AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನೆರೆ ಮನೆಯಾಕೆಗೆ ಕೊಲೆ ಬೆದರಿಕೆ, ಹಿರಿಯ ನಟಿ ವಿರುದ್ಧ ದೂರು ದಾಖಲು

Saranya Ponvannan: ತಾಯಿ ಪಾತ್ರಗಳ ಮೂಲಕ ದೊಡ್ಡ ಅಭಿಮಾನ ವರ್ಗ ಸೃಷ್ಟಿಸಿಕೊಂಡಿರುವ ಹಿರಿಯ ನಟಿ ಶರಣ್ಯ ಪೊನ್ನವನ್ನನ್ ವಿರುದ್ಧ ನೆರೆ ಮನೆಯ ಶ್ರೀದೇವಿ ಎಂಬುವರು ಕೊಲೆ ಬೆದರಿಕೆ ಆರೋಪ ಮಾಡಿದ್ದಾರೆ. ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ನೆರೆ ಮನೆಯಾಕೆಗೆ ಕೊಲೆ ಬೆದರಿಕೆ, ಹಿರಿಯ ನಟಿ ವಿರುದ್ಧ ದೂರು ದಾಖಲು
Follow us
ಮಂಜುನಾಥ ಸಿ.
|

Updated on: Apr 02, 2024 | 12:33 PM

ನಾಯಕಿಯಾಗಿ ಎಂಟ್ರಿ ಕೊಟ್ಟು ಈಗ ತಾಯಿಯ ಪಾತ್ರಕ್ಕೆ ದಕ್ಷಿಣ ಭಾರತ (South India) ಚಿತ್ರರಂಗದ ಬೇಡಿಕೆಯ ನಟಿಯಾಗಿರುವ ಶರಣ್ಯ ಪೊನ್ವನನ್ ಅವರ ವಿರುದ್ಧ ನೆರೆ ಮನೆಯ ಮಹಿಳೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಟಾಲಿವುಡ್, ಕಾಲಿವುಡ್​ನ ‘ತಾಯಿ’ ಎಂದೇ ಖ್ಯಾತವಾಗಿರುವ ಶರಣ್ಯ ನೆರೆ ಮನೆಯವೊಟ್ಟಿಗೆ ಕಿರಿಕ್ ಮಾಡಿಕೊಂಡಿದ್ದು, ಇದೀಗ ಪ್ರಕರಣ ಪೊಲೀಸ್ ಠಾಣೆ ಮೆಟ್ಟಿಲೇರಿದೆ.

ಚೆನ್ನನ ವಿರುಂಭಾಗಕ್ಕಂನಲ್ಲಿ ನಟಿ ಶರಣ್ಯ ತಮ್ಮ ಕುಟುಂಬದೊಟ್ಟಿಗೆ ವಾಸವಿದ್ದಾರೆ. ಸುದ್ದಿಗಳ ಪ್ರಕಾರ ಶರಣ್ಯ ಹಾಗೂ ಅವರ ನೆರೆ ಮನೆಯ ಶ್ರೀದೇವಿ ಎಂಬುವರೊಟ್ಟಿಗೆ ಕಾರು ಪಾರ್ಕಿಂಗ್ ವಿಚಾರದಲ್ಲಿ ಆಗಾಗ್ಗೆ ಜಗಳಗಳು ಆಗುತ್ತಲೇ ಇತ್ತಂತೆ. ಇದೀಗ ಜಗಳ ಮಿತಿ ಮೀರಿದ್ದು, ಪರಸ್ಪರ ನಿಂದನೆ ಮಾಡಿಕೊಂಡಿದ್ದಾರೆ. ನಟಿ ಶರಣ್ಯ, ಶ್ರೀದೇವಿಯನ್ನು ಕೊಲ್ಲುವುದಾಗಿ ಬೆದರಿಕೆ ಸಹ ಹಾಕಿದ್ದಾರೆಂದು ನೆರೆಮನೆಯವರು ಆರೋಪಿಸಿ ದೂರು ನೀಡಿದ್ದಾರೆ. ಶರಣ್ಯ, ತಮಗೆ ಬೆದರಿಕೆ ಹಾಕಿರುವ ಆರೋಪಕ್ಕೆ ಸಾಕ್ಷಿಯಾಗಿ ಸಿಸಿಟಿವಿ ದೃಶ್ಯಾವಳಿಗಳನ್ನು ಸಹ ಶ್ರೀದೇವಿ ಪೊಲೀಸರಿಗೆ ನೀಡಿದ್ದಾರೆ.

ಶರಣ್ಯ, ಶ್ರೀದೇವಿ ಹಾಗೂ ಅವರ ಕುಟುಂಬದವರೊಟ್ಟಿಗೆ ಜಗಳ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ, ಮಾಧ್ಯಮಗಳಲ್ಲಿ ವೈರಲ್ ಆಗಿದೆ. ಸಿನಿಮಾಗಳಲ್ಲಿ ಮೃದುವಾದ ಪಾತ್ರಗಳಿಗೆ ಹೆಸರುಆಸಿಯಾಗಿರುವ ಶರಣ್ಯ, ಪಕ್ಕದ ಮನೆಯವರೊಟ್ಟಿಗೆ ರಸ್ತೆಯಲ್ಲಿ ನಿಂತು ಜಗಳವಾಡುವುದನ್ನು ಕಂಡು ಅಭಿಮಾನಿಗಳು ಶಾಕ್ ಆಗಿದ್ದಾರೆ.

ಇದನ್ನೂ ಓದಿ:ವಿಮಾನದಲ್ಲಿ ಪ್ರಯಾಣಿಸುವಾಗ ದಿವ್ಯಾ ಪ್ರಭಾಗೆ ಕಿರುಕುಳ; ದೂರು ನೀಡಿದ ನಟಿ

ಶ್ರೀದೇವಿ ತಮ್ಮ ವಿರುದ್ಧ ಕೊಲೆ ಬೆದರಿಕೆ ಆರೋಪ ಹೊರಿಸಿದ ಬೆನ್ನಲ್ಲೆ ನಟಿ ಶರಣ್ಯ ಸಹ ಶ್ರೀದೇವಿ ಹಾಗೂ ಅವರ ಕುಟುಂಬದವರ ವಿರುದ್ಧ ಚೆನ್ನನ ವಿರುಂಭಾಗಕ್ಕಂ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪೊಲೀಸರು ಇಬ್ಬರ ದೂರುಗಳನ್ನು ಸ್ವೀಕರಿಸಿದ್ದು, ಸ್ಥಳ ಪರಿಶೀಲನೆ ಬಳಿಕ ಇಬ್ಬರನ್ನೂ ಕರೆಸಿ ವಿಚಾರಣೆ ಮಾಡಲಿದ್ದಾರೆ.

ಕಮಲ್ ಹಾಸನ್ ನಟಿಸಿ, ಮಣಿರತ್ನಂ ನಿರ್ದೇಶನ ಮಾಡಿದ್ದ ಕ್ಲಾಸಿಕ್ ಸಿನಿಮಾ ‘ನಾಯಗನ್’ ಮೂಲಕ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ಶರಣ್ಯ, ಹಲವು ಸಿನಿಮಾಗಳಲ್ಲಿ ನಾಯಕಿ ಪಾತ್ರಗಳಲ್ಲಿ ನಟಿಸಿ ಮಿಂಚಿದರು. ಕನ್ನಡದಲ್ಲಿಯೂ ಕೆಲವು ಸಿನಿಮಾಗಳಲ್ಲಿ ಶರಣ್ಯ ನಟಿಸಿದ್ದಾರೆ. ಆ ನಂತರ ತಾಯಿ ಪಾತ್ರಗಳಿಗೆ ಶಿಫ್ಟ್ ಆದ ನಟಿ ಶರಣ್ಯ ಹಲವು ಸ್ಟಾರ್ ನಟ-ನಟಿಯರ ತಾಯಿಯ ಪಾತ್ರದಲ್ಲಿ ನಟಿಸಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ಹೊಸ ಪಕ್ಷ ಕಟ್ಟೇನು, ಆದರೆ ಕಾಂಗ್ರೆಸ್ ಮಾತ್ರ ಸೇರಲ್ಲ: ಬಸನಗೌಡ ಯತ್ನಾಳ್
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ವಾಂಖೆಡೆಯಲ್ಲಿ ರೋಹಿತ್ ಶರ್ಮಾ ಸ್ಟ್ಯಾಂಡ್ ಉದ್ಘಾಟನೆ
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಕಾರಿಗೆ ಅಪರೇಷನ್ ಸಿಂಧೂರ್ ಚಿತ್ರಗಳು, ಗಮನಸೆಳೆದ ಬಿಜೆಪಿ ನಾಯಕನ ಥಾರ್
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಚಿಕ್ಕಬಳ್ಳಾಪುರ ಎಸ್​ಪಿ ಕಚೇರಿಗೆ ಬಂದು ಭದ್ರತೆ ಕೋರಿದ ಯುವಕ-ಯುವತಿ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಪ್ರಧಾನಿ ಮೋದಿ ಪಾದಗಳಿಗೆ ಸೇನೆ ನಮಸ್ಕರಿಸುತ್ತಿದೆ ಎಂದ ಜಗದೀಶ್ ದೇವ್ಡಾ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಾವಿಗೂ ಮುನ್ನ ಗೆಳೆಯನೊಟ್ಟಿಗೆ ಏನು ಮಾತನಾಡಿದ್ದ ರಾಕೇಶ್ ಪೂಜಾರಿ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಸಂಪುಟ ಪುನಾರಚನೆಯಾದಾಗ ನನಗೆ ಮಂತ್ರಿ ಸ್ಥಾನ ನೀಡಬಹುದು: ಶಿವಲಿಂಗೇಗೌಡ
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್
ಜಗದೀಶ್ ಶೆಟ್ಟರ್ ಸಿಎಂ ಆದ ನಂತರ ಮಂತ್ರಿಯಾಗಿ ಕೆಲಸ ಮಾಡಿದವರು: ಹೆಬ್ಬಾಳ್ಕರ್
ಹಿಂದೆ ಬರುತ್ತಿದ್ದ ಸ್ಕೂಟಿ ಮೇಲೆ ಹತ್ತಿದ ಟ್ರಕ್; ಪವಾಡದಂತೆ ಪಾರಾದ ಮಹಿಳೆ
ಹಿಂದೆ ಬರುತ್ತಿದ್ದ ಸ್ಕೂಟಿ ಮೇಲೆ ಹತ್ತಿದ ಟ್ರಕ್; ಪವಾಡದಂತೆ ಪಾರಾದ ಮಹಿಳೆ
ಸಿಂಹರಾಶಿಗೆ ಗುರುಬಲ ಶುರು; ಅದೃಷ್ಟ ಕೂಡಿ ಬರಲಿದೆ!
ಸಿಂಹರಾಶಿಗೆ ಗುರುಬಲ ಶುರು; ಅದೃಷ್ಟ ಕೂಡಿ ಬರಲಿದೆ!