉತ್ತರ ಕೊಟ್ಟ ಗೃಹ ಸಚಿವ
ಯುವತಿಯ ಖಾಸಗಿ ಅಂಗ ಸ್ಪರ್ಶ ಕೇಸ್: ಉಡಾಫೆ ಉತ್ತರ ಕೊಟ್ಟ ಗೃಹ ಸಚಿವ
ಪೊಲೀಸ್ ಭದ್ರತೆ ಮಧ್ಯೆ ಪ್ರವೀಣ್ ನೆಟ್ಟರು ಹಂತಕನಿಗೆ ಮುತ್ತಿಕ್ಕಿದ ಯುವಕ!
ಪೊಲೀಸ್ ಭದ್ರತೆ ಮಧ್ಯೆ ಪ್ರವೀಣ್ ನೆಟ್ಟರು ಹಂತಕನಿಗೆ ಮುತ್ತಿಕ್ಕಿದ ಯುವಕ!