AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಯಾನ್ಸರ್​ ಪೀಡಿತ ಬಾಲಿವುಡ್​ ನಟಿಗೆ ಮಗನ ಮದುವೆ ಚಿಂತೆ

ಸಿಖಂದರ್ ಖೇರ್ ಬುಧವಾರ (ಜೂ.2) ರಾತ್ರಿ ಇನ್​ಸ್ಟಾಗ್ರಾಂನಲ್ಲಿ ಲೈವ್​ ಬಂದಿದ್ದರು. ಈ ವೇಳೆ ಅವರು ಅಮ್ಮನ ಆರೋಗ್ಯದ ಬಗ್ಗೆ ವಿವರಣೆ ನೀಡಿದ್ದಾರೆ.

ಕ್ಯಾನ್ಸರ್​ ಪೀಡಿತ ಬಾಲಿವುಡ್​ ನಟಿಗೆ ಮಗನ ಮದುವೆ ಚಿಂತೆ
ಕಿರಣ್​-ಸಿಖಂದರ್​
ರಾಜೇಶ್ ದುಗ್ಗುಮನೆ
| Edited By: |

Updated on: Jun 03, 2021 | 5:07 PM

Share

ಬಾಲಿವುಡ್​ ನಟ ಅನುಪಮ್​ ಖೇರ್​ ಅವರ ಪತ್ನಿ, ನಟಿ ಕಿರಣ್​ ಖೇರ್ ರಕ್ತದ ಕ್ಯಾನ್ಸರ್​ನಿಂದ ಬಳುತ್ತಿದ್ದಾರೆ. ಈ ವಿಚಾರವನ್ನು ಅನುಪಮ್​ ಖೇರ್​ ಇತ್ತೀಚೆಗೆ ಹೇಳಿಕೊಂಡಿದ್ದರು. ಈಗ ಅವರ ಮಗ ಸಿಖಂದರ್ ಖೇರ್​ ಇನ್​ಸ್ಟಾಗ್ರಾಂ ಲೈವ್​ನಲ್ಲಿ ಬಂದಿದ್ದು, ಅದರಲ್ಲಿ ಕಿರಣ್​ ಕಾಣಿಸಿಕೊಂಡಿದ್ದಾರೆ. ಅಲ್ಲದೆ, ಮಗನಿಗೆ ಮದುವೆ ಆಗುವಂತೆ ಮನವಿ ಮಾಡಿದ್ದಾರೆ.

ಸಿಖಂದರ್ ಖೇರ್ ಬುಧವಾರ (ಜೂ.2) ರಾತ್ರಿ ಇನ್​ಸ್ಟಾಗ್ರಾಂನಲ್ಲಿ ಲೈವ್​ ಬಂದಿದ್ದರು. ಈ ವೇಳೆ ಅವರು ಅಮ್ಮನ ಆರೋಗ್ಯದ ಬಗ್ಗೆ ವಿವರಣೆ ನೀಡಿದ್ದಾರೆ. ನನ್ನ ಅಮ್ಮ ಆರೋಗ್ಯವಾಗಿದ್ದಾರೆ. ನಿಮ್ಮ ಹಾರೈಕೆಗೆ ಧನ್ಯವಾದಗಳು ಎಂದಿದ್ದಾರೆ. ಈ ವಿಡಿಯೋದಲ್ಲಿ ಕಿರಣ್​ ಸಾಕಷ್ಟು ಖುಷಿಯಾಗಿದ್ದರು.

ನಿಮ್ಮ ಹಾರೈಕೆಗೆ ಧನ್ಯವಾದಗಳು. ನನ್ನ ತಾಯಿ ಇಲ್ಲಿದ್ದಾರೆ. ನಿಮ್ಮ ಹಾರೈಕೆಯಿಂದ ಅವರು ಆರೋಗ್ಯವಾಗಿದ್ದಾರೆ ಎಂದು ಹೇಳಿಕೊಂಡಿದ್ದಾರೆ ಸಿಖಂದರ್. ಈ ವಿಡಿಯೋದಲ್ಲಿ ಅನುಪಮ್​ ಖೇರ್​ ಕೂಡ ಇದ್ದಾರೆ. ಇನ್ನು, ಈ ವಿಡಿಯೋದಲ್ಲಿ ಮಾತನಾಡಿರುವ ಕಿರಣ್​, ನಿನಗೆ ಸದ್ಯದಲ್ಲೇ 41 ವರ್ಷ ಆಗಲಿದೆ. ಹೀಗಾಗಿ, ಬೇಗ ಮದುವೆ ಆಗು ಎಂದು ಮನವಿ ಮಾಡಿಕೊಂಡಿದ್ದಾರೆ​.

ಕಿರಣ್​ ಮೃತಪಟ್ಟಿದ್ದರು ಎನ್ನುವ ವದಂತಿ ಇತ್ತೀಚೆಗೆ ಹರಿದಾಡಿತ್ತು. ‘ಕಿರಣ್​ ಆರೋಗ್ಯ ಬಗ್ಗೆ ವದಂತಿ ಹರಿದಾಡುತ್ತಿದೆ. ಅದೆಲ್ಲವೂ ಸುಳ್ಳು. ಅವರು ಕ್ಷೇಮವಾಗಿದ್ದಾರೆ. ಇಂದು ಮಧ್ಯಾಹ್ನ ಅವರು ಕೊವಿಡ್​​ಗೆ 2ನೇ ಡೋಸ್​ ವ್ಯಾಕ್ಸಿನ್​ ಪಡೆದುಕೊಂಡಿದ್ದಾರೆ. ನೆಗೆಟಿವ್​ ಸುದ್ದಿಗಳನ್ನು ಹಬ್ಬಿಸಬೇಡಿ ಎಂದು ಜನರಲ್ಲಿ ನಾನು ಮನವಿ ಮಾಡಿಕೊಳ್ಳುತ್ತೇನೆ. ಎಲ್ಲರೂ ಸೇಫ್​ ಆಗಿರಿ’ ಎಂದು ಅನುಪಮ್​ ಖೇರ್​ ಅವರು ಸೋಶಿಯಲ್​ ಮೀಡಿಯಾ ಮೂಲಕ ತಿಳಿಸಿದ್ದರು.

ಇದನ್ನೂ ಓದಿ:

 Kirron Kher: ಅನುಪಮ್​ ಖೇರ್​ ಪತ್ನಿ, ಖ್ಯಾತ ನಟಿ ಕಿರಣ್​ ಖೇರ್​ ನಿಧನದ ವದಂತಿಗೆ ಬ್ರೇಕ್​

Follow Us
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್