AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಯಾನ್ಸರ್​ ಪೀಡಿತ ಬಾಲಿವುಡ್​ ನಟಿಗೆ ಮಗನ ಮದುವೆ ಚಿಂತೆ

ಸಿಖಂದರ್ ಖೇರ್ ಬುಧವಾರ (ಜೂ.2) ರಾತ್ರಿ ಇನ್​ಸ್ಟಾಗ್ರಾಂನಲ್ಲಿ ಲೈವ್​ ಬಂದಿದ್ದರು. ಈ ವೇಳೆ ಅವರು ಅಮ್ಮನ ಆರೋಗ್ಯದ ಬಗ್ಗೆ ವಿವರಣೆ ನೀಡಿದ್ದಾರೆ.

ಕ್ಯಾನ್ಸರ್​ ಪೀಡಿತ ಬಾಲಿವುಡ್​ ನಟಿಗೆ ಮಗನ ಮದುವೆ ಚಿಂತೆ
ಕಿರಣ್​-ಸಿಖಂದರ್​
ರಾಜೇಶ್ ದುಗ್ಗುಮನೆ
| Edited By: |

Updated on: Jun 03, 2021 | 5:07 PM

Share

ಬಾಲಿವುಡ್​ ನಟ ಅನುಪಮ್​ ಖೇರ್​ ಅವರ ಪತ್ನಿ, ನಟಿ ಕಿರಣ್​ ಖೇರ್ ರಕ್ತದ ಕ್ಯಾನ್ಸರ್​ನಿಂದ ಬಳುತ್ತಿದ್ದಾರೆ. ಈ ವಿಚಾರವನ್ನು ಅನುಪಮ್​ ಖೇರ್​ ಇತ್ತೀಚೆಗೆ ಹೇಳಿಕೊಂಡಿದ್ದರು. ಈಗ ಅವರ ಮಗ ಸಿಖಂದರ್ ಖೇರ್​ ಇನ್​ಸ್ಟಾಗ್ರಾಂ ಲೈವ್​ನಲ್ಲಿ ಬಂದಿದ್ದು, ಅದರಲ್ಲಿ ಕಿರಣ್​ ಕಾಣಿಸಿಕೊಂಡಿದ್ದಾರೆ. ಅಲ್ಲದೆ, ಮಗನಿಗೆ ಮದುವೆ ಆಗುವಂತೆ ಮನವಿ ಮಾಡಿದ್ದಾರೆ.

ಸಿಖಂದರ್ ಖೇರ್ ಬುಧವಾರ (ಜೂ.2) ರಾತ್ರಿ ಇನ್​ಸ್ಟಾಗ್ರಾಂನಲ್ಲಿ ಲೈವ್​ ಬಂದಿದ್ದರು. ಈ ವೇಳೆ ಅವರು ಅಮ್ಮನ ಆರೋಗ್ಯದ ಬಗ್ಗೆ ವಿವರಣೆ ನೀಡಿದ್ದಾರೆ. ನನ್ನ ಅಮ್ಮ ಆರೋಗ್ಯವಾಗಿದ್ದಾರೆ. ನಿಮ್ಮ ಹಾರೈಕೆಗೆ ಧನ್ಯವಾದಗಳು ಎಂದಿದ್ದಾರೆ. ಈ ವಿಡಿಯೋದಲ್ಲಿ ಕಿರಣ್​ ಸಾಕಷ್ಟು ಖುಷಿಯಾಗಿದ್ದರು.

ನಿಮ್ಮ ಹಾರೈಕೆಗೆ ಧನ್ಯವಾದಗಳು. ನನ್ನ ತಾಯಿ ಇಲ್ಲಿದ್ದಾರೆ. ನಿಮ್ಮ ಹಾರೈಕೆಯಿಂದ ಅವರು ಆರೋಗ್ಯವಾಗಿದ್ದಾರೆ ಎಂದು ಹೇಳಿಕೊಂಡಿದ್ದಾರೆ ಸಿಖಂದರ್. ಈ ವಿಡಿಯೋದಲ್ಲಿ ಅನುಪಮ್​ ಖೇರ್​ ಕೂಡ ಇದ್ದಾರೆ. ಇನ್ನು, ಈ ವಿಡಿಯೋದಲ್ಲಿ ಮಾತನಾಡಿರುವ ಕಿರಣ್​, ನಿನಗೆ ಸದ್ಯದಲ್ಲೇ 41 ವರ್ಷ ಆಗಲಿದೆ. ಹೀಗಾಗಿ, ಬೇಗ ಮದುವೆ ಆಗು ಎಂದು ಮನವಿ ಮಾಡಿಕೊಂಡಿದ್ದಾರೆ​.

ಕಿರಣ್​ ಮೃತಪಟ್ಟಿದ್ದರು ಎನ್ನುವ ವದಂತಿ ಇತ್ತೀಚೆಗೆ ಹರಿದಾಡಿತ್ತು. ‘ಕಿರಣ್​ ಆರೋಗ್ಯ ಬಗ್ಗೆ ವದಂತಿ ಹರಿದಾಡುತ್ತಿದೆ. ಅದೆಲ್ಲವೂ ಸುಳ್ಳು. ಅವರು ಕ್ಷೇಮವಾಗಿದ್ದಾರೆ. ಇಂದು ಮಧ್ಯಾಹ್ನ ಅವರು ಕೊವಿಡ್​​ಗೆ 2ನೇ ಡೋಸ್​ ವ್ಯಾಕ್ಸಿನ್​ ಪಡೆದುಕೊಂಡಿದ್ದಾರೆ. ನೆಗೆಟಿವ್​ ಸುದ್ದಿಗಳನ್ನು ಹಬ್ಬಿಸಬೇಡಿ ಎಂದು ಜನರಲ್ಲಿ ನಾನು ಮನವಿ ಮಾಡಿಕೊಳ್ಳುತ್ತೇನೆ. ಎಲ್ಲರೂ ಸೇಫ್​ ಆಗಿರಿ’ ಎಂದು ಅನುಪಮ್​ ಖೇರ್​ ಅವರು ಸೋಶಿಯಲ್​ ಮೀಡಿಯಾ ಮೂಲಕ ತಿಳಿಸಿದ್ದರು.

ಇದನ್ನೂ ಓದಿ:

 Kirron Kher: ಅನುಪಮ್​ ಖೇರ್​ ಪತ್ನಿ, ಖ್ಯಾತ ನಟಿ ಕಿರಣ್​ ಖೇರ್​ ನಿಧನದ ವದಂತಿಗೆ ಬ್ರೇಕ್​

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ