AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ ‘ಪುಷ್ಪ’ ಚಿತ್ರ ಬಹಿಷ್ಕರಿಸುವಂತೆ ಒತ್ತಾಯ; ಕಾರಣ ಏನು?

Boycott Pushpa In Karnataka: ಕರ್ನಾಟಕದ ಚಿತ್ರಮಂದಿರಗಳಲ್ಲಿ ‘ಪುಷ್ಪ’ ಚಿತ್ರದ ಕನ್ನಡ ವರ್ಷನ್​ಗಿಂತಲೂ ಹೆಚ್ಚಾಗಿ ತೆಲುಗು ವರ್ಷನ್​ ಅನ್ನು ಬಿಡುಗಡೆ ಮಾಡಲಾಗುತ್ತಿದೆ. ಇದು ಕನ್ನಡ ಸಿನಿಪ್ರೇಕ್ಷಕರ ಕೋಪಕ್ಕೆ ಕಾರಣ ಆಗಿದೆ.

ಕರ್ನಾಟಕದಲ್ಲಿ ‘ಪುಷ್ಪ’ ಚಿತ್ರ ಬಹಿಷ್ಕರಿಸುವಂತೆ ಒತ್ತಾಯ; ಕಾರಣ ಏನು?
‘ಪುಷ್ಪ’ ಚಿತ್ರದಲ್ಲಿ ಅಲ್ಲು ಅರ್ಜುನ್
TV9 Web
| Edited By: |

Updated on: Dec 16, 2021 | 5:08 PM

Share

ಈ ವರ್ಷದ ಬಹುನಿರೀಕ್ಷಿತ ಸಿನಿಮಾಗಳಲ್ಲಿ ಒಂದಾಗಿರುವ ‘ಪುಷ್ಪ’ (Pushpa Movie) ಚಿತ್ರ ಶುಕ್ರವಾರ (ಡಿ.17) ಬಿಡುಗಡೆ ಆಗುತ್ತಿದೆ. ಈ ಸಿನಿಮಾದಲ್ಲಿ ಅಲ್ಲು ಅರ್ಜುನ್​ (Allu Arjun) ಮತ್ತು ರಶ್ಮಿಕಾ ಮಂದಣ್ಣ (Rashmika Mandanna) ಅವರು ನಟಿಸಿದ್ದಾರೆ. ಅದ್ದೂರಿಯಾಗಿ ಬಿಡುಗಡೆ ಆಗುತ್ತಿರುವ ಈ ಸಿನಿಮಾ ವಿರುದ್ಧ ಕನ್ನಡಿಗರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಅದಕ್ಕೆ ಬಲವಾದ ಕಾರಣ ಕೂಡ ಇದೆ. ಕರ್ನಾಟಕದಲ್ಲಿ ‘ಪುಷ್ಪ’ ಚಿತ್ರವನ್ನು ಬಹಿಷ್ಕರಿಸುವಂತೆ ಒತ್ತಾಯ ಹೇರಲಾಗುತ್ತಿದೆ. ಹಾಗಾಗಿ ಟ್ವಿಟರ್​ನಲ್ಲಿ #BoycottPushpaInKarnataka ಹ್ಯಾಶ್​ ಟ್ಯಾಗ್​ ಟ್ರೆಂಡ್​ ಆಗುತ್ತಿದೆ. ಇದು ಚಿತ್ರತಂಡಕ್ಕೆ ಮುಳುವಾಗುವ ಸಾಧ್ಯತೆ ಇದೆ. ಈ ಚಿತ್ರಕ್ಕೆ ಸುಕುಮಾರ್​ ನಿರ್ದೇಶನ ಮಾಡಿದ್ದು, ಕನ್ನಡದ ಖ್ಯಾತ ನಟ ಡಾಲಿ ಧನಂಜಯ ಕೂಡ ಅಭಿನಯಿಸಿದ್ದಾರೆ.

‘ಪುಷ್ಪ’ ಚಿತ್ರ ತೆಲುಗಿನಲ್ಲಿ ನಿರ್ಮಾಣವಾಗಿ ಇನ್ನುಳಿದ ಭಾಷೆಗಳಿಗೆ ಡಬ್​ ಆಗಿದೆ. ಕನ್ನಡ, ಹಿಂದಿ, ಮಲಯಾಳಂ, ತಮಿಳು ಭಾಷೆಗಳಿಗೆ ಡಬ್​ ಆಗಿ ತೆರೆಕಾಣುತ್ತಿದೆ. ಆದರೆ ಕರ್ನಾಟಕದ ಹೆಚ್ಚು ಚಿತ್ರಮಂದಿರಗಳಲ್ಲಿ ಕನ್ನಡ ವರ್ಷನ್​ಗಿಂತಲೂ ತೆಲುಗು ವರ್ಷನ್​ ಅನ್ನು ಬಿಡುಗಡೆ ಮಾಡಲಾಗಿದೆ. ಇದು ಕನ್ನಡ ಸಿನಿಪ್ರೇಕ್ಷಕರ ಕೋಪಕ್ಕೆ ಕಾರಣ ಆಗಿದೆ. ಟ್ವಿಟರ್​ನಲ್ಲಿ ಈ ಬಗ್ಗೆ ಅಸಮಾಧಾನ ವ್ಯಕ್ತವಾಗುತ್ತಿದೆ.

‘ನಾವು ಇಲ್ಲಿಯವರೆಗೆ ಈ ಚಿತ್ರಕ್ಕೆ ಬೆಂಬಲ ನೀಡಿದ್ದಕ್ಕೆ ಕಾರಣವೇ ಕನ್ನಡ. ನಮ್ಮ ಭಾಷೆಯಲ್ಲಿ ಈ ಸಿನಿಮಾ ಬಿಡುಗಡೆ ಆಗುತ್ತದೆ ಅಂತ ಸಪೋರ್ಟ್​ ಮಾಡಿದ್ವಿ. ಆದರೆ ಈಗ ತೆಲುಗು ವರ್ಷನ್​ ರಾರಾಜಿಸುತ್ತಿದೆ’ ಎಂದು ಅನೇಕರು ಸೋಶಿಯಲ್​ ಮೀಡಿಯಾದಲ್ಲಿ ಬೇಸರ ವ್ಯಕ್ತಪಡಿಸುತ್ತಿದ್ದಾರೆ. ಈ ಬಗ್ಗೆ ‘ಪುಷ್ಪ’ ಚಿತ್ರತಂಡ ಯಾವ ರೀತಿ ಪ್ರತಿಕ್ರಿಯೆ ನೀಡಲಿದೆ ಎಂಬ ಕೌತುಕ ನಿರ್ಮಾಣ ಆಗಿದೆ.

ಬೆಂಗಳೂರಿನಲ್ಲಿ ಮೊದಲ ದಿನವೇ ಈ ಸಿನಿಮಾದ ತೆಲುಗು ಅವತರಣಿಕೆಯ 650 ಹೆಚ್ಚು ಶೋಗಳು ಪ್ರದರ್ಶನ ಕಾಣುತ್ತಿವೆ. ಆದರೆ ಕನ್ನಡ ವರ್ಷನ್​ಗೆ ಕೇವಲ ಮೂರು ಶೋ ನೀಡಲಾಗಿದೆ! ಇದು ಕನ್ನಡ ಪ್ರೇಕ್ಷಕರ ಅಸಮಾಧಾನಕ್ಕೆ ಕಾರಣ ಆಗಿದೆ. ಬೆಂಗಳೂರು ಮಾತ್ರವಲ್ಲದೇ ಬಹುತೇಕ ಜಿಲ್ಲಾ ಕೇಂದ್ರಗಳಲ್ಲೂ ಇದೇ ಪರಿಸ್ಥಿತಿ ಇದೆ. ಈ ಸಿನಿಮಾದ ಟ್ರೇಲರ್​ ಮತ್ತು ಹಾಡುಗಳ ಕನ್ನಡ ಅವತರಣಿಕೆಗಳು ಕೂಡ ಒಳ್ಳೆಯ ಪ್ರತಿಕ್ರಿಯೆ ಪಡೆದುಕೊಂಡಿವೆ. ಆದರೂ ಸಹ ಬಿಡುಗಡೆ ಸಮಯದಲ್ಲಿ ಕನ್ನಡ ವರ್ಷನ್​ ಅನ್ನು ಕಡೆಗಣಿಸಿರುವುದು ಅಚ್ಚರಿ ಮೂಡಿಸಿದೆ.

ಇದನ್ನೂ ಓದಿ:

Allu Arjun: ಕನ್ನಡ ಮಾಧ್ಯಮಗಳ ಎದುರು ಬಹಿರಂಗ ಕ್ಷಮೆಯಾಚಿಸಿದ ಅಲ್ಲು ಅರ್ಜುನ್​

ಸಮಂತಾ ಹಾಡಿನಲ್ಲಿ ಗಂಡಸರಿಗೆ ಅವಮಾನ; ‘ಪುಷ್ಪ’ ಚಿತ್ರದ ವಿರುದ್ಧ ದೂರು ನೀಡಿದ ಪುರುಷರ ಸಂಘಟನೆ

Follow Us
Web contact
Web contact

TV9 Kannada

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು