AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಾತಿ ವೈಷಮ್ಯಕ್ಕೆ ತಿರುಗಿದ ರೌಡಿ ಕೊಲೆ: ನಿರ್ದೇಶಕ ಪಾ ರಂಜಿತ್ ವಿರುದ್ಧ ಪ್ರಕರಣ ದಾಖಲು

ತಮಿಳುನಾಡಿನ ತಿರುನಾಲ್​ವೇಲಿಯಲ್ಲಿ ದೀಪಕ್ ರಾಜಾ ಹೆಸರಿನ ರೌಡಿಯ ಕೊಲೆಯಾಗಿದ್ದು, ಆ ಕೊಲೆ ಜಾತಿ ವೈಷಮ್ಯದ ತಿರುವು ಪಡೆದುಕೊಂಡಿದೆ. ಅದೇ ಪ್ರಕರಣಕ್ಕೆ ಸಂಬಂಧಿಸಿದಂತೆ ನಿರ್ದೇಶಕ ಪಾ ರಂಜಿತ್ ವಿರುದ್ಧ ದೂರು ದಾಖಲಾಗಿದೆ.

ಜಾತಿ ವೈಷಮ್ಯಕ್ಕೆ ತಿರುಗಿದ ರೌಡಿ ಕೊಲೆ: ನಿರ್ದೇಶಕ ಪಾ ರಂಜಿತ್ ವಿರುದ್ಧ ಪ್ರಕರಣ ದಾಖಲು
ಮಂಜುನಾಥ ಸಿ.
| Edited By: |

Updated on:May 25, 2024 | 11:17 PM

Share

ತಮಿಳುನಾಡಿನ ತಿರುನಾಲ್​ವೇಲಿಯಲ್ಲಿ ನಡೆದಿರುವ ರೌಡಿಯೊಬ್ಬನ ಕೊಲೆ ಜಾತಿ ವೈಷಮ್ಯದ ತಿರುವು ಪಡೆದುಕೊಂಡಿದ್ದು, ಇದೀಗ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ತಮಿಳು ಚಿತ್ರರಂಗದ ಜನಪ್ರಿಯ ನಿರ್ದೇಶಕ ಪಾ ರಂಜಿತ್ (Pa Ranjith) ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಮೇ 21 ರಂದು ರೌಡಿ ದೀಪಕ್ ರಾಜಾ ಅನ್ನು ಕೆಲವರು ಹಾಡಹಗಲೆ ಮಚ್ಚುಗಳಿಂದ ಕೊಚ್ಚಿ ಕೊಲೆ ಮಾಡಿದ್ದರು. ಈ ಪ್ರಕರಣ ಜಿಲ್ಲೆಯಲ್ಲಿ ದೊಡ್ಡ ಸುದ್ದಿಯಾಗಿತ್ತು.

ಈ ಕೊಲೆ ಪ್ರಕರಣ ತಿರುನಾಲ್​ವೇಲಿ ಜಾತಿ ವೈಷಮ್ಯಕ್ಕೆ ತಿರುಗಿದ್ದು, ದೀಪಕ್ ರಾಜಾ ಹಾಗೂ ಕೊಲೆಗಾರರ ಜಾತಿಗಳನ್ನು ಆಧಾರವಾಗಿಟ್ಟುಕೊಂಡು ಕೆಲವು ಸಾಮಾಜಿಕ ಜಾಲತಾಣ ಪೋಸ್ಟ್​ಗಳು ಹರಿದಾಡುತ್ತಿವೆ. ದಲಿತ ಹೋರಾಟಗಾರರೂ ಆಗಿರುವ ನಿರ್ದೇಶಕ ಪಾ ರಂಜಿತ್ ಅವರದ್ದು ಎನ್ನಲಾದ ಸಾಮಾಜಿಕ ಜಾಲತಾಣ ಖಾತೆಯಿಂದ ದೀಪಕ್ ರಾಜಾ ಕೊಲೆಯನ್ನು ಸಂಬಂಧಿಸಿ ಪೋಸ್ಟ್​ ಒಂದನ್ನು ಹಂಚಿಕೊಳ್ಳಲಾಗಿದ್ದು, ಆ ಪೋಸ್ಟ್ ಎರಡು ಜಾತಿಗಳ ಮಧ್ಯೆ ವೈಷಮ್ಯ ಮೂಡಿಸುತ್ತಿದೆ ಎಂದು ಆರೋಪಿಸಿ ಪೊಲೀಸ್ ಸಿಬ್ಬಂದಿಯೊಬ್ಬರು ಪ್ರಕರಣ ದಾಖಲಿಸಿದ್ದಾರೆ.

ಇದನ್ನೂ ಓದಿ:‘ಧೈರ್ಯಂ ಸರ್ವತ್ರ ಸಾಧನಂ’ ಚಿತ್ರಕ್ಕೆ ಸಿಕ್ತು ವಸಿಷ್ಠ ಸಿಂಹ, ಪಾ. ರಂಜಿತ್​ ಬೆಂಬಲ

ಪಾ ರಂಜಿತ್ ಸಿನಿಮಾಗಳಲ್ಲಿ ದಲಿತ ಸಂವೇದನೆಗಳು ಇದ್ದೇ ಇರುತ್ತವೆ. ದಲಿತ ಹೋರಾಟಗಾರರಾಗಿರುವ ರಂಜಿತ್, ತಮ್ಮ ಸಾಮಾಜಿಕ ಜಾಲತಾಣದ ಮೂಲಕ ಆಗಾಗ್ಗೆ ದಲಿತರ ಮೇಲಿನ ದೌರ್ಜನ್ಯಗಳನ್ನು ಖಂಡಿಸುತ್ತಿರುತ್ತಾರೆ. ಇದೀಗ ಅದೇ ರೀತಿಯ ಪೋಸ್ಟ್ ಒಂದಕ್ಕೆ ಸಂಬಂಧಿಸಿದಂತೆ ಅವರ ಮೇಲೆ ಪೊಲೀಸ್ ಪ್ರಕರಣ ದಾಖಲಾಗಿದೆ.

‘ಕಾಲ’, ‘ಕಬಾಲಿ’, ‘ಸರ್ಪಟ್ಟ ಪರಂಬರೈ’ ಅಂಥಹಾ ಸೂಪರ್ ಹಿಟ್ ಸಿನಿಮಾಗಳನ್ನು ನೀಡಿರುವ ನಿರ್ದೇಶಕ ಪಾ ರಂಜಿತ್, ಇದೀಗ ಚಿಯಾನ್ ವಿಕ್ರಂ ನಟಿಸಿರುವ ‘ತಾಂಗಾಲನ್’ ಸಿನಿಮಾ ನಿರ್ದೇಶನ ಮಾಡಿದ್ದಾರೆ. ಈ ಸಿನಿಮಾ ಆಗಸ್ಟ್ 15 ರಂದು ಬಿಡುಗಡೆ ಆಗಲಿದೆ. ಕೋಲಾರದಲ್ಲಿ ಈ ಸಿನಿಮಾದ ಚಿತ್ರೀಕರಣ ಮಾಡಲಾಗಿದ್ದು, ‘ಕೆಜಿಎಫ್’ ಕತೆಯನ್ನು ಈ ಸಿನಿಮಾ ಒಳಗೊಂಡಿದೆ ಎನ್ನಲಾಗುತ್ತಿದೆ. ಸಿನಿಮಾದ ಟೀಸರ್ ಈಗಾಗಲೇ ಬಿಡುಗಡೆ ಆಗಿದ್ದು, ಸಖತ್ ವೈರಲ್ ಆಗಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:04 pm, Sat, 25 May 24

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ
ಚಂದನ್ ಹತ್ಯೆ: ಮೊಬೈಲ್‌ನಲ್ಲಿ ಮಗನ ಅಂತಿಮ ದರ್ಶನ ನೋಡಿ ಕಣ್ಣೀರಿಟ್ಟ ತಂದೆ