Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ಯಾನ್ಸರ್​ ಪೀಡಿತ ಬಾಲಿವುಡ್​ ನಟಿಗೆ ಮಗನ ಮದುವೆ ಚಿಂತೆ

ಸಿಖಂದರ್ ಖೇರ್ ಬುಧವಾರ (ಜೂ.2) ರಾತ್ರಿ ಇನ್​ಸ್ಟಾಗ್ರಾಂನಲ್ಲಿ ಲೈವ್​ ಬಂದಿದ್ದರು. ಈ ವೇಳೆ ಅವರು ಅಮ್ಮನ ಆರೋಗ್ಯದ ಬಗ್ಗೆ ವಿವರಣೆ ನೀಡಿದ್ದಾರೆ.

ಕ್ಯಾನ್ಸರ್​ ಪೀಡಿತ ಬಾಲಿವುಡ್​ ನಟಿಗೆ ಮಗನ ಮದುವೆ ಚಿಂತೆ
ಕಿರಣ್​-ಸಿಖಂದರ್​
Follow us
ರಾಜೇಶ್ ದುಗ್ಗುಮನೆ
| Updated By: ಮದನ್​ ಕುಮಾರ್​

Updated on: Jun 03, 2021 | 5:07 PM

ಬಾಲಿವುಡ್​ ನಟ ಅನುಪಮ್​ ಖೇರ್​ ಅವರ ಪತ್ನಿ, ನಟಿ ಕಿರಣ್​ ಖೇರ್ ರಕ್ತದ ಕ್ಯಾನ್ಸರ್​ನಿಂದ ಬಳುತ್ತಿದ್ದಾರೆ. ಈ ವಿಚಾರವನ್ನು ಅನುಪಮ್​ ಖೇರ್​ ಇತ್ತೀಚೆಗೆ ಹೇಳಿಕೊಂಡಿದ್ದರು. ಈಗ ಅವರ ಮಗ ಸಿಖಂದರ್ ಖೇರ್​ ಇನ್​ಸ್ಟಾಗ್ರಾಂ ಲೈವ್​ನಲ್ಲಿ ಬಂದಿದ್ದು, ಅದರಲ್ಲಿ ಕಿರಣ್​ ಕಾಣಿಸಿಕೊಂಡಿದ್ದಾರೆ. ಅಲ್ಲದೆ, ಮಗನಿಗೆ ಮದುವೆ ಆಗುವಂತೆ ಮನವಿ ಮಾಡಿದ್ದಾರೆ.

ಸಿಖಂದರ್ ಖೇರ್ ಬುಧವಾರ (ಜೂ.2) ರಾತ್ರಿ ಇನ್​ಸ್ಟಾಗ್ರಾಂನಲ್ಲಿ ಲೈವ್​ ಬಂದಿದ್ದರು. ಈ ವೇಳೆ ಅವರು ಅಮ್ಮನ ಆರೋಗ್ಯದ ಬಗ್ಗೆ ವಿವರಣೆ ನೀಡಿದ್ದಾರೆ. ನನ್ನ ಅಮ್ಮ ಆರೋಗ್ಯವಾಗಿದ್ದಾರೆ. ನಿಮ್ಮ ಹಾರೈಕೆಗೆ ಧನ್ಯವಾದಗಳು ಎಂದಿದ್ದಾರೆ. ಈ ವಿಡಿಯೋದಲ್ಲಿ ಕಿರಣ್​ ಸಾಕಷ್ಟು ಖುಷಿಯಾಗಿದ್ದರು.

ನಿಮ್ಮ ಹಾರೈಕೆಗೆ ಧನ್ಯವಾದಗಳು. ನನ್ನ ತಾಯಿ ಇಲ್ಲಿದ್ದಾರೆ. ನಿಮ್ಮ ಹಾರೈಕೆಯಿಂದ ಅವರು ಆರೋಗ್ಯವಾಗಿದ್ದಾರೆ ಎಂದು ಹೇಳಿಕೊಂಡಿದ್ದಾರೆ ಸಿಖಂದರ್. ಈ ವಿಡಿಯೋದಲ್ಲಿ ಅನುಪಮ್​ ಖೇರ್​ ಕೂಡ ಇದ್ದಾರೆ. ಇನ್ನು, ಈ ವಿಡಿಯೋದಲ್ಲಿ ಮಾತನಾಡಿರುವ ಕಿರಣ್​, ನಿನಗೆ ಸದ್ಯದಲ್ಲೇ 41 ವರ್ಷ ಆಗಲಿದೆ. ಹೀಗಾಗಿ, ಬೇಗ ಮದುವೆ ಆಗು ಎಂದು ಮನವಿ ಮಾಡಿಕೊಂಡಿದ್ದಾರೆ​.

ಕಿರಣ್​ ಮೃತಪಟ್ಟಿದ್ದರು ಎನ್ನುವ ವದಂತಿ ಇತ್ತೀಚೆಗೆ ಹರಿದಾಡಿತ್ತು. ‘ಕಿರಣ್​ ಆರೋಗ್ಯ ಬಗ್ಗೆ ವದಂತಿ ಹರಿದಾಡುತ್ತಿದೆ. ಅದೆಲ್ಲವೂ ಸುಳ್ಳು. ಅವರು ಕ್ಷೇಮವಾಗಿದ್ದಾರೆ. ಇಂದು ಮಧ್ಯಾಹ್ನ ಅವರು ಕೊವಿಡ್​​ಗೆ 2ನೇ ಡೋಸ್​ ವ್ಯಾಕ್ಸಿನ್​ ಪಡೆದುಕೊಂಡಿದ್ದಾರೆ. ನೆಗೆಟಿವ್​ ಸುದ್ದಿಗಳನ್ನು ಹಬ್ಬಿಸಬೇಡಿ ಎಂದು ಜನರಲ್ಲಿ ನಾನು ಮನವಿ ಮಾಡಿಕೊಳ್ಳುತ್ತೇನೆ. ಎಲ್ಲರೂ ಸೇಫ್​ ಆಗಿರಿ’ ಎಂದು ಅನುಪಮ್​ ಖೇರ್​ ಅವರು ಸೋಶಿಯಲ್​ ಮೀಡಿಯಾ ಮೂಲಕ ತಿಳಿಸಿದ್ದರು.

ಇದನ್ನೂ ಓದಿ:

 Kirron Kher: ಅನುಪಮ್​ ಖೇರ್​ ಪತ್ನಿ, ಖ್ಯಾತ ನಟಿ ಕಿರಣ್​ ಖೇರ್​ ನಿಧನದ ವದಂತಿಗೆ ಬ್ರೇಕ್​

ನಗರದಲ್ಲೆಲ್ಲ ವಿಜಯೇಂದ್ರ ಹೋರ್ಡಿಂಗ್ ಮತ್ತು ಬ್ಯಾನರ್​ಗಳು
ನಗರದಲ್ಲೆಲ್ಲ ವಿಜಯೇಂದ್ರ ಹೋರ್ಡಿಂಗ್ ಮತ್ತು ಬ್ಯಾನರ್​ಗಳು
VIDEO: ನೋಡ್ಕೊ ಗುರು... ನಾವೇನು ಫಿಕ್ಸಿಂಗ್ ಮಾಡ್ಕೊಂಡಿಲ್ಲ..!
VIDEO: ನೋಡ್ಕೊ ಗುರು... ನಾವೇನು ಫಿಕ್ಸಿಂಗ್ ಮಾಡ್ಕೊಂಡಿಲ್ಲ..!
ಯತ್ನಾಳ್ ಖುದ್ದು ಮಾತಾಡುತ್ತಿಲ್ಲ, ಅವರ ಬಗ್ಗೆ ಏನು ಮಾತಾಡೋದು: ಸಚಿವ
ಯತ್ನಾಳ್ ಖುದ್ದು ಮಾತಾಡುತ್ತಿಲ್ಲ, ಅವರ ಬಗ್ಗೆ ಏನು ಮಾತಾಡೋದು: ಸಚಿವ
VIDEO: ಇಡೀ ಪಂದ್ಯದ ಚಿತ್ರಣ ಬದಲಿಸಿದ ಆ ಒಂದು ಕ್ಯಾಚ್
VIDEO: ಇಡೀ ಪಂದ್ಯದ ಚಿತ್ರಣ ಬದಲಿಸಿದ ಆ ಒಂದು ಕ್ಯಾಚ್
ಲಾರಿ ಮುಷ್ಕರ ನಿಲ್ಲದಿದ್ದರೆ ಎಪಿಎಂಸಿಗಳು ಬಂದ್ ಆಗುವ ಸಾಧ್ಯತೆ?
ಲಾರಿ ಮುಷ್ಕರ ನಿಲ್ಲದಿದ್ದರೆ ಎಪಿಎಂಸಿಗಳು ಬಂದ್ ಆಗುವ ಸಾಧ್ಯತೆ?
ಜಾತಿ ಗಣತಿ ಅವಶ್ಯಕತೆ ಇಲ್ಲ ಎಂದ ಸಾರ್ವಜನಿಕರು: ಮೈಸೂರಿನಲ್ಲಿ ಜನಾಕ್ರೋಶ
ಜಾತಿ ಗಣತಿ ಅವಶ್ಯಕತೆ ಇಲ್ಲ ಎಂದ ಸಾರ್ವಜನಿಕರು: ಮೈಸೂರಿನಲ್ಲಿ ಜನಾಕ್ರೋಶ
ಮೂಡಿಗೆರೆ: ಮಾಕೋನಹಳ್ಳಿ ಗ್ರಾಮದಲ್ಲಿ ಮನೆಗೆ ನುಗ್ಗಿ ಕಾಡಾನೆ ದಾಂಧಲೆ
ಮೂಡಿಗೆರೆ: ಮಾಕೋನಹಳ್ಳಿ ಗ್ರಾಮದಲ್ಲಿ ಮನೆಗೆ ನುಗ್ಗಿ ಕಾಡಾನೆ ದಾಂಧಲೆ
ಮುಷ್ಕರ ಕಾರಣ ಮಹಾರಾಷ್ಟ್ರದ ಟ್ರಕ್ಕನ್ನು ಟೋಲ್ ಗೇಟ್ ಬಳಿ ತಡೆಯಲಾಗಿತ್ತು
ಮುಷ್ಕರ ಕಾರಣ ಮಹಾರಾಷ್ಟ್ರದ ಟ್ರಕ್ಕನ್ನು ಟೋಲ್ ಗೇಟ್ ಬಳಿ ತಡೆಯಲಾಗಿತ್ತು
ಗರೀಬ್​ ರಥ್​ ಎಕ್ಸ್​ಪ್ರೆಸ್​ ರೈಲನ್ನು ಹಳಿ ತಪ್ಪಿಸುವ ಯತ್ನ ವಿಫಲ
ಗರೀಬ್​ ರಥ್​ ಎಕ್ಸ್​ಪ್ರೆಸ್​ ರೈಲನ್ನು ಹಳಿ ತಪ್ಪಿಸುವ ಯತ್ನ ವಿಫಲ
ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಏಣಿಕೆ: ಮತ್ತೆ ಕೋಟ್ಯಧಿಪತಿಯಾದ ಮಾದಪ್ಪ
ಮಲೆ ಮಹದೇಶ್ವರ ಬೆಟ್ಟದಲ್ಲಿ ಹುಂಡಿ ಏಣಿಕೆ: ಮತ್ತೆ ಕೋಟ್ಯಧಿಪತಿಯಾದ ಮಾದಪ್ಪ