AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ ‘ಪುಷ್ಪ’ ಚಿತ್ರ ಬಹಿಷ್ಕರಿಸುವಂತೆ ಒತ್ತಾಯ; ಕಾರಣ ಏನು?

Boycott Pushpa In Karnataka: ಕರ್ನಾಟಕದ ಚಿತ್ರಮಂದಿರಗಳಲ್ಲಿ ‘ಪುಷ್ಪ’ ಚಿತ್ರದ ಕನ್ನಡ ವರ್ಷನ್​ಗಿಂತಲೂ ಹೆಚ್ಚಾಗಿ ತೆಲುಗು ವರ್ಷನ್​ ಅನ್ನು ಬಿಡುಗಡೆ ಮಾಡಲಾಗುತ್ತಿದೆ. ಇದು ಕನ್ನಡ ಸಿನಿಪ್ರೇಕ್ಷಕರ ಕೋಪಕ್ಕೆ ಕಾರಣ ಆಗಿದೆ.

ಕರ್ನಾಟಕದಲ್ಲಿ ‘ಪುಷ್ಪ’ ಚಿತ್ರ ಬಹಿಷ್ಕರಿಸುವಂತೆ ಒತ್ತಾಯ; ಕಾರಣ ಏನು?
‘ಪುಷ್ಪ’ ಚಿತ್ರದಲ್ಲಿ ಅಲ್ಲು ಅರ್ಜುನ್
TV9 Web
| Edited By: |

Updated on: Dec 16, 2021 | 5:08 PM

Share

ಈ ವರ್ಷದ ಬಹುನಿರೀಕ್ಷಿತ ಸಿನಿಮಾಗಳಲ್ಲಿ ಒಂದಾಗಿರುವ ‘ಪುಷ್ಪ’ (Pushpa Movie) ಚಿತ್ರ ಶುಕ್ರವಾರ (ಡಿ.17) ಬಿಡುಗಡೆ ಆಗುತ್ತಿದೆ. ಈ ಸಿನಿಮಾದಲ್ಲಿ ಅಲ್ಲು ಅರ್ಜುನ್​ (Allu Arjun) ಮತ್ತು ರಶ್ಮಿಕಾ ಮಂದಣ್ಣ (Rashmika Mandanna) ಅವರು ನಟಿಸಿದ್ದಾರೆ. ಅದ್ದೂರಿಯಾಗಿ ಬಿಡುಗಡೆ ಆಗುತ್ತಿರುವ ಈ ಸಿನಿಮಾ ವಿರುದ್ಧ ಕನ್ನಡಿಗರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಅದಕ್ಕೆ ಬಲವಾದ ಕಾರಣ ಕೂಡ ಇದೆ. ಕರ್ನಾಟಕದಲ್ಲಿ ‘ಪುಷ್ಪ’ ಚಿತ್ರವನ್ನು ಬಹಿಷ್ಕರಿಸುವಂತೆ ಒತ್ತಾಯ ಹೇರಲಾಗುತ್ತಿದೆ. ಹಾಗಾಗಿ ಟ್ವಿಟರ್​ನಲ್ಲಿ #BoycottPushpaInKarnataka ಹ್ಯಾಶ್​ ಟ್ಯಾಗ್​ ಟ್ರೆಂಡ್​ ಆಗುತ್ತಿದೆ. ಇದು ಚಿತ್ರತಂಡಕ್ಕೆ ಮುಳುವಾಗುವ ಸಾಧ್ಯತೆ ಇದೆ. ಈ ಚಿತ್ರಕ್ಕೆ ಸುಕುಮಾರ್​ ನಿರ್ದೇಶನ ಮಾಡಿದ್ದು, ಕನ್ನಡದ ಖ್ಯಾತ ನಟ ಡಾಲಿ ಧನಂಜಯ ಕೂಡ ಅಭಿನಯಿಸಿದ್ದಾರೆ.

‘ಪುಷ್ಪ’ ಚಿತ್ರ ತೆಲುಗಿನಲ್ಲಿ ನಿರ್ಮಾಣವಾಗಿ ಇನ್ನುಳಿದ ಭಾಷೆಗಳಿಗೆ ಡಬ್​ ಆಗಿದೆ. ಕನ್ನಡ, ಹಿಂದಿ, ಮಲಯಾಳಂ, ತಮಿಳು ಭಾಷೆಗಳಿಗೆ ಡಬ್​ ಆಗಿ ತೆರೆಕಾಣುತ್ತಿದೆ. ಆದರೆ ಕರ್ನಾಟಕದ ಹೆಚ್ಚು ಚಿತ್ರಮಂದಿರಗಳಲ್ಲಿ ಕನ್ನಡ ವರ್ಷನ್​ಗಿಂತಲೂ ತೆಲುಗು ವರ್ಷನ್​ ಅನ್ನು ಬಿಡುಗಡೆ ಮಾಡಲಾಗಿದೆ. ಇದು ಕನ್ನಡ ಸಿನಿಪ್ರೇಕ್ಷಕರ ಕೋಪಕ್ಕೆ ಕಾರಣ ಆಗಿದೆ. ಟ್ವಿಟರ್​ನಲ್ಲಿ ಈ ಬಗ್ಗೆ ಅಸಮಾಧಾನ ವ್ಯಕ್ತವಾಗುತ್ತಿದೆ.

‘ನಾವು ಇಲ್ಲಿಯವರೆಗೆ ಈ ಚಿತ್ರಕ್ಕೆ ಬೆಂಬಲ ನೀಡಿದ್ದಕ್ಕೆ ಕಾರಣವೇ ಕನ್ನಡ. ನಮ್ಮ ಭಾಷೆಯಲ್ಲಿ ಈ ಸಿನಿಮಾ ಬಿಡುಗಡೆ ಆಗುತ್ತದೆ ಅಂತ ಸಪೋರ್ಟ್​ ಮಾಡಿದ್ವಿ. ಆದರೆ ಈಗ ತೆಲುಗು ವರ್ಷನ್​ ರಾರಾಜಿಸುತ್ತಿದೆ’ ಎಂದು ಅನೇಕರು ಸೋಶಿಯಲ್​ ಮೀಡಿಯಾದಲ್ಲಿ ಬೇಸರ ವ್ಯಕ್ತಪಡಿಸುತ್ತಿದ್ದಾರೆ. ಈ ಬಗ್ಗೆ ‘ಪುಷ್ಪ’ ಚಿತ್ರತಂಡ ಯಾವ ರೀತಿ ಪ್ರತಿಕ್ರಿಯೆ ನೀಡಲಿದೆ ಎಂಬ ಕೌತುಕ ನಿರ್ಮಾಣ ಆಗಿದೆ.

ಬೆಂಗಳೂರಿನಲ್ಲಿ ಮೊದಲ ದಿನವೇ ಈ ಸಿನಿಮಾದ ತೆಲುಗು ಅವತರಣಿಕೆಯ 650 ಹೆಚ್ಚು ಶೋಗಳು ಪ್ರದರ್ಶನ ಕಾಣುತ್ತಿವೆ. ಆದರೆ ಕನ್ನಡ ವರ್ಷನ್​ಗೆ ಕೇವಲ ಮೂರು ಶೋ ನೀಡಲಾಗಿದೆ! ಇದು ಕನ್ನಡ ಪ್ರೇಕ್ಷಕರ ಅಸಮಾಧಾನಕ್ಕೆ ಕಾರಣ ಆಗಿದೆ. ಬೆಂಗಳೂರು ಮಾತ್ರವಲ್ಲದೇ ಬಹುತೇಕ ಜಿಲ್ಲಾ ಕೇಂದ್ರಗಳಲ್ಲೂ ಇದೇ ಪರಿಸ್ಥಿತಿ ಇದೆ. ಈ ಸಿನಿಮಾದ ಟ್ರೇಲರ್​ ಮತ್ತು ಹಾಡುಗಳ ಕನ್ನಡ ಅವತರಣಿಕೆಗಳು ಕೂಡ ಒಳ್ಳೆಯ ಪ್ರತಿಕ್ರಿಯೆ ಪಡೆದುಕೊಂಡಿವೆ. ಆದರೂ ಸಹ ಬಿಡುಗಡೆ ಸಮಯದಲ್ಲಿ ಕನ್ನಡ ವರ್ಷನ್​ ಅನ್ನು ಕಡೆಗಣಿಸಿರುವುದು ಅಚ್ಚರಿ ಮೂಡಿಸಿದೆ.

ಇದನ್ನೂ ಓದಿ:

Allu Arjun: ಕನ್ನಡ ಮಾಧ್ಯಮಗಳ ಎದುರು ಬಹಿರಂಗ ಕ್ಷಮೆಯಾಚಿಸಿದ ಅಲ್ಲು ಅರ್ಜುನ್​

ಸಮಂತಾ ಹಾಡಿನಲ್ಲಿ ಗಂಡಸರಿಗೆ ಅವಮಾನ; ‘ಪುಷ್ಪ’ ಚಿತ್ರದ ವಿರುದ್ಧ ದೂರು ನೀಡಿದ ಪುರುಷರ ಸಂಘಟನೆ

Follow Us
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ಪ್ರಧಾನಿ ಮೋದಿ ಹೇಳಿಕೆಗೆ ಖಾಸಗಿ ಶಾಲಾ ಒಕ್ಕೂಟದಿಂದ ಆಕ್ಷೇಪ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ನೀಟ್: ರಾಜ್ಯದಲ್ಲಿ ಅಕ್ರಮವಾಗಿದೆಯಾ? ಬಂಗಾರಪ್ಪ ಏನಂದ್ರು ನೋಡಿ
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ಪ್ರಧಾನಿ ಮೋದಿ ಹೇಳಿದ್ದಕ್ಕೆ BMTC ಬಸ್​ನಲ್ಲಿ ಬಂದೆ ಎಂದ ಪ್ರಯಾಣಿಕ!
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಶ್ವಾಸ ಮತ ಯಾಚನೆಯಲ್ಲಿ ಭಾಗಿಯಾಗದಂತೆ TVK ಶಾಸಕನಿಗೆ ಕೋರ್ಟ್​ ನಿರ್ಬಂಧ
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ವಿಧಾನಸಭೇಲಿ ಸಿಎಂ ವಿಜಯ್ ಕಾಲೆಳೆದ ಉದಯನಿಧಿ ಬಿಚ್ಚಿಟ್ಟರು ಹಳೇ ಕಾಲದ ರಹಸ್ಯ!
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ನಿದ್ದೆಯ ಮಂಪರಿನಲ್ಲಿ ಡಿವೈಡರ್​​ಗೆ ಗುದ್ದಿದ ಟ್ರಕ್​ ಡ್ರೈವರ್
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
ತಮಿಳುನಾಡು ರಾಜಕಾರಣದಲ್ಲಿ ಸ್ಫೋಟಕ ಬೆಳವಣಿಗೆ: ಎಐಎಡಿಎಂಕೆಯಲ್ಲಿ ಭಾರಿ ಬಂಡಾಯ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
Live: ಅಸ್ಸಾಂ ಸಿಎಂ ಆಗಿ ಹಿಮಂತ್ ಬಿಸ್ವಾ ಶರ್ಮಾ ಪದಗ್ರಹಣದ ನೇರಪ್ರಸಾರ
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಶೃಂಗೇರಿ ವೋಟ್ ಟ್ಯಾಂಪರಿಂಗ್ ಆರೋಪ: FSL​ನಲ್ಲಿ ಎಲ್ಲ ಗೊತ್ತಾಗಲಿದೆ: ಪರಮೇಶ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್
ಸುಪ್ರೀಂ ಕೋರ್ಟ್ ಆದೇಶವನ್ನು ಒಪ್ಪಿಕೊಳ್ಳುತ್ತೇನೆ ಎಂದ ಜೀವರಾಜ್