AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Breaking ಮಾನವ ಕಳ್ಳಸಾಗಾಣಿಕೆ ಪ್ರಕರಣ: ಪಂಜಾಬಿ ಗಾಯಕ ದಲೇರ್ ಮೆಹಂದಿಗೆ 2 ವರ್ಷ ಜೈಲು ಶಿಕ್ಷೆ

Daler Mehendi 2003ರ ಮಾನವ ಕಳ್ಳಸಾಗಣೆ ಪ್ರಕರಣದಲ್ಲಿ ದಲೇರ್ ಮೆಹಂದಿಗೆ 2 ವರ್ಷಗಳ ಕಾಲ ಜೈಲು ಶಿಕ್ಷೆ

Breaking ಮಾನವ ಕಳ್ಳಸಾಗಾಣಿಕೆ ಪ್ರಕರಣ: ಪಂಜಾಬಿ ಗಾಯಕ ದಲೇರ್ ಮೆಹಂದಿಗೆ 2 ವರ್ಷ ಜೈಲು ಶಿಕ್ಷೆ
ದಲೇರ್ ಮೆಹಂದಿ
TV9 Web
| Edited By: ರಶ್ಮಿ ಕಲ್ಲಕಟ್ಟ|

Updated on:Jul 14, 2022 | 6:08 PM

Share

ಪಂಜಾಬಿ ಗಾಯಕ ದಲೇರ್ ಮೆಹಂದಿಗೆ (Daler Mehendi)  ಪಟಿಯಾಲ ನ್ಯಾಯಾಲಯ (Patiala court) ಗುರುವಾರ ಎರಡು ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಮಾನವ ಕಳ್ಳಸಾಗಾಣಿಕೆ ಪ್ರಕರಣದಲ್ಲಿ (human trafficking case) ದಲೇರ್ ಮೆಹಂದಿ ದೋಷಿ ಎಂದು ಸಾಬೀತಾಗಿದ್ದು, ನ್ಯಾಯಾಲಯ ಈ ಶಿಕ್ಷೆ ವಿಧಿಸಿದೆ. 2003ರಲ್ಲಿ ದಲೇರ್ ಮೆಹಂದಿ ಮತ್ತು ಆತನ ಸಹೋದರ ಶಂಷೇರ್ ಸಿಂಗ್ ವಿರುದ್ಧ ಒಟ್ಟು 31 ಪ್ರಕರಣಗಳು ದಾಖಲಾಗಿತ್ತು.ನ್ಯಾಯಾಲಯದಲ್ಲಿ ಹಾಜರಾಗಿದ್ದ ಮೆಹಂದಿಯನ್ನು ಅಲ್ಲಿಂದಲೇ ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ. ದಲೇರ್ ಮೆಹಂದಿ ಮತ್ತು ಆತನ ಸಹೋದರ ಶಂಷೇರ್ ಸಿಂಗ್ ತಮ್ಮ ತಂಡದ ಜನರು ಎಂದು ಹೇಳಿ ಅಕ್ರಮವಾಗಿ ಜನರನ್ನು ವಿದೇಶಕ್ಕೆ ಕರೆದೊಯ್ಯುತ್ತಿದ್ದರು. ಇದಕ್ಕಾಗಿ ಅವರು ಭಾರೀ ಹಣವನ್ನೂ ಪಡೆಯುತ್ತಿದ್ದರು. 2018ರಲ್ಲಿ ಜ್ಯುಡಿಷಿಯಲ್ ಮೆಜಿಸ್ಟ್ರೇಟ್ ಫಸ್ಟ್ ಕ್ಲಾಸ್  ಕೋರ್ಟ್ ಇವರಿಬ್ಬರನ್ನು ದೋಷಿ ಎಂದು ಹೇಳಿ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿತ್ತು. ಇದಾದ ನಂತರ ಜಾಮೀನು ಪಡೆದು ಹೊರಬಂದ ಇವರು ಸೆಷನ್ಸ್ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು. ಗುರುವಾರ ಅಡಿಷನಲ್ ಸೆಷನ್ಸ್ ನ್ಯಾಯಮೂರ್ತಿ ಎಚ್ಎಸ್ ಗ್ರೆವಾಲ್ ಜಾಮೀನು ಅರ್ಜಿಯನ್ನು ತಳ್ಳಿದ್ದು ಮೆಹಂದಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ.

2003ರಲ್ಲಿ ಸರ್ದಾರ್ ಪೊಲೀಸ್ ಠಾಣೆಯಲ್ಲಿ ದಾಖಲಾದ ಎಫ್ಐಆರ್ ಪ್ರಕಾರ ಮೆಹಂದಿ ಸಹೋದರರು 1998 ಮತ್ತು 1999ರಲ್ಲಿ ಎರಡು ತಂಡವನ್ನು ವಿದೇಶಕ್ಕೆ ಕರೆದುಕೊಂಡು ಹೋಗಿದ್ದು, ಅದರಲ್ಲಿ 10 ಮಂದಿಯನ್ನು ಅಮೆರಿಕದಲ್ಲಿ ಅಕ್ರಮವಾಗಿ ಬಿಟ್ಟು ಬಂದಿದ್ದಾರೆ.ಈ ಎಫ್ಐಆರ್ ದಾಖಲಾದ ನಂತರ ಇಬ್ಬರು ಸಹೋದರರ ಮೇಲೆ 35ಕ್ಕಿಂತಲೂ ಹೆಚ್ಚು ದೂರುಗಳು ದಾಖಲಾಗಿತ್ತು.

ಮೂರು ವರ್ಷಗಳ ನಂತರ ಸ್ಥಳೀಯ ಪೊಲೀಸರು ಸ್ಥಳೀಯ ನ್ಯಾಯಾಲಯದಲ್ಲಿ ದಲೇರ್ ಮೆಹಂದಿ ನಿರ್ದೋಷಿ ಎಂದು ಅರ್ಜಿ ಸಲ್ಲಿಸಿದ್ದರು. ಆದರೆ ದಲೇರ್ ವಿರುದ್ದ ಸಾಕಷ್ಟು ಸಾಕ್ಷ್ಯಗಳಿವೆ, ಅವರನ್ನು ಬಿಡುಗಡೆ ಮಾಡಲು ಆಗಲ್ಲ. ಈ ಬಗ್ಗೆ ಹೆಚ್ಚಿನ ವಿಚಾರಣೆ ನಡೆಸಬೇಕು ಎಂದು ಆದೇಶಿಸಿತ್ತು.

Published On - 5:15 pm, Thu, 14 July 22

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು
ತೀವ್ರ ವಿರೋಧದ ನಡುವೆಯೂ ಮೈಸೂರಿನಲ್ಲಿ ಕಂಬಳಕ್ಕೆ ಟ್ರ್ಯಾಕ್ ನಿರ್ಮಾಣ ಶುರು