AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ ‘ಪುಷ್ಪ’ ಚಿತ್ರ ಬಹಿಷ್ಕರಿಸುವಂತೆ ಒತ್ತಾಯ; ಕಾರಣ ಏನು?

Boycott Pushpa In Karnataka: ಕರ್ನಾಟಕದ ಚಿತ್ರಮಂದಿರಗಳಲ್ಲಿ ‘ಪುಷ್ಪ’ ಚಿತ್ರದ ಕನ್ನಡ ವರ್ಷನ್​ಗಿಂತಲೂ ಹೆಚ್ಚಾಗಿ ತೆಲುಗು ವರ್ಷನ್​ ಅನ್ನು ಬಿಡುಗಡೆ ಮಾಡಲಾಗುತ್ತಿದೆ. ಇದು ಕನ್ನಡ ಸಿನಿಪ್ರೇಕ್ಷಕರ ಕೋಪಕ್ಕೆ ಕಾರಣ ಆಗಿದೆ.

ಕರ್ನಾಟಕದಲ್ಲಿ ‘ಪುಷ್ಪ’ ಚಿತ್ರ ಬಹಿಷ್ಕರಿಸುವಂತೆ ಒತ್ತಾಯ; ಕಾರಣ ಏನು?
‘ಪುಷ್ಪ’ ಚಿತ್ರದಲ್ಲಿ ಅಲ್ಲು ಅರ್ಜುನ್
TV9 Web
| Edited By: |

Updated on: Dec 16, 2021 | 5:08 PM

Share

ಈ ವರ್ಷದ ಬಹುನಿರೀಕ್ಷಿತ ಸಿನಿಮಾಗಳಲ್ಲಿ ಒಂದಾಗಿರುವ ‘ಪುಷ್ಪ’ (Pushpa Movie) ಚಿತ್ರ ಶುಕ್ರವಾರ (ಡಿ.17) ಬಿಡುಗಡೆ ಆಗುತ್ತಿದೆ. ಈ ಸಿನಿಮಾದಲ್ಲಿ ಅಲ್ಲು ಅರ್ಜುನ್​ (Allu Arjun) ಮತ್ತು ರಶ್ಮಿಕಾ ಮಂದಣ್ಣ (Rashmika Mandanna) ಅವರು ನಟಿಸಿದ್ದಾರೆ. ಅದ್ದೂರಿಯಾಗಿ ಬಿಡುಗಡೆ ಆಗುತ್ತಿರುವ ಈ ಸಿನಿಮಾ ವಿರುದ್ಧ ಕನ್ನಡಿಗರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಅದಕ್ಕೆ ಬಲವಾದ ಕಾರಣ ಕೂಡ ಇದೆ. ಕರ್ನಾಟಕದಲ್ಲಿ ‘ಪುಷ್ಪ’ ಚಿತ್ರವನ್ನು ಬಹಿಷ್ಕರಿಸುವಂತೆ ಒತ್ತಾಯ ಹೇರಲಾಗುತ್ತಿದೆ. ಹಾಗಾಗಿ ಟ್ವಿಟರ್​ನಲ್ಲಿ #BoycottPushpaInKarnataka ಹ್ಯಾಶ್​ ಟ್ಯಾಗ್​ ಟ್ರೆಂಡ್​ ಆಗುತ್ತಿದೆ. ಇದು ಚಿತ್ರತಂಡಕ್ಕೆ ಮುಳುವಾಗುವ ಸಾಧ್ಯತೆ ಇದೆ. ಈ ಚಿತ್ರಕ್ಕೆ ಸುಕುಮಾರ್​ ನಿರ್ದೇಶನ ಮಾಡಿದ್ದು, ಕನ್ನಡದ ಖ್ಯಾತ ನಟ ಡಾಲಿ ಧನಂಜಯ ಕೂಡ ಅಭಿನಯಿಸಿದ್ದಾರೆ.

‘ಪುಷ್ಪ’ ಚಿತ್ರ ತೆಲುಗಿನಲ್ಲಿ ನಿರ್ಮಾಣವಾಗಿ ಇನ್ನುಳಿದ ಭಾಷೆಗಳಿಗೆ ಡಬ್​ ಆಗಿದೆ. ಕನ್ನಡ, ಹಿಂದಿ, ಮಲಯಾಳಂ, ತಮಿಳು ಭಾಷೆಗಳಿಗೆ ಡಬ್​ ಆಗಿ ತೆರೆಕಾಣುತ್ತಿದೆ. ಆದರೆ ಕರ್ನಾಟಕದ ಹೆಚ್ಚು ಚಿತ್ರಮಂದಿರಗಳಲ್ಲಿ ಕನ್ನಡ ವರ್ಷನ್​ಗಿಂತಲೂ ತೆಲುಗು ವರ್ಷನ್​ ಅನ್ನು ಬಿಡುಗಡೆ ಮಾಡಲಾಗಿದೆ. ಇದು ಕನ್ನಡ ಸಿನಿಪ್ರೇಕ್ಷಕರ ಕೋಪಕ್ಕೆ ಕಾರಣ ಆಗಿದೆ. ಟ್ವಿಟರ್​ನಲ್ಲಿ ಈ ಬಗ್ಗೆ ಅಸಮಾಧಾನ ವ್ಯಕ್ತವಾಗುತ್ತಿದೆ.

‘ನಾವು ಇಲ್ಲಿಯವರೆಗೆ ಈ ಚಿತ್ರಕ್ಕೆ ಬೆಂಬಲ ನೀಡಿದ್ದಕ್ಕೆ ಕಾರಣವೇ ಕನ್ನಡ. ನಮ್ಮ ಭಾಷೆಯಲ್ಲಿ ಈ ಸಿನಿಮಾ ಬಿಡುಗಡೆ ಆಗುತ್ತದೆ ಅಂತ ಸಪೋರ್ಟ್​ ಮಾಡಿದ್ವಿ. ಆದರೆ ಈಗ ತೆಲುಗು ವರ್ಷನ್​ ರಾರಾಜಿಸುತ್ತಿದೆ’ ಎಂದು ಅನೇಕರು ಸೋಶಿಯಲ್​ ಮೀಡಿಯಾದಲ್ಲಿ ಬೇಸರ ವ್ಯಕ್ತಪಡಿಸುತ್ತಿದ್ದಾರೆ. ಈ ಬಗ್ಗೆ ‘ಪುಷ್ಪ’ ಚಿತ್ರತಂಡ ಯಾವ ರೀತಿ ಪ್ರತಿಕ್ರಿಯೆ ನೀಡಲಿದೆ ಎಂಬ ಕೌತುಕ ನಿರ್ಮಾಣ ಆಗಿದೆ.

ಬೆಂಗಳೂರಿನಲ್ಲಿ ಮೊದಲ ದಿನವೇ ಈ ಸಿನಿಮಾದ ತೆಲುಗು ಅವತರಣಿಕೆಯ 650 ಹೆಚ್ಚು ಶೋಗಳು ಪ್ರದರ್ಶನ ಕಾಣುತ್ತಿವೆ. ಆದರೆ ಕನ್ನಡ ವರ್ಷನ್​ಗೆ ಕೇವಲ ಮೂರು ಶೋ ನೀಡಲಾಗಿದೆ! ಇದು ಕನ್ನಡ ಪ್ರೇಕ್ಷಕರ ಅಸಮಾಧಾನಕ್ಕೆ ಕಾರಣ ಆಗಿದೆ. ಬೆಂಗಳೂರು ಮಾತ್ರವಲ್ಲದೇ ಬಹುತೇಕ ಜಿಲ್ಲಾ ಕೇಂದ್ರಗಳಲ್ಲೂ ಇದೇ ಪರಿಸ್ಥಿತಿ ಇದೆ. ಈ ಸಿನಿಮಾದ ಟ್ರೇಲರ್​ ಮತ್ತು ಹಾಡುಗಳ ಕನ್ನಡ ಅವತರಣಿಕೆಗಳು ಕೂಡ ಒಳ್ಳೆಯ ಪ್ರತಿಕ್ರಿಯೆ ಪಡೆದುಕೊಂಡಿವೆ. ಆದರೂ ಸಹ ಬಿಡುಗಡೆ ಸಮಯದಲ್ಲಿ ಕನ್ನಡ ವರ್ಷನ್​ ಅನ್ನು ಕಡೆಗಣಿಸಿರುವುದು ಅಚ್ಚರಿ ಮೂಡಿಸಿದೆ.

ಇದನ್ನೂ ಓದಿ:

Allu Arjun: ಕನ್ನಡ ಮಾಧ್ಯಮಗಳ ಎದುರು ಬಹಿರಂಗ ಕ್ಷಮೆಯಾಚಿಸಿದ ಅಲ್ಲು ಅರ್ಜುನ್​

ಸಮಂತಾ ಹಾಡಿನಲ್ಲಿ ಗಂಡಸರಿಗೆ ಅವಮಾನ; ‘ಪುಷ್ಪ’ ಚಿತ್ರದ ವಿರುದ್ಧ ದೂರು ನೀಡಿದ ಪುರುಷರ ಸಂಘಟನೆ

‘ಗಂಡನ ಪಕ್ಕ ಮಲಗೋದು ಬಿಡಿ, ಹತ್ರ ಕುಳಿತುಕೊಳ್ಳಲೂ ಬಿಡ್ತಿರ್ಲಿಲ್ಲ ಅತ್ತೆ!’
‘ಗಂಡನ ಪಕ್ಕ ಮಲಗೋದು ಬಿಡಿ, ಹತ್ರ ಕುಳಿತುಕೊಳ್ಳಲೂ ಬಿಡ್ತಿರ್ಲಿಲ್ಲ ಅತ್ತೆ!’
14 ವರ್ಷಗಳ ಬಳಿಕ ಟೆಸ್ಟ್ ಪಂದ್ಯ ಗೆದ್ದ ಇಂಗ್ಲೆಂಡ್..!
14 ವರ್ಷಗಳ ಬಳಿಕ ಟೆಸ್ಟ್ ಪಂದ್ಯ ಗೆದ್ದ ಇಂಗ್ಲೆಂಡ್..!
ತಡರಾತ್ರಿ ಯುವತಿಯನ್ನು ಹಿಂಬಾಲಿಸಿಕೊಂಡು ಬಂದು ಪುಂಡರು
ತಡರಾತ್ರಿ ಯುವತಿಯನ್ನು ಹಿಂಬಾಲಿಸಿಕೊಂಡು ಬಂದು ಪುಂಡರು
ಮಕ್ಕಳ‌ ಕಳ್ಳಿಯರು ಎಂದು 7 ಮಹಿಳೆಯರಿಗೆ ಹಿಗ್ಗಾಮುಗ್ಗಾ ಥಳಿಸಿದ ಸಾರ್ವಜನಿಕರು
ಮಕ್ಕಳ‌ ಕಳ್ಳಿಯರು ಎಂದು 7 ಮಹಿಳೆಯರಿಗೆ ಹಿಗ್ಗಾಮುಗ್ಗಾ ಥಳಿಸಿದ ಸಾರ್ವಜನಿಕರು
ಅರಮನೆ ಬಳಿ ಭಾರಿ ಭದ್ರತಾ ಲೋಪ? ಸಿಸಿಟಿವಿ ಕ್ಯಾಮರಾದಲ್ಲಿಲ್ಲ ಸ್ಫೋಟದ ದೃಶ್ಯ!
ಅರಮನೆ ಬಳಿ ಭಾರಿ ಭದ್ರತಾ ಲೋಪ? ಸಿಸಿಟಿವಿ ಕ್ಯಾಮರಾದಲ್ಲಿಲ್ಲ ಸ್ಫೋಟದ ದೃಶ್ಯ!
60 ದಿನಗಳ ಬಳಿಕ ಬ್ಯಾಟ್ ಬೀಸಿದ ಶ್ರೇಯಸ್ ಅಯ್ಯರ್
60 ದಿನಗಳ ಬಳಿಕ ಬ್ಯಾಟ್ ಬೀಸಿದ ಶ್ರೇಯಸ್ ಅಯ್ಯರ್
ಟಾಸ್ಕ್ ಆಡಿಯೇ ಕ್ಯಾಪ್ಟನ್ ಆದ ಗಿಲ್ಲಿ; ನಿಯಮ ಮುರಿದಿದ್ದಕ್ಕೆ ಎಚ್ಚರಿಕೆ
ಟಾಸ್ಕ್ ಆಡಿಯೇ ಕ್ಯಾಪ್ಟನ್ ಆದ ಗಿಲ್ಲಿ; ನಿಯಮ ಮುರಿದಿದ್ದಕ್ಕೆ ಎಚ್ಚರಿಕೆ
ಸರಣಿ ಮನೆಕಳ್ಳತನ, ಪೊಲೀಸರು ಸ್ಪಂದಿಸದೇ ಇದ್ದಾಗ ಜನ ಮಾಡಿದ್ದೇನು ನೋಡಿ!
ಸರಣಿ ಮನೆಕಳ್ಳತನ, ಪೊಲೀಸರು ಸ್ಪಂದಿಸದೇ ಇದ್ದಾಗ ಜನ ಮಾಡಿದ್ದೇನು ನೋಡಿ!
ರಿಕೆಲ್ಟನ್ ಸೆಂಚುರಿ ಸಿಡಿಸಿದರೂ ಸೋತ ಎಂಐ ಪಡೆ
ರಿಕೆಲ್ಟನ್ ಸೆಂಚುರಿ ಸಿಡಿಸಿದರೂ ಸೋತ ಎಂಐ ಪಡೆ
ವಾಹನ ಸವಾರರೇ ಎಚ್ಚರ: ಎಲ್ಲೆಡೆ ಹದ್ದಿನ ಕಣ್ಣಿಟ್ಟಿದ್ದಾರೆ ಟ್ರಾಫಿಕ್ ಪೊಲೀಸ್
ವಾಹನ ಸವಾರರೇ ಎಚ್ಚರ: ಎಲ್ಲೆಡೆ ಹದ್ದಿನ ಕಣ್ಣಿಟ್ಟಿದ್ದಾರೆ ಟ್ರಾಫಿಕ್ ಪೊಲೀಸ್