AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಯಾನ್ಸರ್​ ಪೀಡಿತ ಬಾಲಿವುಡ್​ ನಟಿಗೆ ಮಗನ ಮದುವೆ ಚಿಂತೆ

ಸಿಖಂದರ್ ಖೇರ್ ಬುಧವಾರ (ಜೂ.2) ರಾತ್ರಿ ಇನ್​ಸ್ಟಾಗ್ರಾಂನಲ್ಲಿ ಲೈವ್​ ಬಂದಿದ್ದರು. ಈ ವೇಳೆ ಅವರು ಅಮ್ಮನ ಆರೋಗ್ಯದ ಬಗ್ಗೆ ವಿವರಣೆ ನೀಡಿದ್ದಾರೆ.

ಕ್ಯಾನ್ಸರ್​ ಪೀಡಿತ ಬಾಲಿವುಡ್​ ನಟಿಗೆ ಮಗನ ಮದುವೆ ಚಿಂತೆ
ಕಿರಣ್​-ಸಿಖಂದರ್​
ರಾಜೇಶ್ ದುಗ್ಗುಮನೆ
| Edited By: |

Updated on: Jun 03, 2021 | 5:07 PM

Share

ಬಾಲಿವುಡ್​ ನಟ ಅನುಪಮ್​ ಖೇರ್​ ಅವರ ಪತ್ನಿ, ನಟಿ ಕಿರಣ್​ ಖೇರ್ ರಕ್ತದ ಕ್ಯಾನ್ಸರ್​ನಿಂದ ಬಳುತ್ತಿದ್ದಾರೆ. ಈ ವಿಚಾರವನ್ನು ಅನುಪಮ್​ ಖೇರ್​ ಇತ್ತೀಚೆಗೆ ಹೇಳಿಕೊಂಡಿದ್ದರು. ಈಗ ಅವರ ಮಗ ಸಿಖಂದರ್ ಖೇರ್​ ಇನ್​ಸ್ಟಾಗ್ರಾಂ ಲೈವ್​ನಲ್ಲಿ ಬಂದಿದ್ದು, ಅದರಲ್ಲಿ ಕಿರಣ್​ ಕಾಣಿಸಿಕೊಂಡಿದ್ದಾರೆ. ಅಲ್ಲದೆ, ಮಗನಿಗೆ ಮದುವೆ ಆಗುವಂತೆ ಮನವಿ ಮಾಡಿದ್ದಾರೆ.

ಸಿಖಂದರ್ ಖೇರ್ ಬುಧವಾರ (ಜೂ.2) ರಾತ್ರಿ ಇನ್​ಸ್ಟಾಗ್ರಾಂನಲ್ಲಿ ಲೈವ್​ ಬಂದಿದ್ದರು. ಈ ವೇಳೆ ಅವರು ಅಮ್ಮನ ಆರೋಗ್ಯದ ಬಗ್ಗೆ ವಿವರಣೆ ನೀಡಿದ್ದಾರೆ. ನನ್ನ ಅಮ್ಮ ಆರೋಗ್ಯವಾಗಿದ್ದಾರೆ. ನಿಮ್ಮ ಹಾರೈಕೆಗೆ ಧನ್ಯವಾದಗಳು ಎಂದಿದ್ದಾರೆ. ಈ ವಿಡಿಯೋದಲ್ಲಿ ಕಿರಣ್​ ಸಾಕಷ್ಟು ಖುಷಿಯಾಗಿದ್ದರು.

ನಿಮ್ಮ ಹಾರೈಕೆಗೆ ಧನ್ಯವಾದಗಳು. ನನ್ನ ತಾಯಿ ಇಲ್ಲಿದ್ದಾರೆ. ನಿಮ್ಮ ಹಾರೈಕೆಯಿಂದ ಅವರು ಆರೋಗ್ಯವಾಗಿದ್ದಾರೆ ಎಂದು ಹೇಳಿಕೊಂಡಿದ್ದಾರೆ ಸಿಖಂದರ್. ಈ ವಿಡಿಯೋದಲ್ಲಿ ಅನುಪಮ್​ ಖೇರ್​ ಕೂಡ ಇದ್ದಾರೆ. ಇನ್ನು, ಈ ವಿಡಿಯೋದಲ್ಲಿ ಮಾತನಾಡಿರುವ ಕಿರಣ್​, ನಿನಗೆ ಸದ್ಯದಲ್ಲೇ 41 ವರ್ಷ ಆಗಲಿದೆ. ಹೀಗಾಗಿ, ಬೇಗ ಮದುವೆ ಆಗು ಎಂದು ಮನವಿ ಮಾಡಿಕೊಂಡಿದ್ದಾರೆ​.

ಕಿರಣ್​ ಮೃತಪಟ್ಟಿದ್ದರು ಎನ್ನುವ ವದಂತಿ ಇತ್ತೀಚೆಗೆ ಹರಿದಾಡಿತ್ತು. ‘ಕಿರಣ್​ ಆರೋಗ್ಯ ಬಗ್ಗೆ ವದಂತಿ ಹರಿದಾಡುತ್ತಿದೆ. ಅದೆಲ್ಲವೂ ಸುಳ್ಳು. ಅವರು ಕ್ಷೇಮವಾಗಿದ್ದಾರೆ. ಇಂದು ಮಧ್ಯಾಹ್ನ ಅವರು ಕೊವಿಡ್​​ಗೆ 2ನೇ ಡೋಸ್​ ವ್ಯಾಕ್ಸಿನ್​ ಪಡೆದುಕೊಂಡಿದ್ದಾರೆ. ನೆಗೆಟಿವ್​ ಸುದ್ದಿಗಳನ್ನು ಹಬ್ಬಿಸಬೇಡಿ ಎಂದು ಜನರಲ್ಲಿ ನಾನು ಮನವಿ ಮಾಡಿಕೊಳ್ಳುತ್ತೇನೆ. ಎಲ್ಲರೂ ಸೇಫ್​ ಆಗಿರಿ’ ಎಂದು ಅನುಪಮ್​ ಖೇರ್​ ಅವರು ಸೋಶಿಯಲ್​ ಮೀಡಿಯಾ ಮೂಲಕ ತಿಳಿಸಿದ್ದರು.

ಇದನ್ನೂ ಓದಿ:

 Kirron Kher: ಅನುಪಮ್​ ಖೇರ್​ ಪತ್ನಿ, ಖ್ಯಾತ ನಟಿ ಕಿರಣ್​ ಖೇರ್​ ನಿಧನದ ವದಂತಿಗೆ ಬ್ರೇಕ್​

Follow Us
ಮಗನಿಗೆ ಸಚಿವ ಸ್ಥಾನ ಸಿಕ್ಕಿದ ಖುಷಿಗೆ ಕಣ್ಣೀರಿಟ್ಟ ತಾಯಿ
ಮಗನಿಗೆ ಸಚಿವ ಸ್ಥಾನ ಸಿಕ್ಕಿದ ಖುಷಿಗೆ ಕಣ್ಣೀರಿಟ್ಟ ತಾಯಿ
‘ಯಾವುದು ಖಾತೆ ಕೊಟ್ಟರೂ ಕೆಲಸ ಮಾಡುತ್ತೇನೆ’: ಶಿವಲಿಂಗೇಗೌಡ
‘ಯಾವುದು ಖಾತೆ ಕೊಟ್ಟರೂ ಕೆಲಸ ಮಾಡುತ್ತೇನೆ’: ಶಿವಲಿಂಗೇಗೌಡ
ಆಡಿಯೋ ವೈರಲ್​​ ಬಳಿಕವೂ ಸಿಕ್ಕಿದ ಸಚಿವ ಸ್ಥಾನ: ಜಮೀರ್​​ ಹೇಳಿದ್ದೇನು?
ಆಡಿಯೋ ವೈರಲ್​​ ಬಳಿಕವೂ ಸಿಕ್ಕಿದ ಸಚಿವ ಸ್ಥಾನ: ಜಮೀರ್​​ ಹೇಳಿದ್ದೇನು?
‘ಇದು ನಿರಾಶಾದಾಯಕ ಪಟ್ಟಿ’: ತನ್ವೀರ್ ಸೇಠ್ ತೀವ್ರ ಬೇಸರ
‘ಇದು ನಿರಾಶಾದಾಯಕ ಪಟ್ಟಿ’: ತನ್ವೀರ್ ಸೇಠ್ ತೀವ್ರ ಬೇಸರ
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಬೆಂಗಳೂರಿಗರೇ ಎಚ್ಚರ! ಖತರ್ನಾಕ್ ಕಳ್ಳರ ಕಣ್ಣು ನಿಮ್ಮ ಮನೆ ಸಿಲಿಂಡರ್ ಮೇಲಿದೆ
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಕೊಡಗಿನಲ್ಲಿ ಮಳೆ ಆರ್ಭಟ: ಭಾಗಮಂಡಲದ ತ್ರಿವೇಣಿ ಸಂಗಮ ಮತ್ತೆ ಜಲಾವೃತ!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಮೂರೇ ದಿನಗಳಲ್ಲಿ ಕೆಆರ್​ಎಸ್ ಡ್ಯಾಂಗೆ ಬಂತು 6 ಟಿಎಂಸಿ ನೀರು!
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ: ಡ್ಯಾಂ ಮುಂಭಾಗವೇ ಇರುವ ಸೇತುವೆ ಮುಳುಗಡೆ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
‘ಉಪೇಂದ್ರ ಕೂಡ ಚುನಾವಣೆ ಸ್ಪರ್ಧಿಸಬೇಕು’; ಇಂಗಿತ ವ್ಯಕ್ತಪಡಿಸಿದ ಪ್ರಿಯಾಂಕಾ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ