AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Pathaan vs Gandhi Godse – Ek Yudh: ಚಿತ್ರಗಳ ಮಧ್ಯೆ ನಡೆಯುತ್ತಾ ಬಾಕ್ಸ್​ ಆಫೀಸ್ ವಾರ್?

ರಾಜ್‍ಕುಮಾರ್ ಸಂತೋಷಿ ನಿರ್ದೇಶನದ 'ಗಾಂಧಿ ಗೋಡ್ಸೆ ಏಕ್ ಯುದ್ಧ್' ಮತ್ತು ಶಾರುಖ್​ ಖಾನ್ ನಟನೆಯ ಪಠಾಣ್ ಚಿತ್ರ ಒಂದೇ ದಿನದ ಅಂತರದಲ್ಲಿ ತೆರೆಗೆ ಬರುತ್ತಿವೆ. ಹಾಗಾಗಿ ಅಭಿಮಾನಿಗಳಲ್ಲಿ ನಿರೀಕ್ಷೆ ಹೆಚ್ಚಿಸಿದೆ.

Pathaan vs Gandhi Godse - Ek Yudh: ಚಿತ್ರಗಳ ಮಧ್ಯೆ ನಡೆಯುತ್ತಾ ಬಾಕ್ಸ್​ ಆಫೀಸ್ ವಾರ್?
ರಾಜ್‍ಕುಮಾರ್ ಸಂತೋಷಿ, ಶಾರುಖ್​ ಖಾನ್
TV9 Web
| Edited By: |

Updated on:Dec 16, 2022 | 10:01 PM

Share

‘ಅಂದಾಜ್ ಅಪ್ನಾ ಅಪ್ನಾ’, ‘ಘಾಯಲ್, ‘ಖಾಕಿ’, ‘ಚೈನಾ ಗೇಟ್’, ‘ಅಜಬ್ ಪ್ರೇಮ್ ಕಿ ಗಜಬ್ ಕಹಾನಿ’, ‘ದಿ ಲೆಜೆಂಡ್ ಆಫ್ ಭಗತ್ ಸಿಂಗ್’ ಹೀಗೆ ಅನೇಕ ಚಿತ್ರಗಳನ್ನು ನೀಡಿದ ಬಾಲಿವುಡ್​ ಖ್ಯಾತ ನಿರ್ದೇಶಕ ರಾಜ್‍ಕುಮಾರ್ ಸಂತೋಷಿ (Rajkumar Santoshi) ಅವರು ಮತ್ತೆ ನಿರ್ದೇಶನಕ್ಕೆ ಇಳಿದಿದ್ದಾರೆ. ನಟ ಶಾಹಿದ್ ಕಪೂರ್ ಮತ್ತು ಇಲಿಯಾನಾ ಡಿಕ್ರೂಜ್​ ನಟನೆಯ ‘ಫಟಾ ಪೋಸ್ಟರ್ ನಿಕ್ಲಾ ಹೀರೋ’ ಅವರ ಕೊನೆಯ ನಿರ್ದೇಶನದ ಚಿತ್ರ. ಸತತ ಒಂಬತ್ತು ವರ್ಷಗಳ ದೀರ್ಘ ವಿರಾಮದ ನಂತರ ಮಹಾತ್ಮ ಗಾಂಧಿ ಮತ್ತು ನಾಥೂರಾಮ್​ ಗೋಡ್ಸೆ ಕುರಿತಾದ ಕಥೆಯನ್ನು ಹೇಳಲು ರಾಜ್‍ಕುಮಾರ್ ಸಂತೋಷಿ ಬರುತ್ತಿದ್ದಾರೆ. ಇತ್ತೀಚೆಗೆ ಚಿತ್ರತಂಡ ಟೈಟಲ್​​ ರಿವೀಲ್ ಮಾಡಿದ್ದು, ಚಿತ್ರಕ್ಕೆ ‘ಗಾಂಧಿ ಗೋಡ್ಸೆ ಏಕ್ ಯುದ್ಧ್’ (Gandhi Godse Ek Yudh) ಎಂದು ಹೆಸರಿಡಲಾಗಿದ್ದು, 2023ರ ಜನವರಿ 26ರಂದು ತೆರೆಗೆ ಬರುತ್ತಿದೆ. ಇದಕ್ಕೂ ಮುಂಚೆ ಅಂದರೆ 2023ರ ಜನವರಿ 25ರಂದು ಶಾರುಖ್​ ಖಾನ್ ನಟನೆಯ ‘ಪಠಾಣ್’ ಚಿತ್ರ ಕೂಡ ಬಿಡುಗಡೆಯಾಗುತ್ತಿದ್ದು, ಎರಡು ಚಿತ್ರಗಳ ಮಧ್ಯೆ ಬಾಕ್ಸ್​ ಆಫೀಸ್​ನಲ್ಲಿ ವಾರ್ ನಡೆಯಲಿದೆಯಾ ಕಾಯ್ದು ನೋಡಬೇಕಿದೆ.

ಇದನ್ನೂ ಓದಿ: Besharam Rang: ಕೇಸರಿ ಬಿಕಿನಿ ವಿವಾದ: `ಪಠಾಣ್’ ನಟಿ ದೀಪಿಕಾ ಪಡುಕೋಣೆ ಪರ ನಿಂತ ರಮ್ಯಾ

ರಾಜ್‌ಕುಮಾರ್ ಸಂತೋಷಿ ಸೇರಿದಂತೆ ಇಡೀ ಚಿತ್ರತಂಡ ತಮ್ಮ ಚಿತ್ರದ ಟೈಟಲ್​ ಘೋಷಿಸಲು ಇತ್ತೀಚೆಗೆ ವಿಡಿಯೋ ಒಂದನ್ನು ಸೋಶಿಯಲ್​ ಮೀಡಿಯಾದಲ್ಲಿ ಹಂಚಿಕೊಂಡಿದ್ದರು. ಇದು ಎಲ್ಲೆಡೆ ವೈರಲ್​ ಕೂಡ ಆಗಿದೆ. ಆಸ್ಕರ್ ಮತ್ತು ಗ್ರ್ಯಾಮಿ ಪ್ರಶಸ್ತಿ ವಿಜೇತ ಎ.ಆರ್ ರೆಹಮಾನ್​ ಸಂಗೀತ ಸಂಯೋಜನೆ ಮಾಡಿದ್ದಾರೆ.

‘ಗಾಂಧಿ ಗೋಡ್ಸೆ ಏಕ್ ಯುದ್ಧ್’ ಚಿತ್ರವನ್ನು ರಾಜ್‌ಕುಮಾರ್ ಸಂತೋಷಿ ನಿರ್ದೇಶಿಸುತ್ತಿದ್ದು, ಸಂತೋಷಿ ಪ್ರೊಡಕ್ಷನ್ಸ್ ಎಲ್‌ಎಲ್‌ಪಿಯ ಮನಿಲಾ ಸಂತೋಷಿ ನಿರ್ಮಿಸಿದ್ದಾರೆ. ಚಿತ್ರದಲ್ಲಿ ಯಾರೆಲ್ಲ ನಟಿಸಿದ್ದಾರೆ ಎಂಬುದು ಮಾತ್ರ ನಿರ್ದೇಶಕರು ಬಿಟ್ಟುಕೊಟ್ಟಿಲ್ಲ. ‘ಗಾಂಧಿ ಗೋಡ್ಸೆ ಏಕ್ ಯುದ್ಧ್’ ಗಣರಾಜ್ಯೋತ್ಸವ ಅಂದರೆ ಜನವರಿ 26, 2023 ರಂದು ಚಿತ್ರ ತೆರೆಗೆ ಬರಲಿದೆ.

ಇದನ್ನೂ ಓದಿ: ನಟಿ ಶೃತಿ ಹರಿಹರನ್ ಕೇಸ್: ಪ್ರಶಾಂತ್ ಸಂಬರಗಿಗೆ ಹೈಕೋರ್ಟ್‌ನಿಂದ ತಾತ್ಕಾಲಿಕ ರಿಲೀಫ್

‘ಪಠಾಣ್’ ಮತ್ತು ‘ಗಾಂಧಿ ಗೋಡ್ಸೆ ಏಕ್ ಯುದ್ಧ್’ ಒಂದೇ ದಿನ ರಿಲೀಸ್

​​ನಿರ್ದೇಶಕ ರಾಜ್‍ಕುಮಾರ್ ಸಂತೋಷಿ ಅವರು 9 ವರ್ಷಗಳ ಬಳಿಕ ಮತ್ತೆ ನಿರ್ದೇಶಕ್ಕೆ ಇಳಿದರೆ, ಇತ್ತ ಕಡೆ ನಟ ಶಾರುಖ್​ ಖಾನ್​ 4 ವರ್ಷಗಳ ಬಳಿಕ ತೆರೆಗೆ ಬರಲು ಸಿದ್ಧರಾಗಿದ್ದಾರೆ. ‘ಗಾಂಧಿ ಗೋಡ್ಸೆ ಏಕ್ ಯುದ್ಧ್’ 2023ರ ಜನವರಿ 26ರಂದು ತೆರೆಗೆ ಬರಲು ಸಜ್ಜಾಗಿದ್ದರೆ, ‘ಪಠಾಣ್’ ಚಿತ್ರ 2023ರ ಜನವರಿ 25ರಂದು ಬಿಡುಗಡೆ ಆಗಲಿದೆ. ಕೇವಲ ಒಂದೇ ಒಂದು ದಿನದ ಅಂತರದಲ್ಲಿ ಎರಡು ಚಿತ್ರಗಳು ತೆರೆಗೆ ಬರುತ್ತಿದ್ದು, ಬಾಕ್ಸ್​ ಆಫೀಸ್​ನಲ್ಲಿ ವಾರ್​ ಉಂಟಾಗಲಿದೆ ಎಂದು ಬಾಲಿವುಡ್​ ಅಂಗಳದಲ್ಲಿ ಚರ್ಚೆ ನಡೆಯುತ್ತಿದೆ. ಸದ್ಯ ಎರಡು ಚಿತ್ರಗಳು ಅಭಿಮಾನಿಗಳಲ್ಲಿ ನಿರೀಕ್ಷೆ ಹೆಚ್ಚಿಸಿವೆ.

ಮತ್ತಷ್ಟು ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 9:58 pm, Fri, 16 December 22

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಗುಡ್ ನ್ಯೂಸ್: ಶೀಘ್ರದಲ್ಲೇ ನೈಸ್‌ ರೋಡ್‌ ಸಂಪರ್ಕಿಸುವ ರಸ್ತೆ ಆರಂಭ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ