AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬ್ರಹ್ಮಗಂಟು ಸೀರಿಯಲ್ ನಟಿ ಶೋಭಿತಾ ಇನ್ನಿಲ್ಲ; ಹೈದರಾಬಾದ್​ನಲ್ಲಿ ನಿಧನ

‘ಎರಡೊಂದ್ಲಾ ಮೂರು’, ‘ಒಂದ್‌ ಕಥೆ ಹೇಳಾ’ ಮುಂತಾದ ಸಿನಿಮಾಗಳಲ್ಲಿ ನಟಿಸಿದ್ದ ಶೋಭಿತಾ ಶಿವಣ್ಣ ನಿಧನರಾಗಿದ್ದಾರೆ. ‘ಬ್ರಹ್ಮಗಂಟು’ ಸೀರಿಯಲ್ ಮೂಲಕ ಅವರು ಖ್ಯಾತಿ ಪಡೆದಿದ್ದರು. ಆತ್ಮಹತ್ಯೆ ಮಾಡಿಕೊಂಡು ಅವರು ಸಾವಿಗೀಡಾಗಿದ್ದಾರೆ.

ಬ್ರಹ್ಮಗಂಟು ಸೀರಿಯಲ್ ನಟಿ ಶೋಭಿತಾ ಇನ್ನಿಲ್ಲ; ಹೈದರಾಬಾದ್​ನಲ್ಲಿ ನಿಧನ
ಶೋಭಿತಾ
ಮಾಲತೇಶ ಜಗ್ಗೀನ್
| Edited By: |

Updated on:Dec 01, 2024 | 8:28 PM

Share

‘ಎರಡೊಂದ್ಲಾ ಮೂರು’, ‘ಒಂದ್‌ ಕಥೆ ಹೇಳಾ’ ಮುಂತಾದ ಸಿನಿಮಾಗಳಲ್ಲಿ ನಟಿಸಿದ್ದ ಶೋಭಿತಾ ಶಿವಣ್ಣ ನಿಧನರಾಗಿದ್ದಾರೆ. ‘ಬ್ರಹ್ಮಗಂಟು’ ಸೀರಿಯಲ್ ಮೂಲಕ ಅವರು ಖ್ಯಾತಿ ಪಡೆದಿದ್ದರು. ಆತ್ಮಹತ್ಯೆ ಮಾಡಿಕೊಂಡು ಅವರು ಸಾವಿಗೀಡಾಗಿದ್ದಾರೆ. ಹಾಸನ‌‌ ಮೂಲದ ಸಕಲೇಶಪುರದನಟಿ ಶೋಭಿತಾ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂಬ ಮಾಹಿತಿ ಇದೆ. ಸದ್ಯ ‘ಫಸ್ಟ್ ಡೇ ಫಸ್ಟ್ ಶೋ’ ಸಿನಿಮಾದಲ್ಲಿ ನಟಿಸಿದ್ದ ಶೋಭಿತಾ ಅವರು ಮದುವೆ ಬಳಿಕ ಸಿನಿಮಾಗಳಲ್ಲಿ ನಟಿಸುವುದು ಕಡಿಮೆ ಆಗಿತ್ತು.

ಎರಡು ವರ್ಷಗಳ ಹಿಂದೆ ಮದುವೆಯಾದ ಶೋಭಿತಾ ಅವರು ಹೈದರಾಬಾದ್‌ನಲ್ಲಿ ವಾಸವಾಗಿದ್ದರು. ನಟಿಯ ಆತ್ಮಹತ್ಯೆಗೆ ಕಾರಣ ಏನು ಎಂಬುದು ಗೊತ್ತಾಗಿಲ್ಲ. ಶನಿವಾರ (ನವೆಂಬರ್​ 30) ರಾತ್ರಿ ಘಟನೆ ನಡೆದಿರುವ ಸಾಧ್ಯತೆ ಇದೆ. ಶನಿವಾರವಷ್ಟೇ ಸೋಶಿಯಲ್‌ ಮೀಡಿಯಾದಲ್ಲಿ ಸ್ಟೋರಿ ಶೇರ್ ಮಾಡಿದ್ದರು. ಆ ಬಳಿಕ ಅವರು ಆತ್ಮಹತ್ಯೆಯ ನಿರ್ಧಾರ ಮಾಡಿದ್ದು ಅಚ್ಚರಿಗೆ ಕಾರಣ ಆಗಿದೆ.

ಇದನ್ನೂ ಓದಿ: ನಟಿ ಸಮಂತಾ ರುತ್​ ಪ್ರಭು ತಂದೆ ಜೋಸೆಫ್​ ಪ್ರಭು ನಿಧನ

ಶೋಭಿತಾ ಮದುವೆ ಆದಾಗಿಂದ ಇಂಡಸ್ಟ್ರಿಯಿಂದ‌ ಅಂತರ ಕಾಯ್ದುಕೊಂಡಿದ್ದರು. ಮರಣೋತ್ತರ ಪರೀಕ್ಷೆ ನಂತರ ಬೆಂಗಳೂರಿಗೆ ಮೃತದೇಹ ತರುವ ಸಾಧ್ಯತೆ ಇದೆ. ಅವರ ನಿಧನಕ್ಕೆ ಸಿನಿಮಾ ಮತ್ತು ಸೀರಿಯಲ್ ಸೆಲೆಬ್ರಿಟಿಗಳು ಸಂತಾಪ ಸೂಚಿಸುತ್ತಿದ್ದಾರೆ. ಹಲವು ವರ್ಷಗಳಿಂದ ಬಣ್ಣದ ಲೋಕದಲ್ಲಿ ಸಕ್ರಿಯವಾಗಿದ್ದ ಶೋಭಿತಾ ಅವರು ಏಕಾಏಕಿ ದುಡುಕಿನ ನಿರ್ಧಾರ ತೆಗೆದುಕೊಂಡಿದ್ದಕ್ಕೆ ಎಲ್ಲರಿಗೂ ಆಘಾತ ಆಗಿದೆ.

ಇದನ್ನೂ ಓದಿ: ಸಾಲ ಪಡೆದಿದ್ದ ವ್ಯಕ್ತಿಗೆ ನಗ್ನ ಚಿತ್ರ ಹರಿಬಿಡುವ ಬೆದರಿಕೆ: ಕಿರುಕುಳಕ್ಕೆ ನೊಂದು ಕ್ಯಾಮರಾಮನ್‌ ಆತ್ಮಹತ್ಯೆ

ಶೋಭಿತಾ ಅವರಿಗೆ 30 ವರ್ಷ ವಯಸ್ಸು ಆಗಿತ್ತು. 12ಕ್ಕೂ ಅಧಿಕ ಸೀರಿಯಲ್​ಗಳಲ್ಲಿ ಅವರು ನಟಿಸಿದ್ದರು. ಮಂಗಳಗೌರಿ ಮದುವೆ, ಗಾಳಿಪಟ, ಕೃಷ್ಣ ರುಕ್ಮಿಣಿ, ಮನೆ ದೇವ್ರು, ಅಮ್ಮಾವ್ರು, ದೀಪವು ನಿನ್ನದೇ ಗಾಳಿಯೂ ನಿನ್ನದೇ ಮುಂತಾದ ಧಾರಾವಾಹಿಗಳ ಮೂಲಕ ಅವರು ಪರಿಚಿತರಾಗಿದ್ದರು. ಶೋಭಿತಾ ನಿಧನಕ್ಕೆ ಸಂಬಂಧಿಸಿದಂತೆ ತನಿಖೆ ಆರಂಭಿಸಲಾಗಿದೆ. ತನಿಖೆ ಪೂರ್ಣಗೊಂಡ ಬಳಿಕ ಅವರ ಸಾವಿಗೆ ಕಾರಣ ಏನು ಎಂಬುದು ತಿಳಿಯಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 6:34 pm, Sun, 1 December 24

Follow Us
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
ಕಲಬೆರಕೆ ತುಪ್ಪದ ದಂಧೆ: ಬಳ್ಳಾರಿಯಿಂದ ಚಿಕ್ಕಮಗಳೂರುವರೆಗೆ ಮಾರಾಟ ಜಾಲ ಪತ್ತೆ
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
TV9 ರಿಯಲ್ ಎಸ್ಟೇಟ್ ಎಕ್ಸ್​ಪೋಗೆ DIG ಬೋರಲಿಂಗಯ್ಯ, ಅರುಣ್ ಯೋಗಿರಾಜ್
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಹುಬ್ಬಳ್ಳಿ ಪುಷ್ಕರಣಿ ವಿವಾದ: ಪ್ರದೀಪ್ ಶೆಟ್ಟರ್ ಅನೇಕ ನಾಯಕರಿಂದ ಪ್ರತಿಭಟನೆ
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಬಾಂಗ್ಲಾ ಅಕ್ರಮ ವಲಸಿಗರ ಕಾಟ; ಅರೆಸ್ಟ್ ಆದವ್ರ ಹಿನ್ನೆಲೆ ಏನು?
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಪೋಷಕರು ಸೇರಿ ಹಲವರೊಂದಿಗೆ ಜೈಲಿನಿಂದಲೇ ಸಂಪರ್ಕ ಹೊಂದಿದ್ದ ಪ್ರಜ್ವಲ್ ರೇವಣ್ಣ
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಅಂಗಾಂಗ ದಾನ ನೋಂದಣಿಯಲ್ಲಿ ಧಾರವಾಡ ಫಸ್ಟ್!
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ
ಹಬ್ಬದ ಸೀಸನಲ್ಲಿ ಸಕ್ಕರೆ ಮತ್ತು ಬೆಲ್ಲದ ಬೆಲೆ ಗಗನಕ್ಕೆ: ಗ್ರಾಹಕರಿಗೆ ಆಘಾತ