AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರೀನಾ ಕಪೂರ್​ ಸೀತೆ ಪಾತ್ರ ಮಾಡುವಂತಿಲ್ಲ; ಇದಕ್ಕೂ ಸೈಫ್​ ಅಲಿ ಖಾನ್​ಗೂ ಏನು ಸಂಬಂಧ?

Kareena Kapoor Khan: ಮುಸ್ಲಿಂ ವ್ಯಕ್ತಿಯ ಜೊತೆ ಮದುವೆ ಆಗಿರುವ ಕರೀನಾ ಕಪೂರ್​ ಖಾನ್ ಅವರು ಸೀತೆ ಪಾತ್ರ ಮಾಡಿದರೆ ಹಿಂದುಗಳ ಭಾವನೆಗೆ ಧಕ್ಕೆ ಆಗುತ್ತದೆ ಎಂದು ಹಲವರು ಟ್ವಿಟರ್​ನಲ್ಲಿ ವಾದ ಮಂಡಿಸಿದ್ದಾರೆ.

ಕರೀನಾ ಕಪೂರ್​ ಸೀತೆ ಪಾತ್ರ ಮಾಡುವಂತಿಲ್ಲ; ಇದಕ್ಕೂ ಸೈಫ್​ ಅಲಿ ಖಾನ್​ಗೂ ಏನು ಸಂಬಂಧ?
ಕರೀನಾ ಕಪೂರ್​ ಖಾನ್​
ಮದನ್​ ಕುಮಾರ್​
| Updated By: ರಾಜೇಶ್ ದುಗ್ಗುಮನೆ|

Updated on:Jun 12, 2021 | 4:27 PM

Share

ನಟಿ ಕರೀನಾ ಕಪೂರ್​ ಖಾನ್ ಅನೇಕರಿಂದ ವಿರೋಧ ಎದುರಿಸುತ್ತಿದ್ದಾರೆ. ಸೋಶಿಯಲ್​ ಮೀಡಿಯಾದಲ್ಲಿ ಒಂದು ವರ್ಗದ ಜನರು ಕರೀನಾ ವಿರುದ್ಧ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ರಾಮಾಯಣದ ಸೀತೆಯ ಪಾತ್ರವನ್ನು ಕರೀನಾ ಮಾಡಲಿದ್ದಾರೆ ಎಂಬ ಗಾಳಿಸುದ್ದಿಯೇ ಇಷ್ಟಕ್ಕೆಲ್ಲ ಕಾರಣ. ಈ ವಿವಾದದಲ್ಲಿ ಅವರ ಪತಿ ಸೈಫ್​ ಅಲಿ ಖಾನ್​ ಮತ್ತು ಪುತ್ರ ತೈಮೂರ್​ ಅಲಿ ಖಾನ್​ ಹೆಸರುಗಳನ್ನೂ ಎಳೆದು ತರಲಾಗಿದೆ. #BoycottKareenaKhan ಎಂದು ನೂರಾರು ಮಂದಿ ಟ್ವೀಟ್​ ಮಾಡುತ್ತಿದ್ದಾರೆ.

ಬಾಲಿವುಡ್​ನಲ್ಲಿ ರಾಮಾಯಣ ಆಧರಿಸಿ ಒಂದು ಬಿಗ್​ ಬಜೆಟ್​ ಸಿನಿಮಾ ಮಾಡಲು ತಯಾರಿ ನಡೆದಿದೆ. ‘ದಂಗಲ್​’ ಖ್ಯಾತಿಯ ನಿತೇಶ್​ ತಿವಾರಿ ಅವರು ಆ ಚಿತ್ರಕ್ಕೆ ನಿರ್ದೇಶನ ಮಾಡಲಿದ್ದಾರೆ. ಆದರೆ ಮುಖ್ಯ ಪಾತ್ರಗಳಲ್ಲಿ ಯಾರು ನಟಿಸುತ್ತಾರೆ ಎಂಬುದು ಇನ್ನೂ ನಿರ್ಧಾರ ಆಗಿಲ್ಲ. ಅಷ್ಟರಲ್ಲಾಗಲೇ ಅನೇಕ ನಟ-ನಟಿಯರ ಹೆಸರುಗಳು ಹರಿದಾಡುತ್ತಿವೆ. ಸೀತೆ ಪಾತ್ರಕ್ಕೆ ಕರೀನಾ ಕಪೂರ್​ ಆಯ್ಕೆ ಆಗುವ ಸಾಧ್ಯತೆ ಇದೆ ಎಂಬ ಗಾಸಿಪ್​ ಇತ್ತೀಚೆಗೆ ಕೇಳಿಬಂದಿತ್ತು.

ಹರಿದಾಡಿದ ಸುದ್ದಿ ನಿಜವೋ ಸುಳ್ಳೋ ಎಂಬುದನ್ನು ಖಚಿತ ಮಾಡಿಕೊಳ್ಳುವ ಮೊದಲೇ ಅನೇಕರು ಕರೀನಾ ಕಪೂರ್​ ಖಾನ್​ ವಿರುದ್ಧ ಹರಿಹಾಯುತ್ತಿದ್ದಾರೆ. ಮುಸ್ಲಿಂ ವ್ಯಕ್ತಿಯ ಜೊತೆ ಮದುವೆ ಆಗಿರುವ ಅವರು ಸೀತೆ ಪಾತ್ರ ಮಾಡಿದರೆ ಹಿಂದುಗಳ ಭಾವನೆಗೆ ಧಕ್ಕೆ ಆಗುತ್ತದೆ ಎಂದು ಹಲವರು ಟ್ವಿಟರ್​ನಲ್ಲಿ ವಾದ ಮಂಡಿಸಿದ್ದಾರೆ. ‘ಸೈಫ್​ ಅಲಿ ಖಾನ್​ ನಟನೆಯ ತಾಂಡವ್​ ವೆಬ್​ ಸರಣಿಯಲ್ಲಿ ಹಿಂದುಗಳಿಗೆ ಅವಮಾನ ಮಾಡುವಂತಹ ದೃಶ್ಯ ಇತ್ತು. ಈಗ ಕರೀನಾ ಕೈಯಿಂದಲೂ ಅದನ್ನೇ ಮಾಡಿಸುವುದು ಬೇಡ’ ಎಂದು ಕೆಲವರು ಕಿಡಿಕಾರಿದ್ದಾರೆ.

‘ಹಿಂದುತ್ವದ ಮೇಲೆ ನಂಬಿಕೆ ಇಲ್ಲದ ಯಾವುದೇ ನಟಿಯೂ ಸೀತೆಯ ಪಾತ್ರವನ್ನು ಮಾಡುವಂತಿಲ್ಲ. ಬಾಲಿವುಡ್​ನ ಫಿಲ್ಮ್​ ಮಾಫಿಯಾವು ಹಿಂದು ಧರ್ಮಕ್ಕೆ ವಿಷ ಹರಡುತ್ತದೆ. ಈ ರೀತಿ ನಮ್ಮ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವಂತಹ ಎಲ್ಲ ನಟ-ನಟಿಯರನ್ನು ನಾವು ಬಹಿಷ್ಕರಿಸಬೇಕು’ ಎಂದು ನೆಟ್ಟಿಗರೊಬ್ಬರು ಕಮೆಂಟ್​ ಮಾಡಿದ್ದಾರೆ.

ಈ ಪಾತ್ರಕ್ಕಾಗಿ ಕರೀನಾ 12 ಕೋಟಿ ರೂ. ಸಂಭಾವನೆ ಡಿಮ್ಯಾಂಡ್​ ಮಾಡಿದ್ದಾರೆ ಎಂದು ಕೂಡ ಹೇಳಲಾಗಿತ್ತು. ಆದರೆ ಮೂಲಗಳ ಪ್ರಕಾರ, ಕರೀನಾಗೆ ಯಾರೂ ಈ ಪಾತ್ರವನ್ನು ಆಫರ್​ ಮಾಡಿಲ್ಲ. ಸೀತೆ ಪಾತ್ರಕ್ಕೆ ಯಾವುದೇ ಕಾರಣಕ್ಕೂ ಅವರು ಸೂಕ್ತ ಆಗುವುದಿಲ್ಲ ಎಂದು ಚಿತ್ರತಂಡದ ಮೂಲಗಳ ಹೇಳಿರುವ ಬಗ್ಗೆ ಕೆಲವೆಡೆ ವರದಿ ಆಗಿತ್ತು. ಇಷ್ಟೆಲ್ಲ ಅಂಕೆ-ಕಂತೆಗಳು ಹರಿದಾಡುತ್ತಿದ್ದರೂ ಕೂಡ ಕರೀನಾ ಕಪೂರ್​ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಸದ್ಯ ಅವರು ಎರಡನೇ ಮಗುವಿನ ಪಾಲನೆಯಲ್ಲಿ ತೊಡಗಿಕೊಂಡಿದ್ದಾರೆ. ಆಮೀರ್​ ಖಾನ್​ ಜೊತೆ ಅವರು ನಟಿಸಿರುವ ‘ಲಾಲ್​ ಸಿಂಗ್ ಚಡ್ಡಾ’ ಸಿನಿಮಾ ಬಿಡುಗಡೆಗೆ ಸಜ್ಜಾಗುತ್ತಿದೆ.

ಇದನ್ನೂ ಓದಿ:

ಕರೀನಾ ತೊಟ್ಟ ಮಾಸ್ಕ್​ ಬೆಲೆ ಇಷ್ಟೊಂದಾ? ಐಟಿ ಮಂದಿಯ ವೇತನವೂ ಇಷ್ಟಿರಲ್ಲ ಎಂದ ಫ್ಯಾನ್ಸ್​​

Published On - 3:50 pm, Sat, 12 June 21

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ