AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಿಧಿ ಅಗರ್​​ವಾಲ್ ಜೊತೆ ಅನುಚಿತ ವರ್ತನೆ: ಮಾಲ್ ವಿರುದ್ಧ ಕೇಸ್ ದಾಖಲು

ತೆಲುಗಿನ ‘ದಿ ರಾಜಾ ಸಾಬ್’ ಸಿನಿಮಾದ ಸಾಂಗ್ ಬಿಡುಗಡೆ ಕಾರ್ಯಕ್ರಮದ ವೇಳೆ ಈ ಕಹಿ ಘಟನೆ ನಡೆದಿದೆ. ಈ ಸಿನಿಮಾದ ನಟಿ ನಿಧಿ ಅಗರ್​ವಾಲ್ ಜೊತೆ ಕೆಲವರು ಅನುಚಿತವಾಗಿ ವರ್ತಿಸಿದ್​ದಾರೆ. ವಿಡಿಯೋ ವೈರಲ್ ಆಗಿದೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಕೇಸ್ ದಾಖಲು ಮಾಡಿಕೊಂಡು ಈಗಾಗಲೇ ತನಿಖೆ ಆರಂಭಿಸಿದ್ದಾರೆ.

ನಿಧಿ ಅಗರ್​​ವಾಲ್ ಜೊತೆ ಅನುಚಿತ ವರ್ತನೆ: ಮಾಲ್ ವಿರುದ್ಧ ಕೇಸ್ ದಾಖಲು
Nidhi Agarwal
ಮದನ್​ ಕುಮಾರ್​
|

Updated on: Dec 18, 2025 | 7:25 PM

Share

ನಟಿ ನಟಿ ನಿಧಿ ಅಗರ್​​ವಾಲ್ (Nidhi Agarwal) ಅವರಿಗೆ ಕಿರುಕುಳ ನೀಡಲಾಗಿದೆ. ಹೈದರಾಬಾದ್​​ನಲ್ಲಿ ನಡೆದ ‘ದಿ ರಾಜಾ ಸಾಬ್’ (The Raja Saab) ಸಿನಿಮಾದ ಸಾಂಗ್ ಬಿಡುಗಡೆ ಕಾರ್ಯಕ್ರಮದಲ್ಲಿ ಈ ಘಟನೆ ನಡೆದಿದೆ. ಖಾಸಗಿ ಮಾಲ್​​ನಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು. ಅದರಲ್ಲಿ ನಿಧಿ ಅಗರ್​ವಾಲ್ ಅವರು ಪಾಲ್ಗೊಂಡಿದ್ದರು. ಆ ವೇಳೆ ಸಿಕ್ಕಾಪಟ್ಟೆ ಜನ ಸೇರಿದ್ದರು. ನಿಧಿ ಅಗರ್​ವಾಲ್ ಜೊತೆ ಫೋಟೋ ತೆಗೆದುಕೊಳ್ಳಲು ಅಭಿಮಾನಿಗಳು ಮುಗಿಬಿದ್ದರು. ಆಗ ಕೆಲವರು ಅವರ ಜೊತೆ ಅನುಚಿತವಾಗಿ ವರ್ತಿಸಿದರು. ಈ ಘಟನೆಗೆ ಸಂಬಂಧಿಸಿದಂತೆ ಕೇಸ್ ದಾಖಲಾಗಿದೆ.

ಪ್ರಭಾಸ್ ನಟನೆಯ ‘ದಿ ರಾಜಾ ಸಾಬ್’ ಸಿನಿಮಾದ ‘ಸಹನಾ ಸಹನಾ..’ ಹಾಡು ಬಿಡುಗಡೆ ಆಗಿದೆ. ಈ ಹಾಡಿನಲ್ಲಿ ಪ್ರಭಾಸ್ ಮತ್ತು ನಿಧಿ ಅಗರ್​ವಾಲ್ ಅವರು ಕಾಣಿಸಿಕೊಂಡಿದ್ದಾರೆ. ಹಾಡಿನ ಬಿಡುಗಡೆ ಕಾರ್ಯಕ್ರಮಕ್ಕೆ ಖುಷಿಯಿಂದ ನಿಧಿ ಅಗರ್​ವಾಲ್ ಅವರಿಗೆ ಕಹಿ ಅನುಭವ ಆಗಿದೆ. ಜನಸಂದಣಿಯಲ್ಲಿ ಅವರ ಜೊತೆ ಕೆಲವರು ಕೆಟ್ಟದಾಗಿ ನಡೆದುಕೊಂಡಿದ್ದಾರೆ.

ನಿಧಿ ಅಗರ್​ವಾಲ್ ಅವರನ್ನು ಜನರು ಮುತ್ತಿಗೆ ಹಾಕಿಕೊಂಡಿರುವ ವಿಡಿಯೋ ವೈರಲ್ ಆಗಿದೆ. ಜನರಿಂದ ಕಿರಿಕಿರಿ ಅನುಭವಿಸಿದ ನಿಧಿ ಅವರನ್ನು ಬಾಡಿಗಾರ್ಡ್​​ಗಳು ರಕ್ಷಿಸಿದ್ದಾರೆ. ಅವರನ್ನು ಕರೆದುಕೊಂಡು ಬಂದು ಕಾರಿನಲ್ಲಿ ಕೂರಿಸುವ ವೇಳೆಗೆ ಬಾಡಿಗಾರ್ಡ್​​ಗಳು ಸುಸ್ತಾಗಿದ್ದಾರೆ. ಕಾರಿನೊಳಗೆ ಬಂದು ಕುಳಿತ ನಿಧಿ ಅಗರ್​ವಾಲ್ ಅವರು ವಿಪರೀತ ಕೋಪ ಮಾಡಿಕೊಂಡಿರುವುದು ಕಾಣಿಸಿದೆ.

ಈ ವಿಡಿಯೋ ವೈರಲ್ ಆದ ನಂತರ ಪೊಲೀಸರು ಕೇಸ್ ದಾಖಲಿಸಿಕೊಂಡಿದ್ದಾರೆ. ಸೂಕ್ತ ಅನುಮತಿ ಪಡೆಯದೆಯೇ ಕಾರ್ಯಕ್ರಮ ನಡೆಸಿದ ಆಯೋಜಕರ ಮೇಲೆ ಕೇಸ್ ದಾಖಲಾಗಿದೆ. ಬುಧವಾರ (ಡಿಸೆಂಬರ್ 17) ಸಂಜೆ 5 ಗಂಟೆಗೆ ಸಾಂಗ್ ರಿಲೀಸ್ ಆಗಬೇಕಿತ್ತು. ಆದರೆ ಕೆಲವು ಗಂಟೆಗಳ ಕಾಲ ತಡವಾಯಿತು. ಅಷ್ಟು ಹೊತ್ತಿಗಾಗಲೇ ಅಪಾರ ಸಂಖ್ಯೆಯಲ್ಲಿ ಅಭಿಮಾನಿಗಳು ಜಮಾಯಿಸಿದ್ದರು.

ಇದನ್ನೂ ಓದಿ: ಸಿಕ್ಕಿದ್ದೇ ಚಾನ್ಸ್ ಅಂತ ಕಂಡ ಕಂಡಲ್ಲಿ ಮುಟ್ಟಿದ್ರು; ಮಾಲ್​​ನಲ್ಲಿ ನಟಿಗೆ ಕಿರುಕುಳ

ನಿಧಿ ಅಗರ್​ವಾಲ್ ಅವರಿಗೆ ಈ ಘಟನೆಯಿಂದ ತುಂಬ ಬೇಸರ ಆಗಿದೆ. ಅವರ ವಿಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿವೆ. ಈ ಘಟನೆ ಬಗ್ಗೆ ನಿಧಿ ಅಗರ್​ವಾಲ್ ಅವರು ಇನ್ನೂ ಹೇಳಿಕೆ ನೀಡಿಲ್ಲ. ಜನರು ನಡೆದುಕೊಂಡ ರೀತಿಯ ಬಗ್ಗೆ ಸೋಶಿಯಲ್ ಮೀಡಿಯಾದಲ್ಲಿ ಖಂಡನೆ ವ್ಯಕ್ತವಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!
ಬೆಂಗಳೂರಿನಲ್ಲಿ ಎಲೆಕ್ಟ್ರಿಕ್ ಬೈಕ್ ಬ್ಯಾಟರಿ ಸ್ಫೋಟಗೊಂಡು ವೃದ್ಧ ಸಾವು!