AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಹರಿ ಹರ ವೀರ ಮಲ್ಲು’ ಸಿನಿಮಾ ವಿರುದ್ಧ ಬಾಯ್​ಕಾಟ್ ಟ್ರೆಂಡ್: ಕಾರಣವೇನು?

Hari Hara Veera Mallu: ಪವನ್ ಕಲ್ಯಾಣ್ ನಟನೆಯ ‘ಹರಿ ಹರ ವೀರ ಮಲ್ಲು’ ಸಿನಿಮಾ ನಾಳೆ (ಜುಲೈ 24) ಬಿಡುಗಡೆ ಆಗುತ್ತಿದೆ. ಸಿನಿಮಾದ ಬಗ್ಗೆ ಸಾಕಷ್ಟು ನಿರೀಕ್ಷೆಗಳಿವೆ. ಸಿನಿಮಾದ ಅಡ್ವಾನ್ಸ್ ಬುಕಿಂಗ್ ಸಹ ಜೋರಾಗಿದೆ. ಪವನ್ ಅಭಿಮಾನಿಗಳು ಸಿನಿಮಾ ಪರ ಜೋರಾದ ಪ್ರಚಾರ ಮಾಡುತ್ತಿದ್ದಾರೆ. ಆದರೆ ಮತ್ತೊಂದು ‘ಹರಿ ಹರ ವೀರ ಮಲ್ಲು’ ಸಿನಿಮಾ ವಿರುದ್ಧ ಬಾಯ್​ಕಾಟ್ ಟ್ರೆಂಡ್ ನಡೆಯುತ್ತಿದೆ.

‘ಹರಿ ಹರ ವೀರ ಮಲ್ಲು’ ಸಿನಿಮಾ ವಿರುದ್ಧ ಬಾಯ್​ಕಾಟ್ ಟ್ರೆಂಡ್: ಕಾರಣವೇನು?
Hari Hara Veera Mallu
ಮಂಜುನಾಥ ಸಿ.
|

Updated on: Jul 23, 2025 | 3:05 PM

Share

ಪವನ್ ಕಲ್ಯಾಣ್ (Pawan Kalyan) ನಟನೆಯ ‘ಹರಿ ಹರ ವೀರ ಮಲ್ಲು’ ಸಿನಿಮಾ ನಾಳೆ (ಜುಲೈ 24) ಬಿಡುಗಡೆ ಆಗಲಿದೆ. ಸಿನಿಮಾದ ಬಗ್ಗೆ ಹಲವು ಕಾರಣಗಳಿಗೆ ಪ್ರೇಕ್ಷಕರಲ್ಲಿ ನಿರೀಕ್ಷೆ ಇದೆ. ಶುರುವಾಗಿ ಆರು ವರ್ಷಗಳ ಬಳಿಕ ಈ ಸಿನಿಮಾ ತೆರೆ ಕಾಣುತ್ತಿದೆ. ಪವನ್ ಕಲ್ಯಾಣ್ ಆಂಧ್ರ ಪ್ರದೇಶದ ಉಪ ಮುಖ್ಯಮಂತ್ರಿ ಆದ ಬಳಿಕ ಬಿಡುಗಡೆ ಆಗುತ್ತಿರುವ ಅವರ ಮೊದಲ ಸಿನಿಮಾ ಇದು. ಮೂರು ವರ್ಷಗಳ ಬಳಿಕ ಅವರು ಸೋಲೊ ನಾಯಕ ಆಗಿರುವ ಸಿನಿಮಾ ತೆರೆಗೆ ಬರುತ್ತಿದೆ. ಅದರ ಜೊತೆಗೆ ಪವನ್ ಕಲ್ಯಾಣ್ ನಟಿಸಿರುವ ಮೊದಲ ಐತಿಹಾಸಕ ಹಿನ್ನೆಲೆಯುಳ್ಳ ಸಿನಿಮಾ ಇದು.

ಸಿನಿಮಾದ ಬಗ್ಗೆ ನಿರೀಕ್ಷೆಗಳು ಒತ್ತಟ್ಟಿಗಾದರೆ ಸಿನಿಮಾದ ವಿರುದ್ಧ ಟೀಕೆಯೂ ವ್ಯಕ್ತವಾಗಿದೆ. ಸಾಮಾಜಿಕ ಜಾಲತಾಣದಲ್ಲಿ ‘ಬಾಯ್ಕಾಟ್ ಎಚ್​ಎಚ್​ವಿಎಂ’ (BoycottHHVM) ಟ್ರೆಂಡ್ ಮಾಡಲಾಗುತ್ತಿದೆ. ಆಂಧ್ರ ಪ್ರದೇಶದ ವಿಪಕ್ಷವಾಗಿರುವ ವೈಸಿಪಿಯ ಸದಸ್ಯರು, ಜಗನ್ ಮೋಹನ್ ರೆಡ್ಡಿಯ ಅಭಿಮಾನಿಗಳು ಬಾಯ್​ಕಾಟ್ ಟ್ರೆಂಡ್ ಮಾಡುತ್ತಿದ್ದಾರೆ. ಟ್ವಿಟ್ಟರ್​​ನಲ್ಲಿ ಸಿನಿಮಾ ವಿರುದ್ಧವಾಗಿ ಹಲವು ಪೋಸ್ಟ್​ಗಳನ್ನು ಹಂಚಿಕೊಂಡಿದ್ದಾರೆ.

‘ಸಿನಿಮಾ ಕಾರ್ಯಕ್ರಮದಲ್ಲಿ ರಾಜಕಾರಣ ಮಾಡುವ ಪವನ್ ಕಲ್ಯಾಣ್​ಗೆ ಬುದ್ಧಿ ಕಲಿಸಲು ‘ಹರಿ ಹರ ವೀರ ಮಲ್ಲು’ ಸಿನಿಮಾ ಅನ್ನು ಬಾಯ್​ಕಾಟ್ ಮಾಡಬೇಕಿದೆ. ಯಾವುದೇ ವೈಸಿಪಿ ಸದಸ್ಯರು, ಕಾರ್ಯಕರ್ತರು, ಅಭಿಮಾನಿಗಳು ಚಿತ್ರಮಂದಿರದಲ್ಲಿ ಹರಿ ಹರ ವೀರ ಮಲ್ಲು ಸಿನಿಮಾ ನೋಡಬೇಡಿ’ ಎಂದು ಪೋಸ್ಟ್​ಗಳನ್ನು ಹಂಚಿಕೊಂಡಿದ್ದಾರೆ. ಕೆಲವರಂತೂ ‘ನಾನು ಹರಿ ಹರ ವೀರ ಮಲ್ಲು’ ಸಿನಿಮಾ ನೋಡುವುದಿಲ್ಲ ಮತ್ತು ಇನ್ನೂ 20 ಮಂದಿಯನ್ನು ನೋಡದಂತೆ ತಡೆಯುತ್ತೇನೆ’ ಎಂದು ಸವಾಲುಗಳನ್ನು ಹಾಕಿದ್ದಾರೆ.

ಇದನ್ನೂ ಓದಿ:‘ಹರಿ ಹರ ವೀರ ಮಲ್ಲು’ ಸಿನಿಮಾ ಟಿಕೆಟ್ ದರ: ಯಾವ ರಾಜ್ಯದಲ್ಲಿ ಎಷ್ಟಿದೆ?

ಸಾಮಾಜಿಕ ಜಾಲತಾಣದಲ್ಲಿ ಚಾಲ್ತಿಯಲ್ಲಿರುವ ಈ ‘ಹರಿ ಹರ ವೀರ ಮಲ್ಲು ಬಾಯ್​ಕಾಟ್ ಟ್ರೆಂಡ್ ಬಗ್ಗೆ ಮಾತನಾಡಿರುವ ಪವನ್ ಕಲ್ಯಾಣ್, ‘ಯಾವ ಕಾರಣಕ್ಕೆ ಬಾಯ್​ಕಾಟ್ ಮಾಡುತ್ತಾರಂತೆ?’ ಎಂದು ಪ್ರಶ್ನೆ ಮಾಡಿದ್ದಾರೆ. ಮುಂದುವರೆದು, ‘ಅವರಿಗೆ ಸಿನಿಮಾ ಬಾಯ್​ಕಾಟ್ ಮಾಡಲು ಯಾವುದೇ ಪ್ರತ್ಯಕ್ಷ ಕಾರಣ ಇಲ್ಲ. ಅವರದ್ದು ಏನಿದ್ದರು ವೈಯಕ್ತಿಕ ದ್ವೇಷವಷ್ಟೆ. ಸಿನಿಮಾ ಬಿಡುಗಡೆ ಆಗುವುದು ಪಕ್ಕಾ, ಅಭಿಮಾನಿಗಳು ಸಿನಿಮಾ ನೋಡುವುದು ಪಕ್ಕಾ, ಅಂಥಹಾ ನಕಲಿ ಟ್ರೆಂಡ್​ಗಳಿಗೆ ಬೆಲೆ ಕೊಡುವ ಅಗತ್ಯವಿಲ್ಲ’ ಎಂದಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?