AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕರ್ನಾಟಕದಲ್ಲಿ ‘ಪುಷ್ಪ’ ಚಿತ್ರ ಬಹಿಷ್ಕರಿಸುವಂತೆ ಒತ್ತಾಯ; ಕಾರಣ ಏನು?

Boycott Pushpa In Karnataka: ಕರ್ನಾಟಕದ ಚಿತ್ರಮಂದಿರಗಳಲ್ಲಿ ‘ಪುಷ್ಪ’ ಚಿತ್ರದ ಕನ್ನಡ ವರ್ಷನ್​ಗಿಂತಲೂ ಹೆಚ್ಚಾಗಿ ತೆಲುಗು ವರ್ಷನ್​ ಅನ್ನು ಬಿಡುಗಡೆ ಮಾಡಲಾಗುತ್ತಿದೆ. ಇದು ಕನ್ನಡ ಸಿನಿಪ್ರೇಕ್ಷಕರ ಕೋಪಕ್ಕೆ ಕಾರಣ ಆಗಿದೆ.

ಕರ್ನಾಟಕದಲ್ಲಿ ‘ಪುಷ್ಪ’ ಚಿತ್ರ ಬಹಿಷ್ಕರಿಸುವಂತೆ ಒತ್ತಾಯ; ಕಾರಣ ಏನು?
‘ಪುಷ್ಪ’ ಚಿತ್ರದಲ್ಲಿ ಅಲ್ಲು ಅರ್ಜುನ್
TV9 Web
| Edited By: |

Updated on: Dec 16, 2021 | 5:08 PM

Share

ಈ ವರ್ಷದ ಬಹುನಿರೀಕ್ಷಿತ ಸಿನಿಮಾಗಳಲ್ಲಿ ಒಂದಾಗಿರುವ ‘ಪುಷ್ಪ’ (Pushpa Movie) ಚಿತ್ರ ಶುಕ್ರವಾರ (ಡಿ.17) ಬಿಡುಗಡೆ ಆಗುತ್ತಿದೆ. ಈ ಸಿನಿಮಾದಲ್ಲಿ ಅಲ್ಲು ಅರ್ಜುನ್​ (Allu Arjun) ಮತ್ತು ರಶ್ಮಿಕಾ ಮಂದಣ್ಣ (Rashmika Mandanna) ಅವರು ನಟಿಸಿದ್ದಾರೆ. ಅದ್ದೂರಿಯಾಗಿ ಬಿಡುಗಡೆ ಆಗುತ್ತಿರುವ ಈ ಸಿನಿಮಾ ವಿರುದ್ಧ ಕನ್ನಡಿಗರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಅದಕ್ಕೆ ಬಲವಾದ ಕಾರಣ ಕೂಡ ಇದೆ. ಕರ್ನಾಟಕದಲ್ಲಿ ‘ಪುಷ್ಪ’ ಚಿತ್ರವನ್ನು ಬಹಿಷ್ಕರಿಸುವಂತೆ ಒತ್ತಾಯ ಹೇರಲಾಗುತ್ತಿದೆ. ಹಾಗಾಗಿ ಟ್ವಿಟರ್​ನಲ್ಲಿ #BoycottPushpaInKarnataka ಹ್ಯಾಶ್​ ಟ್ಯಾಗ್​ ಟ್ರೆಂಡ್​ ಆಗುತ್ತಿದೆ. ಇದು ಚಿತ್ರತಂಡಕ್ಕೆ ಮುಳುವಾಗುವ ಸಾಧ್ಯತೆ ಇದೆ. ಈ ಚಿತ್ರಕ್ಕೆ ಸುಕುಮಾರ್​ ನಿರ್ದೇಶನ ಮಾಡಿದ್ದು, ಕನ್ನಡದ ಖ್ಯಾತ ನಟ ಡಾಲಿ ಧನಂಜಯ ಕೂಡ ಅಭಿನಯಿಸಿದ್ದಾರೆ.

‘ಪುಷ್ಪ’ ಚಿತ್ರ ತೆಲುಗಿನಲ್ಲಿ ನಿರ್ಮಾಣವಾಗಿ ಇನ್ನುಳಿದ ಭಾಷೆಗಳಿಗೆ ಡಬ್​ ಆಗಿದೆ. ಕನ್ನಡ, ಹಿಂದಿ, ಮಲಯಾಳಂ, ತಮಿಳು ಭಾಷೆಗಳಿಗೆ ಡಬ್​ ಆಗಿ ತೆರೆಕಾಣುತ್ತಿದೆ. ಆದರೆ ಕರ್ನಾಟಕದ ಹೆಚ್ಚು ಚಿತ್ರಮಂದಿರಗಳಲ್ಲಿ ಕನ್ನಡ ವರ್ಷನ್​ಗಿಂತಲೂ ತೆಲುಗು ವರ್ಷನ್​ ಅನ್ನು ಬಿಡುಗಡೆ ಮಾಡಲಾಗಿದೆ. ಇದು ಕನ್ನಡ ಸಿನಿಪ್ರೇಕ್ಷಕರ ಕೋಪಕ್ಕೆ ಕಾರಣ ಆಗಿದೆ. ಟ್ವಿಟರ್​ನಲ್ಲಿ ಈ ಬಗ್ಗೆ ಅಸಮಾಧಾನ ವ್ಯಕ್ತವಾಗುತ್ತಿದೆ.

‘ನಾವು ಇಲ್ಲಿಯವರೆಗೆ ಈ ಚಿತ್ರಕ್ಕೆ ಬೆಂಬಲ ನೀಡಿದ್ದಕ್ಕೆ ಕಾರಣವೇ ಕನ್ನಡ. ನಮ್ಮ ಭಾಷೆಯಲ್ಲಿ ಈ ಸಿನಿಮಾ ಬಿಡುಗಡೆ ಆಗುತ್ತದೆ ಅಂತ ಸಪೋರ್ಟ್​ ಮಾಡಿದ್ವಿ. ಆದರೆ ಈಗ ತೆಲುಗು ವರ್ಷನ್​ ರಾರಾಜಿಸುತ್ತಿದೆ’ ಎಂದು ಅನೇಕರು ಸೋಶಿಯಲ್​ ಮೀಡಿಯಾದಲ್ಲಿ ಬೇಸರ ವ್ಯಕ್ತಪಡಿಸುತ್ತಿದ್ದಾರೆ. ಈ ಬಗ್ಗೆ ‘ಪುಷ್ಪ’ ಚಿತ್ರತಂಡ ಯಾವ ರೀತಿ ಪ್ರತಿಕ್ರಿಯೆ ನೀಡಲಿದೆ ಎಂಬ ಕೌತುಕ ನಿರ್ಮಾಣ ಆಗಿದೆ.

ಬೆಂಗಳೂರಿನಲ್ಲಿ ಮೊದಲ ದಿನವೇ ಈ ಸಿನಿಮಾದ ತೆಲುಗು ಅವತರಣಿಕೆಯ 650 ಹೆಚ್ಚು ಶೋಗಳು ಪ್ರದರ್ಶನ ಕಾಣುತ್ತಿವೆ. ಆದರೆ ಕನ್ನಡ ವರ್ಷನ್​ಗೆ ಕೇವಲ ಮೂರು ಶೋ ನೀಡಲಾಗಿದೆ! ಇದು ಕನ್ನಡ ಪ್ರೇಕ್ಷಕರ ಅಸಮಾಧಾನಕ್ಕೆ ಕಾರಣ ಆಗಿದೆ. ಬೆಂಗಳೂರು ಮಾತ್ರವಲ್ಲದೇ ಬಹುತೇಕ ಜಿಲ್ಲಾ ಕೇಂದ್ರಗಳಲ್ಲೂ ಇದೇ ಪರಿಸ್ಥಿತಿ ಇದೆ. ಈ ಸಿನಿಮಾದ ಟ್ರೇಲರ್​ ಮತ್ತು ಹಾಡುಗಳ ಕನ್ನಡ ಅವತರಣಿಕೆಗಳು ಕೂಡ ಒಳ್ಳೆಯ ಪ್ರತಿಕ್ರಿಯೆ ಪಡೆದುಕೊಂಡಿವೆ. ಆದರೂ ಸಹ ಬಿಡುಗಡೆ ಸಮಯದಲ್ಲಿ ಕನ್ನಡ ವರ್ಷನ್​ ಅನ್ನು ಕಡೆಗಣಿಸಿರುವುದು ಅಚ್ಚರಿ ಮೂಡಿಸಿದೆ.

ಇದನ್ನೂ ಓದಿ:

Allu Arjun: ಕನ್ನಡ ಮಾಧ್ಯಮಗಳ ಎದುರು ಬಹಿರಂಗ ಕ್ಷಮೆಯಾಚಿಸಿದ ಅಲ್ಲು ಅರ್ಜುನ್​

ಸಮಂತಾ ಹಾಡಿನಲ್ಲಿ ಗಂಡಸರಿಗೆ ಅವಮಾನ; ‘ಪುಷ್ಪ’ ಚಿತ್ರದ ವಿರುದ್ಧ ದೂರು ನೀಡಿದ ಪುರುಷರ ಸಂಘಟನೆ

Follow Us
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
'ಬ್ರಿಕ್ಸ್ ಶೃಂಗಸಭೆಗೆ ಭಾರತ ಸಿದ್ಧ'; ವಿಡಿಯೋ ಹಂಚಿಕೊಂಡ ಪ್ರಧಾನಿ ಮೋದಿ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಹೈಕಮಾಂಡ್ ಬುಲಾವ್: ದೆಹಲಿಗೆ ಹೊರಟ ಮಾಜಿ ಸಿಎಂ ಸಿದ್ದರಾಮಯ್ಯ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ಡಿಕೆಶಿ 100 ದಿನಗಳ ಸಂಭ್ರಮಕ್ಕೆ ನೊಣವಿನಕೆರೆ ಶ್ರೀಗಳ ಆಶೀರ್ವಚನ ಹೀಗಿದೆ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ರಂಗನತಿಟ್ಟು ವಿದೇಶಿ ಪ್ರಯೋಗ: ಪಕ್ಷಿಗಳ ರಕ್ಷಣೆಗೆ ಗೇಬಿಯನ್ ತಂತ್ರಜ್ಞಾನ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಬಿಗ್​​ಬಾಸ್​​ನಲ್ಲಿ ಓಪನ್ ಆಗ್ತಿದೆ ಹಳೆ ಲವ್ ಸ್ಟೋರಿಗಳು: ವಿಡಿಯೋ ನೋಡಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಮಹಾಸಂಕಲ್ಪ ಮತ್ತು ನವಸಂಕಲ್ಪ: 2037ರ ಭವ್ಯ ಕನಸು ಬಿಚ್ಚಿಟ್ಟ ಡಿಕೆಶಿ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ
ಬೆಂಗಳೂರು ದಕ್ಷಿಣದಲ್ಲಿ ಮಾದಕ ವಸ್ತುಗಳ ವಿರುದ್ಧ ಪೊಲೀಸರ ಸಮರ
ಸಚಿವ ಸತೀಶ್ ಜಾರಕಿಹೊಳಿಗೆ ಎದುರಾಯ್ತು ಇಡಿ ಸಂಕಷ್ಟ!
ಸಚಿವ ಸತೀಶ್ ಜಾರಕಿಹೊಳಿಗೆ ಎದುರಾಯ್ತು ಇಡಿ ಸಂಕಷ್ಟ!
ಹನುಮ ಹುಟ್ಟಿದ ನಾಡು ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್
ಹನುಮ ಹುಟ್ಟಿದ ನಾಡು ಅಂಜನಾದ್ರಿಗೆ ಭೇಟಿ ನೀಡಿದ ಸಂಸದ ಯದುವೀರ್